Homeಮುಖಪುಟಹೆದ್ದಾರಿಯ ಮಧ್ಯೆಯೆ ಲೈಂಗಿಕ ಕ್ರಿಯೆ ನಡೆಸಿದ ಬಿಜೆಪಿ ನಾಯಕನ ಬಂಧನ

ಹೆದ್ದಾರಿಯ ಮಧ್ಯೆಯೆ ಲೈಂಗಿಕ ಕ್ರಿಯೆ ನಡೆಸಿದ ಬಿಜೆಪಿ ನಾಯಕನ ಬಂಧನ

- Advertisement -
- Advertisement -

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ ಮಧ್ಯೆ ಮಹಿಳೆಯೊಬ್ಬರ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದ ಮಧ್ಯಪ್ರದೇಶದ ಬಿಜೆಪಿ ನಾಯಕ ಮನೋಹರ್ ಲಾಲ್ ಧಕಾಡ್ ಅವರನ್ನು ಭಾನುವಾರ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಅವರ ಕೃತ್ಯದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾನ್ಪುರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ಹೆದ್ದಾರಿಯ ಮಧ್ಯೆಯೆ ಲೈಂಗಿಕ

ಮನೋಹರ್ ಲಾಲ್ ಧಕಾಡ್ ಮಧ್ಯಪ್ರದೇಶದ ಮಂದ್ಸೌ‌ರ್ ಬಿಜೆಪಿಯಲ್ಲಿ ಸಕ್ರಿಯನಾಗಿದ್ದು, ಬಿಜೆಪಿಯ ರಾಷ್ಟ್ರೀಯ ಯುವಮೋರ್ಚಾ ಘಟಕದಲ್ಲೂ ಜವಾಬ್ದಾರಿ ಹೊಂದಿದ್ದರು ಎನ್ನಲಾಗಿದೆ. ಅದಾಗ್ಯೂ, ವಿಡಿಯೋ ವೈರಲ್ ಆಗುತ್ತಿದ್ದಂತೆ ಮನೋಹರ್ ಪ್ರಾಥಮಿಕ ಸದಸ್ಯನೂ ಆಗಿರಲಿಲ್ಲ ಎಂದು ಬಿಜೆಪಿ ಹೇಳಿಕೊಂಡಿದೆ.

ಮೊಬೈಲ್ ಸಂಖ್ಯೆಗೆ ‘ಮಿಸ್ಡ್ ಕಾಲ್’ ನೀಡುವ ಮೂಲಕ ಯಾರು ಬೇಕಾದರೂ ಬಿಜೆಪಿ ಸದ್ಯಸರಾಗಬಹುದು ಎಂದು ಬಿಜೆಪಿ ವಕ್ತಾರ ಮತ್ತು ಮಂದಸೌರ್‌ನ ಮಾಜಿ ಶಾಸಕ ಯಶ್‌ಪಾಲ್ ಸಿಂಗ್ ಸಿಸೋಡಿಯಾ ಹೇಳಿದ್ದಾರೆ. ಅದಾಗ್ಯೂ, ಆರೋಪಿ ಮನೋಹರ್ ಲಾಲ್ ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ ಹಲವು ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.

ಘಟನೆ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದ ಭಾನ್ಪುರ ಪೊಲೀಸ್ ಠಾಣೆಯ ಉಸ್ತುವಾರಿ ಮತ್ತು ತನಿಖಾಧಿಕಾರಿ ಆರ್.ಸಿ. ಡಾಂಗಿ, “ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 296, 285 ಮತ್ತು 3(5)ರ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ. ಈ ವಿಡಿಯೋ ವೈರಲ್ ಮಾಡಿದವರು ಯಾರು ಮತ್ತು ಅದರ ಹಿಂದಿನ ಉದ್ದೇಶವೇನು ಎಂದು ತಿಳಿಯಬೇಕಾಗಿರುವುದರಿಂದ ತನಿಖೆ ಮುಂದುವರೆದಿದೆ” ಎಂದು ಹೇಳಿದ್ದಾರೆ.

