Homeಮುಖಪುಟಬಿಜೆಪಿ ನಾಯಕನ 'ಅತಿಕ್ರಮಣ' ಆರೋಪ: ಮಸೀದಿಯ ತೆರವು

ಬಿಜೆಪಿ ನಾಯಕನ ‘ಅತಿಕ್ರಮಣ’ ಆರೋಪ: ಮಸೀದಿಯ ತೆರವು

- Advertisement -
- Advertisement -

ಲಕ್ನೋ:ಲಕ್ನೋದಿಂದ ಸುಮಾರು 325 ಕಿ.ಮೀ ದೂರದಲ್ಲಿರುವ ಉತ್ತರಪ್ರದೇಶದ ಖುಷಿನಗರ ಜಿಲ್ಲೆಯ ಮಸೀದಿಯ ಒಂದು ಭಾಗವನ್ನು ‘ಅತಿಕ್ರಮಣ’ ಭೂಮಿಯಲ್ಲಿ ನಿರ್ಮಿಸಲಾಗಿದೆ ಎಂದು ಅದರ ತೆರವು ಕಾರ್ಯಾಚರಣೆಯನ್ನು ಅಧಿಕಾರಿಗಳು ಕೈಗೊಂಡಿದ್ದಾರೆ.

ಬಿಜೆಪಿಯ ನಾಯಕರೊಬ್ಬರು ಮುಸ್ಲಿಂ ಧಾರ್ಮಿಕ ಸ್ಥಳವು ಸರ್ಕಾರಿ ಭೂಮಿಯ ಒಂದು ಭಾಗವನ್ನು ಅತಿಕ್ರಮಿಸಿದೆ ಎಂದು ಆರೋಪಿಸಿದ ನಂತರ ಮೂರು ಅಂತಸ್ತಿನ ಮಸೀದಿಯ ತೆರವು ಕಾರ್ಯಾಚರಣೆ ಪ್ರಾರಂಭಿಸಲಾಗಿದೆ.

ವರದಿಗಳ ಪ್ರಕಾರ, ಮಸೀದಿಯ ಎಲ್ಲಾ ಕಡೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ ನಂತರ ಭಾರೀ ಪೊಲೀಸ್ ಪಡೆಯ ನಿಯೋಜನೆಯ ನಡುವೆಯೇ ಮಸೀದಿಯ ಕೆಲವು ಭಾಗದ ತೆರವು ಕಾರ್ಯ ಪ್ರಾರಂಭವಾಯಿತು. ಇದಕ್ಕೂ ಮೊದಲು ನ್ಯಾಯಾಲಯವು ಫೆಬ್ರವರಿ 8ರವರೆಗೆ ಮಸೀದಿಯ ತೆರವಿಗೆ ತಡೆ ನೀಡಿತ್ತು. ತಡೆಯಾಜ್ಞೆಯ ಸಮಯ ಮುಗಿದಂತೆ ಅಧಿಕಾರಿಗಳು ಅದನ್ನು ಕೆಡವಲು ಪ್ರಾರಂಭಿಸಿದರು.

ಕಳೆದ ವರ್ಷ ಸೆಪ್ಟೆಂಬರ್ 17ರಂದು ಬಿಜೆಪಿ ನಾಯಕ ರಾಮ್‌ಭಚನ್ ಸಿಂಗ್ ಅವರು ಹಟಾ ಪ್ರದೇಶದ ಸರ್ಕಾರಿ ಭೂಮಿಯಲ್ಲಿ ಏಷ್ಯಾದ ಅತಿದೊಡ್ಡ ಮಸೀದಿಯನ್ನು ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿದಾಗ ಈ ವಿಷಯ ಮುನ್ನೆಲೆಗೆ ಬಂದಿತು.

ಆದಾಗ್ಯೂ, ಮಸೀದಿ ಸಮಿತಿಯ ಜಾಕಿರ್ ಖಾನ್, ಮಸೀದಿ ನಿರ್ಮಾಣಕ್ಕಾಗಿ ಜಾಕಿರ್ ಹುಸೇನ್ ಮತ್ತು ಅಜ್ಮತುನ್ನಿಸಾ ಅವರಿಂದ 32 ದಶಮಾಂಶ ಭೂಮಿಯನ್ನು ಪಡೆದುಕೊಂಡಿದೆ ಎಂದು ಹೇಳುತ್ತಾರೆ. ಮಸೀದಿಯ ಸುತ್ತಮುತ್ತಲಿನ ಖಾಲಿ ಜಾಗದಲ್ಲಿರುವ ಮಸೀದಿಯ 30 ದಶಮಾಂಶ ಮತ್ತು ಎರಡು ದಶಮಾಂಶ ಭೂಮಿಯಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ.

ಮಸೀದಿಯ ಉಸ್ತುವಾರಿ ವಹಿಸಿಕೊಂಡವರು ಮಸೀದಿ ನಿರ್ಮಿಸಲು ಮುಸ್ಲಿಂ ಸಮುದಾಯವು ಸುಮಾರು 15 ವರ್ಷಗಳ ಹಿಂದೆ 32 ದಶಮಾಂಶ ಭೂಮಿಯನ್ನು ಖರೀದಿಸಿದೆ ಎಂದು ಹೇಳಿದರು. ಯಾವುದೇ ಅತಿಕ್ರಮಣವಿಲ್ಲ ಮತ್ತು ಮಸೀದಿ 30 ದಶಮಾಂಶ ಭೂಮಿಯಲ್ಲಿ ನಿಂತಿದೆ ಎಂದು ಅವರು ಹೇಳಿದರು.

