Homeಮುಖಪುಟಹೆದ್ದಾರಿಯ ಮಧ್ಯೆಯೆ ಲೈಂಗಿಕ ಕ್ರಿಯೆ ನಡೆಸಿದ ಬಿಜೆಪಿ ನಾಯಕನ ಬಂಧನ

ಹೆದ್ದಾರಿಯ ಮಧ್ಯೆಯೆ ಲೈಂಗಿಕ ಕ್ರಿಯೆ ನಡೆಸಿದ ಬಿಜೆಪಿ ನಾಯಕನ ಬಂಧನ

- Advertisement -
- Advertisement -

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ ಮಧ್ಯೆ ಮಹಿಳೆಯೊಬ್ಬರ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದ ಮಧ್ಯಪ್ರದೇಶದ ಬಿಜೆಪಿ ನಾಯಕ ಮನೋಹರ್ ಲಾಲ್ ಧಕಾಡ್ ಅವರನ್ನು ಭಾನುವಾರ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಅವರ ಕೃತ್ಯದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾನ್ಪುರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ಹೆದ್ದಾರಿಯ ಮಧ್ಯೆಯೆ ಲೈಂಗಿಕ

ಮನೋಹರ್ ಲಾಲ್ ಧಕಾಡ್ ಮಧ್ಯಪ್ರದೇಶದ ಮಂದ್ಸೌ‌ರ್ ಬಿಜೆಪಿಯಲ್ಲಿ ಸಕ್ರಿಯನಾಗಿದ್ದು, ಬಿಜೆಪಿಯ ರಾಷ್ಟ್ರೀಯ ಯುವಮೋರ್ಚಾ ಘಟಕದಲ್ಲೂ ಜವಾಬ್ದಾರಿ ಹೊಂದಿದ್ದರು ಎನ್ನಲಾಗಿದೆ. ಅದಾಗ್ಯೂ, ವಿಡಿಯೋ ವೈರಲ್ ಆಗುತ್ತಿದ್ದಂತೆ ಮನೋಹರ್ ಪ್ರಾಥಮಿಕ ಸದಸ್ಯನೂ ಆಗಿರಲಿಲ್ಲ ಎಂದು ಬಿಜೆಪಿ ಹೇಳಿಕೊಂಡಿದೆ.

ಮೊಬೈಲ್ ಸಂಖ್ಯೆಗೆ ‘ಮಿಸ್ಡ್ ಕಾಲ್’ ನೀಡುವ ಮೂಲಕ ಯಾರು ಬೇಕಾದರೂ ಬಿಜೆಪಿ ಸದ್ಯಸರಾಗಬಹುದು ಎಂದು ಬಿಜೆಪಿ ವಕ್ತಾರ ಮತ್ತು ಮಂದಸೌರ್‌ನ ಮಾಜಿ ಶಾಸಕ ಯಶ್‌ಪಾಲ್ ಸಿಂಗ್ ಸಿಸೋಡಿಯಾ ಹೇಳಿದ್ದಾರೆ. ಅದಾಗ್ಯೂ, ಆರೋಪಿ ಮನೋಹರ್ ಲಾಲ್ ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ ಹಲವು ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.

ಘಟನೆ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದ ಭಾನ್ಪುರ ಪೊಲೀಸ್ ಠಾಣೆಯ ಉಸ್ತುವಾರಿ ಮತ್ತು ತನಿಖಾಧಿಕಾರಿ ಆರ್.ಸಿ. ಡಾಂಗಿ, “ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 296, 285 ಮತ್ತು 3(5)ರ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ. ಈ ವಿಡಿಯೋ ವೈರಲ್ ಮಾಡಿದವರು ಯಾರು ಮತ್ತು ಅದರ ಹಿಂದಿನ ಉದ್ದೇಶವೇನು ಎಂದು ತಿಳಿಯಬೇಕಾಗಿರುವುದರಿಂದ ತನಿಖೆ ಮುಂದುವರೆದಿದೆ” ಎಂದು ಹೇಳಿದ್ದಾರೆ.

