Homeಮುಖಪುಟಮಧ್ಯಪ್ರದೇಶ ಸರ್ಕಾರವನ್ನು ಬಿಜೆಪಿ "ಅಪರೇಷನ್ ಹೋಳಿ" ಮಾಡುತ್ತಿದೆ: ಕಾಂಗ್ರೆಸ್ ಆರೋಪ

ಮಧ್ಯಪ್ರದೇಶ ಸರ್ಕಾರವನ್ನು ಬಿಜೆಪಿ “ಅಪರೇಷನ್ ಹೋಳಿ” ಮಾಡುತ್ತಿದೆ: ಕಾಂಗ್ರೆಸ್ ಆರೋಪ

- Advertisement -
- Advertisement -

ತನ್ನ ಸರ್ಕಾರವನ್ನು ಅಸ್ಥಿರಗೊಳಿಸಲು “ಆಪರೇಷನ್ ಹೋಳಿ” ಎಂದು ಕರೆದು 14 ಕಾಂಗ್ರೆಸ್‌ ಶಾಸಕರನ್ನು ಬಿಜೆಪಿ ಅಪಹರಿಸಿದೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಬೆಂಬಲದ ನಾಲ್ಕು ಶಾಸಕರಾದ ಹರ್ದೀಪ್ ಡಾಂಗ್, ರಘುರಾಜ್ ಕನ್ಸಾನಾ ಮತ್ತು ಬಿಸಾಹುಲಾಲ್ ಸಿಂಗ್ ಮತ್ತು ಸ್ವತಂತ್ರ ಸದಸ್ಯೆ ಶೇರಾ ಭೈಯಾರನ್ನು ಕರ್ನಾಟಕದ ಪಂಚತಾರಾ ಹೋಟೆಲ್ ನಲ್ಲಿಟ್ಟಿದ್ದಾರೆ ಎಂಬ ವದಂತಿಗಳಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ದೆಹಲಿಯ ಕಾಂಗ್ರೆಸ್ ಮುಖಂಡರು ಬಿಜೆಪಿಯು “ರಾಜ್ಯದಿಂದ ರಾಜ್ಯ”ದ ಮೇಲೆ ಆಕ್ರಮಣ ಮಾಡುತ್ತಿದೆ. ರಾಜ್ಯಸಭೆಯ ಚುನಾವಣೆಗೆ ಹತ್ತಿರವಿರುವಾಗ ಸರ್ಕಾರಗಳನ್ನು ಉರುಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂಗಳವಾರ ಸಂಜೆ ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರದ ಕೆಲವು ಶಾಸಕರು ದೆಹಲಿ ಬಳಿಯ ಗುರಗಾಂವ್‌ನಲ್ಲಿರುವ ಪಂಚತಾರಾ ಹೋಟೆಲ್‌ನಲ್ಲಿ ಬೀಡುಬಿಟ್ಟಿರುವ ಬಗ್ಗೆ ವರದಿಗಳು ಹೊರಬಿದ್ದಿವೆ. ಬಿಜೆಪಿ ತಮ್ಮ ಪಕ್ಷದ ಶಾಸಕರಿಗೆ 25-35 ಕೋಟಿ ರೂ. ಲಂಚ ನೀಡಲು ಪ್ರಯತ್ನಿಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಆರೋಪಿಸಿದ್ದಾರೆ.

ಶಾಸಕರೊಂದಿಗೆ ಮಾತನಾಡಲು ಪ್ರಯತ್ನಿಸುತ್ತಿರುವ ಪಕ್ಷದ ಹಿರಿಯ ನಾಯಕರನ್ನು ಬಿಜೆಪಿ ಆಡಳಿತದ ಹರಿಯಾಣದ ಪೊಲೀಸರು ಹೋಟೆಲ್‌ಗೆ ಅನುಮತಿಸುತ್ತಿಲ್ಲ ಎಂದು ಕಾಂಗ್ರೆಸ್ ದೂರಿದೆ.

ಬುಧವಾರ ಮುಂಜಾನೆ 2 ಗಂಟೆ ಸುಮಾರಿಗೆ ಬಿಎಸ್‌ಪಿ ಶಾಸಕಿ ರಮಾಬಾಯಿ ದಿಗ್ವಿಜಯ ಸಿಂಗ್ ಅವರ ಪುತ್ರ ಸೇರಿದಂತೆ ಕಾಂಗ್ರೆಸ್ ಮಂತ್ರಿಗಳ ಬೆಂಗಾವಲಿನೊಂದಿಗೆ ಐಟಿಸಿ ಗ್ರ್ಯಾಂಡ್ ಭಾರತ್‌ ಹೋಟೆಲ್‌ನಿಂದ ತನ್ನ ಬ್ಯಾಗುಗಳೊಂದಿಗೆ ಹೊರಬಂದಿದ್ದರು.

