Homeಮುಖಪುಟಬಿಜೆಪಿ ನಾಯಕನ 'ಅತಿಕ್ರಮಣ' ಆರೋಪ: ಮಸೀದಿಯ ತೆರವು

ಬಿಜೆಪಿ ನಾಯಕನ ‘ಅತಿಕ್ರಮಣ’ ಆರೋಪ: ಮಸೀದಿಯ ತೆರವು

- Advertisement -
- Advertisement -

ಲಕ್ನೋ:ಲಕ್ನೋದಿಂದ ಸುಮಾರು 325 ಕಿ.ಮೀ ದೂರದಲ್ಲಿರುವ ಉತ್ತರಪ್ರದೇಶದ ಖುಷಿನಗರ ಜಿಲ್ಲೆಯ ಮಸೀದಿಯ ಒಂದು ಭಾಗವನ್ನು ‘ಅತಿಕ್ರಮಣ’ ಭೂಮಿಯಲ್ಲಿ ನಿರ್ಮಿಸಲಾಗಿದೆ ಎಂದು ಅದರ ತೆರವು ಕಾರ್ಯಾಚರಣೆಯನ್ನು ಅಧಿಕಾರಿಗಳು ಕೈಗೊಂಡಿದ್ದಾರೆ.

ಬಿಜೆಪಿಯ ನಾಯಕರೊಬ್ಬರು ಮುಸ್ಲಿಂ ಧಾರ್ಮಿಕ ಸ್ಥಳವು ಸರ್ಕಾರಿ ಭೂಮಿಯ ಒಂದು ಭಾಗವನ್ನು ಅತಿಕ್ರಮಿಸಿದೆ ಎಂದು ಆರೋಪಿಸಿದ ನಂತರ ಮೂರು ಅಂತಸ್ತಿನ ಮಸೀದಿಯ ತೆರವು ಕಾರ್ಯಾಚರಣೆ ಪ್ರಾರಂಭಿಸಲಾಗಿದೆ.

ವರದಿಗಳ ಪ್ರಕಾರ, ಮಸೀದಿಯ ಎಲ್ಲಾ ಕಡೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ ನಂತರ ಭಾರೀ ಪೊಲೀಸ್ ಪಡೆಯ ನಿಯೋಜನೆಯ ನಡುವೆಯೇ ಮಸೀದಿಯ ಕೆಲವು ಭಾಗದ ತೆರವು ಕಾರ್ಯ ಪ್ರಾರಂಭವಾಯಿತು. ಇದಕ್ಕೂ ಮೊದಲು ನ್ಯಾಯಾಲಯವು ಫೆಬ್ರವರಿ 8ರವರೆಗೆ ಮಸೀದಿಯ ತೆರವಿಗೆ ತಡೆ ನೀಡಿತ್ತು. ತಡೆಯಾಜ್ಞೆಯ ಸಮಯ ಮುಗಿದಂತೆ ಅಧಿಕಾರಿಗಳು ಅದನ್ನು ಕೆಡವಲು ಪ್ರಾರಂಭಿಸಿದರು.

ಕಳೆದ ವರ್ಷ ಸೆಪ್ಟೆಂಬರ್ 17ರಂದು ಬಿಜೆಪಿ ನಾಯಕ ರಾಮ್‌ಭಚನ್ ಸಿಂಗ್ ಅವರು ಹಟಾ ಪ್ರದೇಶದ ಸರ್ಕಾರಿ ಭೂಮಿಯಲ್ಲಿ ಏಷ್ಯಾದ ಅತಿದೊಡ್ಡ ಮಸೀದಿಯನ್ನು ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿದಾಗ ಈ ವಿಷಯ ಮುನ್ನೆಲೆಗೆ ಬಂದಿತು.

ಆದಾಗ್ಯೂ, ಮಸೀದಿ ಸಮಿತಿಯ ಜಾಕಿರ್ ಖಾನ್, ಮಸೀದಿ ನಿರ್ಮಾಣಕ್ಕಾಗಿ ಜಾಕಿರ್ ಹುಸೇನ್ ಮತ್ತು ಅಜ್ಮತುನ್ನಿಸಾ ಅವರಿಂದ 32 ದಶಮಾಂಶ ಭೂಮಿಯನ್ನು ಪಡೆದುಕೊಂಡಿದೆ ಎಂದು ಹೇಳುತ್ತಾರೆ. ಮಸೀದಿಯ ಸುತ್ತಮುತ್ತಲಿನ ಖಾಲಿ ಜಾಗದಲ್ಲಿರುವ ಮಸೀದಿಯ 30 ದಶಮಾಂಶ ಮತ್ತು ಎರಡು ದಶಮಾಂಶ ಭೂಮಿಯಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ.

ಮಸೀದಿಯ ಉಸ್ತುವಾರಿ ವಹಿಸಿಕೊಂಡವರು ಮಸೀದಿ ನಿರ್ಮಿಸಲು ಮುಸ್ಲಿಂ ಸಮುದಾಯವು ಸುಮಾರು 15 ವರ್ಷಗಳ ಹಿಂದೆ 32 ದಶಮಾಂಶ ಭೂಮಿಯನ್ನು ಖರೀದಿಸಿದೆ ಎಂದು ಹೇಳಿದರು. ಯಾವುದೇ ಅತಿಕ್ರಮಣವಿಲ್ಲ ಮತ್ತು ಮಸೀದಿ 30 ದಶಮಾಂಶ ಭೂಮಿಯಲ್ಲಿ ನಿಂತಿದೆ ಎಂದು ಅವರು ಹೇಳಿದರು.

