Homeಮುಖಪುಟಬುಡಕಟ್ಟು ಯುವತಿಗೆ ಚಿತ್ರಹಿಂಸೆ ನೀಡಿದ ಬಿಜೆಪಿ ನಾಯಕಿಯ ಬಂಧನ

ಬುಡಕಟ್ಟು ಯುವತಿಗೆ ಚಿತ್ರಹಿಂಸೆ ನೀಡಿದ ಬಿಜೆಪಿ ನಾಯಕಿಯ ಬಂಧನ

ಯುವತಿಯನ್ನು ನಾಲಗೆಯಲ್ಲಿ ಮೂತ್ರವನ್ನು ನೆಕ್ಕುವಂತೆ ಮಾಡುತ್ತಿದ್ದುದು ಮಾತ್ರವಲ್ಲದೆ, ನಿರಂತರವಾಗಿ ಹಲ್ಲೆ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ

- Advertisement -
- Advertisement -

ಮನೆಯಲ್ಲಿ ಕೆಲಸಕ್ಕಿದ್ದ ಬುಡಕಟ್ಟು ಸಮುದಾಯದ ಯುವತಿ ಸುನೀತಾ ಖಾಖಾ ಅವರಿಗೆ ಕ್ರೂರವಾಗಿ ಚಿತ್ರಹಿಂಸೆ ನೀಡಿದ ಜಾರ್ಖಂಡ್‌ನ ಬಿಜೆಪಿ ನಾಯಕಿ ಸೀಮಾ ಪಾತ್ರಾ ಅವರನ್ನು ರಾಂಚಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಆರೋಪಿ ಸೀಮಾ ಮನೆಯಲ್ಲಿ 8 ವರ್ಷಗಳ ಕಾಲ ಮನೆಗೆಲಸ ಮಾಡಿಕೊಂಡಿದ್ದ ಯುವತಿಯನ್ನು ನಾಲಗೆಯಲ್ಲಿ ಮೂತ್ರವನ್ನು ನೆಕ್ಕುವಂತೆ ಮಾಡುತ್ತಿದ್ದುದು ಮಾತ್ರವಲ್ಲದೆ, ನಿರಂತರವಾಗಿ ಹಲ್ಲೆ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ. ಸಂತ್ರಸ್ರೆ ಯುವತಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಅವರ ಹಲ್ಲು ಕೂಡಾ ಮುರಿಯಲಾಗಿದೆ.

ಸೀಮಾ ಪಾತ್ರಾ ಅವರು ಬಿಜೆಪಿಯ ಮಹಿಳಾ ವಿಭಾಗದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದಾರೆ. ಅವರ ಪತಿ ಮಹೇಶ್ವರ್ ಪಾತ್ರಾ ನಿವೃತ್ತ ಐಎಎಸ್ ಅಧಿಕಾರಿ ಆಗಿದ್ದಾರೆ. ಸೀಮಾ ಅವರು ತನ್ನ ಫೇ‌ಸ್‌ಬುಕ್ ಖಾತೆಯಲ್ಲಿ,“ಬೇಟಿ ಬಚಾವೋ – ಬೇಟಿ ಪಢಾವೋ ರಾಜ್ಯ ಸಂಚಾಲಕಿ ಮತ್ತು ಜಾರ್ಖಂಡ್ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ” ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತ್ರಸ್ತೆ ಬುಡಕಟ್ಟು ಸಮುದಾಯದ ಯುವತಿಯು ಬಿಜೆಪಿ ನಾಯಕಿ ತನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಹೇಳಿರುವ ವಿಡಿಯೊ ವೈರಲ್ ಆದ ನಂತರ ಜಾರ್ಖಂಡ್ ಬಿಜೆಪಿ ಮುಖ್ಯಸ್ಥ ದೀಪಕ್ ಪ್ರಕಾಶ್ ಅವರು ಸೀಮಾ ವಿರುದ್ಧ ಕ್ರಮಕ್ಕೆ ಆದೇಶಿಸಿದ್ದಾರೆ.

ಇದನ್ನೂ ಓದಿ: ‘ನಾಲಗೆಯಲ್ಲಿ ನೆಲ ಸ್ವಚ್ಛ ಮಾಡಿಸುತ್ತಿದ್ದರು’: ಬುಡಕಟ್ಟು ಯುವತಿಯನ್ನು 8 ವರ್ಷ ಬಂಧಿಸಿಟ್ಟು ಚಿತ್ರಹಿಂಸೆ ನೀಡುತ್ತಿದ್ದ BJP ನಾಯಕಿ

ವೈರಲ್ ಆಗಿರುವ ವಿಡಿಯೊದಲ್ಲಿ, ಸಂತ್ರಸ್ತೆ ಸುನೀತಾ ಅವರ ಸ್ಥಿತಿಯು ಭಯಾನಕವಾಗಿರುವುದು ಕಂಡು ಬಂದಿದೆ. ಯುವತಿಯು ಆಸ್ಪತ್ರೆಯ ಹಾಸಿಗೆಯಲ್ಲಿದ್ದು, ಅವರ ಹಲವಾರು ಹಲ್ಲುಗಳು ಕಾಣೆಯಾಗಿವೆ. ಅಲ್ಲದೆ ಅವರು ಕುಳಿತುಕೊಳ್ಳಲು ಕೂಡಾ ಅಸಮರ್ಥ ಸ್ಥಿತಿಯಲ್ಲಿದ್ದಾರೆ. ಜೊತೆಗೆ ಅವರ ದೇಹದ ಮೇಲಿನ ಗಾಯದ ಗುರುತುಗಳು ಅವರ ಮೇಲೆ ನಿರಂತರ ದಾಳಿ ನಡೆದಿರುವುದು ಸೂಚಿಸುತ್ತವೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ಸುನಿತಾ ಅವರ ಪರಿಸ್ಥಿತಿಯ ವಿಡಿಯೊ ವೈರಲ್ ಆಗುತ್ತಿದ್ದಂತೆ, ಸೀಮಾ ಪಾತ್ರ ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

