Homeಮುಖಪುಟಮಧ್ಯಪ್ರದೇಶ ಸರ್ಕಾರವನ್ನು ಬಿಜೆಪಿ "ಅಪರೇಷನ್ ಹೋಳಿ" ಮಾಡುತ್ತಿದೆ: ಕಾಂಗ್ರೆಸ್ ಆರೋಪ

ಮಧ್ಯಪ್ರದೇಶ ಸರ್ಕಾರವನ್ನು ಬಿಜೆಪಿ “ಅಪರೇಷನ್ ಹೋಳಿ” ಮಾಡುತ್ತಿದೆ: ಕಾಂಗ್ರೆಸ್ ಆರೋಪ

- Advertisement -
- Advertisement -

ತನ್ನ ಸರ್ಕಾರವನ್ನು ಅಸ್ಥಿರಗೊಳಿಸಲು “ಆಪರೇಷನ್ ಹೋಳಿ” ಎಂದು ಕರೆದು 14 ಕಾಂಗ್ರೆಸ್‌ ಶಾಸಕರನ್ನು ಬಿಜೆಪಿ ಅಪಹರಿಸಿದೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಬೆಂಬಲದ ನಾಲ್ಕು ಶಾಸಕರಾದ ಹರ್ದೀಪ್ ಡಾಂಗ್, ರಘುರಾಜ್ ಕನ್ಸಾನಾ ಮತ್ತು ಬಿಸಾಹುಲಾಲ್ ಸಿಂಗ್ ಮತ್ತು ಸ್ವತಂತ್ರ ಸದಸ್ಯೆ ಶೇರಾ ಭೈಯಾರನ್ನು ಕರ್ನಾಟಕದ ಪಂಚತಾರಾ ಹೋಟೆಲ್ ನಲ್ಲಿಟ್ಟಿದ್ದಾರೆ ಎಂಬ ವದಂತಿಗಳಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ದೆಹಲಿಯ ಕಾಂಗ್ರೆಸ್ ಮುಖಂಡರು ಬಿಜೆಪಿಯು “ರಾಜ್ಯದಿಂದ ರಾಜ್ಯ”ದ ಮೇಲೆ ಆಕ್ರಮಣ ಮಾಡುತ್ತಿದೆ. ರಾಜ್ಯಸಭೆಯ ಚುನಾವಣೆಗೆ ಹತ್ತಿರವಿರುವಾಗ ಸರ್ಕಾರಗಳನ್ನು ಉರುಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂಗಳವಾರ ಸಂಜೆ ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರದ ಕೆಲವು ಶಾಸಕರು ದೆಹಲಿ ಬಳಿಯ ಗುರಗಾಂವ್‌ನಲ್ಲಿರುವ ಪಂಚತಾರಾ ಹೋಟೆಲ್‌ನಲ್ಲಿ ಬೀಡುಬಿಟ್ಟಿರುವ ಬಗ್ಗೆ ವರದಿಗಳು ಹೊರಬಿದ್ದಿವೆ. ಬಿಜೆಪಿ ತಮ್ಮ ಪಕ್ಷದ ಶಾಸಕರಿಗೆ 25-35 ಕೋಟಿ ರೂ. ಲಂಚ ನೀಡಲು ಪ್ರಯತ್ನಿಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಆರೋಪಿಸಿದ್ದಾರೆ.

ಶಾಸಕರೊಂದಿಗೆ ಮಾತನಾಡಲು ಪ್ರಯತ್ನಿಸುತ್ತಿರುವ ಪಕ್ಷದ ಹಿರಿಯ ನಾಯಕರನ್ನು ಬಿಜೆಪಿ ಆಡಳಿತದ ಹರಿಯಾಣದ ಪೊಲೀಸರು ಹೋಟೆಲ್‌ಗೆ ಅನುಮತಿಸುತ್ತಿಲ್ಲ ಎಂದು ಕಾಂಗ್ರೆಸ್ ದೂರಿದೆ.

ಬುಧವಾರ ಮುಂಜಾನೆ 2 ಗಂಟೆ ಸುಮಾರಿಗೆ ಬಿಎಸ್‌ಪಿ ಶಾಸಕಿ ರಮಾಬಾಯಿ ದಿಗ್ವಿಜಯ ಸಿಂಗ್ ಅವರ ಪುತ್ರ ಸೇರಿದಂತೆ ಕಾಂಗ್ರೆಸ್ ಮಂತ್ರಿಗಳ ಬೆಂಗಾವಲಿನೊಂದಿಗೆ ಐಟಿಸಿ ಗ್ರ್ಯಾಂಡ್ ಭಾರತ್‌ ಹೋಟೆಲ್‌ನಿಂದ ತನ್ನ ಬ್ಯಾಗುಗಳೊಂದಿಗೆ ಹೊರಬಂದಿದ್ದರು.

