Homeಮುಖಪುಟಬುಡಕಟ್ಟು ಯುವತಿಗೆ ಚಿತ್ರಹಿಂಸೆ ನೀಡಿದ ಬಿಜೆಪಿ ನಾಯಕಿಯ ಬಂಧನ

ಬುಡಕಟ್ಟು ಯುವತಿಗೆ ಚಿತ್ರಹಿಂಸೆ ನೀಡಿದ ಬಿಜೆಪಿ ನಾಯಕಿಯ ಬಂಧನ

ಯುವತಿಯನ್ನು ನಾಲಗೆಯಲ್ಲಿ ಮೂತ್ರವನ್ನು ನೆಕ್ಕುವಂತೆ ಮಾಡುತ್ತಿದ್ದುದು ಮಾತ್ರವಲ್ಲದೆ, ನಿರಂತರವಾಗಿ ಹಲ್ಲೆ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ

- Advertisement -
- Advertisement -

ಮನೆಯಲ್ಲಿ ಕೆಲಸಕ್ಕಿದ್ದ ಬುಡಕಟ್ಟು ಸಮುದಾಯದ ಯುವತಿ ಸುನೀತಾ ಖಾಖಾ ಅವರಿಗೆ ಕ್ರೂರವಾಗಿ ಚಿತ್ರಹಿಂಸೆ ನೀಡಿದ ಜಾರ್ಖಂಡ್‌ನ ಬಿಜೆಪಿ ನಾಯಕಿ ಸೀಮಾ ಪಾತ್ರಾ ಅವರನ್ನು ರಾಂಚಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಆರೋಪಿ ಸೀಮಾ ಮನೆಯಲ್ಲಿ 8 ವರ್ಷಗಳ ಕಾಲ ಮನೆಗೆಲಸ ಮಾಡಿಕೊಂಡಿದ್ದ ಯುವತಿಯನ್ನು ನಾಲಗೆಯಲ್ಲಿ ಮೂತ್ರವನ್ನು ನೆಕ್ಕುವಂತೆ ಮಾಡುತ್ತಿದ್ದುದು ಮಾತ್ರವಲ್ಲದೆ, ನಿರಂತರವಾಗಿ ಹಲ್ಲೆ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ. ಸಂತ್ರಸ್ರೆ ಯುವತಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಅವರ ಹಲ್ಲು ಕೂಡಾ ಮುರಿಯಲಾಗಿದೆ.

ಸೀಮಾ ಪಾತ್ರಾ ಅವರು ಬಿಜೆಪಿಯ ಮಹಿಳಾ ವಿಭಾಗದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದಾರೆ. ಅವರ ಪತಿ ಮಹೇಶ್ವರ್ ಪಾತ್ರಾ ನಿವೃತ್ತ ಐಎಎಸ್ ಅಧಿಕಾರಿ ಆಗಿದ್ದಾರೆ. ಸೀಮಾ ಅವರು ತನ್ನ ಫೇ‌ಸ್‌ಬುಕ್ ಖಾತೆಯಲ್ಲಿ,“ಬೇಟಿ ಬಚಾವೋ – ಬೇಟಿ ಪಢಾವೋ ರಾಜ್ಯ ಸಂಚಾಲಕಿ ಮತ್ತು ಜಾರ್ಖಂಡ್ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ” ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತ್ರಸ್ತೆ ಬುಡಕಟ್ಟು ಸಮುದಾಯದ ಯುವತಿಯು ಬಿಜೆಪಿ ನಾಯಕಿ ತನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಹೇಳಿರುವ ವಿಡಿಯೊ ವೈರಲ್ ಆದ ನಂತರ ಜಾರ್ಖಂಡ್ ಬಿಜೆಪಿ ಮುಖ್ಯಸ್ಥ ದೀಪಕ್ ಪ್ರಕಾಶ್ ಅವರು ಸೀಮಾ ವಿರುದ್ಧ ಕ್ರಮಕ್ಕೆ ಆದೇಶಿಸಿದ್ದಾರೆ.

ಇದನ್ನೂ ಓದಿ: ‘ನಾಲಗೆಯಲ್ಲಿ ನೆಲ ಸ್ವಚ್ಛ ಮಾಡಿಸುತ್ತಿದ್ದರು’: ಬುಡಕಟ್ಟು ಯುವತಿಯನ್ನು 8 ವರ್ಷ ಬಂಧಿಸಿಟ್ಟು ಚಿತ್ರಹಿಂಸೆ ನೀಡುತ್ತಿದ್ದ BJP ನಾಯಕಿ

ವೈರಲ್ ಆಗಿರುವ ವಿಡಿಯೊದಲ್ಲಿ, ಸಂತ್ರಸ್ತೆ ಸುನೀತಾ ಅವರ ಸ್ಥಿತಿಯು ಭಯಾನಕವಾಗಿರುವುದು ಕಂಡು ಬಂದಿದೆ. ಯುವತಿಯು ಆಸ್ಪತ್ರೆಯ ಹಾಸಿಗೆಯಲ್ಲಿದ್ದು, ಅವರ ಹಲವಾರು ಹಲ್ಲುಗಳು ಕಾಣೆಯಾಗಿವೆ. ಅಲ್ಲದೆ ಅವರು ಕುಳಿತುಕೊಳ್ಳಲು ಕೂಡಾ ಅಸಮರ್ಥ ಸ್ಥಿತಿಯಲ್ಲಿದ್ದಾರೆ. ಜೊತೆಗೆ ಅವರ ದೇಹದ ಮೇಲಿನ ಗಾಯದ ಗುರುತುಗಳು ಅವರ ಮೇಲೆ ನಿರಂತರ ದಾಳಿ ನಡೆದಿರುವುದು ಸೂಚಿಸುತ್ತವೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ಸುನಿತಾ ಅವರ ಪರಿಸ್ಥಿತಿಯ ವಿಡಿಯೊ ವೈರಲ್ ಆಗುತ್ತಿದ್ದಂತೆ, ಸೀಮಾ ಪಾತ್ರ ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

