Homeಮುಖಪುಟ'ಸಾಕ್ಷಿಯಿಲ್ಲ' - ಅತ್ಯಾಚಾರ ಆರೋಪದಲ್ಲಿ ಬಂಧನವಾಗಿದ್ದ ಬಿಜೆಪಿ ಮುಖಂಡನ ಪ್ರಕರಣ ಖುಲಾಸೆ

‘ಸಾಕ್ಷಿಯಿಲ್ಲ’ – ಅತ್ಯಾಚಾರ ಆರೋಪದಲ್ಲಿ ಬಂಧನವಾಗಿದ್ದ ಬಿಜೆಪಿ ಮುಖಂಡನ ಪ್ರಕರಣ ಖುಲಾಸೆ

- Advertisement -
- Advertisement -

ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಂಧನವಾಗಿದ್ದ ಬಿಜೆಪಿ ಮುಖಂಡ ಸ್ವಾಮಿ ಚಿನ್ಮಯಾನಂದ ಅವರನ್ನು ಶಾಸಕರ ವಿಶೇಷ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ.

ಪ್ರಕರಣವನ್ನು ಸಾಬೀತುಪಡಿಸಲು ಬೇಕಾದ ಸಾಕ್ಷ್ಯಗಳಿಲ್ಲದ ಕಾರಣಕ್ಕೆ ಅವರು ಈ ಆರೋಪಗಳಿಂದ ಮುಕ್ತರಾಗಿದ್ದಾರೆ ಎಂದು ವಿಶೇಷ ನ್ಯಾಯಾಧೀಶ ಪಿ.ಕೆ.ರಾಯ್ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಸ್ವಾಮಿ ಚಿನ್ಮಯಾನಂದರಿಂದ ಹಣ ಸುಲಿಗೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಕಾನೂನು ವಿದ್ಯಾರ್ಥಿನಿ ಮತ್ತು ಇತರರಾದ ಸಂಜಯ್ ಸಿಂಗ್, ಡಿಪಿಎಸ್ ರಾಥೋಡ್, ವಿಕ್ರಮ್ ಸಿಂಗ್, ಸಚಿನ್ ಸಿಂಗ್ ಮತ್ತು ಅಜೀತ್ ಸಿಂಗ್ ಅವರ ಮೇಲೆ ಆರೋಪ ಹೊರಿಸಲಾಗಿತ್ತು. ಇದಕ್ಕೂ ಸರಿಯಾದ ಸಾಕ್ಷ್ಯಗಳಿಲ್ಲದ ಕಾರಣ ಅವರನ್ನೂ ನ್ಯಾಯಾಲಯ ಖುಲಾಸೆಗೊಳಿಸಿದೆ.

“ಸ್ವಾಮಿ ಚಿನ್ಮಯಾನಂದ್ ಒಂದು ವರ್ಷ ನನ್ನನ್ನು ಅತ್ಯಾಚಾರ ಎಸಗಿದರು ಮತ್ತು ದೈಹಿಕವಾಗಿ ಶೋಷಿಸಿದ್ದಾರೆ” ಎಂದು 23 ವರ್ಷದ ಕಾನೂನು ವಿದ್ಯಾರ್ಥಿನಿ ಆಗಸ್ಟ್ 27, 2019 ರಂದು ದೂರು ನೀಡಿದ್ದರು. ಇದರ ಆಧಾರದಲ್ಲಿ ಸ್ವಾಮಿ ಚಿನ್ಮಯಾನಂದ ಅವರನ್ನು 2019 ರ ಸೆಪ್ಟೆಂಬರ್ 20 ರಂದು ಬಂಧಿಸಲಾಗಿತ್ತು.

ಇದನ್ನೂ ಓದಿ: ಅತ್ಯಾಚಾರದ ಆರೋಪದಲ್ಲಿ ಬಿಜೆಪಿ ಮುಖಂಡ ಚಿನ್ಮಯಾನಂದ್ ಬಂಧನ..