“ಇಂತಹ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದರೂ ಸಹ, ಅದನ್ನು ಹೊಂದಿರುವವರು ಪೊಲೀಸರಿಗೆ ಹಸ್ತಾಂತರಿಸಬೇಕು. ಹಾಗಾಗಿ ಇತರ ವ್ಯಕ್ತಿಗಳು ಈ ಅಪರಾಧದಲ್ಲಿ ಭಾಗಿಯಾಗಿದ್ದಾರೆಯೇ ಎಂದು ನಾವು ಖಚಿತಪಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

ವಿಡಿಯೊದಲ್ಲಿದ್ದ ಮಹಿಳೆಯನ್ನು ಇನ್ನೂ ಬಂಧಿಸಿಲ್ಲ ಎಂದು ವರದಿಗಳು ಉಲ್ಲೇಖಿಸಿವೆ. “ಅವರ ವಿರುದ್ಧ ಯಾವ ಕಾನೂನು ಕ್ರಮ ಕೈಗೊಳ್ಳಬಹುದು ಎಂಬುದನ್ನು ನಿರ್ಧರಿಸುವ ಮೊದಲು ನಾವು ಸಂಪೂರ್ಣ ತನಿಖೆ ನಡೆಸಬೇಕಾಗಿದೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಬಂಧಿತ ಮನೋಹರ್‌ಲಾಲ್ ಧಾಕಡ್‌ ಅವರು ವಿವಾಹಿತರಾಗಿದ್ದು, ಅವರ ಪತ್ನಿ ಜಿಲ್ಲಾ ಪಂಚಾಯತ್ ಸದಸ್ಯರು ಕೂಡ ಆಗಿದ್ದಾರೆ ಎಂದು ತಿಳಿದುಬಂದಿದೆ.

ಮನೋಹರ್‌ಲಾಲ್ ಧಾಕಡ್‌ ಅವರ ಈ ಕಾಮಕೃತ್ಯದ ವಿಡಿಯೋ ವೈರಲಾಗುತ್ತಿದ್ದಂತೆಯೇ ಬಿಜೆಪಿ ವಿರುದ್ಧ ಮುಗಿಬಿದ್ದಿರುವ ಮಧ್ಯಪ್ರದೇಶದ ಕಾಂಗ್ರೆಸ್, “ಮಂದ್ಸೌ‌ರ್ ಬಿಜೆಪಿ ನಾಯಕ ಮತ್ತು ಜಿಲ್ಲಾ ಪಂಚಾಯತ್ ಸದಸ್ಯೆಯ ಪತಿಯಾಗಿರುವ ಮನೋಹರ್‌ಲಾಲ್ ಧಾಕಡ್‌ ಅವರು ಎಕ್ಸ್‌ಪ್ರೆಸ್‌ ವೇಯಲ್ಲಿ ಅಶ್ಲೀಲ ಕೃತ್ಯದ ಅತ್ಯಂತ ಆಕ್ಷೇಪಾರ್ಹ ವೀಡಿಯೊ ವೈರಲ್ ಆಗಿ ನಾಲ್ಕು ದಿನಗಳಾಗಿವೆ. ಆದರೂ ಬಿಜೆಪಿಯ ಅವರನ್ನು ಪಕ್ಷದಿಂದ ಉಚ್ಛಾಟಿಸಿಲ್ಲ” ಎಂದು ಹೇಳಿದೆ.

“ಬಿಜೆಪಿಯ ಜಿಲ್ಲಾಧ್ಯಕ್ಷರು ವಿಡಿಯೋದ ಸತ್ಯಾಸತ್ಯತೆಯವನ್ನು ಪರಿಶೀಲಿಸುವುದಾಗಿ ಹೇಳುತ್ತಿದ್ದಾರೆ. ಬಿಜೆಪಿ ನಾಯಕರ ಚಾರಿತ್ರ್ಯ ಪಾತಾಳಕ್ಕೆ ತಲುಪಿದೆ ಎಂಬುದು ಇಂತಹ ಕೃತ್ಯಗಳಿಂದ ತಿಳಿಯಬಹುದು. ಇದು ಇಡೀ ಸಮಾಜಕ್ಕೆ ಅವಮಾನಕರ ಘಟನೆ. ಅಧಿಕಾರದ ದುರಾಸೆಯಲ್ಲಿ ಪಕ್ಷವು ನೈತಿಕತೆಯನ್ನು ಚರಂಡಿಗೆ ಎಸೆದಿದೆ” ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಹೆದ್ದಾರಿಯ ಮಧ್ಯೆಯೆ ಲೈಂಗಿಕ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರಪ್ರದೇಶ: ದನ ಮೇಯಿಸುವ ವಿವಾದ; ದಲಿತ ಕುಟುಂಬದ ಮೇಲೆ ದೊಣ್ಣೆ, ಕಬ್ಬಿಣದ ರಾಡ್ ಗಳಿಂದ ಕ್ರೂರವಾಗಿ ಹಲ್ಲೆ

ಉತ್ತರಪ್ರದೇಶ: ದನ ಮೇಯಿಸುವ ವಿವಾದ; ದಲಿತ ಕುಟುಂಬದ ಮೇಲೆ ದೊಣ್ಣೆ, ಕಬ್ಬಿಣದ ರಾಡ್ ಗಳಿಂದ ಕ್ರೂರವಾಗಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...