Homeಮುಖಪುಟಮಧ್ಯಪ್ರದೇಶ ಸರ್ಕಾರವನ್ನು ಬಿಜೆಪಿ "ಅಪರೇಷನ್ ಹೋಳಿ" ಮಾಡುತ್ತಿದೆ: ಕಾಂಗ್ರೆಸ್ ಆರೋಪ

ಮಧ್ಯಪ್ರದೇಶ ಸರ್ಕಾರವನ್ನು ಬಿಜೆಪಿ “ಅಪರೇಷನ್ ಹೋಳಿ” ಮಾಡುತ್ತಿದೆ: ಕಾಂಗ್ರೆಸ್ ಆರೋಪ

- Advertisement -
- Advertisement -

ತನ್ನ ಸರ್ಕಾರವನ್ನು ಅಸ್ಥಿರಗೊಳಿಸಲು “ಆಪರೇಷನ್ ಹೋಳಿ” ಎಂದು ಕರೆದು 14 ಕಾಂಗ್ರೆಸ್‌ ಶಾಸಕರನ್ನು ಬಿಜೆಪಿ ಅಪಹರಿಸಿದೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಬೆಂಬಲದ ನಾಲ್ಕು ಶಾಸಕರಾದ ಹರ್ದೀಪ್ ಡಾಂಗ್, ರಘುರಾಜ್ ಕನ್ಸಾನಾ ಮತ್ತು ಬಿಸಾಹುಲಾಲ್ ಸಿಂಗ್ ಮತ್ತು ಸ್ವತಂತ್ರ ಸದಸ್ಯೆ ಶೇರಾ ಭೈಯಾರನ್ನು ಕರ್ನಾಟಕದ ಪಂಚತಾರಾ ಹೋಟೆಲ್ ನಲ್ಲಿಟ್ಟಿದ್ದಾರೆ ಎಂಬ ವದಂತಿಗಳಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ದೆಹಲಿಯ ಕಾಂಗ್ರೆಸ್ ಮುಖಂಡರು ಬಿಜೆಪಿಯು “ರಾಜ್ಯದಿಂದ ರಾಜ್ಯ”ದ ಮೇಲೆ ಆಕ್ರಮಣ ಮಾಡುತ್ತಿದೆ. ರಾಜ್ಯಸಭೆಯ ಚುನಾವಣೆಗೆ ಹತ್ತಿರವಿರುವಾಗ ಸರ್ಕಾರಗಳನ್ನು ಉರುಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂಗಳವಾರ ಸಂಜೆ ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರದ ಕೆಲವು ಶಾಸಕರು ದೆಹಲಿ ಬಳಿಯ ಗುರಗಾಂವ್‌ನಲ್ಲಿರುವ ಪಂಚತಾರಾ ಹೋಟೆಲ್‌ನಲ್ಲಿ ಬೀಡುಬಿಟ್ಟಿರುವ ಬಗ್ಗೆ ವರದಿಗಳು ಹೊರಬಿದ್ದಿವೆ. ಬಿಜೆಪಿ ತಮ್ಮ ಪಕ್ಷದ ಶಾಸಕರಿಗೆ 25-35 ಕೋಟಿ ರೂ. ಲಂಚ ನೀಡಲು ಪ್ರಯತ್ನಿಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಆರೋಪಿಸಿದ್ದಾರೆ.

ಶಾಸಕರೊಂದಿಗೆ ಮಾತನಾಡಲು ಪ್ರಯತ್ನಿಸುತ್ತಿರುವ ಪಕ್ಷದ ಹಿರಿಯ ನಾಯಕರನ್ನು ಬಿಜೆಪಿ ಆಡಳಿತದ ಹರಿಯಾಣದ ಪೊಲೀಸರು ಹೋಟೆಲ್‌ಗೆ ಅನುಮತಿಸುತ್ತಿಲ್ಲ ಎಂದು ಕಾಂಗ್ರೆಸ್ ದೂರಿದೆ.

ಬುಧವಾರ ಮುಂಜಾನೆ 2 ಗಂಟೆ ಸುಮಾರಿಗೆ ಬಿಎಸ್‌ಪಿ ಶಾಸಕಿ ರಮಾಬಾಯಿ ದಿಗ್ವಿಜಯ ಸಿಂಗ್ ಅವರ ಪುತ್ರ ಸೇರಿದಂತೆ ಕಾಂಗ್ರೆಸ್ ಮಂತ್ರಿಗಳ ಬೆಂಗಾವಲಿನೊಂದಿಗೆ ಐಟಿಸಿ ಗ್ರ್ಯಾಂಡ್ ಭಾರತ್‌ ಹೋಟೆಲ್‌ನಿಂದ ತನ್ನ ಬ್ಯಾಗುಗಳೊಂದಿಗೆ ಹೊರಬಂದಿದ್ದರು.

