Homeಮುಖಪುಟಮುಸ್ಲಿಮರು ಕಾರು ಅಪಘಾತವೆಸಗಿದ್ರು ಎಂದು ಆರೋಪಿಸಿದ ಬಿಜೆಪಿ ನಾಯಕಿ : ಚಾಲಕ ನಿದ್ರೆಗೆ ಜಾರಿದ್ದೆ ಅವಘಡಕ್ಕೆ...

ಮುಸ್ಲಿಮರು ಕಾರು ಅಪಘಾತವೆಸಗಿದ್ರು ಎಂದು ಆರೋಪಿಸಿದ ಬಿಜೆಪಿ ನಾಯಕಿ : ಚಾಲಕ ನಿದ್ರೆಗೆ ಜಾರಿದ್ದೆ ಅವಘಡಕ್ಕೆ ಕಾರಣ ಎಂದ ಪೊಲೀಸರು

- Advertisement -
- Advertisement -

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನಾಯಕಿ ನಾಝಿಯಾ ಇಲಾಹಿ ಸೋಮವಾರ (ಫೆಬ್ರವರಿ 24) ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. ಅದರಲ್ಲಿ ಮಹಾಕುಂಭ ಮೇಳಕ್ಕೆ ತೆರಳುವಾಗ ಮುಸ್ಲಿಮರು ನಮ್ಮ ಕಾರನ್ನು ಹಿಂಬಾಲಿಸಿ ಅಪಘಾತವೆಸಗಿದ್ದಾರೆ ಎಂದು ಆರೋಪಿಸಿದ್ದರು. ಆದರೆ, ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸಿ ಆಕೆಯ ಸುಳ್ಳಾರೋಪವನ್ನು ಬಯಲು ಮಾಡಿದ್ದಾರೆ.

ನಾಝಿಯಾ ಇಲಾಹಿ ಹೇಳಿದ್ದೇನು? 

“ದೆಹಲಿಯಲ್ಲಿ ಸಭೆಯೊಂದರಲ್ಲಿ ಪಾಲ್ಗೊಂಡು, ಬಳಿಕ ಗಂಗಾ ಸ್ನಾನ ಮಾಡಲು ನಾವು ಮಹಾಕುಂಭ ಮೇಳಕ್ಕೆ ಹೊರಟಿದ್ದೆವು. ಇಟಾನಗರ ತಲುಪುತ್ತಿದ್ದಂತೆ ಕೆಲ ಮುಸ್ಲಿಂ ವ್ಯಕ್ತಿಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ನಂತರ ಅವರು ನಮ್ಮ ಕಾರಿಗೆ ಡಿಕ್ಕಿ ಹೊಡೆದು ಹಾನಿಗೊಳಿಸಿದ್ದಾರೆ. ನನ್ನೊಂದಿಗೆ ಯೂಟ್ಯೂಬರ್ ಪ್ರಿಯಾ ಚತುರ್ವೇದಿ ಮತ್ತು ಇನ್ನೊಬ್ಬರು ಹುಡುಗಿ ಇದ್ದರು. ಘಟನೆಯಲ್ಲಿ ಪ್ರಿಯಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ನಾಝಿಯಾ ಇಲಾಹಿ ವಿಡಿಯೋ ಮುಖಾಂತರ ಆರೋಪಿಸಿದ್ದರು.

“ಅಪಘಾತದಲ್ಲಿ ನನ್ನ ಕೈಗೆ ಗಾಯಗಳಾಗಿವೆ. ನಾನು ಸಾರ್ವಜನಿಕರ ಸಹಾಯಕ್ಕಾಗಿ ಮಾಡಿದೆ. ನನ್ನನ್ನೇ ಗುರಿಯಾಗಿಸಿ ಅಪಘಾತವೆಸಗಲಾಗಿದೆ. ಆದರೆ, ಪ್ರಿಯಾ ಮಧ್ಯದಲ್ಲಿ ಸಿಲುಕಿಕೊಂಡರು” ಎಂದು ಹೇಳಿದ್ದರು.

