Homeಮುಖಪುಟ'ಸಾಕ್ಷಿಯಿಲ್ಲ' - ಅತ್ಯಾಚಾರ ಆರೋಪದಲ್ಲಿ ಬಂಧನವಾಗಿದ್ದ ಬಿಜೆಪಿ ಮುಖಂಡನ ಪ್ರಕರಣ ಖುಲಾಸೆ

‘ಸಾಕ್ಷಿಯಿಲ್ಲ’ – ಅತ್ಯಾಚಾರ ಆರೋಪದಲ್ಲಿ ಬಂಧನವಾಗಿದ್ದ ಬಿಜೆಪಿ ಮುಖಂಡನ ಪ್ರಕರಣ ಖುಲಾಸೆ

- Advertisement -
- Advertisement -

ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಂಧನವಾಗಿದ್ದ ಬಿಜೆಪಿ ಮುಖಂಡ ಸ್ವಾಮಿ ಚಿನ್ಮಯಾನಂದ ಅವರನ್ನು ಶಾಸಕರ ವಿಶೇಷ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ.

ಪ್ರಕರಣವನ್ನು ಸಾಬೀತುಪಡಿಸಲು ಬೇಕಾದ ಸಾಕ್ಷ್ಯಗಳಿಲ್ಲದ ಕಾರಣಕ್ಕೆ ಅವರು ಈ ಆರೋಪಗಳಿಂದ ಮುಕ್ತರಾಗಿದ್ದಾರೆ ಎಂದು ವಿಶೇಷ ನ್ಯಾಯಾಧೀಶ ಪಿ.ಕೆ.ರಾಯ್ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಸ್ವಾಮಿ ಚಿನ್ಮಯಾನಂದರಿಂದ ಹಣ ಸುಲಿಗೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಕಾನೂನು ವಿದ್ಯಾರ್ಥಿನಿ ಮತ್ತು ಇತರರಾದ ಸಂಜಯ್ ಸಿಂಗ್, ಡಿಪಿಎಸ್ ರಾಥೋಡ್, ವಿಕ್ರಮ್ ಸಿಂಗ್, ಸಚಿನ್ ಸಿಂಗ್ ಮತ್ತು ಅಜೀತ್ ಸಿಂಗ್ ಅವರ ಮೇಲೆ ಆರೋಪ ಹೊರಿಸಲಾಗಿತ್ತು. ಇದಕ್ಕೂ ಸರಿಯಾದ ಸಾಕ್ಷ್ಯಗಳಿಲ್ಲದ ಕಾರಣ ಅವರನ್ನೂ ನ್ಯಾಯಾಲಯ ಖುಲಾಸೆಗೊಳಿಸಿದೆ.

“ಸ್ವಾಮಿ ಚಿನ್ಮಯಾನಂದ್ ಒಂದು ವರ್ಷ ನನ್ನನ್ನು ಅತ್ಯಾಚಾರ ಎಸಗಿದರು ಮತ್ತು ದೈಹಿಕವಾಗಿ ಶೋಷಿಸಿದ್ದಾರೆ” ಎಂದು 23 ವರ್ಷದ ಕಾನೂನು ವಿದ್ಯಾರ್ಥಿನಿ ಆಗಸ್ಟ್ 27, 2019 ರಂದು ದೂರು ನೀಡಿದ್ದರು. ಇದರ ಆಧಾರದಲ್ಲಿ ಸ್ವಾಮಿ ಚಿನ್ಮಯಾನಂದ ಅವರನ್ನು 2019 ರ ಸೆಪ್ಟೆಂಬರ್ 20 ರಂದು ಬಂಧಿಸಲಾಗಿತ್ತು.

ಇದನ್ನೂ ಓದಿ: ಅತ್ಯಾಚಾರದ ಆರೋಪದಲ್ಲಿ ಬಿಜೆಪಿ ಮುಖಂಡ ಚಿನ್ಮಯಾನಂದ್ ಬಂಧನ..

