Homeಮುಖಪುಟಮಧ್ಯಪ್ರದೇಶ ಸರ್ಕಾರವನ್ನು ಬಿಜೆಪಿ "ಅಪರೇಷನ್ ಹೋಳಿ" ಮಾಡುತ್ತಿದೆ: ಕಾಂಗ್ರೆಸ್ ಆರೋಪ

ಮಧ್ಯಪ್ರದೇಶ ಸರ್ಕಾರವನ್ನು ಬಿಜೆಪಿ “ಅಪರೇಷನ್ ಹೋಳಿ” ಮಾಡುತ್ತಿದೆ: ಕಾಂಗ್ರೆಸ್ ಆರೋಪ

- Advertisement -
- Advertisement -

ತನ್ನ ಸರ್ಕಾರವನ್ನು ಅಸ್ಥಿರಗೊಳಿಸಲು “ಆಪರೇಷನ್ ಹೋಳಿ” ಎಂದು ಕರೆದು 14 ಕಾಂಗ್ರೆಸ್‌ ಶಾಸಕರನ್ನು ಬಿಜೆಪಿ ಅಪಹರಿಸಿದೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಬೆಂಬಲದ ನಾಲ್ಕು ಶಾಸಕರಾದ ಹರ್ದೀಪ್ ಡಾಂಗ್, ರಘುರಾಜ್ ಕನ್ಸಾನಾ ಮತ್ತು ಬಿಸಾಹುಲಾಲ್ ಸಿಂಗ್ ಮತ್ತು ಸ್ವತಂತ್ರ ಸದಸ್ಯೆ ಶೇರಾ ಭೈಯಾರನ್ನು ಕರ್ನಾಟಕದ ಪಂಚತಾರಾ ಹೋಟೆಲ್ ನಲ್ಲಿಟ್ಟಿದ್ದಾರೆ ಎಂಬ ವದಂತಿಗಳಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ದೆಹಲಿಯ ಕಾಂಗ್ರೆಸ್ ಮುಖಂಡರು ಬಿಜೆಪಿಯು “ರಾಜ್ಯದಿಂದ ರಾಜ್ಯ”ದ ಮೇಲೆ ಆಕ್ರಮಣ ಮಾಡುತ್ತಿದೆ. ರಾಜ್ಯಸಭೆಯ ಚುನಾವಣೆಗೆ ಹತ್ತಿರವಿರುವಾಗ ಸರ್ಕಾರಗಳನ್ನು ಉರುಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂಗಳವಾರ ಸಂಜೆ ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರದ ಕೆಲವು ಶಾಸಕರು ದೆಹಲಿ ಬಳಿಯ ಗುರಗಾಂವ್‌ನಲ್ಲಿರುವ ಪಂಚತಾರಾ ಹೋಟೆಲ್‌ನಲ್ಲಿ ಬೀಡುಬಿಟ್ಟಿರುವ ಬಗ್ಗೆ ವರದಿಗಳು ಹೊರಬಿದ್ದಿವೆ. ಬಿಜೆಪಿ ತಮ್ಮ ಪಕ್ಷದ ಶಾಸಕರಿಗೆ 25-35 ಕೋಟಿ ರೂ. ಲಂಚ ನೀಡಲು ಪ್ರಯತ್ನಿಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಆರೋಪಿಸಿದ್ದಾರೆ.

ಶಾಸಕರೊಂದಿಗೆ ಮಾತನಾಡಲು ಪ್ರಯತ್ನಿಸುತ್ತಿರುವ ಪಕ್ಷದ ಹಿರಿಯ ನಾಯಕರನ್ನು ಬಿಜೆಪಿ ಆಡಳಿತದ ಹರಿಯಾಣದ ಪೊಲೀಸರು ಹೋಟೆಲ್‌ಗೆ ಅನುಮತಿಸುತ್ತಿಲ್ಲ ಎಂದು ಕಾಂಗ್ರೆಸ್ ದೂರಿದೆ.

ಬುಧವಾರ ಮುಂಜಾನೆ 2 ಗಂಟೆ ಸುಮಾರಿಗೆ ಬಿಎಸ್‌ಪಿ ಶಾಸಕಿ ರಮಾಬಾಯಿ ದಿಗ್ವಿಜಯ ಸಿಂಗ್ ಅವರ ಪುತ್ರ ಸೇರಿದಂತೆ ಕಾಂಗ್ರೆಸ್ ಮಂತ್ರಿಗಳ ಬೆಂಗಾವಲಿನೊಂದಿಗೆ ಐಟಿಸಿ ಗ್ರ್ಯಾಂಡ್ ಭಾರತ್‌ ಹೋಟೆಲ್‌ನಿಂದ ತನ್ನ ಬ್ಯಾಗುಗಳೊಂದಿಗೆ ಹೊರಬಂದಿದ್ದರು.