“ಇಂತಹ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದರೂ ಸಹ, ಅದನ್ನು ಹೊಂದಿರುವವರು ಪೊಲೀಸರಿಗೆ ಹಸ್ತಾಂತರಿಸಬೇಕು. ಹಾಗಾಗಿ ಇತರ ವ್ಯಕ್ತಿಗಳು ಈ ಅಪರಾಧದಲ್ಲಿ ಭಾಗಿಯಾಗಿದ್ದಾರೆಯೇ ಎಂದು ನಾವು ಖಚಿತಪಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

ವಿಡಿಯೊದಲ್ಲಿದ್ದ ಮಹಿಳೆಯನ್ನು ಇನ್ನೂ ಬಂಧಿಸಿಲ್ಲ ಎಂದು ವರದಿಗಳು ಉಲ್ಲೇಖಿಸಿವೆ. “ಅವರ ವಿರುದ್ಧ ಯಾವ ಕಾನೂನು ಕ್ರಮ ಕೈಗೊಳ್ಳಬಹುದು ಎಂಬುದನ್ನು ನಿರ್ಧರಿಸುವ ಮೊದಲು ನಾವು ಸಂಪೂರ್ಣ ತನಿಖೆ ನಡೆಸಬೇಕಾಗಿದೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಬಂಧಿತ ಮನೋಹರ್‌ಲಾಲ್ ಧಾಕಡ್‌ ಅವರು ವಿವಾಹಿತರಾಗಿದ್ದು, ಅವರ ಪತ್ನಿ ಜಿಲ್ಲಾ ಪಂಚಾಯತ್ ಸದಸ್ಯರು ಕೂಡ ಆಗಿದ್ದಾರೆ ಎಂದು ತಿಳಿದುಬಂದಿದೆ.

ಮನೋಹರ್‌ಲಾಲ್ ಧಾಕಡ್‌ ಅವರ ಈ ಕಾಮಕೃತ್ಯದ ವಿಡಿಯೋ ವೈರಲಾಗುತ್ತಿದ್ದಂತೆಯೇ ಬಿಜೆಪಿ ವಿರುದ್ಧ ಮುಗಿಬಿದ್ದಿರುವ ಮಧ್ಯಪ್ರದೇಶದ ಕಾಂಗ್ರೆಸ್, “ಮಂದ್ಸೌ‌ರ್ ಬಿಜೆಪಿ ನಾಯಕ ಮತ್ತು ಜಿಲ್ಲಾ ಪಂಚಾಯತ್ ಸದಸ್ಯೆಯ ಪತಿಯಾಗಿರುವ ಮನೋಹರ್‌ಲಾಲ್ ಧಾಕಡ್‌ ಅವರು ಎಕ್ಸ್‌ಪ್ರೆಸ್‌ ವೇಯಲ್ಲಿ ಅಶ್ಲೀಲ ಕೃತ್ಯದ ಅತ್ಯಂತ ಆಕ್ಷೇಪಾರ್ಹ ವೀಡಿಯೊ ವೈರಲ್ ಆಗಿ ನಾಲ್ಕು ದಿನಗಳಾಗಿವೆ. ಆದರೂ ಬಿಜೆಪಿಯ ಅವರನ್ನು ಪಕ್ಷದಿಂದ ಉಚ್ಛಾಟಿಸಿಲ್ಲ” ಎಂದು ಹೇಳಿದೆ.

“ಬಿಜೆಪಿಯ ಜಿಲ್ಲಾಧ್ಯಕ್ಷರು ವಿಡಿಯೋದ ಸತ್ಯಾಸತ್ಯತೆಯವನ್ನು ಪರಿಶೀಲಿಸುವುದಾಗಿ ಹೇಳುತ್ತಿದ್ದಾರೆ. ಬಿಜೆಪಿ ನಾಯಕರ ಚಾರಿತ್ರ್ಯ ಪಾತಾಳಕ್ಕೆ ತಲುಪಿದೆ ಎಂಬುದು ಇಂತಹ ಕೃತ್ಯಗಳಿಂದ ತಿಳಿಯಬಹುದು. ಇದು ಇಡೀ ಸಮಾಜಕ್ಕೆ ಅವಮಾನಕರ ಘಟನೆ. ಅಧಿಕಾರದ ದುರಾಸೆಯಲ್ಲಿ ಪಕ್ಷವು ನೈತಿಕತೆಯನ್ನು ಚರಂಡಿಗೆ ಎಸೆದಿದೆ” ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಹೆದ್ದಾರಿಯ ಮಧ್ಯೆಯೆ ಲೈಂಗಿಕ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರಪ್ರದೇಶ: ದನ ಮೇಯಿಸುವ ವಿವಾದ; ದಲಿತ ಕುಟುಂಬದ ಮೇಲೆ ದೊಣ್ಣೆ, ಕಬ್ಬಿಣದ ರಾಡ್ ಗಳಿಂದ ಕ್ರೂರವಾಗಿ ಹಲ್ಲೆ

ಉತ್ತರಪ್ರದೇಶ: ದನ ಮೇಯಿಸುವ ವಿವಾದ; ದಲಿತ ಕುಟುಂಬದ ಮೇಲೆ ದೊಣ್ಣೆ, ಕಬ್ಬಿಣದ ರಾಡ್ ಗಳಿಂದ ಕ್ರೂರವಾಗಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...