ವರದಿಗಾರರೊಂದಿಗೆ ಮಾತನಾಡಿದ ಮಸೀದಿಯ ಪ್ರತಿನಿಧಿ ಸೈಫುಲ್ಲಾ ಖಾನ್, ಬುಲ್ಡೋಜರ್ ನಿಂದ ಹೊಡೆದುರುಳಿಸುವ ತೆರವು ಕಾರ್ಯಾಚರಣೆ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ಹೇಳಿದರು.

“ನಗರ ಪಾಲಿಕೆ ಕಚೇರಿಯಲ್ಲಿ ಸಮಯಕ್ಕೆ ಸರಿಯಾಗಿ ಅಧಿಕಾರಿಗಳಿಗೆ ನೀಡಿದ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ವಿವರಣೆಯನ್ನು ನೀಡಲಾಯಿತು. ನಾನು ಇಲ್ಲಿಗೆ ಬಂದ ತಕ್ಷಣ ವಿವರಣೆಯ ಕುರಿತು ಆದೇಶವನ್ನು ಕೇಳಿದೆ. ನಮಗೆ ಯಾವುದೇ ಆದೇಶವನ್ನು ತೋರಿಸಲಾಗಿಲ್ಲ. ನಮಗೆ ಹಾರ್ಡ್ ಅಥವಾ ಸಾಫ್ಟ್ ಕಾಪಿ ನೀಡಲಾಗಿಲ್ಲ. ಆದರೆ ಅವರು ಕ್ರಮ ಕೈಗೊಳ್ಳುವುದನ್ನು ಮುಂದುವರೆಸಿದ್ದಾರೆ” ಎಂದು ಖಾನ್ ತಿಳಿಸಿದರು.

ಹಿಂದಿನ ಜಿಲ್ಲಾ ಮ್ಯಾಜಿಸ್ಟ್ರೇಟ್ ಭೂಮಿಯನ್ನು ಅಳತೆ ಮಾಡಿದ್ದರು. 33 ದಶಮಾಂಶ ಮೌಲ್ಯದ ಭೂಮಿ ಮಸೀದಿಗೆ ಸೇರಿದ್ದು ಮತ್ತು ಮಸೀದಿ 29 ದಶಮಾಂಶ ಭೂಮಿಯಲ್ಲಿದೆ ಎಂಬುದು ಕಂಡುಬಂದಿದೆ ಎಂದು ಖಾನ್ ಮಾಹಿತಿ ನೀಡಿದ್ದಾರೆ.

ಮಸೀದಿಯ ಬಗ್ಗೆ ದೂರು ನೀಡಿದವರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಭೂಮಿಯನ್ನು ಹೊಂದಿಲ್ಲ ಎಂದು ಖಾನ್ ಹೇಳಿದರು.

“ಯಾರಾದರೂ ಬಿಜೆಪಿ ಲೆಟರ್‌ಹೆಡ್‌ನಲ್ಲಿ ದೂರು ನೀಡಿದರೆ, ಆ ದೂರಿನ ಆಧಾರದ ಮೇಲೆ ಯಾವುದೇ ಸಮುದಾಯದ ಧಾರ್ಮಿಕ ರಚನೆಗಳನ್ನು ಕೆಡವಲಾಗುತ್ತದೆ. ಇದು ಸ್ಪಷ್ಟ ಅನ್ಯಾಯವಾಗಿದೆ” ಎಂದು ಅವರು ಹೇಳಿದರು.

ಸುತ್ತಮುತ್ತಲಿನ ಪ್ರದೇಶದ ಭೂಮಿ ಪೊಲೀಸ್ ಠಾಣೆ ಮತ್ತು ನಗರ ಪಾಲಿಕೆಗೆ ಸೇರಿದೆ. ಜಿಲ್ಲಾಡಳಿತದಿಂದ ಅದನ್ನು ಅಳತೆ ಮಾಡಲಾಗಿದೆ. ಭೂಮಿಯ ಅಳತೆಯ ಕುರಿತಾದ ವರದಿಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಲಾಗಿದೆ. ವರದಿಯಲ್ಲಿ ಯಾವುದೇ ಅತಿಕ್ರಮಣವಾಗಿಲ್ಲ ಎಂದು ತೀರ್ಮಾನಿಸಿತ್ತು. ಅತಿಕ್ರಮಣವಿಲ್ಲದಿರುವಾಗ ಅದು ಹೇಗೆ ಅನಧಿಕೃತ ಆಕ್ರಮಣವಾಗುತ್ತದೆ? ಎಂದು ಖಾನ್ ಪ್ರಶ್ನಿಸಿದ್ದಾರೆ.

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬುಲ್ಡೋಜರ್ ಕಾರ್ಯಾಚರಣೆಗೆ ಮಸೀದಿ ಇತ್ತೀಚಿನ ಗುರಿಯಾಗಿದೆ. ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಹೊರತಾಗಿಯೂ ಸರ್ಕಾರವು ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಲೇ ಇದೆ ಎಂದು ಅವರು ಆರೋಪಿಸಿದ್ದಾರೆ.

ಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 31 ನಕ್ಸಲ್‌, ಇಬ್ಬರು ಪೊಲೀಸರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...