Homeಮುಖಪುಟಗುಜರಾತ್‌: ನಾಮಪತ್ರ ಹಿಂಪಡೆಯಲು ಒತ್ತಾಯಿಸಿ ಆಪ್‌ ಅಭ್ಯರ್ಥಿಯನ್ನು ಎಳೆದೊಯ್ದ ಬಿಜೆಪಿ- ಎಎಪಿ ಆರೋಪ

ಗುಜರಾತ್‌: ನಾಮಪತ್ರ ಹಿಂಪಡೆಯಲು ಒತ್ತಾಯಿಸಿ ಆಪ್‌ ಅಭ್ಯರ್ಥಿಯನ್ನು ಎಳೆದೊಯ್ದ ಬಿಜೆಪಿ- ಎಎಪಿ ಆರೋಪ

- Advertisement -
- Advertisement -

“ನಾಮಪತ್ರ ಹಿಂಪಡೆಯುವಂತೆ ಒತ್ತಾಯಿಸಿ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿಯನ್ನು ಬಿಜೆಪಿ ಗೂಂಡಾಗಳು ಹಾಗೂ ಪೊಲೀಸರು ಎಳೆದೊಯ್ದಿದ್ದಾರೆ” ಎಂದು ಆರೋಪಿಸಿರುವ ಎಎಪಿ ವಿಡಿಯೊ ಬಿಡುಗಡೆ ಮಾಡಿದೆ.

ಈ ಕುರಿತು ವಿಡಿಯೊ ತುಣುಕು ಟ್ವೀಟ್ ಮಾಡಿರುವ ಎಎಪಿ ನಾಯಕ ರಾಘವ್ ಚಡ್ಡ, “ಪೊಲೀಸರು ಮತ್ತು ಬಿಜೆಪಿ ಗೂಂಡಾಗಳು ಹೇಗೆ ಒಟ್ಟಾಗಿ ನಮ್ಮ ಸೂರತ್ ಪೂರ್ವ ಅಭ್ಯರ್ಥಿ ಕಾಂಚನ್ ಜರಿವಾಲಾ ಅವರನ್ನು ತಮ್ಮ ನಾಮಪತ್ರ ಹಿಂಪಡೆಯುವಂತೆ ಒತ್ತಾಯಿಸಿ ಆರ್‌ಒ ಕಚೇರಿಗೆ ಎಳೆದೊಯ್ದಿದ್ದಾರೆ ಎಂಬುದನ್ನು ನೋಡಿರಿ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಎಂಬ ಪದವೇ ಜೋಕ್ ಆಗಿಬಿಟ್ಟಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಗುಜರಾತ್‌ನಲ್ಲಿ ತನ್ನ ಅಭ್ಯರ್ಥಿಯೊಬ್ಬರನ್ನು ಅಪಹರಣ ಮಾಡಲಾಗಿದೆ ಮತ್ತು ಮುಂದಿನ ತಿಂಗಳ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಒತ್ತಾಯಿಸಿ ನಾಮಪತ್ರವನ್ನು ಹಿಂಪಡೆಯಲು ಯತ್ನಿಸಲಾಗಿದೆ ಎಂದು ಎಎಪಿ ದೂರಲು ಆರಂಭಿಸಿತು.

ಸೂರತ್ (ಪೂರ್ವ) ಕ್ಷೇತ್ರದ ಅಭ್ಯರ್ಥಿ ಕಾಂಚನ್ ಜರಿವಾಲಾ ನಿನ್ನೆಯಿಂದ ಕಾಣೆಯಾಗಿದ್ದಾರೆ ಎಂದು ಎಎಪಿ ಟ್ವೀಟ್‌ ಮಾಡುವ ಮೂಲಕ ಆರೋಪಿಸಲಾರಂಭಿಸಿತು. ಎಎಪಿ ಅಭ್ಯರ್ಥಿ ಕಾಂಚನ್ ಜರಿವಾಲಾ ಅವರನ್ನು ಬಿಜೆಪಿ ಅಪಹರಿಸಿದೆ ಎಂದು ಮನೀಶ್ ಸಿಸೋಡಿಯಾ ಹೇಳಿಕೆ ನೀಡಿದರು.

