Homeಮುಖಪುಟಅಕ್ರಮ ಕಲ್ಲುಗಣಿಗಾರಿಕೆ ಆರೋಪದಲ್ಲಿ ಬಿಜೆಪಿ ಮುಖಂಡನ ಬಂಧನ; ಪೊಲೀಸರಿಗೆ ಧಮಕಿ ಹಾಕಿದ ಶಾಸಕ ಪೂಂಜಾ?

ಅಕ್ರಮ ಕಲ್ಲುಗಣಿಗಾರಿಕೆ ಆರೋಪದಲ್ಲಿ ಬಿಜೆಪಿ ಮುಖಂಡನ ಬಂಧನ; ಪೊಲೀಸರಿಗೆ ಧಮಕಿ ಹಾಕಿದ ಶಾಸಕ ಪೂಂಜಾ?

- Advertisement -
- Advertisement -

ಅಕ್ರಮ ಕಲ್ಲು ಗಣಿಕಾರಿಕೆ ಪ್ರಕರಣದಲ್ಲಿ ಬೆಳ್ತಂಗಡಿ ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್‌ ಶೆಟ್ಟಿ ಸೇರಿದಂತೆ, ಆತನ ಸಹಚರರನ್ನು ಪೊಲೀಸರು ಬಂಧಿಸಿದ್ದು, ಶಾಸಕ ಹರೀಶ್ ಪೂಂಜಾ ತಮ್ಮ ಬೆಂಬಲಿಗರೊಂದಿಗೆ ಶನಿವಾರ ರಾತ್ರಿ ಬೆಳ್ತಂಗಡಿ ಠಾಣೆಗೆ ತೆರಳಿ ಪೊಲೀಸ್ ಅಧಿಕಾರಿಗಳಿಗೆ ಧಮಕಿ ಹಾಕಿದ್ದು, ಆ ವಿಡಿಯಿವನ್ನು ಕಾಂಗ್ರೆಸ್‌ ಹಂಚಿಕೊಂಡಿದೆ.

“ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಲು ಬಿಜೆಪಿ ಹಲವು ಪ್ರಯತ್ನಗಳನ್ನು ನಡೆಸುತ್ತಿದೆ.
ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸ್ ಅಧಿಕಾರಿಗಳಿಗೆ ಧಮಕಿ ಹಾಕುವ ಮೂಲಕ ಬಿಜೆಪಿಗರು ಎಂದಿಗೂ ಕ್ರಿಮಿನಲ್ ಗಳ ರಕ್ಷಕರು ಎಂಬುದನ್ನು ಸಾಬೀತು ಮಾಡಿದ್ದಾರೆ.
ಪೊಲೀಸರ ನೈತಿಕ ಸ್ಥೈರ್ಯವನ್ನು ಕಸಿಯುತ್ತ, ಕ್ರಿಮಿನಲ್ ಗಳಿಗೆ ಬೆಂಬಲ ನೀಡುತ್ತ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತಹ ಬಿಜೆಪಿ ಕೆಲಸಗಳಿಗೆ ಕಡಿವಾಣ ಹಾಕುವುದಕ್ಕೆ ನಮ್ಮ ಸರ್ಕಾರ ಸಮರ್ಥವಾಗಿದೆ” ಎಂದು ಕಾಂಗ್ರೆಸ್ ತನ್ನ ಸಾಮಾಜಿಕ ಜಾಲತಾಣ ಖಾತೆಗಳನ್ನು ಪೋಸ್ಟ್‌ ಮಾಡಿದೆ.

ತಾಲ್ಲೂಕಿನ ಮೆಲಂತಬೆಟ್ಟು ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಕ್ವಾರೆಗೆ ಶನಿವಾರ ಸಂಜೆ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಪೊಲೀಸರ ತಂಡ ಜಂಟಿ ದಾಳಿ ನಡೆಸಿ, ಕಲ್ಲು ಕ್ವಾರಿಯಲ್ಲಿನ ಸ್ಫೋಟಕಗಳು ವಶಪಡಿಕೊಂಡಿದ್ದರು. ಜೊತೆಗೆ, ಸಂಬಂಧಪಟ್ಟ ಆರೋಪಿಗಳನ್ನು ಬಂಧಿಸಿದ್ದರು. ಬಿಜೆಪಿ ತಾಲ್ಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್‌ ಶೆಟ್ಟಿ ಈ ಅಕ್ರಮ ಕಲ್ಲು ಕ್ವಾರಿ ನಡೆಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ತಮ್ಮ ಪಕ್ಷದ ಕಾರ್ಯಕರ್ತನನ್ನು ಬಂಧಿಸಿದ ಸುದ್ದಿ ತಿಳಿಯುತ್ತಿದ್ದಂತೆಯೇ, ಠಾಣೆಗೆ ಧಾವಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ತಮ್ಮ ಬೆಂಬಲಿಗರೊಂದಿಗೆ ಪೊಲೀಸ್ ಠಾಣೆಯಲ್ಲೇ ಪ್ರತಿಭಟನೆ ನಡೆಸುವ ನೆಪದಲ್ಲಿ ಪೊಲೀಸರು ಧಮಕಿ ಹಾಕಿದ್ದಾರೆ. ಅಕ್ರಮ ಕಲ್ಲು ಕ್ವಾರಿ ನಡೆಸುತ್ತಿದ್ದ ಆರೋಪ ಹೊತ್ತಿರುವ ಬಂಧಿತ ಶಶಿರಾಜ್ ಶೆಟ್ಟಿಯನ್ನು ಬಿಡುಗಡೆ ಮಾಡುವಂತೆ ಧಮಕಿ ಹಾಕಿದ್ದಾರೆ ಎನ್ನಲಾಗಿದೆ.

