Homeಮುಖಪುಟಹೆದ್ದಾರಿಯ ಮಧ್ಯೆಯೆ ಲೈಂಗಿಕ ಕ್ರಿಯೆ ನಡೆಸಿದ ಬಿಜೆಪಿ ನಾಯಕನ ಬಂಧನ

ಹೆದ್ದಾರಿಯ ಮಧ್ಯೆಯೆ ಲೈಂಗಿಕ ಕ್ರಿಯೆ ನಡೆಸಿದ ಬಿಜೆಪಿ ನಾಯಕನ ಬಂಧನ

- Advertisement -
- Advertisement -

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ ಮಧ್ಯೆ ಮಹಿಳೆಯೊಬ್ಬರ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದ ಮಧ್ಯಪ್ರದೇಶದ ಬಿಜೆಪಿ ನಾಯಕ ಮನೋಹರ್ ಲಾಲ್ ಧಕಾಡ್ ಅವರನ್ನು ಭಾನುವಾರ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಅವರ ಕೃತ್ಯದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾನ್ಪುರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ಹೆದ್ದಾರಿಯ ಮಧ್ಯೆಯೆ ಲೈಂಗಿಕ

ಮನೋಹರ್ ಲಾಲ್ ಧಕಾಡ್ ಮಧ್ಯಪ್ರದೇಶದ ಮಂದ್ಸೌ‌ರ್ ಬಿಜೆಪಿಯಲ್ಲಿ ಸಕ್ರಿಯನಾಗಿದ್ದು, ಬಿಜೆಪಿಯ ರಾಷ್ಟ್ರೀಯ ಯುವಮೋರ್ಚಾ ಘಟಕದಲ್ಲೂ ಜವಾಬ್ದಾರಿ ಹೊಂದಿದ್ದರು ಎನ್ನಲಾಗಿದೆ. ಅದಾಗ್ಯೂ, ವಿಡಿಯೋ ವೈರಲ್ ಆಗುತ್ತಿದ್ದಂತೆ ಮನೋಹರ್ ಪ್ರಾಥಮಿಕ ಸದಸ್ಯನೂ ಆಗಿರಲಿಲ್ಲ ಎಂದು ಬಿಜೆಪಿ ಹೇಳಿಕೊಂಡಿದೆ.

ಮೊಬೈಲ್ ಸಂಖ್ಯೆಗೆ ‘ಮಿಸ್ಡ್ ಕಾಲ್’ ನೀಡುವ ಮೂಲಕ ಯಾರು ಬೇಕಾದರೂ ಬಿಜೆಪಿ ಸದ್ಯಸರಾಗಬಹುದು ಎಂದು ಬಿಜೆಪಿ ವಕ್ತಾರ ಮತ್ತು ಮಂದಸೌರ್‌ನ ಮಾಜಿ ಶಾಸಕ ಯಶ್‌ಪಾಲ್ ಸಿಂಗ್ ಸಿಸೋಡಿಯಾ ಹೇಳಿದ್ದಾರೆ. ಅದಾಗ್ಯೂ, ಆರೋಪಿ ಮನೋಹರ್ ಲಾಲ್ ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ ಹಲವು ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.

ಘಟನೆ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದ ಭಾನ್ಪುರ ಪೊಲೀಸ್ ಠಾಣೆಯ ಉಸ್ತುವಾರಿ ಮತ್ತು ತನಿಖಾಧಿಕಾರಿ ಆರ್.ಸಿ. ಡಾಂಗಿ, “ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 296, 285 ಮತ್ತು 3(5)ರ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ. ಈ ವಿಡಿಯೋ ವೈರಲ್ ಮಾಡಿದವರು ಯಾರು ಮತ್ತು ಅದರ ಹಿಂದಿನ ಉದ್ದೇಶವೇನು ಎಂದು ತಿಳಿಯಬೇಕಾಗಿರುವುದರಿಂದ ತನಿಖೆ ಮುಂದುವರೆದಿದೆ” ಎಂದು ಹೇಳಿದ್ದಾರೆ.