ಸ್ವಲ್ಪ ಸಮಯದ ನಂತರ ಸಿಸೋಡಿಯಾ ಟ್ವೀಟ್ ಮಾಡಿ, “ಜರಿವಾಲಾ ಪತ್ತೆಯಾಗಿದ್ದಾರೆ. 500 ಪೊಲೀಸರು ಸುತ್ತುವರೆದಿದ್ದು, ಗುಜರಾತ್ ಚುನಾವಣಾ ರಿಟರ್ನಿಂಗ್ ಕಚೇರಿಗೆ ಕರೆತರಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಜರಿವಾಲ ಅವರ ಮೇಲೆ ನಾಮಪತ್ರ ಹಿಂಪಡೆಯುವ ಒತ್ತಡ ಹೇರಲಾಗಿದೆ. ಅವರನ್ನು ಚುನಾವಣಾ ಕಚೇರಿಯಲ್ಲಿ ಕುಳಿತುಕೊಳ್ಳುವಂತೆ ಒತ್ತಾಯಿಸಲಾಗಿದೆ. ಪೊಲೀಸರಿಂದ ಒತ್ತಡ ತರಲಾಗುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಒಡ್ಡಿದ ಬಹಿರಂಗ ಬೆದರಿಕೆಯಾಗಿದೆ ಎಂದು ನಾನು ಚುನಾವಣಾ ಆಯೋಗಕ್ಕೆ ಹೇಳಲು ಬಯಸುತ್ತೇನೆ” ಎಂದು ಸಿಸೋಡಿಯಾ ಪ್ರತಿಕ್ರಿಯಿಸಿದ್ದಾರೆ.

ಗುಜರಾತ್ ಚುನಾವಣೆಯಲ್ಲಿ ಸೋಲುವ ಭಯದಲ್ಲಿ ಬಿಜೆಪಿ ಇದೆ. ಆದ್ದರಿಂದ ಎಎಪಿ ಅಭ್ಯರ್ಥಿಯನ್ನು ಅಪಹರಿಸಲು ಮುಂದಾಗಿದೆ ಎಂದು ಸಿಸೋಡಿಯಾ ದೂರಿದ್ದಾರೆ.

ಕಾಂಚನ್ ಜರಿವಾಲಾ ಮತ್ತು ಅವರ ಕುಟುಂಬ ಸದಸ್ಯರು ನಿನ್ನೆ ನಾಮಪತ್ರ ಪರಿಶೀಲನೆಗೆ ಹೋದಾಗ ನಾಪತ್ತೆಯಾಗಿದ್ದರು. ಅವರು ತಮ್ಮ ನಾಮಪತ್ರ ಪರಿಶೀಲನೆಯ ನಂತರ ಕಚೇರಿಯಿಂದ ಹೊರಬಂದ ಕ್ಷಣ, ಬಿಜೆಪಿಯ ಗೂಂಡಾಗಳು ಜರಿವಾಲ ಅವರನ್ನು ಎಳೆದೋಯ್ದರು ಎಂದು ಸಿಸೋಡಿಯಾ ಮಾಹಿತಿ ನೀಡಿದ್ದಾರೆ.

“ಇದು ಅಪಾಯಕಾರಿ. ಇದು ಕೇವಲ ಅಭ್ಯರ್ಥಿಯ ಅಪಹರಣವಲ್ಲ, ಪ್ರಜಾಪ್ರಭುತ್ವದ ಅಪಹರಣವಾಗಿದೆ” ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ಎಎಪಿ ಆರೋಪಗಳಿಗೆ ಬಿಜೆಪಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗುಜರಾತ್‌ನಲ್ಲಿ 27 ವರ್ಷಗಳಿಂದ ಅಧಿಕಾರದಲ್ಲಿರುವ ಆಡಳಿತರೂಢ ಬಿಜೆಪಿಯು ಈ ಬಾರಿ ಎಎಪಿಯಿಂದ ಆಕ್ರಮಣಕಾರಿ ಸವಾಲನ್ನು ಎದುರಿಸುತ್ತಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡುತ್ತಿದೆ. ರಾಜ್ಯದಲ್ಲಿ ಸಾಂಪ್ರದಾಯಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಇರುತ್ತಿತ್ತು. ಈ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ ಎಂದು ವಿಶ್ಲೇಷಣೆಗಳು ಬರುತ್ತಿವೆ.

ಡಿಸೆಂಬರ್ 1 ಮತ್ತು 5 ರಂದು ಗುಜರಾತ್‌ನಲ್ಲಿ ಹೊಸ ಸರ್ಕಾರ ರಚನೆಗಾಗಿ ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...