ಮೇಲಂತಬೆಟ್ಟು ಮೂಡಲ ನಿವಾಸಿ ಸೂರಪ್ಪ ಪೂಜಾರಿ ಎಂಬವರ ಜಾಗದಲ್ಲಿ ಈ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿತ್ತು ಎನ್ನಲಾಗಿದೆ. ಬಿಜೆಪಿ ಮುಖಂಡ ಪ್ರಮೋದ್ ದಿಡುಪೆ ಹಾಗೂ ಬಿಜೆಪಿ ಯುವ ಮೋರ್ಚಾ ತಾಲ್ಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಇಬ್ಬರೂ ನಡೆಸುತ್ತಿದ್ದರೆಂದು ಹೇಳಲಾಗಿದೆ. ಈ ಕ್ವಾರಿಯನ್ನು ಯಾವುದೇ ಸೂಕ್ತ ದಾಖಲೆಗಳಿಲ್ಲದೇ ನಡೆಸಲಾಗುತ್ತಿತ್ತು ಎಂಬ ದೂರುಗಳ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು ಎನ್ನಲಾಗಿದ್ದು, ಸ್ಥಳದಲ್ಲಿದ್ದ ಶಶಿರಾಜ್‌ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಒಂದು ಹಿಟಾಚಿ, ಒಂದು ಕಂಪ್ರೆಸರ್ ಮೆಷಿನ್, ಒಂದು ಕಾರು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಬೆಂಬಲಕ್ಕೆ ನಿಂತ ಸಿಟಿ ರವಿ:

ಅಕ್ರಮ ಕಲ್ಲು ಗಣಿಗಾರಿಕೆ ಆರೋಪದಲ್ಲಿ ಬಂಧಿತರಾಗಿರುವ ಆರೋಪಿ ಶಶಿರಾಜ್ ಬೆಂಬಲಿಸಿ ಮಾಜಿ ಶಾಸಕ ಸಿಟಿ ರವಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಸಕ್ರಿಯವಾಗಿರುವ ಕಾರ್ಯಕರ್ತರನ್ನು ಕೇಸ್ ದಾಖಲಿಸಿ, ಉಳಿದ ಕಾರ್ಯಕರ್ತರನ್ನು ಬೆದರಿಸುವ, ನಮ್ಮ ಕಾರ್ಯಕರ್ತರನ್ನು ಹಣಿಯಲು ಪ್ರಯತ್ನಿಸುವುದು ಕಾಂಗ್ರೆಸ್ಸಿನ ಹಳೆ ಚಾಳಿ. ಕೊಲೆ ಸುಲಿಗೆ ಮಾಡಿರುವವರನ್ನು ಬಂಧಿಸಲು ಹಿಂದೆ ಮುಂದೆ ನೋಡುವ ಕಾಂಗ್ರೆಸ್ ಸರ್ಕಾರ ಸುಳ್ಳು ಕೇಸಿನ ಆಧಾರದ ನಿನ್ನೆ ಮಧ್ಯರಾತ್ರಿ ಉಗ್ರಗಾಮಿಯನ್ನು ನಡೆಸಿಕೊಳ್ಳುವಂತೆ ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಅವರನ್ನು ಬಂಧಿಸಿದೆ. ಆಡಳಿತ ಯಂತ್ರವನ್ನು ಉಪಯೋಗಿಸಿ, ಪೊಲೀಸ್ ದೌರ್ಜನ್ಯದಿಂದ, ನಿಮ್ಮ ಕೀಳುಮಟ್ಟದ ತಂತ್ರಗಳಿಂದ ನಮ್ಮ ಕಾರ್ಯಕರ್ತರನ್ನು ಬೆದರಿಸಲು ಸಾಧ್ಯವಿಲ್ಲ. ನಮ್ಮ ಕಾರ್ಯಕರ್ತರ ಜೊತೆ ಸಂಘಟನೆ ನಿಲ್ಲಲಿದೆ, ಏನೇ ಬರಲಿ ಕಾರ್ಯಕರ್ತರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ; ನಿಕೋಬಾರ್ ದ್ವೀಪಗಳಿಗೆ ಆಗಮಿಸಿದ ನೈರುತ್ಯ ಮಾನ್ಸೂನ್; ಮೇ 31ರ ವೇಳೆಗೆ ಕೇರಳ ತಲುಪುವ ನಿರೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...