“ಇಂತಹ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದರೂ ಸಹ, ಅದನ್ನು ಹೊಂದಿರುವವರು ಪೊಲೀಸರಿಗೆ ಹಸ್ತಾಂತರಿಸಬೇಕು. ಹಾಗಾಗಿ ಇತರ ವ್ಯಕ್ತಿಗಳು ಈ ಅಪರಾಧದಲ್ಲಿ ಭಾಗಿಯಾಗಿದ್ದಾರೆಯೇ ಎಂದು ನಾವು ಖಚಿತಪಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

ವಿಡಿಯೊದಲ್ಲಿದ್ದ ಮಹಿಳೆಯನ್ನು ಇನ್ನೂ ಬಂಧಿಸಿಲ್ಲ ಎಂದು ವರದಿಗಳು ಉಲ್ಲೇಖಿಸಿವೆ. “ಅವರ ವಿರುದ್ಧ ಯಾವ ಕಾನೂನು ಕ್ರಮ ಕೈಗೊಳ್ಳಬಹುದು ಎಂಬುದನ್ನು ನಿರ್ಧರಿಸುವ ಮೊದಲು ನಾವು ಸಂಪೂರ್ಣ ತನಿಖೆ ನಡೆಸಬೇಕಾಗಿದೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಬಂಧಿತ ಮನೋಹರ್‌ಲಾಲ್ ಧಾಕಡ್‌ ಅವರು ವಿವಾಹಿತರಾಗಿದ್ದು, ಅವರ ಪತ್ನಿ ಜಿಲ್ಲಾ ಪಂಚಾಯತ್ ಸದಸ್ಯರು ಕೂಡ ಆಗಿದ್ದಾರೆ ಎಂದು ತಿಳಿದುಬಂದಿದೆ.

ಮನೋಹರ್‌ಲಾಲ್ ಧಾಕಡ್‌ ಅವರ ಈ ಕಾಮಕೃತ್ಯದ ವಿಡಿಯೋ ವೈರಲಾಗುತ್ತಿದ್ದಂತೆಯೇ ಬಿಜೆಪಿ ವಿರುದ್ಧ ಮುಗಿಬಿದ್ದಿರುವ ಮಧ್ಯಪ್ರದೇಶದ ಕಾಂಗ್ರೆಸ್, “ಮಂದ್ಸೌ‌ರ್ ಬಿಜೆಪಿ ನಾಯಕ ಮತ್ತು ಜಿಲ್ಲಾ ಪಂಚಾಯತ್ ಸದಸ್ಯೆಯ ಪತಿಯಾಗಿರುವ ಮನೋಹರ್‌ಲಾಲ್ ಧಾಕಡ್‌ ಅವರು ಎಕ್ಸ್‌ಪ್ರೆಸ್‌ ವೇಯಲ್ಲಿ ಅಶ್ಲೀಲ ಕೃತ್ಯದ ಅತ್ಯಂತ ಆಕ್ಷೇಪಾರ್ಹ ವೀಡಿಯೊ ವೈರಲ್ ಆಗಿ ನಾಲ್ಕು ದಿನಗಳಾಗಿವೆ. ಆದರೂ ಬಿಜೆಪಿಯ ಅವರನ್ನು ಪಕ್ಷದಿಂದ ಉಚ್ಛಾಟಿಸಿಲ್ಲ” ಎಂದು ಹೇಳಿದೆ.

“ಬಿಜೆಪಿಯ ಜಿಲ್ಲಾಧ್ಯಕ್ಷರು ವಿಡಿಯೋದ ಸತ್ಯಾಸತ್ಯತೆಯವನ್ನು ಪರಿಶೀಲಿಸುವುದಾಗಿ ಹೇಳುತ್ತಿದ್ದಾರೆ. ಬಿಜೆಪಿ ನಾಯಕರ ಚಾರಿತ್ರ್ಯ ಪಾತಾಳಕ್ಕೆ ತಲುಪಿದೆ ಎಂಬುದು ಇಂತಹ ಕೃತ್ಯಗಳಿಂದ ತಿಳಿಯಬಹುದು. ಇದು ಇಡೀ ಸಮಾಜಕ್ಕೆ ಅವಮಾನಕರ ಘಟನೆ. ಅಧಿಕಾರದ ದುರಾಸೆಯಲ್ಲಿ ಪಕ್ಷವು ನೈತಿಕತೆಯನ್ನು ಚರಂಡಿಗೆ ಎಸೆದಿದೆ” ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಹೆದ್ದಾರಿಯ ಮಧ್ಯೆಯೆ ಲೈಂಗಿಕ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರಪ್ರದೇಶ: ದನ ಮೇಯಿಸುವ ವಿವಾದ; ದಲಿತ ಕುಟುಂಬದ ಮೇಲೆ ದೊಣ್ಣೆ, ಕಬ್ಬಿಣದ ರಾಡ್ ಗಳಿಂದ ಕ್ರೂರವಾಗಿ ಹಲ್ಲೆ

ಉತ್ತರಪ್ರದೇಶ: ದನ ಮೇಯಿಸುವ ವಿವಾದ; ದಲಿತ ಕುಟುಂಬದ ಮೇಲೆ ದೊಣ್ಣೆ, ಕಬ್ಬಿಣದ ರಾಡ್ ಗಳಿಂದ ಕ್ರೂರವಾಗಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...