ವರದಿಗಾರರೊಂದಿಗೆ ಮಾತನಾಡಿದ ಮಸೀದಿಯ ಪ್ರತಿನಿಧಿ ಸೈಫುಲ್ಲಾ ಖಾನ್, ಬುಲ್ಡೋಜರ್ ನಿಂದ ಹೊಡೆದುರುಳಿಸುವ ತೆರವು ಕಾರ್ಯಾಚರಣೆ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ಹೇಳಿದರು.

“ನಗರ ಪಾಲಿಕೆ ಕಚೇರಿಯಲ್ಲಿ ಸಮಯಕ್ಕೆ ಸರಿಯಾಗಿ ಅಧಿಕಾರಿಗಳಿಗೆ ನೀಡಿದ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ವಿವರಣೆಯನ್ನು ನೀಡಲಾಯಿತು. ನಾನು ಇಲ್ಲಿಗೆ ಬಂದ ತಕ್ಷಣ ವಿವರಣೆಯ ಕುರಿತು ಆದೇಶವನ್ನು ಕೇಳಿದೆ. ನಮಗೆ ಯಾವುದೇ ಆದೇಶವನ್ನು ತೋರಿಸಲಾಗಿಲ್ಲ. ನಮಗೆ ಹಾರ್ಡ್ ಅಥವಾ ಸಾಫ್ಟ್ ಕಾಪಿ ನೀಡಲಾಗಿಲ್ಲ. ಆದರೆ ಅವರು ಕ್ರಮ ಕೈಗೊಳ್ಳುವುದನ್ನು ಮುಂದುವರೆಸಿದ್ದಾರೆ” ಎಂದು ಖಾನ್ ತಿಳಿಸಿದರು.

ಹಿಂದಿನ ಜಿಲ್ಲಾ ಮ್ಯಾಜಿಸ್ಟ್ರೇಟ್ ಭೂಮಿಯನ್ನು ಅಳತೆ ಮಾಡಿದ್ದರು. 33 ದಶಮಾಂಶ ಮೌಲ್ಯದ ಭೂಮಿ ಮಸೀದಿಗೆ ಸೇರಿದ್ದು ಮತ್ತು ಮಸೀದಿ 29 ದಶಮಾಂಶ ಭೂಮಿಯಲ್ಲಿದೆ ಎಂಬುದು ಕಂಡುಬಂದಿದೆ ಎಂದು ಖಾನ್ ಮಾಹಿತಿ ನೀಡಿದ್ದಾರೆ.

ಮಸೀದಿಯ ಬಗ್ಗೆ ದೂರು ನೀಡಿದವರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಭೂಮಿಯನ್ನು ಹೊಂದಿಲ್ಲ ಎಂದು ಖಾನ್ ಹೇಳಿದರು.

“ಯಾರಾದರೂ ಬಿಜೆಪಿ ಲೆಟರ್‌ಹೆಡ್‌ನಲ್ಲಿ ದೂರು ನೀಡಿದರೆ, ಆ ದೂರಿನ ಆಧಾರದ ಮೇಲೆ ಯಾವುದೇ ಸಮುದಾಯದ ಧಾರ್ಮಿಕ ರಚನೆಗಳನ್ನು ಕೆಡವಲಾಗುತ್ತದೆ. ಇದು ಸ್ಪಷ್ಟ ಅನ್ಯಾಯವಾಗಿದೆ” ಎಂದು ಅವರು ಹೇಳಿದರು.

ಸುತ್ತಮುತ್ತಲಿನ ಪ್ರದೇಶದ ಭೂಮಿ ಪೊಲೀಸ್ ಠಾಣೆ ಮತ್ತು ನಗರ ಪಾಲಿಕೆಗೆ ಸೇರಿದೆ. ಜಿಲ್ಲಾಡಳಿತದಿಂದ ಅದನ್ನು ಅಳತೆ ಮಾಡಲಾಗಿದೆ. ಭೂಮಿಯ ಅಳತೆಯ ಕುರಿತಾದ ವರದಿಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಲಾಗಿದೆ. ವರದಿಯಲ್ಲಿ ಯಾವುದೇ ಅತಿಕ್ರಮಣವಾಗಿಲ್ಲ ಎಂದು ತೀರ್ಮಾನಿಸಿತ್ತು. ಅತಿಕ್ರಮಣವಿಲ್ಲದಿರುವಾಗ ಅದು ಹೇಗೆ ಅನಧಿಕೃತ ಆಕ್ರಮಣವಾಗುತ್ತದೆ? ಎಂದು ಖಾನ್ ಪ್ರಶ್ನಿಸಿದ್ದಾರೆ.

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬುಲ್ಡೋಜರ್ ಕಾರ್ಯಾಚರಣೆಗೆ ಮಸೀದಿ ಇತ್ತೀಚಿನ ಗುರಿಯಾಗಿದೆ. ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಹೊರತಾಗಿಯೂ ಸರ್ಕಾರವು ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಲೇ ಇದೆ ಎಂದು ಅವರು ಆರೋಪಿಸಿದ್ದಾರೆ.

ಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 31 ನಕ್ಸಲ್‌, ಇಬ್ಬರು ಪೊಲೀಸರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...