Homeಕರ್ನಾಟಕಕೊಚ್ಚಿ ಸ್ಪೋಟಕ್ಕೆ ಮುಸ್ಲಿಂ ನಂಟು ಸೃಷ್ಟಿಸಿದ ಬಿಜೆಪಿ ನಾಯಕ ಭಾಸ್ಕರ್ ರಾವ್

ಕೊಚ್ಚಿ ಸ್ಪೋಟಕ್ಕೆ ಮುಸ್ಲಿಂ ನಂಟು ಸೃಷ್ಟಿಸಿದ ಬಿಜೆಪಿ ನಾಯಕ ಭಾಸ್ಕರ್ ರಾವ್

- Advertisement -
- Advertisement -

ಕೇರಳದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ರವಿವಾರ ನಡೆದ ಸರಣಿ ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ. ಈ ಸ್ಪೋಟಕ್ಕೆ ಕಾರಣವಾದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ತನ್ನ ಫೇಸ್‌ಬುಕ್ ಲೈವ್‌ನಲ್ಲಿ ವೀಡಿಯೊ ಮೂಲಕ ಈ ಕೃತ್ಯ ಎಸಗಿದ್ದು ತಾನೇ ಎಂದು ಹೇಳಿ, ಆ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.

ಅಪರಾಧಿಯೇ ಕೃತ್ಯದ ಬಗ್ಗೆ ತಪ್ಪುಒಪ್ಪಿಕಜೊಂಡು ಪೊಲೀಸರಿಗೆ ಶರಣಾದರೂ ಕೂಡ ನಿವೃತ್ತ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಭಾಸ್ಕರ್ ರಾವ್ ಮಾತ್ರ ಪರೋಕ್ಷವಾಗಿ ಮುಸ್ಲಿಂ ಸಮುದಾಯದವರ ತಲೆಗೆ ಕಟ್ಟಲು ನೋಡುತ್ತಿದ್ದಾರೆ.

ಎಕ್ಸಾನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ”ದೇಶದಲ್ಲಿ ಬಾಂಬ್ ಸ್ಫೋಟಗಳಿಗೆ ದೀರ್ಘ ವಿರಾಮವಿತ್ತು. ಕಾಂಗ್ರೆಸ್ ಮತ್ತು ಸಿಪಿಎಂನಿಂದ ದಶಕಗಳ ಕಾಲದ ಒಲೈಕೆಯ ಮತಬ್ಯಾಂಕ್ ರಾಜಕಾರಣವು ಮುಸ್ಲಿಮರನ್ನು ಅವಿದ್ಯಾವಂತರನ್ನಾಗಿ, ಹಿಂದುಳಿದವರನ್ನಾಗಿ ಮತ್ತು ಅಪರಾಧಿಗಳನ್ನಾಗಿ ಮಾಡಿದೆ. ಪರಿಣಾಮವಾಗಿ ಭಯೋತ್ಪಾದನೆಯನ್ನು ನಾವು ಮನೆಬಾಗಿಲಿಗೆ ಆಹ್ವಾನಿಸಿದ್ದೇವೆ. ಈ ಜನರು ಮುಖ್ಯವಾಹಿನಿಗೆ ಬರಲು ಯಾವಾಗ ಯೋಚಿಸುತ್ತಾರೆ..?” ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

ಬೆಂಗಳೂರಿನ ನಿವೃತ್ತ ಪೊಲೀಸ್ ಕಮಿಶನರ್ ಆಗಿದ್ದ ಭಾಸ್ಕರ್ ರಾವ್ ಅವರ ಈ ಪೋಸ್ಟ್, ಕಲಮಶೇರಿ ಸ್ಪೋಟಕ್ಕೆ ಮುಸ್ಲಿಮರೇ ಕಾರಣ ಎಂದು ಪರೋಕ್ಷವಾಗಿ ಬಿಂಬಿಸಲು ಹೊರಟಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯಾಗುತ್ತಿದೆ.

