Homeಮುಖಪುಟಬುಡಕಟ್ಟು ಯುವತಿಗೆ ಚಿತ್ರಹಿಂಸೆ ನೀಡಿದ ಬಿಜೆಪಿ ನಾಯಕಿಯ ಬಂಧನ

ಬುಡಕಟ್ಟು ಯುವತಿಗೆ ಚಿತ್ರಹಿಂಸೆ ನೀಡಿದ ಬಿಜೆಪಿ ನಾಯಕಿಯ ಬಂಧನ

ಯುವತಿಯನ್ನು ನಾಲಗೆಯಲ್ಲಿ ಮೂತ್ರವನ್ನು ನೆಕ್ಕುವಂತೆ ಮಾಡುತ್ತಿದ್ದುದು ಮಾತ್ರವಲ್ಲದೆ, ನಿರಂತರವಾಗಿ ಹಲ್ಲೆ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ

- Advertisement -
- Advertisement -

ಮನೆಯಲ್ಲಿ ಕೆಲಸಕ್ಕಿದ್ದ ಬುಡಕಟ್ಟು ಸಮುದಾಯದ ಯುವತಿ ಸುನೀತಾ ಖಾಖಾ ಅವರಿಗೆ ಕ್ರೂರವಾಗಿ ಚಿತ್ರಹಿಂಸೆ ನೀಡಿದ ಜಾರ್ಖಂಡ್‌ನ ಬಿಜೆಪಿ ನಾಯಕಿ ಸೀಮಾ ಪಾತ್ರಾ ಅವರನ್ನು ರಾಂಚಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಆರೋಪಿ ಸೀಮಾ ಮನೆಯಲ್ಲಿ 8 ವರ್ಷಗಳ ಕಾಲ ಮನೆಗೆಲಸ ಮಾಡಿಕೊಂಡಿದ್ದ ಯುವತಿಯನ್ನು ನಾಲಗೆಯಲ್ಲಿ ಮೂತ್ರವನ್ನು ನೆಕ್ಕುವಂತೆ ಮಾಡುತ್ತಿದ್ದುದು ಮಾತ್ರವಲ್ಲದೆ, ನಿರಂತರವಾಗಿ ಹಲ್ಲೆ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ. ಸಂತ್ರಸ್ರೆ ಯುವತಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಅವರ ಹಲ್ಲು ಕೂಡಾ ಮುರಿಯಲಾಗಿದೆ.

ಸೀಮಾ ಪಾತ್ರಾ ಅವರು ಬಿಜೆಪಿಯ ಮಹಿಳಾ ವಿಭಾಗದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದಾರೆ. ಅವರ ಪತಿ ಮಹೇಶ್ವರ್ ಪಾತ್ರಾ ನಿವೃತ್ತ ಐಎಎಸ್ ಅಧಿಕಾರಿ ಆಗಿದ್ದಾರೆ. ಸೀಮಾ ಅವರು ತನ್ನ ಫೇ‌ಸ್‌ಬುಕ್ ಖಾತೆಯಲ್ಲಿ,“ಬೇಟಿ ಬಚಾವೋ – ಬೇಟಿ ಪಢಾವೋ ರಾಜ್ಯ ಸಂಚಾಲಕಿ ಮತ್ತು ಜಾರ್ಖಂಡ್ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ” ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತ್ರಸ್ತೆ ಬುಡಕಟ್ಟು ಸಮುದಾಯದ ಯುವತಿಯು ಬಿಜೆಪಿ ನಾಯಕಿ ತನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಹೇಳಿರುವ ವಿಡಿಯೊ ವೈರಲ್ ಆದ ನಂತರ ಜಾರ್ಖಂಡ್ ಬಿಜೆಪಿ ಮುಖ್ಯಸ್ಥ ದೀಪಕ್ ಪ್ರಕಾಶ್ ಅವರು ಸೀಮಾ ವಿರುದ್ಧ ಕ್ರಮಕ್ಕೆ ಆದೇಶಿಸಿದ್ದಾರೆ.

ಇದನ್ನೂ ಓದಿ: ‘ನಾಲಗೆಯಲ್ಲಿ ನೆಲ ಸ್ವಚ್ಛ ಮಾಡಿಸುತ್ತಿದ್ದರು’: ಬುಡಕಟ್ಟು ಯುವತಿಯನ್ನು 8 ವರ್ಷ ಬಂಧಿಸಿಟ್ಟು ಚಿತ್ರಹಿಂಸೆ ನೀಡುತ್ತಿದ್ದ BJP ನಾಯಕಿ

ವೈರಲ್ ಆಗಿರುವ ವಿಡಿಯೊದಲ್ಲಿ, ಸಂತ್ರಸ್ತೆ ಸುನೀತಾ ಅವರ ಸ್ಥಿತಿಯು ಭಯಾನಕವಾಗಿರುವುದು ಕಂಡು ಬಂದಿದೆ. ಯುವತಿಯು ಆಸ್ಪತ್ರೆಯ ಹಾಸಿಗೆಯಲ್ಲಿದ್ದು, ಅವರ ಹಲವಾರು ಹಲ್ಲುಗಳು ಕಾಣೆಯಾಗಿವೆ. ಅಲ್ಲದೆ ಅವರು ಕುಳಿತುಕೊಳ್ಳಲು ಕೂಡಾ ಅಸಮರ್ಥ ಸ್ಥಿತಿಯಲ್ಲಿದ್ದಾರೆ. ಜೊತೆಗೆ ಅವರ ದೇಹದ ಮೇಲಿನ ಗಾಯದ ಗುರುತುಗಳು ಅವರ ಮೇಲೆ ನಿರಂತರ ದಾಳಿ ನಡೆದಿರುವುದು ಸೂಚಿಸುತ್ತವೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ಸುನಿತಾ ಅವರ ಪರಿಸ್ಥಿತಿಯ ವಿಡಿಯೊ ವೈರಲ್ ಆಗುತ್ತಿದ್ದಂತೆ, ಸೀಮಾ ಪಾತ್ರ ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

