Homeಮುಖಪುಟಬುಡಕಟ್ಟು ಯುವತಿಗೆ ಚಿತ್ರಹಿಂಸೆ ನೀಡಿದ ಬಿಜೆಪಿ ನಾಯಕಿಯ ಬಂಧನ

ಬುಡಕಟ್ಟು ಯುವತಿಗೆ ಚಿತ್ರಹಿಂಸೆ ನೀಡಿದ ಬಿಜೆಪಿ ನಾಯಕಿಯ ಬಂಧನ

ಯುವತಿಯನ್ನು ನಾಲಗೆಯಲ್ಲಿ ಮೂತ್ರವನ್ನು ನೆಕ್ಕುವಂತೆ ಮಾಡುತ್ತಿದ್ದುದು ಮಾತ್ರವಲ್ಲದೆ, ನಿರಂತರವಾಗಿ ಹಲ್ಲೆ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ

- Advertisement -
- Advertisement -

ಮನೆಯಲ್ಲಿ ಕೆಲಸಕ್ಕಿದ್ದ ಬುಡಕಟ್ಟು ಸಮುದಾಯದ ಯುವತಿ ಸುನೀತಾ ಖಾಖಾ ಅವರಿಗೆ ಕ್ರೂರವಾಗಿ ಚಿತ್ರಹಿಂಸೆ ನೀಡಿದ ಜಾರ್ಖಂಡ್‌ನ ಬಿಜೆಪಿ ನಾಯಕಿ ಸೀಮಾ ಪಾತ್ರಾ ಅವರನ್ನು ರಾಂಚಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಆರೋಪಿ ಸೀಮಾ ಮನೆಯಲ್ಲಿ 8 ವರ್ಷಗಳ ಕಾಲ ಮನೆಗೆಲಸ ಮಾಡಿಕೊಂಡಿದ್ದ ಯುವತಿಯನ್ನು ನಾಲಗೆಯಲ್ಲಿ ಮೂತ್ರವನ್ನು ನೆಕ್ಕುವಂತೆ ಮಾಡುತ್ತಿದ್ದುದು ಮಾತ್ರವಲ್ಲದೆ, ನಿರಂತರವಾಗಿ ಹಲ್ಲೆ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ. ಸಂತ್ರಸ್ರೆ ಯುವತಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಅವರ ಹಲ್ಲು ಕೂಡಾ ಮುರಿಯಲಾಗಿದೆ.

ಸೀಮಾ ಪಾತ್ರಾ ಅವರು ಬಿಜೆಪಿಯ ಮಹಿಳಾ ವಿಭಾಗದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದಾರೆ. ಅವರ ಪತಿ ಮಹೇಶ್ವರ್ ಪಾತ್ರಾ ನಿವೃತ್ತ ಐಎಎಸ್ ಅಧಿಕಾರಿ ಆಗಿದ್ದಾರೆ. ಸೀಮಾ ಅವರು ತನ್ನ ಫೇ‌ಸ್‌ಬುಕ್ ಖಾತೆಯಲ್ಲಿ,“ಬೇಟಿ ಬಚಾವೋ – ಬೇಟಿ ಪಢಾವೋ ರಾಜ್ಯ ಸಂಚಾಲಕಿ ಮತ್ತು ಜಾರ್ಖಂಡ್ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ” ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತ್ರಸ್ತೆ ಬುಡಕಟ್ಟು ಸಮುದಾಯದ ಯುವತಿಯು ಬಿಜೆಪಿ ನಾಯಕಿ ತನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಹೇಳಿರುವ ವಿಡಿಯೊ ವೈರಲ್ ಆದ ನಂತರ ಜಾರ್ಖಂಡ್ ಬಿಜೆಪಿ ಮುಖ್ಯಸ್ಥ ದೀಪಕ್ ಪ್ರಕಾಶ್ ಅವರು ಸೀಮಾ ವಿರುದ್ಧ ಕ್ರಮಕ್ಕೆ ಆದೇಶಿಸಿದ್ದಾರೆ.

ಇದನ್ನೂ ಓದಿ: ‘ನಾಲಗೆಯಲ್ಲಿ ನೆಲ ಸ್ವಚ್ಛ ಮಾಡಿಸುತ್ತಿದ್ದರು’: ಬುಡಕಟ್ಟು ಯುವತಿಯನ್ನು 8 ವರ್ಷ ಬಂಧಿಸಿಟ್ಟು ಚಿತ್ರಹಿಂಸೆ ನೀಡುತ್ತಿದ್ದ BJP ನಾಯಕಿ

ವೈರಲ್ ಆಗಿರುವ ವಿಡಿಯೊದಲ್ಲಿ, ಸಂತ್ರಸ್ತೆ ಸುನೀತಾ ಅವರ ಸ್ಥಿತಿಯು ಭಯಾನಕವಾಗಿರುವುದು ಕಂಡು ಬಂದಿದೆ. ಯುವತಿಯು ಆಸ್ಪತ್ರೆಯ ಹಾಸಿಗೆಯಲ್ಲಿದ್ದು, ಅವರ ಹಲವಾರು ಹಲ್ಲುಗಳು ಕಾಣೆಯಾಗಿವೆ. ಅಲ್ಲದೆ ಅವರು ಕುಳಿತುಕೊಳ್ಳಲು ಕೂಡಾ ಅಸಮರ್ಥ ಸ್ಥಿತಿಯಲ್ಲಿದ್ದಾರೆ. ಜೊತೆಗೆ ಅವರ ದೇಹದ ಮೇಲಿನ ಗಾಯದ ಗುರುತುಗಳು ಅವರ ಮೇಲೆ ನಿರಂತರ ದಾಳಿ ನಡೆದಿರುವುದು ಸೂಚಿಸುತ್ತವೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ಸುನಿತಾ ಅವರ ಪರಿಸ್ಥಿತಿಯ ವಿಡಿಯೊ ವೈರಲ್ ಆಗುತ್ತಿದ್ದಂತೆ, ಸೀಮಾ ಪಾತ್ರ ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