ಕೇರಳದ ಕಲಮಶೇರಿಯಲ್ಲಿ ಸ್ಫೋಟ ನಡೆದದ್ದು ಬೆಳಿಗ್ಗೆ 9 ಗಂಟೆ ಸುಮಾರಿಗೆ ರಾಷ್ಟ್ರೀಯ ಮಾಧ್ಯಮಗಳಲ್ಲಿ 11.20 ರ ವೇಳೆಗೆ ಅದು ಸುದ್ದಿಯಾಯಿತು. ಆ ಬಳಿಕ ದಾಳಿಯ ಹಿಂದಿನ ಕೈಗಳ ಬಗ್ಗೆ ಎಲ್ಲೆಡೆ ಊಹಾಪೋಹಗಳೇ ಹರಿದಾಡಿದವು. ಕೇರಳ ಪೊಲೀಸರು ಸುಳ್ಳು ಸುದ್ದಿ ಹರಡಿದವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂಬ ಎಚ್ಚರಿಕೆಯ ಸಂದೇಶವನ್ನೂ ನೀಡಿದರು. ಸಂಜೆ 4.20 ರ ವೇಳೆಗೆ ಎಡಿಜಿಪಿ ಎಂ.ಆರ್.ಅಜಿತ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಆರೋಪಿ ಡೊಮಿನಿಕ್ ಮಾರ್ಟಿನ್ ಶರಣಾಗಿದ್ದಾನೆ ಎಂದು ಧೃಡಪಡಿಸಿದರು. ಶರಣಾಗುವ ಮುಂಚೆ ಆರೋಪಿ 6 ತಿಂಗಳ ಹಿಂದೆ ತೆರೆದಿದ್ದ ಫೇಸ್ ಬುಕ್ ಖಾತೆಯಲ್ಲಿ ಲೈವ್ ಗೆ ಬಂದು ಕೃತ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದೂ ವೈರಲಾಯಿತು.

ಇದನ್ನೂ ಓದಿ: ಕೊಚ್ಚಿ: ಸರಣಿ ಸ್ಪೋಟ ಪ್ರಕರಣ: ವಿಡಿಯೋ ಹೇಳಿಕೆ ಕೊಟ್ಟು ಪೊಲೀಸರಿಗೆ ಶರಣಾದ ಆರೋಪಿ

ಮಾರ್ಟಿನ್ ಹಂಚಿಕೊಂಡ ವಿಡಿಯೋದಲ್ಲಿ ಏನಿದೆ?

”ಹಲೋ, ನನ್ನ ಹೆಸರು ಮಾರ್ಟಿನ್. ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಬಾಂಬ್ ಸ್ಫೋಟ ಘಟನೆಗೆ ಬಗ್ಗೆ ನಿಮಗೆ ಸುದ್ದಿ ಸಿಕ್ಕಿರಬಹುದು. ಅಲ್ಲಿ ಏನು ನಡೆದಿದೆ ಎಂಬ ಬಗ್ಗೆ ನನಗೆ ಖಚಿತವಾಗಿ ತಿಳಿದಿಲ್ಲ. ಘಟನೆ ನಡೆದಿದೆ, ಏನಾದರೂ ಸಂಭವಿಸಿದೆ ಎಂಬುದು ಖಚಿತ . ಆ ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದಾನೆ.

”ಯಹೋವನ ಸಾಕ್ಷಿಗಳ ಗುಂಪಿನಲ್ಲಿ ನಾನು ಕಳೆದ 16 ವರ್ಷಗಳಿಂದ ಗುರುತಿಸಿಕೊಂಡಿದ್ದೆ. ಆದರೆ ಕಳೆದ ಆರು ವರ್ಷಗಳ ಹಿಂದೆ  ಈ ಪಂಗಡವು ತಪ್ಪಾದ ಪಂಗಡವೆಂದು ನನಗೆ ಅರಿವಾಯಿತು. ನೀವು ಬೋಧಿಸುತ್ತಿರುವ ವಿಚಾರಗಳು ತಪ್ಪು ಎಂದು ಸಂಬಂಧಪಟ್ಟವರಲ್ಲಿ ತಿಳಿಸಿದೆ. ಆದರೆ ಅವರು ಅದಕ್ಕೆ ಮನ್ನಣೆ ನೀಡಲಿಲ್ಲ. ಇವರು ಈ ದೇಶದಲ್ಲಿದ್ದುಕೊಂಡು ಈ ದೇಶದ ಜನರೊಂದಿಗೆ ಬೆರೆಯಬಾರದು, ಅವರು ವೇಶ್ಯೆಯಂತೆ, ಅವರೊಂದಿಗೆ ವ್ಯವಹರಿಸಬಾರದು ಎಂದು ಬೋಧಿಸುತ್ತಾರೆ” ಎಂದು ಆರೋಪಿಸಿದ್ದಾನೆ.

