Homeಮುಖಪುಟ'ಸಾಕ್ಷಿಯಿಲ್ಲ' - ಅತ್ಯಾಚಾರ ಆರೋಪದಲ್ಲಿ ಬಂಧನವಾಗಿದ್ದ ಬಿಜೆಪಿ ಮುಖಂಡನ ಪ್ರಕರಣ ಖುಲಾಸೆ

‘ಸಾಕ್ಷಿಯಿಲ್ಲ’ – ಅತ್ಯಾಚಾರ ಆರೋಪದಲ್ಲಿ ಬಂಧನವಾಗಿದ್ದ ಬಿಜೆಪಿ ಮುಖಂಡನ ಪ್ರಕರಣ ಖುಲಾಸೆ

- Advertisement -
- Advertisement -

ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಂಧನವಾಗಿದ್ದ ಬಿಜೆಪಿ ಮುಖಂಡ ಸ್ವಾಮಿ ಚಿನ್ಮಯಾನಂದ ಅವರನ್ನು ಶಾಸಕರ ವಿಶೇಷ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ.

ಪ್ರಕರಣವನ್ನು ಸಾಬೀತುಪಡಿಸಲು ಬೇಕಾದ ಸಾಕ್ಷ್ಯಗಳಿಲ್ಲದ ಕಾರಣಕ್ಕೆ ಅವರು ಈ ಆರೋಪಗಳಿಂದ ಮುಕ್ತರಾಗಿದ್ದಾರೆ ಎಂದು ವಿಶೇಷ ನ್ಯಾಯಾಧೀಶ ಪಿ.ಕೆ.ರಾಯ್ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಸ್ವಾಮಿ ಚಿನ್ಮಯಾನಂದರಿಂದ ಹಣ ಸುಲಿಗೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಕಾನೂನು ವಿದ್ಯಾರ್ಥಿನಿ ಮತ್ತು ಇತರರಾದ ಸಂಜಯ್ ಸಿಂಗ್, ಡಿಪಿಎಸ್ ರಾಥೋಡ್, ವಿಕ್ರಮ್ ಸಿಂಗ್, ಸಚಿನ್ ಸಿಂಗ್ ಮತ್ತು ಅಜೀತ್ ಸಿಂಗ್ ಅವರ ಮೇಲೆ ಆರೋಪ ಹೊರಿಸಲಾಗಿತ್ತು. ಇದಕ್ಕೂ ಸರಿಯಾದ ಸಾಕ್ಷ್ಯಗಳಿಲ್ಲದ ಕಾರಣ ಅವರನ್ನೂ ನ್ಯಾಯಾಲಯ ಖುಲಾಸೆಗೊಳಿಸಿದೆ.

“ಸ್ವಾಮಿ ಚಿನ್ಮಯಾನಂದ್ ಒಂದು ವರ್ಷ ನನ್ನನ್ನು ಅತ್ಯಾಚಾರ ಎಸಗಿದರು ಮತ್ತು ದೈಹಿಕವಾಗಿ ಶೋಷಿಸಿದ್ದಾರೆ” ಎಂದು 23 ವರ್ಷದ ಕಾನೂನು ವಿದ್ಯಾರ್ಥಿನಿ ಆಗಸ್ಟ್ 27, 2019 ರಂದು ದೂರು ನೀಡಿದ್ದರು. ಇದರ ಆಧಾರದಲ್ಲಿ ಸ್ವಾಮಿ ಚಿನ್ಮಯಾನಂದ ಅವರನ್ನು 2019 ರ ಸೆಪ್ಟೆಂಬರ್ 20 ರಂದು ಬಂಧಿಸಲಾಗಿತ್ತು.

ಇದನ್ನೂ ಓದಿ: ಅತ್ಯಾಚಾರದ ಆರೋಪದಲ್ಲಿ ಬಿಜೆಪಿ ಮುಖಂಡ ಚಿನ್ಮಯಾನಂದ್ ಬಂಧನ..