“ಕಾಂಗ್ರೆಸ್ ಸರ್ಕಾರವು 15 ವರ್ಷಗಳಿಂದ ನಡೆಯುತ್ತಿರುವ ಲ್ಯಾಂಡ್ ಮಾಫಿಯಾ, ಚಿಟ್ ಫಂಡ್ ಮಾಫಿಯಾ, ಸುಲಿಗೆ ಮಾಫಿಯಾದಂತಹ ಮಾಫಿಯಾಗಳನ್ನು ನಿಲ್ಲಿಸಿದೆ, ಅವುಗಳ ಕುರಿತು ಸಾಕ್ಷ್ಯ ಸಂಗ್ರಹಿಸಿದೆ. ಇದರಿಂದ ಜೈಲಿನ ಕಂಬಿಗಳಿಗೆ ಹೆದರಿ ಮಧ್ಯಪ್ರದೇಶದ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಅಮಿತ್ ಶಾ, ಶಿವರಾಜ್ ಸಿಂಗ್‌ ಚೌಹಾಣ್‌ ಮತ್ತು ಎಂಎಲ್ ಖಟ್ಟರ್ ಅವರೇ, 12 ಶಾಸಕರನ್ನು ವಿಶೇಷ ವಿಮಾನದಲ್ಲಿ ಗುರಗಾಂವ್ ಗೆ ಕರೆದೊಯ್ದವರು ಯಾರು ಎಂದು ದಯವಿಟ್ಟು ಹೇಳುತ್ತೀರಾ?” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.

ಮಧ್ಯಪ್ರದೇಶದ ಪ್ರಮುಖ ಬಿಜೆಪಿ ಮುಖಂಡ ನರೋತ್ತಮ್ ಮಿಶ್ರಾ ಈ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಇದು ರಾಜ್ಯಸಭಾ ಸದಸ್ಯರಾಗಿ ದಿಗ್ವಿಜಯ್‌ ಸಿಂಗ್‌ ಮುಂದುವರೆಯಲು ಆಡುತ್ತಿರು ನಾಟಕ ಎಂದು ಕರೆದಿದ್ದಾರೆ.

ವಿಶೇಷ ವಿಮಾನದ ಮೂಲಕ ತನ್ನನ್ನು ಮತ್ತು ಇತರರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದೆ ಎಂಬ ಕಾಂಗ್ರೆಸ್ ಆರೋಪವನ್ನು ರಮಾಬಾಯಿ ನಿರಾಕರಿಸಿದ್ದಾರೆ. ಅಲ್ಲದೆ ತಾನು ಮುಖ್ಯಮಂತ್ರಿ ಕಮಲ್ ನಾಥ್ ಅವರೊಂದಿಗೆ ಇದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. “ರಾಜ್ಯ ಸರ್ಕಾರಕ್ಕೆ ಯಾವುದೇ ಬೆದರಿಕೆ ಇಲ್ಲ. ಅವರು ನನ್ನನ್ನು ಮಂತ್ರಿಯನ್ನಾಗಿ ಮಾಡಲು ಬಯಸಿದರೆ ನಾನು ತಯಾರಿದ್ದೇನೆ” ಎಂದೂ ಸಹ ಅವರು ಹೇಳಿದ್ದಾರೆ.

230 ಸದಸ್ಯರ ಮದ್ಯಪ್ರದೇಶದ ವಿಧಾನಸಭೆಯಲ್ಲಿ ಕಮಲ್ ನಾಥ್ ಸರ್ಕಾರವು 120 ಶಾಸಕರನ್ನು ಹೊಂದಿದೆ. ಈ ಪೈಕಿ 114 ಶಾಸಕರು ಕಾಂಗ್ರೆಸ್, ಇಬ್ಬರು ಬಿಎಸ್ಪಿ, ಒಬ್ಬರು ಸಮಾಜವಾದಿ ಪಕ್ಷ ಮತ್ತು ನಾಲ್ವರು ಪಕ್ಷೇತರರು. ಬಿಜೆಪಿಗೆ 107 ಶಾಸಕರಿದ್ದಾರೆ. ವಿಧಾನಸಭೆಯಲ್ಲಿ ಎರಡು ಸ್ಥಾನಗಳು ಖಾಲಿ ಇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...