”4 ವರ್ಷದ ಮಗುವಿಗೂ ಇವರು ನಿನ್ನ ಸ್ನೇಹಿತ ನೀಡಿದ ಚಾಕೊಲೇಟ್ ತಿನ್ನಬಾರದೆಂದು ಕಲಿಸಿಕೊಡುತ್ತಾರೆ. ಇದು ಯಾವ ರೀತಿಯ ಬೋಧನೆ. ಆ ಮಗುವಿನ ಮನಸ್ಥಿತಿ ಹೇಗಿರಬೇಡ. ನಾಲ್ಕು ವರ್ಷದಿಂದಲೇ ಮಕ್ಕಳ ಮನಸ್ಸಿನಲ್ಲಿ ದ್ವೇಷ ಬಿತ್ತುತ್ತಿದ್ದಾರೆ. ಸರ್ಕಾರಿ ಸೇವೆಗೆ ಸೇರಬಾರದು, ದೇಶ ಭಕ್ತಿ ಗೀತೆ ಹಾಡಬಾರದು, ಸೇನೆಗೆ ಸೇರಬಾರದು, ಮತದಾನ ಮಾಡಬಾರದು ಎಂದು ಕಲಿಸಿಕೊಡುತ್ತಾರೆ. ಇಂತಹ ಬೋಧನೆ ಮಾಡುವವರಿಗೆ ಇನ್ನು ಏನು ಮಾಡಬೇಕು. ಭೂಮಿಯಲ್ಲಿ ಎಲ್ಲರೂ ನಾಶವಾಗುತ್ತಾರೆ, ಯಹೋವನ ಸಾಕ್ಷಿಗಳ ಗುಂಪು ಮಾತ್ರ ಬದುಕುಳಿಯುತ್ತಾರೆ ಎಂದು ಬೋಧಿಸುತ್ತಾರೆ. ಇವರು ಜನರ ನಾಶವನ್ನು ಬಯಸುತ್ತಾರೆ. ಇವರನ್ನು ಇನ್ನು ಏನು ಮಾಡಬೇಕು? ಈ ಪಂಗಡವು ತಪ್ಪು ಪಂಗಡ. ಹಾಗಾಗಿ, ಬಹಳ ಯೋಚಿಸಿ ಬಾಂಬ್ ಇಡುವ ತೀರ್ಮಾನ ಮಾಡಿದೆ” ಎಂದು ವಿಡಿಯೋದಲ್ಲಿ ಹೇಳಿದ್ದಾನೆ.

”ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ. ಪೊಲೀಸರಿಗೆ ಶರಣಾಗುತ್ತೇನೆ. ಬಾಂಬ್ ತಯಾರಿಸುವ ವಿಡಿಯೋವನ್ನು ಯಾರೂ ಕೂಡ ಜನರಿಗೆ ತೋರಿಸಬಾರದು. ಜನಸಾಮಾನ್ಯನಿಗೆ ಬಾಂಬ್ ತಯಾರಿಸುವ ಅರಿವು ಬಂದುಬಿಟ್ಟರೆ ದೊಡ್ಡ ಅಪಾಯವಾಗಬಹುದು” ಎಂದು ಬಾಂಬ್ ಸ್ಫೋಟ ನಡೆಸಿರುವ ಹೊಣೆ ಹೊತ್ತುಕೊಂಡಿರುವ ಡೊಮಿನಿಕ್ ಮಾರ್ಟಿನ್ ಹೇಳಿಕೊಂಡಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...