ಉತ್ತರ ಪ್ರದೇಶದ ಶಹಜಹಾನ್ಪುರದ ತನ್ನ ಮನೆಯಿಂದ ನಾಪತ್ತೆಯಾಗಿದ್ದ ಆಕೆ ರಾಜಸ್ಥಾನದಲ್ಲಿ ಪತ್ತೆಯಾಗಿ, ಚಿನ್ಮಯಾನಂದ್ ಅವರು ಒಂದು ವರ್ಷದಿಂದ ಅತ್ಯಾಚಾರ ಮತ್ತು ಶೋಷಣೆ ನಡೆಸಿದ್ದರು ಎಂದು ಆ ಕಾನೂನು ವಿದ್ಯಾರ್ಥಿನಿ ದೂರಿದ್ದರು. ಮುಖಕ್ಕೆ ಕಪ್ಪು ಬಟ್ಟೆ ಧರಿಸಿ ಪತ್ರಿಕಾಗೋಷ್ಟಿ ನಡೆಸಿದ್ದಲ್ಲದೇ ಕೆಲವು ಸಾಕ್ಷಿಯ ಕೆಲ ವಿಡಿಯೋಗಳನ್ನು ಸಹ ಲೀಕ್ ಮಾಡಿದ್ದರು.

ಮೂರು ಬಾರಿ ಸಂಸದ ಚಿನ್ಮಯಾನಂದ್ ನೇತೃತ್ವದ ಮಂಡಳಿಯು ನಡೆಸುವ ಕಾನೂನು ಕಾಲೇಜಿನಲ್ಲಿ 23 ವರ್ಷದ ಸಂತ್ರಸ್ತೆ ಕಾನೂನು ವಿದ್ಯಾರ್ಥಿಯಾಗಿದ್ದಳು. ಆಕೆಗೆ ದಾಖಲಾತಿಗಾಗಿ ಸಹಾಯ ಮಾಡುವುದಾಗಿ ಆಮಿಷತೋರಿಸಿ ಶೋಷಣೆ ನಡೆಸಿದ್ದಾರೆ ಎಂಬ ಆರೋಪ ಚಿನ್ಮಯಾನಂದ್ ಮೇಲಿದೆ.

ಆಕೆ ಸ್ನಾನ ಮಾಡುವುದನ್ನು ಚಿತ್ರೀಕರಿಸಿದ ವೀಡಿಯೊದೊಂದಿಗೆ ಅವಳನ್ನು ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ ಮಾಡಿದ್ದಾರೆ. ಹಲವಾರು ಆಶ್ರಮಗಳು ಮತ್ತು ಸಂಸ್ಥೆಗಳನ್ನು ನಡೆಸುತ್ತಿರುವ ರಾಜಕಾರಣಿ ತನ್ನ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾಳೆ ಎಂದು ಸಂತ್ರಸ್ತೆ ದೂರಿದ್ದಾರೆ. ಅಲ್ಲದೇ ಆಕೆಯನ್ನು ಗನ್‌ಪಾಯಿಂಟ್‌ನಲ್ಲಿಟ್ಟು ಅವನ ಕೋಣೆಗೆ ಕರೆತರಲಾಯಿತು ಮತ್ತು ಮಸಾಜ್‌ ಮಾಡುವಂತೆ ಒತ್ತಾಯಿಸಲಾಯಿತು ಎಂದು ಆರೋಪಿಸಿದ್ದಾರೆ.

“ಸಂತ ಸಮಾಜದ ದೊಡ್ಡ ನಾಯಕ” ಇತರ ಅನೇಕ ಹುಡುಗಿಯರ ಜೀವನವನ್ನು ನಾಶಪಡಿಸಿದ್ದಾನೆ ಮತ್ತು ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ” ಎಂದು ತನ್ನ ಫೇಸ್ಬುಕ್ ಪೋಸ್ಟ್ ನಲ್ಲಿ ಬರೆದು ಆಕೆ ಕಣ್ಮರೆಯಾಗಿದ್ದಳು. ಒಂದು ವಾರದ ನಂತರ ಆಗಸ್ಟ್ 30 ರಂದು ಆಕೆಯನ್ನು ರಾಜಸ್ಥಾನದಲ್ಲಿ ಪತ್ತೆಹಚ್ಚಲಾಗಿತ್ತು. ಇದೇ ಸಂದರ್ಭದಲ್ಲಿ ಆಕೆ ತನಗೆ ಸಹಾಯ ಮಾಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೋರಿದ್ದರು.


ಇದನ್ನೂ ಓದಿ: ಬಿಜೆಪಿ ಮುಖಂಡ ಚಿನ್ಮಯಾನಂದ್ ವಿರುದ್ಧ ಅತ್ಯಾಚಾರದ ಆರೋಪ; ದೆಹಲಿಯಲ್ಲಿ ದೂರು ದಾಖಲಿಸಿದ ಯುವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...