“ಕಾಂಗ್ರೆಸ್ ಸರ್ಕಾರವು 15 ವರ್ಷಗಳಿಂದ ನಡೆಯುತ್ತಿರುವ ಲ್ಯಾಂಡ್ ಮಾಫಿಯಾ, ಚಿಟ್ ಫಂಡ್ ಮಾಫಿಯಾ, ಸುಲಿಗೆ ಮಾಫಿಯಾದಂತಹ ಮಾಫಿಯಾಗಳನ್ನು ನಿಲ್ಲಿಸಿದೆ, ಅವುಗಳ ಕುರಿತು ಸಾಕ್ಷ್ಯ ಸಂಗ್ರಹಿಸಿದೆ. ಇದರಿಂದ ಜೈಲಿನ ಕಂಬಿಗಳಿಗೆ ಹೆದರಿ ಮಧ್ಯಪ್ರದೇಶದ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಅಮಿತ್ ಶಾ, ಶಿವರಾಜ್ ಸಿಂಗ್‌ ಚೌಹಾಣ್‌ ಮತ್ತು ಎಂಎಲ್ ಖಟ್ಟರ್ ಅವರೇ, 12 ಶಾಸಕರನ್ನು ವಿಶೇಷ ವಿಮಾನದಲ್ಲಿ ಗುರಗಾಂವ್ ಗೆ ಕರೆದೊಯ್ದವರು ಯಾರು ಎಂದು ದಯವಿಟ್ಟು ಹೇಳುತ್ತೀರಾ?” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.

ಮಧ್ಯಪ್ರದೇಶದ ಪ್ರಮುಖ ಬಿಜೆಪಿ ಮುಖಂಡ ನರೋತ್ತಮ್ ಮಿಶ್ರಾ ಈ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಇದು ರಾಜ್ಯಸಭಾ ಸದಸ್ಯರಾಗಿ ದಿಗ್ವಿಜಯ್‌ ಸಿಂಗ್‌ ಮುಂದುವರೆಯಲು ಆಡುತ್ತಿರು ನಾಟಕ ಎಂದು ಕರೆದಿದ್ದಾರೆ.

ವಿಶೇಷ ವಿಮಾನದ ಮೂಲಕ ತನ್ನನ್ನು ಮತ್ತು ಇತರರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದೆ ಎಂಬ ಕಾಂಗ್ರೆಸ್ ಆರೋಪವನ್ನು ರಮಾಬಾಯಿ ನಿರಾಕರಿಸಿದ್ದಾರೆ. ಅಲ್ಲದೆ ತಾನು ಮುಖ್ಯಮಂತ್ರಿ ಕಮಲ್ ನಾಥ್ ಅವರೊಂದಿಗೆ ಇದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. “ರಾಜ್ಯ ಸರ್ಕಾರಕ್ಕೆ ಯಾವುದೇ ಬೆದರಿಕೆ ಇಲ್ಲ. ಅವರು ನನ್ನನ್ನು ಮಂತ್ರಿಯನ್ನಾಗಿ ಮಾಡಲು ಬಯಸಿದರೆ ನಾನು ತಯಾರಿದ್ದೇನೆ” ಎಂದೂ ಸಹ ಅವರು ಹೇಳಿದ್ದಾರೆ.

230 ಸದಸ್ಯರ ಮದ್ಯಪ್ರದೇಶದ ವಿಧಾನಸಭೆಯಲ್ಲಿ ಕಮಲ್ ನಾಥ್ ಸರ್ಕಾರವು 120 ಶಾಸಕರನ್ನು ಹೊಂದಿದೆ. ಈ ಪೈಕಿ 114 ಶಾಸಕರು ಕಾಂಗ್ರೆಸ್, ಇಬ್ಬರು ಬಿಎಸ್ಪಿ, ಒಬ್ಬರು ಸಮಾಜವಾದಿ ಪಕ್ಷ ಮತ್ತು ನಾಲ್ವರು ಪಕ್ಷೇತರರು. ಬಿಜೆಪಿಗೆ 107 ಶಾಸಕರಿದ್ದಾರೆ. ವಿಧಾನಸಭೆಯಲ್ಲಿ ಎರಡು ಸ್ಥಾನಗಳು ಖಾಲಿ ಇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....