Homeಮುಖಪುಟಮುಸ್ಲಿಮರು ಕಾರು ಅಪಘಾತವೆಸಗಿದ್ರು ಎಂದು ಆರೋಪಿಸಿದ ಬಿಜೆಪಿ ನಾಯಕಿ : ಚಾಲಕ ನಿದ್ರೆಗೆ ಜಾರಿದ್ದೆ ಅವಘಡಕ್ಕೆ...

ಮುಸ್ಲಿಮರು ಕಾರು ಅಪಘಾತವೆಸಗಿದ್ರು ಎಂದು ಆರೋಪಿಸಿದ ಬಿಜೆಪಿ ನಾಯಕಿ : ಚಾಲಕ ನಿದ್ರೆಗೆ ಜಾರಿದ್ದೆ ಅವಘಡಕ್ಕೆ ಕಾರಣ ಎಂದ ಪೊಲೀಸರು

- Advertisement -
- Advertisement -

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನಾಯಕಿ ನಾಝಿಯಾ ಇಲಾಹಿ ಸೋಮವಾರ (ಫೆಬ್ರವರಿ 24) ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. ಅದರಲ್ಲಿ ಮಹಾಕುಂಭ ಮೇಳಕ್ಕೆ ತೆರಳುವಾಗ ಮುಸ್ಲಿಮರು ನಮ್ಮ ಕಾರನ್ನು ಹಿಂಬಾಲಿಸಿ ಅಪಘಾತವೆಸಗಿದ್ದಾರೆ ಎಂದು ಆರೋಪಿಸಿದ್ದರು. ಆದರೆ, ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸಿ ಆಕೆಯ ಸುಳ್ಳಾರೋಪವನ್ನು ಬಯಲು ಮಾಡಿದ್ದಾರೆ.

ನಾಝಿಯಾ ಇಲಾಹಿ ಹೇಳಿದ್ದೇನು? 

“ದೆಹಲಿಯಲ್ಲಿ ಸಭೆಯೊಂದರಲ್ಲಿ ಪಾಲ್ಗೊಂಡು, ಬಳಿಕ ಗಂಗಾ ಸ್ನಾನ ಮಾಡಲು ನಾವು ಮಹಾಕುಂಭ ಮೇಳಕ್ಕೆ ಹೊರಟಿದ್ದೆವು. ಇಟಾನಗರ ತಲುಪುತ್ತಿದ್ದಂತೆ ಕೆಲ ಮುಸ್ಲಿಂ ವ್ಯಕ್ತಿಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ನಂತರ ಅವರು ನಮ್ಮ ಕಾರಿಗೆ ಡಿಕ್ಕಿ ಹೊಡೆದು ಹಾನಿಗೊಳಿಸಿದ್ದಾರೆ. ನನ್ನೊಂದಿಗೆ ಯೂಟ್ಯೂಬರ್ ಪ್ರಿಯಾ ಚತುರ್ವೇದಿ ಮತ್ತು ಇನ್ನೊಬ್ಬರು ಹುಡುಗಿ ಇದ್ದರು. ಘಟನೆಯಲ್ಲಿ ಪ್ರಿಯಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ನಾಝಿಯಾ ಇಲಾಹಿ ವಿಡಿಯೋ ಮುಖಾಂತರ ಆರೋಪಿಸಿದ್ದರು.

“ಅಪಘಾತದಲ್ಲಿ ನನ್ನ ಕೈಗೆ ಗಾಯಗಳಾಗಿವೆ. ನಾನು ಸಾರ್ವಜನಿಕರ ಸಹಾಯಕ್ಕಾಗಿ ಮಾಡಿದೆ. ನನ್ನನ್ನೇ ಗುರಿಯಾಗಿಸಿ ಅಪಘಾತವೆಸಗಲಾಗಿದೆ. ಆದರೆ, ಪ್ರಿಯಾ ಮಧ್ಯದಲ್ಲಿ ಸಿಲುಕಿಕೊಂಡರು” ಎಂದು ಹೇಳಿದ್ದರು.

