Homeಮುಖಪುಟಅಕ್ರಮ ಕಲ್ಲುಗಣಿಗಾರಿಕೆ ಆರೋಪದಲ್ಲಿ ಬಿಜೆಪಿ ಮುಖಂಡನ ಬಂಧನ; ಪೊಲೀಸರಿಗೆ ಧಮಕಿ ಹಾಕಿದ ಶಾಸಕ ಪೂಂಜಾ?

ಅಕ್ರಮ ಕಲ್ಲುಗಣಿಗಾರಿಕೆ ಆರೋಪದಲ್ಲಿ ಬಿಜೆಪಿ ಮುಖಂಡನ ಬಂಧನ; ಪೊಲೀಸರಿಗೆ ಧಮಕಿ ಹಾಕಿದ ಶಾಸಕ ಪೂಂಜಾ?

- Advertisement -
- Advertisement -

ಅಕ್ರಮ ಕಲ್ಲು ಗಣಿಕಾರಿಕೆ ಪ್ರಕರಣದಲ್ಲಿ ಬೆಳ್ತಂಗಡಿ ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್‌ ಶೆಟ್ಟಿ ಸೇರಿದಂತೆ, ಆತನ ಸಹಚರರನ್ನು ಪೊಲೀಸರು ಬಂಧಿಸಿದ್ದು, ಶಾಸಕ ಹರೀಶ್ ಪೂಂಜಾ ತಮ್ಮ ಬೆಂಬಲಿಗರೊಂದಿಗೆ ಶನಿವಾರ ರಾತ್ರಿ ಬೆಳ್ತಂಗಡಿ ಠಾಣೆಗೆ ತೆರಳಿ ಪೊಲೀಸ್ ಅಧಿಕಾರಿಗಳಿಗೆ ಧಮಕಿ ಹಾಕಿದ್ದು, ಆ ವಿಡಿಯಿವನ್ನು ಕಾಂಗ್ರೆಸ್‌ ಹಂಚಿಕೊಂಡಿದೆ.

“ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಲು ಬಿಜೆಪಿ ಹಲವು ಪ್ರಯತ್ನಗಳನ್ನು ನಡೆಸುತ್ತಿದೆ.
ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸ್ ಅಧಿಕಾರಿಗಳಿಗೆ ಧಮಕಿ ಹಾಕುವ ಮೂಲಕ ಬಿಜೆಪಿಗರು ಎಂದಿಗೂ ಕ್ರಿಮಿನಲ್ ಗಳ ರಕ್ಷಕರು ಎಂಬುದನ್ನು ಸಾಬೀತು ಮಾಡಿದ್ದಾರೆ.
ಪೊಲೀಸರ ನೈತಿಕ ಸ್ಥೈರ್ಯವನ್ನು ಕಸಿಯುತ್ತ, ಕ್ರಿಮಿನಲ್ ಗಳಿಗೆ ಬೆಂಬಲ ನೀಡುತ್ತ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತಹ ಬಿಜೆಪಿ ಕೆಲಸಗಳಿಗೆ ಕಡಿವಾಣ ಹಾಕುವುದಕ್ಕೆ ನಮ್ಮ ಸರ್ಕಾರ ಸಮರ್ಥವಾಗಿದೆ” ಎಂದು ಕಾಂಗ್ರೆಸ್ ತನ್ನ ಸಾಮಾಜಿಕ ಜಾಲತಾಣ ಖಾತೆಗಳನ್ನು ಪೋಸ್ಟ್‌ ಮಾಡಿದೆ.

ತಾಲ್ಲೂಕಿನ ಮೆಲಂತಬೆಟ್ಟು ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಕ್ವಾರೆಗೆ ಶನಿವಾರ ಸಂಜೆ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಪೊಲೀಸರ ತಂಡ ಜಂಟಿ ದಾಳಿ ನಡೆಸಿ, ಕಲ್ಲು ಕ್ವಾರಿಯಲ್ಲಿನ ಸ್ಫೋಟಕಗಳು ವಶಪಡಿಕೊಂಡಿದ್ದರು. ಜೊತೆಗೆ, ಸಂಬಂಧಪಟ್ಟ ಆರೋಪಿಗಳನ್ನು ಬಂಧಿಸಿದ್ದರು. ಬಿಜೆಪಿ ತಾಲ್ಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್‌ ಶೆಟ್ಟಿ ಈ ಅಕ್ರಮ ಕಲ್ಲು ಕ್ವಾರಿ ನಡೆಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ತಮ್ಮ ಪಕ್ಷದ ಕಾರ್ಯಕರ್ತನನ್ನು ಬಂಧಿಸಿದ ಸುದ್ದಿ ತಿಳಿಯುತ್ತಿದ್ದಂತೆಯೇ, ಠಾಣೆಗೆ ಧಾವಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ತಮ್ಮ ಬೆಂಬಲಿಗರೊಂದಿಗೆ ಪೊಲೀಸ್ ಠಾಣೆಯಲ್ಲೇ ಪ್ರತಿಭಟನೆ ನಡೆಸುವ ನೆಪದಲ್ಲಿ ಪೊಲೀಸರು ಧಮಕಿ ಹಾಕಿದ್ದಾರೆ. ಅಕ್ರಮ ಕಲ್ಲು ಕ್ವಾರಿ ನಡೆಸುತ್ತಿದ್ದ ಆರೋಪ ಹೊತ್ತಿರುವ ಬಂಧಿತ ಶಶಿರಾಜ್ ಶೆಟ್ಟಿಯನ್ನು ಬಿಡುಗಡೆ ಮಾಡುವಂತೆ ಧಮಕಿ ಹಾಕಿದ್ದಾರೆ ಎನ್ನಲಾಗಿದೆ.

