Homeಮುಖಪುಟಅಕ್ರಮ ಕಲ್ಲುಗಣಿಗಾರಿಕೆ ಆರೋಪದಲ್ಲಿ ಬಿಜೆಪಿ ಮುಖಂಡನ ಬಂಧನ; ಪೊಲೀಸರಿಗೆ ಧಮಕಿ ಹಾಕಿದ ಶಾಸಕ ಪೂಂಜಾ?

ಅಕ್ರಮ ಕಲ್ಲುಗಣಿಗಾರಿಕೆ ಆರೋಪದಲ್ಲಿ ಬಿಜೆಪಿ ಮುಖಂಡನ ಬಂಧನ; ಪೊಲೀಸರಿಗೆ ಧಮಕಿ ಹಾಕಿದ ಶಾಸಕ ಪೂಂಜಾ?

- Advertisement -
- Advertisement -

ಅಕ್ರಮ ಕಲ್ಲು ಗಣಿಕಾರಿಕೆ ಪ್ರಕರಣದಲ್ಲಿ ಬೆಳ್ತಂಗಡಿ ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್‌ ಶೆಟ್ಟಿ ಸೇರಿದಂತೆ, ಆತನ ಸಹಚರರನ್ನು ಪೊಲೀಸರು ಬಂಧಿಸಿದ್ದು, ಶಾಸಕ ಹರೀಶ್ ಪೂಂಜಾ ತಮ್ಮ ಬೆಂಬಲಿಗರೊಂದಿಗೆ ಶನಿವಾರ ರಾತ್ರಿ ಬೆಳ್ತಂಗಡಿ ಠಾಣೆಗೆ ತೆರಳಿ ಪೊಲೀಸ್ ಅಧಿಕಾರಿಗಳಿಗೆ ಧಮಕಿ ಹಾಕಿದ್ದು, ಆ ವಿಡಿಯಿವನ್ನು ಕಾಂಗ್ರೆಸ್‌ ಹಂಚಿಕೊಂಡಿದೆ.

“ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಲು ಬಿಜೆಪಿ ಹಲವು ಪ್ರಯತ್ನಗಳನ್ನು ನಡೆಸುತ್ತಿದೆ.
ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸ್ ಅಧಿಕಾರಿಗಳಿಗೆ ಧಮಕಿ ಹಾಕುವ ಮೂಲಕ ಬಿಜೆಪಿಗರು ಎಂದಿಗೂ ಕ್ರಿಮಿನಲ್ ಗಳ ರಕ್ಷಕರು ಎಂಬುದನ್ನು ಸಾಬೀತು ಮಾಡಿದ್ದಾರೆ.
ಪೊಲೀಸರ ನೈತಿಕ ಸ್ಥೈರ್ಯವನ್ನು ಕಸಿಯುತ್ತ, ಕ್ರಿಮಿನಲ್ ಗಳಿಗೆ ಬೆಂಬಲ ನೀಡುತ್ತ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತಹ ಬಿಜೆಪಿ ಕೆಲಸಗಳಿಗೆ ಕಡಿವಾಣ ಹಾಕುವುದಕ್ಕೆ ನಮ್ಮ ಸರ್ಕಾರ ಸಮರ್ಥವಾಗಿದೆ” ಎಂದು ಕಾಂಗ್ರೆಸ್ ತನ್ನ ಸಾಮಾಜಿಕ ಜಾಲತಾಣ ಖಾತೆಗಳನ್ನು ಪೋಸ್ಟ್‌ ಮಾಡಿದೆ.

ತಾಲ್ಲೂಕಿನ ಮೆಲಂತಬೆಟ್ಟು ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಕ್ವಾರೆಗೆ ಶನಿವಾರ ಸಂಜೆ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಪೊಲೀಸರ ತಂಡ ಜಂಟಿ ದಾಳಿ ನಡೆಸಿ, ಕಲ್ಲು ಕ್ವಾರಿಯಲ್ಲಿನ ಸ್ಫೋಟಕಗಳು ವಶಪಡಿಕೊಂಡಿದ್ದರು. ಜೊತೆಗೆ, ಸಂಬಂಧಪಟ್ಟ ಆರೋಪಿಗಳನ್ನು ಬಂಧಿಸಿದ್ದರು. ಬಿಜೆಪಿ ತಾಲ್ಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್‌ ಶೆಟ್ಟಿ ಈ ಅಕ್ರಮ ಕಲ್ಲು ಕ್ವಾರಿ ನಡೆಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ತಮ್ಮ ಪಕ್ಷದ ಕಾರ್ಯಕರ್ತನನ್ನು ಬಂಧಿಸಿದ ಸುದ್ದಿ ತಿಳಿಯುತ್ತಿದ್ದಂತೆಯೇ, ಠಾಣೆಗೆ ಧಾವಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ತಮ್ಮ ಬೆಂಬಲಿಗರೊಂದಿಗೆ ಪೊಲೀಸ್ ಠಾಣೆಯಲ್ಲೇ ಪ್ರತಿಭಟನೆ ನಡೆಸುವ ನೆಪದಲ್ಲಿ ಪೊಲೀಸರು ಧಮಕಿ ಹಾಕಿದ್ದಾರೆ. ಅಕ್ರಮ ಕಲ್ಲು ಕ್ವಾರಿ ನಡೆಸುತ್ತಿದ್ದ ಆರೋಪ ಹೊತ್ತಿರುವ ಬಂಧಿತ ಶಶಿರಾಜ್ ಶೆಟ್ಟಿಯನ್ನು ಬಿಡುಗಡೆ ಮಾಡುವಂತೆ ಧಮಕಿ ಹಾಕಿದ್ದಾರೆ ಎನ್ನಲಾಗಿದೆ.