ಉತ್ತರ ಪ್ರದೇಶದ ಶಹಜಹಾನ್ಪುರದ ತನ್ನ ಮನೆಯಿಂದ ನಾಪತ್ತೆಯಾಗಿದ್ದ ಆಕೆ ರಾಜಸ್ಥಾನದಲ್ಲಿ ಪತ್ತೆಯಾಗಿ, ಚಿನ್ಮಯಾನಂದ್ ಅವರು ಒಂದು ವರ್ಷದಿಂದ ಅತ್ಯಾಚಾರ ಮತ್ತು ಶೋಷಣೆ ನಡೆಸಿದ್ದರು ಎಂದು ಆ ಕಾನೂನು ವಿದ್ಯಾರ್ಥಿನಿ ದೂರಿದ್ದರು. ಮುಖಕ್ಕೆ ಕಪ್ಪು ಬಟ್ಟೆ ಧರಿಸಿ ಪತ್ರಿಕಾಗೋಷ್ಟಿ ನಡೆಸಿದ್ದಲ್ಲದೇ ಕೆಲವು ಸಾಕ್ಷಿಯ ಕೆಲ ವಿಡಿಯೋಗಳನ್ನು ಸಹ ಲೀಕ್ ಮಾಡಿದ್ದರು.

ಮೂರು ಬಾರಿ ಸಂಸದ ಚಿನ್ಮಯಾನಂದ್ ನೇತೃತ್ವದ ಮಂಡಳಿಯು ನಡೆಸುವ ಕಾನೂನು ಕಾಲೇಜಿನಲ್ಲಿ 23 ವರ್ಷದ ಸಂತ್ರಸ್ತೆ ಕಾನೂನು ವಿದ್ಯಾರ್ಥಿಯಾಗಿದ್ದಳು. ಆಕೆಗೆ ದಾಖಲಾತಿಗಾಗಿ ಸಹಾಯ ಮಾಡುವುದಾಗಿ ಆಮಿಷತೋರಿಸಿ ಶೋಷಣೆ ನಡೆಸಿದ್ದಾರೆ ಎಂಬ ಆರೋಪ ಚಿನ್ಮಯಾನಂದ್ ಮೇಲಿದೆ.

ಆಕೆ ಸ್ನಾನ ಮಾಡುವುದನ್ನು ಚಿತ್ರೀಕರಿಸಿದ ವೀಡಿಯೊದೊಂದಿಗೆ ಅವಳನ್ನು ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ ಮಾಡಿದ್ದಾರೆ. ಹಲವಾರು ಆಶ್ರಮಗಳು ಮತ್ತು ಸಂಸ್ಥೆಗಳನ್ನು ನಡೆಸುತ್ತಿರುವ ರಾಜಕಾರಣಿ ತನ್ನ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾಳೆ ಎಂದು ಸಂತ್ರಸ್ತೆ ದೂರಿದ್ದಾರೆ. ಅಲ್ಲದೇ ಆಕೆಯನ್ನು ಗನ್‌ಪಾಯಿಂಟ್‌ನಲ್ಲಿಟ್ಟು ಅವನ ಕೋಣೆಗೆ ಕರೆತರಲಾಯಿತು ಮತ್ತು ಮಸಾಜ್‌ ಮಾಡುವಂತೆ ಒತ್ತಾಯಿಸಲಾಯಿತು ಎಂದು ಆರೋಪಿಸಿದ್ದಾರೆ.

“ಸಂತ ಸಮಾಜದ ದೊಡ್ಡ ನಾಯಕ” ಇತರ ಅನೇಕ ಹುಡುಗಿಯರ ಜೀವನವನ್ನು ನಾಶಪಡಿಸಿದ್ದಾನೆ ಮತ್ತು ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ” ಎಂದು ತನ್ನ ಫೇಸ್ಬುಕ್ ಪೋಸ್ಟ್ ನಲ್ಲಿ ಬರೆದು ಆಕೆ ಕಣ್ಮರೆಯಾಗಿದ್ದಳು. ಒಂದು ವಾರದ ನಂತರ ಆಗಸ್ಟ್ 30 ರಂದು ಆಕೆಯನ್ನು ರಾಜಸ್ಥಾನದಲ್ಲಿ ಪತ್ತೆಹಚ್ಚಲಾಗಿತ್ತು. ಇದೇ ಸಂದರ್ಭದಲ್ಲಿ ಆಕೆ ತನಗೆ ಸಹಾಯ ಮಾಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೋರಿದ್ದರು.


ಇದನ್ನೂ ಓದಿ: ಬಿಜೆಪಿ ಮುಖಂಡ ಚಿನ್ಮಯಾನಂದ್ ವಿರುದ್ಧ ಅತ್ಯಾಚಾರದ ಆರೋಪ; ದೆಹಲಿಯಲ್ಲಿ ದೂರು ದಾಖಲಿಸಿದ ಯುವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...