29 ವರ್ಷದ ಸುನೀತಾ ಅವರು ಜಾರ್ಖಂಡ್‌ನ ಗುಮ್ಲಾ ಮೂಲದವರಾಗಿದ್ದು, ಸುಮಾರು 10 ವರ್ಷಗಳ ಹಿಂದೆ ಸೀಮಾ ಪಾತ್ರಾ ಅವರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಅವರ ಮಗಳು ವತ್ಸಲಾ ಕೆಲಸದ ನಿಮಿತ್ತ ದೆಹಲಿಗೆ ತೆರಳುತ್ತಿದ್ದಾಗ ಕೂಡಾ ಸುನೀತಾ ಅವರ ಸಹಾಯಕ್ಕೆ ತೆರಳಿದ್ದರು. ಸುಮಾರು ನಾಲ್ಕು ವರ್ಷಗಳ ಹಿಂದೆ ವತ್ಸಲಾ ಮತ್ತು ಸುನೀತಾ ರಾಂಚಿಗೆ ಮರಳಿದ್ದರು.

ಇದನ್ನೂ ಓದಿ:  ಬುಡಕಟ್ಟು ಯುವತಿಗೆ ಚಿತ್ರಹಿಂಸೆ: ಆರೋಪಿ ಸೀಮಾ ಪಾತ್ರಾ ಬಿಜೆಪಿಯಿಂದ ಅಮಾನತು

ಸುಮಾರು ಆರು ವರ್ಷಗಳಿಂದ ಸೀಮಾ ಪಾತ್ರಾ ಕ್ರೂರ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ಯುವತಿ ಹೇಳಿದ್ದಾರೆ. ಅಪಾರ ನೋವಿನಿಂದ ಮಾತನಾಡಿದ ಅವರು, ತನಗೆ ಬಿಸಿ ತವಾ ಮತ್ತು ರಾಡ್‌ಗಳಿಂದ ಥಳಿಸಿ ಹಲ್ಲುಗಳನ್ನು ಒಡೆದುಹಾಕಲಾಯಿತು ಎಂದು ವೀಡಿಯೊಗಳಲ್ಲಿ ಹೇಳಿಕೊಂಡಿದ್ದಾರೆ. ಆಕೆಗೆ ನೆಲದ ಮೇಲಿನ ಮೂತ್ರವನ್ನು ನೆಕ್ಕುವಂತೆ ಮಾಡಲಾಯಿತು ಎಂದು ಅವರು ತಿಳಿಸಿದ್ದಾರೆ.

ಈ ಚಿತ್ರಹಿಂಸೆಯನ್ನು ತನಗೆ ಶಿಕ್ಷೆಯಾಗಿ ನೀಡಲಾಗಿದ್ದು, ಆದರೆ ತಾನು ಮಾಡಿರುವ ತಪ್ಪುಗಳೇನು ಎಂದು ತನಗೆ ತಿಳಿದಿರಲಿಲ್ಲ ಎಂದು ಸುನೀತಾ ಹೇಳಿದ್ದಾರೆ.

ಸೀಮಾ ಪಾತ್ರಾ ಅವರ ಮಗ ಆಯುಷ್ಮಾನ್ ತನಗೆ ಸಹಾಯ ಮಾಡಿದ್ದಾನೆ ಎಂದು ಯುವತಿ ಹೇಳಿದ್ದು,“ನಾನು ಬದುಕಿರುವುದು ಅವನಿಂದ ಮಾತ್ರ” ಎಂದು ಅವರು ಹೇಳಿದ್ದಾರೆ. ತನ್ನ ಸಹೋದರಿ ಮತ್ತು ಸೋದರ ಮಾವನಿಗೆ ಈ ಕಷ್ಟಗಳನ್ನು ಹೇಳಿದ್ದರೂ ಅವರು ಇದರ ಬಗ್ಗೆ ಚಿಂತಿತರಾಗಿರಲಿಲ್ಲ ಎಂದು ಅವರು ಹೇಳಿದ್ದಾರೆ. ವೀಡಿಯೊದಲ್ಲಿ ಸುನಿತಾ ಅವರು ತಾನು ಚೇತರಿಸಿಕೊಂಡರೆ ಅಧ್ಯಯನ ಮಾಡುವುದಾಗಿ ಹೇಳಿರುವುದು ದಾಖಲಾಗಿದೆ.

ಇದನ್ನೂ ಓದಿ: ಮಾತು ಮರೆತ ಭಾರತ; ಊನಾ ಫೈಲ್: ಆರೆಸ್ಸೆಸ್-ಬಿಜೆಪಿಯ ದನದ ರಾಜಕಾರಣ ಮತ್ತು ದಲಿತರು

ಸೀಮಾ ಅವರು ಮಗ ಆಯುಷ್ಮಾನ್ ಅವರು ಸುನೀತಾ ಅವರ ಪರಿಸ್ಥಿತಿಯನ್ನು ಸ್ನೇಹಿತರಿಗೆ ವಿವರಿಸಿ ಸಹಾಯ ಕೇಳಿದ್ದರು. ನಂತರ ಆತನ ಸ್ನೇಹಿತ ಪೊಲೀಸ್ ದೂರು ದಾಖಲಿಸಿದ್ದು, ಸುನೀತಾರನ್ನು ರಕ್ಷಿಸಲಾಗಿದೆ. ಪಸ್ತುತ ಅವರು ರಾಂಚಿಯ ರಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...