“ಕಾಂಗ್ರೆಸ್ ಸರ್ಕಾರವು 15 ವರ್ಷಗಳಿಂದ ನಡೆಯುತ್ತಿರುವ ಲ್ಯಾಂಡ್ ಮಾಫಿಯಾ, ಚಿಟ್ ಫಂಡ್ ಮಾಫಿಯಾ, ಸುಲಿಗೆ ಮಾಫಿಯಾದಂತಹ ಮಾಫಿಯಾಗಳನ್ನು ನಿಲ್ಲಿಸಿದೆ, ಅವುಗಳ ಕುರಿತು ಸಾಕ್ಷ್ಯ ಸಂಗ್ರಹಿಸಿದೆ. ಇದರಿಂದ ಜೈಲಿನ ಕಂಬಿಗಳಿಗೆ ಹೆದರಿ ಮಧ್ಯಪ್ರದೇಶದ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಅಮಿತ್ ಶಾ, ಶಿವರಾಜ್ ಸಿಂಗ್‌ ಚೌಹಾಣ್‌ ಮತ್ತು ಎಂಎಲ್ ಖಟ್ಟರ್ ಅವರೇ, 12 ಶಾಸಕರನ್ನು ವಿಶೇಷ ವಿಮಾನದಲ್ಲಿ ಗುರಗಾಂವ್ ಗೆ ಕರೆದೊಯ್ದವರು ಯಾರು ಎಂದು ದಯವಿಟ್ಟು ಹೇಳುತ್ತೀರಾ?” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.

ಮಧ್ಯಪ್ರದೇಶದ ಪ್ರಮುಖ ಬಿಜೆಪಿ ಮುಖಂಡ ನರೋತ್ತಮ್ ಮಿಶ್ರಾ ಈ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಇದು ರಾಜ್ಯಸಭಾ ಸದಸ್ಯರಾಗಿ ದಿಗ್ವಿಜಯ್‌ ಸಿಂಗ್‌ ಮುಂದುವರೆಯಲು ಆಡುತ್ತಿರು ನಾಟಕ ಎಂದು ಕರೆದಿದ್ದಾರೆ.

ವಿಶೇಷ ವಿಮಾನದ ಮೂಲಕ ತನ್ನನ್ನು ಮತ್ತು ಇತರರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದೆ ಎಂಬ ಕಾಂಗ್ರೆಸ್ ಆರೋಪವನ್ನು ರಮಾಬಾಯಿ ನಿರಾಕರಿಸಿದ್ದಾರೆ. ಅಲ್ಲದೆ ತಾನು ಮುಖ್ಯಮಂತ್ರಿ ಕಮಲ್ ನಾಥ್ ಅವರೊಂದಿಗೆ ಇದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. “ರಾಜ್ಯ ಸರ್ಕಾರಕ್ಕೆ ಯಾವುದೇ ಬೆದರಿಕೆ ಇಲ್ಲ. ಅವರು ನನ್ನನ್ನು ಮಂತ್ರಿಯನ್ನಾಗಿ ಮಾಡಲು ಬಯಸಿದರೆ ನಾನು ತಯಾರಿದ್ದೇನೆ” ಎಂದೂ ಸಹ ಅವರು ಹೇಳಿದ್ದಾರೆ.

230 ಸದಸ್ಯರ ಮದ್ಯಪ್ರದೇಶದ ವಿಧಾನಸಭೆಯಲ್ಲಿ ಕಮಲ್ ನಾಥ್ ಸರ್ಕಾರವು 120 ಶಾಸಕರನ್ನು ಹೊಂದಿದೆ. ಈ ಪೈಕಿ 114 ಶಾಸಕರು ಕಾಂಗ್ರೆಸ್, ಇಬ್ಬರು ಬಿಎಸ್ಪಿ, ಒಬ್ಬರು ಸಮಾಜವಾದಿ ಪಕ್ಷ ಮತ್ತು ನಾಲ್ವರು ಪಕ್ಷೇತರರು. ಬಿಜೆಪಿಗೆ 107 ಶಾಸಕರಿದ್ದಾರೆ. ವಿಧಾನಸಭೆಯಲ್ಲಿ ಎರಡು ಸ್ಥಾನಗಳು ಖಾಲಿ ಇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...