29 ವರ್ಷದ ಸುನೀತಾ ಅವರು ಜಾರ್ಖಂಡ್‌ನ ಗುಮ್ಲಾ ಮೂಲದವರಾಗಿದ್ದು, ಸುಮಾರು 10 ವರ್ಷಗಳ ಹಿಂದೆ ಸೀಮಾ ಪಾತ್ರಾ ಅವರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಅವರ ಮಗಳು ವತ್ಸಲಾ ಕೆಲಸದ ನಿಮಿತ್ತ ದೆಹಲಿಗೆ ತೆರಳುತ್ತಿದ್ದಾಗ ಕೂಡಾ ಸುನೀತಾ ಅವರ ಸಹಾಯಕ್ಕೆ ತೆರಳಿದ್ದರು. ಸುಮಾರು ನಾಲ್ಕು ವರ್ಷಗಳ ಹಿಂದೆ ವತ್ಸಲಾ ಮತ್ತು ಸುನೀತಾ ರಾಂಚಿಗೆ ಮರಳಿದ್ದರು.

ಇದನ್ನೂ ಓದಿ:  ಬುಡಕಟ್ಟು ಯುವತಿಗೆ ಚಿತ್ರಹಿಂಸೆ: ಆರೋಪಿ ಸೀಮಾ ಪಾತ್ರಾ ಬಿಜೆಪಿಯಿಂದ ಅಮಾನತು

ಸುಮಾರು ಆರು ವರ್ಷಗಳಿಂದ ಸೀಮಾ ಪಾತ್ರಾ ಕ್ರೂರ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ಯುವತಿ ಹೇಳಿದ್ದಾರೆ. ಅಪಾರ ನೋವಿನಿಂದ ಮಾತನಾಡಿದ ಅವರು, ತನಗೆ ಬಿಸಿ ತವಾ ಮತ್ತು ರಾಡ್‌ಗಳಿಂದ ಥಳಿಸಿ ಹಲ್ಲುಗಳನ್ನು ಒಡೆದುಹಾಕಲಾಯಿತು ಎಂದು ವೀಡಿಯೊಗಳಲ್ಲಿ ಹೇಳಿಕೊಂಡಿದ್ದಾರೆ. ಆಕೆಗೆ ನೆಲದ ಮೇಲಿನ ಮೂತ್ರವನ್ನು ನೆಕ್ಕುವಂತೆ ಮಾಡಲಾಯಿತು ಎಂದು ಅವರು ತಿಳಿಸಿದ್ದಾರೆ.

ಈ ಚಿತ್ರಹಿಂಸೆಯನ್ನು ತನಗೆ ಶಿಕ್ಷೆಯಾಗಿ ನೀಡಲಾಗಿದ್ದು, ಆದರೆ ತಾನು ಮಾಡಿರುವ ತಪ್ಪುಗಳೇನು ಎಂದು ತನಗೆ ತಿಳಿದಿರಲಿಲ್ಲ ಎಂದು ಸುನೀತಾ ಹೇಳಿದ್ದಾರೆ.

ಸೀಮಾ ಪಾತ್ರಾ ಅವರ ಮಗ ಆಯುಷ್ಮಾನ್ ತನಗೆ ಸಹಾಯ ಮಾಡಿದ್ದಾನೆ ಎಂದು ಯುವತಿ ಹೇಳಿದ್ದು,“ನಾನು ಬದುಕಿರುವುದು ಅವನಿಂದ ಮಾತ್ರ” ಎಂದು ಅವರು ಹೇಳಿದ್ದಾರೆ. ತನ್ನ ಸಹೋದರಿ ಮತ್ತು ಸೋದರ ಮಾವನಿಗೆ ಈ ಕಷ್ಟಗಳನ್ನು ಹೇಳಿದ್ದರೂ ಅವರು ಇದರ ಬಗ್ಗೆ ಚಿಂತಿತರಾಗಿರಲಿಲ್ಲ ಎಂದು ಅವರು ಹೇಳಿದ್ದಾರೆ. ವೀಡಿಯೊದಲ್ಲಿ ಸುನಿತಾ ಅವರು ತಾನು ಚೇತರಿಸಿಕೊಂಡರೆ ಅಧ್ಯಯನ ಮಾಡುವುದಾಗಿ ಹೇಳಿರುವುದು ದಾಖಲಾಗಿದೆ.

ಇದನ್ನೂ ಓದಿ: ಮಾತು ಮರೆತ ಭಾರತ; ಊನಾ ಫೈಲ್: ಆರೆಸ್ಸೆಸ್-ಬಿಜೆಪಿಯ ದನದ ರಾಜಕಾರಣ ಮತ್ತು ದಲಿತರು

ಸೀಮಾ ಅವರು ಮಗ ಆಯುಷ್ಮಾನ್ ಅವರು ಸುನೀತಾ ಅವರ ಪರಿಸ್ಥಿತಿಯನ್ನು ಸ್ನೇಹಿತರಿಗೆ ವಿವರಿಸಿ ಸಹಾಯ ಕೇಳಿದ್ದರು. ನಂತರ ಆತನ ಸ್ನೇಹಿತ ಪೊಲೀಸ್ ದೂರು ದಾಖಲಿಸಿದ್ದು, ಸುನೀತಾರನ್ನು ರಕ್ಷಿಸಲಾಗಿದೆ. ಪಸ್ತುತ ಅವರು ರಾಂಚಿಯ ರಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...