Homeಮುಖಪುಟಹೆದ್ದಾರಿಯ ಮಧ್ಯೆಯೆ ಲೈಂಗಿಕ ಕ್ರಿಯೆ ನಡೆಸಿದ ಬಿಜೆಪಿ ನಾಯಕನ ಬಂಧನ

ಹೆದ್ದಾರಿಯ ಮಧ್ಯೆಯೆ ಲೈಂಗಿಕ ಕ್ರಿಯೆ ನಡೆಸಿದ ಬಿಜೆಪಿ ನಾಯಕನ ಬಂಧನ

- Advertisement -
- Advertisement -

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ ಮಧ್ಯೆ ಮಹಿಳೆಯೊಬ್ಬರ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದ ಮಧ್ಯಪ್ರದೇಶದ ಬಿಜೆಪಿ ನಾಯಕ ಮನೋಹರ್ ಲಾಲ್ ಧಕಾಡ್ ಅವರನ್ನು ಭಾನುವಾರ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಅವರ ಕೃತ್ಯದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾನ್ಪುರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ಹೆದ್ದಾರಿಯ ಮಧ್ಯೆಯೆ ಲೈಂಗಿಕ

ಮನೋಹರ್ ಲಾಲ್ ಧಕಾಡ್ ಮಧ್ಯಪ್ರದೇಶದ ಮಂದ್ಸೌ‌ರ್ ಬಿಜೆಪಿಯಲ್ಲಿ ಸಕ್ರಿಯನಾಗಿದ್ದು, ಬಿಜೆಪಿಯ ರಾಷ್ಟ್ರೀಯ ಯುವಮೋರ್ಚಾ ಘಟಕದಲ್ಲೂ ಜವಾಬ್ದಾರಿ ಹೊಂದಿದ್ದರು ಎನ್ನಲಾಗಿದೆ. ಅದಾಗ್ಯೂ, ವಿಡಿಯೋ ವೈರಲ್ ಆಗುತ್ತಿದ್ದಂತೆ ಮನೋಹರ್ ಪ್ರಾಥಮಿಕ ಸದಸ್ಯನೂ ಆಗಿರಲಿಲ್ಲ ಎಂದು ಬಿಜೆಪಿ ಹೇಳಿಕೊಂಡಿದೆ.

ಮೊಬೈಲ್ ಸಂಖ್ಯೆಗೆ ‘ಮಿಸ್ಡ್ ಕಾಲ್’ ನೀಡುವ ಮೂಲಕ ಯಾರು ಬೇಕಾದರೂ ಬಿಜೆಪಿ ಸದ್ಯಸರಾಗಬಹುದು ಎಂದು ಬಿಜೆಪಿ ವಕ್ತಾರ ಮತ್ತು ಮಂದಸೌರ್‌ನ ಮಾಜಿ ಶಾಸಕ ಯಶ್‌ಪಾಲ್ ಸಿಂಗ್ ಸಿಸೋಡಿಯಾ ಹೇಳಿದ್ದಾರೆ. ಅದಾಗ್ಯೂ, ಆರೋಪಿ ಮನೋಹರ್ ಲಾಲ್ ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ ಹಲವು ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.

ಘಟನೆ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದ ಭಾನ್ಪುರ ಪೊಲೀಸ್ ಠಾಣೆಯ ಉಸ್ತುವಾರಿ ಮತ್ತು ತನಿಖಾಧಿಕಾರಿ ಆರ್.ಸಿ. ಡಾಂಗಿ, “ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 296, 285 ಮತ್ತು 3(5)ರ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ. ಈ ವಿಡಿಯೋ ವೈರಲ್ ಮಾಡಿದವರು ಯಾರು ಮತ್ತು ಅದರ ಹಿಂದಿನ ಉದ್ದೇಶವೇನು ಎಂದು ತಿಳಿಯಬೇಕಾಗಿರುವುದರಿಂದ ತನಿಖೆ ಮುಂದುವರೆದಿದೆ” ಎಂದು ಹೇಳಿದ್ದಾರೆ.