ಪೊಲೀಸರ ತನಿಖೆಯಿಂದ ಸತ್ಯ ಬಯಲು 

ಘಟನೆ ಕುರಿತು ತನಿಖೆ ನಡೆಸಿದ ಕಾನ್ಪುರ ಪೊಲೀಸರು, ಕಾರು ಚಾಲಕ ನಿದ್ರೆಗೆ ಜಾರಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು, ದಾರಿ ತಪ್ಪಿಸುವ ಹೇಳಿಕೆಗಳನ್ನು ನೀಡಬೇಡಿ ಎಂದು ಮನವಿ ಮಾಡಿದ್ದಾರೆ.

“ಇಂದು (ಫೆಬ್ರವರಿ 24,2025) ಬೆಳಿಗ್ಗೆ 7ಗಂಟೆಯ ಸುಮಾರಿಗೆ ಅಕ್ಬರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಆನಂದೇಶ್ವರ ಕೋಲ್ಡ್ ಸ್ಟೋರೇಜ್ ಬಳಿಯ ಹೆದ್ದಾರಿಯಲ್ಲಿ, ಅಕ್ಬರ್‌ಪುರದಿಂದ ಕಾನ್ಪುರಕ್ಕೆ ತೆರಳುತ್ತಿದ್ದ ಬಿಳಿ ಎರ್ಟಿಗಾ ಟ್ಯಾಕ್ಸಿ ಕಾರು (ನೋಂದಣಿ ಸಂಖ್ಯೆ UP 79AT 5232) ಅಪಘಾತಕ್ಕೀಡಾಗಿತ್ತು”.

“ಈ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಈ ವೇಳೆ ಕಾರು ಚಾಲನೆ ಮಾಡುವಾಗ ನಿದ್ರಿಸಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಚಾಲಕ ಹೇಳಿಕೆ ನೀಡಿದ್ದಾರೆ”.

“ಮುಂದಿನ ಕಾನೂನು ಕ್ರಮಗಳಿಗಾಗಿ ಲಿಖಿತ ದೂರು ದಾಖಲಿಸಲು ಕೇಳಿದಾಗ, ಚಾಲಕ ಯಾವುದೇ ದೂರು ನೀಡಲು ನಿರಾಕರಿಸಿದ್ದಾರೆ. ಅವರು ಯಾವುದೇ ಲಿಖಿತ ಅರ್ಜಿಯನ್ನು ಕೂಡ ಸಲ್ಲಿಸಿಲ್ಲ. ಸ್ಥಳೀಯ ಪೊಲೀಸರು ಅಪಘಾತಕ್ಕೀಡಾದ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಪರ್ಯಾಯ ವಾಹನದ ವ್ಯವಸ್ಥೆ ಮಾಡಿ ಎಲ್ಲರೂ ತಮ್ಮ ಗಮ್ಯಸ್ಥಾನಗಳನ್ನು ಸುರಕ್ಷಿತವಾಗಿ ತಲುಪುವಂತೆ ನೋಡಿಕೊಂಡಿದ್ದಾರೆ”.

ಇದು ಪೊಲೀಸರ ತ್ವರಿತ ಕಾರ್ಯಾಚರಣೆಗೆ ಹಿಡಿದ ಕೈಗನ್ನಡಿ. ಇದಕ್ಕಾಗಿ ಸ್ಥಳೀಯ ಪೊಲೀಸರನ್ನು ಶ್ಲಾಘಿಸುತ್ತೇವೆ. ಅಕ್ಬರ್‌ಪುರ ಪೊಲೀಸ್ ಠಾಣೆಯ ಮಹಿಳಾ ಅಧಿಕಾರಿಯ ಮೇಲ್ವಿಚಾರಣೆಯಲ್ಲಿ ಈ ಬಗ್ಗೆ ಮತ್ತಷ್ಟು ತನಿಖೆ ಮಾಡಲಾಗುವುದು” ಎಂದಿದ್ದಾರೆ.

“ಈ ಘಟನೆಯ ಕುರಿತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ದಾರಿತಪ್ಪಿಸುವ ಅಥವಾ ಸುಳ್ಳು ಮಾಹಿತಿಯನ್ನು ಹರಡದಂತೆ ನಾವು ವಿನಂತಿಸುತ್ತೇವೆ” ಎಂದು ಹೇಳಿದ್ದಾರೆ.

ತ್ರಿಭಾಷಾ ಹೇರಿಕೆ ವಿರೋಧಿಸಿ ಬಿಜೆಪಿ ತೊರೆದ ತಮಿಳು ನಟಿ ರಂಜನಾ ನಾಚಿಯಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...