ಮೇಲಂತಬೆಟ್ಟು ಮೂಡಲ ನಿವಾಸಿ ಸೂರಪ್ಪ ಪೂಜಾರಿ ಎಂಬವರ ಜಾಗದಲ್ಲಿ ಈ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿತ್ತು ಎನ್ನಲಾಗಿದೆ. ಬಿಜೆಪಿ ಮುಖಂಡ ಪ್ರಮೋದ್ ದಿಡುಪೆ ಹಾಗೂ ಬಿಜೆಪಿ ಯುವ ಮೋರ್ಚಾ ತಾಲ್ಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಇಬ್ಬರೂ ನಡೆಸುತ್ತಿದ್ದರೆಂದು ಹೇಳಲಾಗಿದೆ. ಈ ಕ್ವಾರಿಯನ್ನು ಯಾವುದೇ ಸೂಕ್ತ ದಾಖಲೆಗಳಿಲ್ಲದೇ ನಡೆಸಲಾಗುತ್ತಿತ್ತು ಎಂಬ ದೂರುಗಳ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು ಎನ್ನಲಾಗಿದ್ದು, ಸ್ಥಳದಲ್ಲಿದ್ದ ಶಶಿರಾಜ್‌ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಒಂದು ಹಿಟಾಚಿ, ಒಂದು ಕಂಪ್ರೆಸರ್ ಮೆಷಿನ್, ಒಂದು ಕಾರು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಬೆಂಬಲಕ್ಕೆ ನಿಂತ ಸಿಟಿ ರವಿ:

ಅಕ್ರಮ ಕಲ್ಲು ಗಣಿಗಾರಿಕೆ ಆರೋಪದಲ್ಲಿ ಬಂಧಿತರಾಗಿರುವ ಆರೋಪಿ ಶಶಿರಾಜ್ ಬೆಂಬಲಿಸಿ ಮಾಜಿ ಶಾಸಕ ಸಿಟಿ ರವಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಸಕ್ರಿಯವಾಗಿರುವ ಕಾರ್ಯಕರ್ತರನ್ನು ಕೇಸ್ ದಾಖಲಿಸಿ, ಉಳಿದ ಕಾರ್ಯಕರ್ತರನ್ನು ಬೆದರಿಸುವ, ನಮ್ಮ ಕಾರ್ಯಕರ್ತರನ್ನು ಹಣಿಯಲು ಪ್ರಯತ್ನಿಸುವುದು ಕಾಂಗ್ರೆಸ್ಸಿನ ಹಳೆ ಚಾಳಿ. ಕೊಲೆ ಸುಲಿಗೆ ಮಾಡಿರುವವರನ್ನು ಬಂಧಿಸಲು ಹಿಂದೆ ಮುಂದೆ ನೋಡುವ ಕಾಂಗ್ರೆಸ್ ಸರ್ಕಾರ ಸುಳ್ಳು ಕೇಸಿನ ಆಧಾರದ ನಿನ್ನೆ ಮಧ್ಯರಾತ್ರಿ ಉಗ್ರಗಾಮಿಯನ್ನು ನಡೆಸಿಕೊಳ್ಳುವಂತೆ ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಅವರನ್ನು ಬಂಧಿಸಿದೆ. ಆಡಳಿತ ಯಂತ್ರವನ್ನು ಉಪಯೋಗಿಸಿ, ಪೊಲೀಸ್ ದೌರ್ಜನ್ಯದಿಂದ, ನಿಮ್ಮ ಕೀಳುಮಟ್ಟದ ತಂತ್ರಗಳಿಂದ ನಮ್ಮ ಕಾರ್ಯಕರ್ತರನ್ನು ಬೆದರಿಸಲು ಸಾಧ್ಯವಿಲ್ಲ. ನಮ್ಮ ಕಾರ್ಯಕರ್ತರ ಜೊತೆ ಸಂಘಟನೆ ನಿಲ್ಲಲಿದೆ, ಏನೇ ಬರಲಿ ಕಾರ್ಯಕರ್ತರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ; ನಿಕೋಬಾರ್ ದ್ವೀಪಗಳಿಗೆ ಆಗಮಿಸಿದ ನೈರುತ್ಯ ಮಾನ್ಸೂನ್; ಮೇ 31ರ ವೇಳೆಗೆ ಕೇರಳ ತಲುಪುವ ನಿರೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...