“ಇಂತಹ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದರೂ ಸಹ, ಅದನ್ನು ಹೊಂದಿರುವವರು ಪೊಲೀಸರಿಗೆ ಹಸ್ತಾಂತರಿಸಬೇಕು. ಹಾಗಾಗಿ ಇತರ ವ್ಯಕ್ತಿಗಳು ಈ ಅಪರಾಧದಲ್ಲಿ ಭಾಗಿಯಾಗಿದ್ದಾರೆಯೇ ಎಂದು ನಾವು ಖಚಿತಪಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

ವಿಡಿಯೊದಲ್ಲಿದ್ದ ಮಹಿಳೆಯನ್ನು ಇನ್ನೂ ಬಂಧಿಸಿಲ್ಲ ಎಂದು ವರದಿಗಳು ಉಲ್ಲೇಖಿಸಿವೆ. “ಅವರ ವಿರುದ್ಧ ಯಾವ ಕಾನೂನು ಕ್ರಮ ಕೈಗೊಳ್ಳಬಹುದು ಎಂಬುದನ್ನು ನಿರ್ಧರಿಸುವ ಮೊದಲು ನಾವು ಸಂಪೂರ್ಣ ತನಿಖೆ ನಡೆಸಬೇಕಾಗಿದೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಬಂಧಿತ ಮನೋಹರ್‌ಲಾಲ್ ಧಾಕಡ್‌ ಅವರು ವಿವಾಹಿತರಾಗಿದ್ದು, ಅವರ ಪತ್ನಿ ಜಿಲ್ಲಾ ಪಂಚಾಯತ್ ಸದಸ್ಯರು ಕೂಡ ಆಗಿದ್ದಾರೆ ಎಂದು ತಿಳಿದುಬಂದಿದೆ.

ಮನೋಹರ್‌ಲಾಲ್ ಧಾಕಡ್‌ ಅವರ ಈ ಕಾಮಕೃತ್ಯದ ವಿಡಿಯೋ ವೈರಲಾಗುತ್ತಿದ್ದಂತೆಯೇ ಬಿಜೆಪಿ ವಿರುದ್ಧ ಮುಗಿಬಿದ್ದಿರುವ ಮಧ್ಯಪ್ರದೇಶದ ಕಾಂಗ್ರೆಸ್, “ಮಂದ್ಸೌ‌ರ್ ಬಿಜೆಪಿ ನಾಯಕ ಮತ್ತು ಜಿಲ್ಲಾ ಪಂಚಾಯತ್ ಸದಸ್ಯೆಯ ಪತಿಯಾಗಿರುವ ಮನೋಹರ್‌ಲಾಲ್ ಧಾಕಡ್‌ ಅವರು ಎಕ್ಸ್‌ಪ್ರೆಸ್‌ ವೇಯಲ್ಲಿ ಅಶ್ಲೀಲ ಕೃತ್ಯದ ಅತ್ಯಂತ ಆಕ್ಷೇಪಾರ್ಹ ವೀಡಿಯೊ ವೈರಲ್ ಆಗಿ ನಾಲ್ಕು ದಿನಗಳಾಗಿವೆ. ಆದರೂ ಬಿಜೆಪಿಯ ಅವರನ್ನು ಪಕ್ಷದಿಂದ ಉಚ್ಛಾಟಿಸಿಲ್ಲ” ಎಂದು ಹೇಳಿದೆ.

“ಬಿಜೆಪಿಯ ಜಿಲ್ಲಾಧ್ಯಕ್ಷರು ವಿಡಿಯೋದ ಸತ್ಯಾಸತ್ಯತೆಯವನ್ನು ಪರಿಶೀಲಿಸುವುದಾಗಿ ಹೇಳುತ್ತಿದ್ದಾರೆ. ಬಿಜೆಪಿ ನಾಯಕರ ಚಾರಿತ್ರ್ಯ ಪಾತಾಳಕ್ಕೆ ತಲುಪಿದೆ ಎಂಬುದು ಇಂತಹ ಕೃತ್ಯಗಳಿಂದ ತಿಳಿಯಬಹುದು. ಇದು ಇಡೀ ಸಮಾಜಕ್ಕೆ ಅವಮಾನಕರ ಘಟನೆ. ಅಧಿಕಾರದ ದುರಾಸೆಯಲ್ಲಿ ಪಕ್ಷವು ನೈತಿಕತೆಯನ್ನು ಚರಂಡಿಗೆ ಎಸೆದಿದೆ” ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಹೆದ್ದಾರಿಯ ಮಧ್ಯೆಯೆ ಲೈಂಗಿಕ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರಪ್ರದೇಶ: ದನ ಮೇಯಿಸುವ ವಿವಾದ; ದಲಿತ ಕುಟುಂಬದ ಮೇಲೆ ದೊಣ್ಣೆ, ಕಬ್ಬಿಣದ ರಾಡ್ ಗಳಿಂದ ಕ್ರೂರವಾಗಿ ಹಲ್ಲೆ

ಉತ್ತರಪ್ರದೇಶ: ದನ ಮೇಯಿಸುವ ವಿವಾದ; ದಲಿತ ಕುಟುಂಬದ ಮೇಲೆ ದೊಣ್ಣೆ, ಕಬ್ಬಿಣದ ರಾಡ್ ಗಳಿಂದ ಕ್ರೂರವಾಗಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...