29 ವರ್ಷದ ಸುನೀತಾ ಅವರು ಜಾರ್ಖಂಡ್‌ನ ಗುಮ್ಲಾ ಮೂಲದವರಾಗಿದ್ದು, ಸುಮಾರು 10 ವರ್ಷಗಳ ಹಿಂದೆ ಸೀಮಾ ಪಾತ್ರಾ ಅವರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಅವರ ಮಗಳು ವತ್ಸಲಾ ಕೆಲಸದ ನಿಮಿತ್ತ ದೆಹಲಿಗೆ ತೆರಳುತ್ತಿದ್ದಾಗ ಕೂಡಾ ಸುನೀತಾ ಅವರ ಸಹಾಯಕ್ಕೆ ತೆರಳಿದ್ದರು. ಸುಮಾರು ನಾಲ್ಕು ವರ್ಷಗಳ ಹಿಂದೆ ವತ್ಸಲಾ ಮತ್ತು ಸುನೀತಾ ರಾಂಚಿಗೆ ಮರಳಿದ್ದರು.

ಇದನ್ನೂ ಓದಿ:  ಬುಡಕಟ್ಟು ಯುವತಿಗೆ ಚಿತ್ರಹಿಂಸೆ: ಆರೋಪಿ ಸೀಮಾ ಪಾತ್ರಾ ಬಿಜೆಪಿಯಿಂದ ಅಮಾನತು

ಸುಮಾರು ಆರು ವರ್ಷಗಳಿಂದ ಸೀಮಾ ಪಾತ್ರಾ ಕ್ರೂರ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ಯುವತಿ ಹೇಳಿದ್ದಾರೆ. ಅಪಾರ ನೋವಿನಿಂದ ಮಾತನಾಡಿದ ಅವರು, ತನಗೆ ಬಿಸಿ ತವಾ ಮತ್ತು ರಾಡ್‌ಗಳಿಂದ ಥಳಿಸಿ ಹಲ್ಲುಗಳನ್ನು ಒಡೆದುಹಾಕಲಾಯಿತು ಎಂದು ವೀಡಿಯೊಗಳಲ್ಲಿ ಹೇಳಿಕೊಂಡಿದ್ದಾರೆ. ಆಕೆಗೆ ನೆಲದ ಮೇಲಿನ ಮೂತ್ರವನ್ನು ನೆಕ್ಕುವಂತೆ ಮಾಡಲಾಯಿತು ಎಂದು ಅವರು ತಿಳಿಸಿದ್ದಾರೆ.

ಈ ಚಿತ್ರಹಿಂಸೆಯನ್ನು ತನಗೆ ಶಿಕ್ಷೆಯಾಗಿ ನೀಡಲಾಗಿದ್ದು, ಆದರೆ ತಾನು ಮಾಡಿರುವ ತಪ್ಪುಗಳೇನು ಎಂದು ತನಗೆ ತಿಳಿದಿರಲಿಲ್ಲ ಎಂದು ಸುನೀತಾ ಹೇಳಿದ್ದಾರೆ.

ಸೀಮಾ ಪಾತ್ರಾ ಅವರ ಮಗ ಆಯುಷ್ಮಾನ್ ತನಗೆ ಸಹಾಯ ಮಾಡಿದ್ದಾನೆ ಎಂದು ಯುವತಿ ಹೇಳಿದ್ದು,“ನಾನು ಬದುಕಿರುವುದು ಅವನಿಂದ ಮಾತ್ರ” ಎಂದು ಅವರು ಹೇಳಿದ್ದಾರೆ. ತನ್ನ ಸಹೋದರಿ ಮತ್ತು ಸೋದರ ಮಾವನಿಗೆ ಈ ಕಷ್ಟಗಳನ್ನು ಹೇಳಿದ್ದರೂ ಅವರು ಇದರ ಬಗ್ಗೆ ಚಿಂತಿತರಾಗಿರಲಿಲ್ಲ ಎಂದು ಅವರು ಹೇಳಿದ್ದಾರೆ. ವೀಡಿಯೊದಲ್ಲಿ ಸುನಿತಾ ಅವರು ತಾನು ಚೇತರಿಸಿಕೊಂಡರೆ ಅಧ್ಯಯನ ಮಾಡುವುದಾಗಿ ಹೇಳಿರುವುದು ದಾಖಲಾಗಿದೆ.

ಇದನ್ನೂ ಓದಿ: ಮಾತು ಮರೆತ ಭಾರತ; ಊನಾ ಫೈಲ್: ಆರೆಸ್ಸೆಸ್-ಬಿಜೆಪಿಯ ದನದ ರಾಜಕಾರಣ ಮತ್ತು ದಲಿತರು

ಸೀಮಾ ಅವರು ಮಗ ಆಯುಷ್ಮಾನ್ ಅವರು ಸುನೀತಾ ಅವರ ಪರಿಸ್ಥಿತಿಯನ್ನು ಸ್ನೇಹಿತರಿಗೆ ವಿವರಿಸಿ ಸಹಾಯ ಕೇಳಿದ್ದರು. ನಂತರ ಆತನ ಸ್ನೇಹಿತ ಪೊಲೀಸ್ ದೂರು ದಾಖಲಿಸಿದ್ದು, ಸುನೀತಾರನ್ನು ರಕ್ಷಿಸಲಾಗಿದೆ. ಪಸ್ತುತ ಅವರು ರಾಂಚಿಯ ರಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...