ಉತ್ತರ ಪ್ರದೇಶದ ಶಹಜಹಾನ್ಪುರದ ತನ್ನ ಮನೆಯಿಂದ ನಾಪತ್ತೆಯಾಗಿದ್ದ ಆಕೆ ರಾಜಸ್ಥಾನದಲ್ಲಿ ಪತ್ತೆಯಾಗಿ, ಚಿನ್ಮಯಾನಂದ್ ಅವರು ಒಂದು ವರ್ಷದಿಂದ ಅತ್ಯಾಚಾರ ಮತ್ತು ಶೋಷಣೆ ನಡೆಸಿದ್ದರು ಎಂದು ಆ ಕಾನೂನು ವಿದ್ಯಾರ್ಥಿನಿ ದೂರಿದ್ದರು. ಮುಖಕ್ಕೆ ಕಪ್ಪು ಬಟ್ಟೆ ಧರಿಸಿ ಪತ್ರಿಕಾಗೋಷ್ಟಿ ನಡೆಸಿದ್ದಲ್ಲದೇ ಕೆಲವು ಸಾಕ್ಷಿಯ ಕೆಲ ವಿಡಿಯೋಗಳನ್ನು ಸಹ ಲೀಕ್ ಮಾಡಿದ್ದರು.

ಮೂರು ಬಾರಿ ಸಂಸದ ಚಿನ್ಮಯಾನಂದ್ ನೇತೃತ್ವದ ಮಂಡಳಿಯು ನಡೆಸುವ ಕಾನೂನು ಕಾಲೇಜಿನಲ್ಲಿ 23 ವರ್ಷದ ಸಂತ್ರಸ್ತೆ ಕಾನೂನು ವಿದ್ಯಾರ್ಥಿಯಾಗಿದ್ದಳು. ಆಕೆಗೆ ದಾಖಲಾತಿಗಾಗಿ ಸಹಾಯ ಮಾಡುವುದಾಗಿ ಆಮಿಷತೋರಿಸಿ ಶೋಷಣೆ ನಡೆಸಿದ್ದಾರೆ ಎಂಬ ಆರೋಪ ಚಿನ್ಮಯಾನಂದ್ ಮೇಲಿದೆ.

ಆಕೆ ಸ್ನಾನ ಮಾಡುವುದನ್ನು ಚಿತ್ರೀಕರಿಸಿದ ವೀಡಿಯೊದೊಂದಿಗೆ ಅವಳನ್ನು ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ ಮಾಡಿದ್ದಾರೆ. ಹಲವಾರು ಆಶ್ರಮಗಳು ಮತ್ತು ಸಂಸ್ಥೆಗಳನ್ನು ನಡೆಸುತ್ತಿರುವ ರಾಜಕಾರಣಿ ತನ್ನ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾಳೆ ಎಂದು ಸಂತ್ರಸ್ತೆ ದೂರಿದ್ದಾರೆ. ಅಲ್ಲದೇ ಆಕೆಯನ್ನು ಗನ್‌ಪಾಯಿಂಟ್‌ನಲ್ಲಿಟ್ಟು ಅವನ ಕೋಣೆಗೆ ಕರೆತರಲಾಯಿತು ಮತ್ತು ಮಸಾಜ್‌ ಮಾಡುವಂತೆ ಒತ್ತಾಯಿಸಲಾಯಿತು ಎಂದು ಆರೋಪಿಸಿದ್ದಾರೆ.

“ಸಂತ ಸಮಾಜದ ದೊಡ್ಡ ನಾಯಕ” ಇತರ ಅನೇಕ ಹುಡುಗಿಯರ ಜೀವನವನ್ನು ನಾಶಪಡಿಸಿದ್ದಾನೆ ಮತ್ತು ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ” ಎಂದು ತನ್ನ ಫೇಸ್ಬುಕ್ ಪೋಸ್ಟ್ ನಲ್ಲಿ ಬರೆದು ಆಕೆ ಕಣ್ಮರೆಯಾಗಿದ್ದಳು. ಒಂದು ವಾರದ ನಂತರ ಆಗಸ್ಟ್ 30 ರಂದು ಆಕೆಯನ್ನು ರಾಜಸ್ಥಾನದಲ್ಲಿ ಪತ್ತೆಹಚ್ಚಲಾಗಿತ್ತು. ಇದೇ ಸಂದರ್ಭದಲ್ಲಿ ಆಕೆ ತನಗೆ ಸಹಾಯ ಮಾಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೋರಿದ್ದರು.


ಇದನ್ನೂ ಓದಿ: ಬಿಜೆಪಿ ಮುಖಂಡ ಚಿನ್ಮಯಾನಂದ್ ವಿರುದ್ಧ ಅತ್ಯಾಚಾರದ ಆರೋಪ; ದೆಹಲಿಯಲ್ಲಿ ದೂರು ದಾಖಲಿಸಿದ ಯುವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...