29 ವರ್ಷದ ಸುನೀತಾ ಅವರು ಜಾರ್ಖಂಡ್‌ನ ಗುಮ್ಲಾ ಮೂಲದವರಾಗಿದ್ದು, ಸುಮಾರು 10 ವರ್ಷಗಳ ಹಿಂದೆ ಸೀಮಾ ಪಾತ್ರಾ ಅವರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಅವರ ಮಗಳು ವತ್ಸಲಾ ಕೆಲಸದ ನಿಮಿತ್ತ ದೆಹಲಿಗೆ ತೆರಳುತ್ತಿದ್ದಾಗ ಕೂಡಾ ಸುನೀತಾ ಅವರ ಸಹಾಯಕ್ಕೆ ತೆರಳಿದ್ದರು. ಸುಮಾರು ನಾಲ್ಕು ವರ್ಷಗಳ ಹಿಂದೆ ವತ್ಸಲಾ ಮತ್ತು ಸುನೀತಾ ರಾಂಚಿಗೆ ಮರಳಿದ್ದರು.

ಇದನ್ನೂ ಓದಿ:  ಬುಡಕಟ್ಟು ಯುವತಿಗೆ ಚಿತ್ರಹಿಂಸೆ: ಆರೋಪಿ ಸೀಮಾ ಪಾತ್ರಾ ಬಿಜೆಪಿಯಿಂದ ಅಮಾನತು

ಸುಮಾರು ಆರು ವರ್ಷಗಳಿಂದ ಸೀಮಾ ಪಾತ್ರಾ ಕ್ರೂರ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ಯುವತಿ ಹೇಳಿದ್ದಾರೆ. ಅಪಾರ ನೋವಿನಿಂದ ಮಾತನಾಡಿದ ಅವರು, ತನಗೆ ಬಿಸಿ ತವಾ ಮತ್ತು ರಾಡ್‌ಗಳಿಂದ ಥಳಿಸಿ ಹಲ್ಲುಗಳನ್ನು ಒಡೆದುಹಾಕಲಾಯಿತು ಎಂದು ವೀಡಿಯೊಗಳಲ್ಲಿ ಹೇಳಿಕೊಂಡಿದ್ದಾರೆ. ಆಕೆಗೆ ನೆಲದ ಮೇಲಿನ ಮೂತ್ರವನ್ನು ನೆಕ್ಕುವಂತೆ ಮಾಡಲಾಯಿತು ಎಂದು ಅವರು ತಿಳಿಸಿದ್ದಾರೆ.

ಈ ಚಿತ್ರಹಿಂಸೆಯನ್ನು ತನಗೆ ಶಿಕ್ಷೆಯಾಗಿ ನೀಡಲಾಗಿದ್ದು, ಆದರೆ ತಾನು ಮಾಡಿರುವ ತಪ್ಪುಗಳೇನು ಎಂದು ತನಗೆ ತಿಳಿದಿರಲಿಲ್ಲ ಎಂದು ಸುನೀತಾ ಹೇಳಿದ್ದಾರೆ.

ಸೀಮಾ ಪಾತ್ರಾ ಅವರ ಮಗ ಆಯುಷ್ಮಾನ್ ತನಗೆ ಸಹಾಯ ಮಾಡಿದ್ದಾನೆ ಎಂದು ಯುವತಿ ಹೇಳಿದ್ದು,“ನಾನು ಬದುಕಿರುವುದು ಅವನಿಂದ ಮಾತ್ರ” ಎಂದು ಅವರು ಹೇಳಿದ್ದಾರೆ. ತನ್ನ ಸಹೋದರಿ ಮತ್ತು ಸೋದರ ಮಾವನಿಗೆ ಈ ಕಷ್ಟಗಳನ್ನು ಹೇಳಿದ್ದರೂ ಅವರು ಇದರ ಬಗ್ಗೆ ಚಿಂತಿತರಾಗಿರಲಿಲ್ಲ ಎಂದು ಅವರು ಹೇಳಿದ್ದಾರೆ. ವೀಡಿಯೊದಲ್ಲಿ ಸುನಿತಾ ಅವರು ತಾನು ಚೇತರಿಸಿಕೊಂಡರೆ ಅಧ್ಯಯನ ಮಾಡುವುದಾಗಿ ಹೇಳಿರುವುದು ದಾಖಲಾಗಿದೆ.

ಇದನ್ನೂ ಓದಿ: ಮಾತು ಮರೆತ ಭಾರತ; ಊನಾ ಫೈಲ್: ಆರೆಸ್ಸೆಸ್-ಬಿಜೆಪಿಯ ದನದ ರಾಜಕಾರಣ ಮತ್ತು ದಲಿತರು

ಸೀಮಾ ಅವರು ಮಗ ಆಯುಷ್ಮಾನ್ ಅವರು ಸುನೀತಾ ಅವರ ಪರಿಸ್ಥಿತಿಯನ್ನು ಸ್ನೇಹಿತರಿಗೆ ವಿವರಿಸಿ ಸಹಾಯ ಕೇಳಿದ್ದರು. ನಂತರ ಆತನ ಸ್ನೇಹಿತ ಪೊಲೀಸ್ ದೂರು ದಾಖಲಿಸಿದ್ದು, ಸುನೀತಾರನ್ನು ರಕ್ಷಿಸಲಾಗಿದೆ. ಪಸ್ತುತ ಅವರು ರಾಂಚಿಯ ರಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...