“ಕಾಂಗ್ರೆಸ್ ಸರ್ಕಾರವು 15 ವರ್ಷಗಳಿಂದ ನಡೆಯುತ್ತಿರುವ ಲ್ಯಾಂಡ್ ಮಾಫಿಯಾ, ಚಿಟ್ ಫಂಡ್ ಮಾಫಿಯಾ, ಸುಲಿಗೆ ಮಾಫಿಯಾದಂತಹ ಮಾಫಿಯಾಗಳನ್ನು ನಿಲ್ಲಿಸಿದೆ, ಅವುಗಳ ಕುರಿತು ಸಾಕ್ಷ್ಯ ಸಂಗ್ರಹಿಸಿದೆ. ಇದರಿಂದ ಜೈಲಿನ ಕಂಬಿಗಳಿಗೆ ಹೆದರಿ ಮಧ್ಯಪ್ರದೇಶದ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಅಮಿತ್ ಶಾ, ಶಿವರಾಜ್ ಸಿಂಗ್‌ ಚೌಹಾಣ್‌ ಮತ್ತು ಎಂಎಲ್ ಖಟ್ಟರ್ ಅವರೇ, 12 ಶಾಸಕರನ್ನು ವಿಶೇಷ ವಿಮಾನದಲ್ಲಿ ಗುರಗಾಂವ್ ಗೆ ಕರೆದೊಯ್ದವರು ಯಾರು ಎಂದು ದಯವಿಟ್ಟು ಹೇಳುತ್ತೀರಾ?” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.

ಮಧ್ಯಪ್ರದೇಶದ ಪ್ರಮುಖ ಬಿಜೆಪಿ ಮುಖಂಡ ನರೋತ್ತಮ್ ಮಿಶ್ರಾ ಈ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಇದು ರಾಜ್ಯಸಭಾ ಸದಸ್ಯರಾಗಿ ದಿಗ್ವಿಜಯ್‌ ಸಿಂಗ್‌ ಮುಂದುವರೆಯಲು ಆಡುತ್ತಿರು ನಾಟಕ ಎಂದು ಕರೆದಿದ್ದಾರೆ.

ವಿಶೇಷ ವಿಮಾನದ ಮೂಲಕ ತನ್ನನ್ನು ಮತ್ತು ಇತರರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದೆ ಎಂಬ ಕಾಂಗ್ರೆಸ್ ಆರೋಪವನ್ನು ರಮಾಬಾಯಿ ನಿರಾಕರಿಸಿದ್ದಾರೆ. ಅಲ್ಲದೆ ತಾನು ಮುಖ್ಯಮಂತ್ರಿ ಕಮಲ್ ನಾಥ್ ಅವರೊಂದಿಗೆ ಇದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. “ರಾಜ್ಯ ಸರ್ಕಾರಕ್ಕೆ ಯಾವುದೇ ಬೆದರಿಕೆ ಇಲ್ಲ. ಅವರು ನನ್ನನ್ನು ಮಂತ್ರಿಯನ್ನಾಗಿ ಮಾಡಲು ಬಯಸಿದರೆ ನಾನು ತಯಾರಿದ್ದೇನೆ” ಎಂದೂ ಸಹ ಅವರು ಹೇಳಿದ್ದಾರೆ.

230 ಸದಸ್ಯರ ಮದ್ಯಪ್ರದೇಶದ ವಿಧಾನಸಭೆಯಲ್ಲಿ ಕಮಲ್ ನಾಥ್ ಸರ್ಕಾರವು 120 ಶಾಸಕರನ್ನು ಹೊಂದಿದೆ. ಈ ಪೈಕಿ 114 ಶಾಸಕರು ಕಾಂಗ್ರೆಸ್, ಇಬ್ಬರು ಬಿಎಸ್ಪಿ, ಒಬ್ಬರು ಸಮಾಜವಾದಿ ಪಕ್ಷ ಮತ್ತು ನಾಲ್ವರು ಪಕ್ಷೇತರರು. ಬಿಜೆಪಿಗೆ 107 ಶಾಸಕರಿದ್ದಾರೆ. ವಿಧಾನಸಭೆಯಲ್ಲಿ ಎರಡು ಸ್ಥಾನಗಳು ಖಾಲಿ ಇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...