ಮೇಲಂತಬೆಟ್ಟು ಮೂಡಲ ನಿವಾಸಿ ಸೂರಪ್ಪ ಪೂಜಾರಿ ಎಂಬವರ ಜಾಗದಲ್ಲಿ ಈ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿತ್ತು ಎನ್ನಲಾಗಿದೆ. ಬಿಜೆಪಿ ಮುಖಂಡ ಪ್ರಮೋದ್ ದಿಡುಪೆ ಹಾಗೂ ಬಿಜೆಪಿ ಯುವ ಮೋರ್ಚಾ ತಾಲ್ಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಇಬ್ಬರೂ ನಡೆಸುತ್ತಿದ್ದರೆಂದು ಹೇಳಲಾಗಿದೆ. ಈ ಕ್ವಾರಿಯನ್ನು ಯಾವುದೇ ಸೂಕ್ತ ದಾಖಲೆಗಳಿಲ್ಲದೇ ನಡೆಸಲಾಗುತ್ತಿತ್ತು ಎಂಬ ದೂರುಗಳ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು ಎನ್ನಲಾಗಿದ್ದು, ಸ್ಥಳದಲ್ಲಿದ್ದ ಶಶಿರಾಜ್‌ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಒಂದು ಹಿಟಾಚಿ, ಒಂದು ಕಂಪ್ರೆಸರ್ ಮೆಷಿನ್, ಒಂದು ಕಾರು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಬೆಂಬಲಕ್ಕೆ ನಿಂತ ಸಿಟಿ ರವಿ:

ಅಕ್ರಮ ಕಲ್ಲು ಗಣಿಗಾರಿಕೆ ಆರೋಪದಲ್ಲಿ ಬಂಧಿತರಾಗಿರುವ ಆರೋಪಿ ಶಶಿರಾಜ್ ಬೆಂಬಲಿಸಿ ಮಾಜಿ ಶಾಸಕ ಸಿಟಿ ರವಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಸಕ್ರಿಯವಾಗಿರುವ ಕಾರ್ಯಕರ್ತರನ್ನು ಕೇಸ್ ದಾಖಲಿಸಿ, ಉಳಿದ ಕಾರ್ಯಕರ್ತರನ್ನು ಬೆದರಿಸುವ, ನಮ್ಮ ಕಾರ್ಯಕರ್ತರನ್ನು ಹಣಿಯಲು ಪ್ರಯತ್ನಿಸುವುದು ಕಾಂಗ್ರೆಸ್ಸಿನ ಹಳೆ ಚಾಳಿ. ಕೊಲೆ ಸುಲಿಗೆ ಮಾಡಿರುವವರನ್ನು ಬಂಧಿಸಲು ಹಿಂದೆ ಮುಂದೆ ನೋಡುವ ಕಾಂಗ್ರೆಸ್ ಸರ್ಕಾರ ಸುಳ್ಳು ಕೇಸಿನ ಆಧಾರದ ನಿನ್ನೆ ಮಧ್ಯರಾತ್ರಿ ಉಗ್ರಗಾಮಿಯನ್ನು ನಡೆಸಿಕೊಳ್ಳುವಂತೆ ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಅವರನ್ನು ಬಂಧಿಸಿದೆ. ಆಡಳಿತ ಯಂತ್ರವನ್ನು ಉಪಯೋಗಿಸಿ, ಪೊಲೀಸ್ ದೌರ್ಜನ್ಯದಿಂದ, ನಿಮ್ಮ ಕೀಳುಮಟ್ಟದ ತಂತ್ರಗಳಿಂದ ನಮ್ಮ ಕಾರ್ಯಕರ್ತರನ್ನು ಬೆದರಿಸಲು ಸಾಧ್ಯವಿಲ್ಲ. ನಮ್ಮ ಕಾರ್ಯಕರ್ತರ ಜೊತೆ ಸಂಘಟನೆ ನಿಲ್ಲಲಿದೆ, ಏನೇ ಬರಲಿ ಕಾರ್ಯಕರ್ತರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ; ನಿಕೋಬಾರ್ ದ್ವೀಪಗಳಿಗೆ ಆಗಮಿಸಿದ ನೈರುತ್ಯ ಮಾನ್ಸೂನ್; ಮೇ 31ರ ವೇಳೆಗೆ ಕೇರಳ ತಲುಪುವ ನಿರೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...