ಪೊಲೀಸರ ತನಿಖೆಯಿಂದ ಸತ್ಯ ಬಯಲು 

ಘಟನೆ ಕುರಿತು ತನಿಖೆ ನಡೆಸಿದ ಕಾನ್ಪುರ ಪೊಲೀಸರು, ಕಾರು ಚಾಲಕ ನಿದ್ರೆಗೆ ಜಾರಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು, ದಾರಿ ತಪ್ಪಿಸುವ ಹೇಳಿಕೆಗಳನ್ನು ನೀಡಬೇಡಿ ಎಂದು ಮನವಿ ಮಾಡಿದ್ದಾರೆ.

“ಇಂದು (ಫೆಬ್ರವರಿ 24,2025) ಬೆಳಿಗ್ಗೆ 7ಗಂಟೆಯ ಸುಮಾರಿಗೆ ಅಕ್ಬರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಆನಂದೇಶ್ವರ ಕೋಲ್ಡ್ ಸ್ಟೋರೇಜ್ ಬಳಿಯ ಹೆದ್ದಾರಿಯಲ್ಲಿ, ಅಕ್ಬರ್‌ಪುರದಿಂದ ಕಾನ್ಪುರಕ್ಕೆ ತೆರಳುತ್ತಿದ್ದ ಬಿಳಿ ಎರ್ಟಿಗಾ ಟ್ಯಾಕ್ಸಿ ಕಾರು (ನೋಂದಣಿ ಸಂಖ್ಯೆ UP 79AT 5232) ಅಪಘಾತಕ್ಕೀಡಾಗಿತ್ತು”.

“ಈ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಈ ವೇಳೆ ಕಾರು ಚಾಲನೆ ಮಾಡುವಾಗ ನಿದ್ರಿಸಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಚಾಲಕ ಹೇಳಿಕೆ ನೀಡಿದ್ದಾರೆ”.

“ಮುಂದಿನ ಕಾನೂನು ಕ್ರಮಗಳಿಗಾಗಿ ಲಿಖಿತ ದೂರು ದಾಖಲಿಸಲು ಕೇಳಿದಾಗ, ಚಾಲಕ ಯಾವುದೇ ದೂರು ನೀಡಲು ನಿರಾಕರಿಸಿದ್ದಾರೆ. ಅವರು ಯಾವುದೇ ಲಿಖಿತ ಅರ್ಜಿಯನ್ನು ಕೂಡ ಸಲ್ಲಿಸಿಲ್ಲ. ಸ್ಥಳೀಯ ಪೊಲೀಸರು ಅಪಘಾತಕ್ಕೀಡಾದ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಪರ್ಯಾಯ ವಾಹನದ ವ್ಯವಸ್ಥೆ ಮಾಡಿ ಎಲ್ಲರೂ ತಮ್ಮ ಗಮ್ಯಸ್ಥಾನಗಳನ್ನು ಸುರಕ್ಷಿತವಾಗಿ ತಲುಪುವಂತೆ ನೋಡಿಕೊಂಡಿದ್ದಾರೆ”.

ಇದು ಪೊಲೀಸರ ತ್ವರಿತ ಕಾರ್ಯಾಚರಣೆಗೆ ಹಿಡಿದ ಕೈಗನ್ನಡಿ. ಇದಕ್ಕಾಗಿ ಸ್ಥಳೀಯ ಪೊಲೀಸರನ್ನು ಶ್ಲಾಘಿಸುತ್ತೇವೆ. ಅಕ್ಬರ್‌ಪುರ ಪೊಲೀಸ್ ಠಾಣೆಯ ಮಹಿಳಾ ಅಧಿಕಾರಿಯ ಮೇಲ್ವಿಚಾರಣೆಯಲ್ಲಿ ಈ ಬಗ್ಗೆ ಮತ್ತಷ್ಟು ತನಿಖೆ ಮಾಡಲಾಗುವುದು” ಎಂದಿದ್ದಾರೆ.

“ಈ ಘಟನೆಯ ಕುರಿತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ದಾರಿತಪ್ಪಿಸುವ ಅಥವಾ ಸುಳ್ಳು ಮಾಹಿತಿಯನ್ನು ಹರಡದಂತೆ ನಾವು ವಿನಂತಿಸುತ್ತೇವೆ” ಎಂದು ಹೇಳಿದ್ದಾರೆ.

ತ್ರಿಭಾಷಾ ಹೇರಿಕೆ ವಿರೋಧಿಸಿ ಬಿಜೆಪಿ ತೊರೆದ ತಮಿಳು ನಟಿ ರಂಜನಾ ನಾಚಿಯಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...