Homeಕರ್ನಾಟಕಚಿನ್ಮಯಾನಂದ್‌ ವಿರುದ್ಧ ಆರೋಪ ಮಾಡಿದ ಯುವತಿಗೆ ಜಾಮೀನು ನಿರಾಕರಣೆ..

ಚಿನ್ಮಯಾನಂದ್‌ ವಿರುದ್ಧ ಆರೋಪ ಮಾಡಿದ ಯುವತಿಗೆ ಜಾಮೀನು ನಿರಾಕರಣೆ..

- Advertisement -
- Advertisement -

ಬಿಜೆಪಿ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಚಿನ್ಮಮಯಾನಂದ ವಿರುದ್ಧ ಅತ್ಯಾಚಾರ ಆರೋಪ ಮಾಡಿರುವ ಕಾನೂನು ವಿದ್ಯಾರ್ಥಿನಿಗೆ ಜಾಮೀನು ನೀಡಬಾರದು ಎಂದು ಆಕ್ಷೇಪಣೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆಕೆಯನ್ನು ಎರಡು ವಾರಗಳ ಕಾಲ ಎಸ್ಐಟಿ ವಶಕ್ಕೆ ನೀಡಲು ಅಲಹಾಬಾದ್ ಹೈಕೋರ್ಟ್ ಆದೇಶಿಸಿದೆ.

ಷಹಜಾನ್ ಪುರ ಮಹಿಳೆಯ ಪರ ವಕೀಲರು ವಾದ ಮಂಡಿಸಿ ನನ್ನ ಕಕ್ಷಿದಾರಳು ಅತ್ಯಾಚಾರ ಸಂತ್ರಸ್ಥೆ ಅವಳ ವಿರುದ್ಧ ಕಲ್ಪಿತ ಆರೋಪಗಳನ್ನು ಮಾಡಲಾಗಿದೆ. ಹೀಗಾಗಿ ಮಹಿಳೆಗೆ ಜಾಮೀನು ನೀಡುವಂತೆ ಮನವಿ ಮಾಡಿದರು.

ಇದಕ್ಕೆ ಚಿನ್ಮಯಾನಂದ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಮಹಿಳೆ ಸುಲಿಗೆ ಪ್ರಮುಖ ಆರೋಪಿಯಾಗಿದ್ದಾರೆ. ಸಾಕಷ್ಟು ಸಾಕ್ಷ್ಯಗಳಿಂದ  ಸಾಬೀತಾಗಿದೆ. ಆದ್ದರಿಂದ ಮಹಿಳೆಗೆ ಜಾಮೀನು ನೀಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕಾನೂನು ವಿದ್ಯಾರ್ಥಿನಿ ಮೇಲೆ ಚಿನ್ಮಯಾನಂದ ಅತ್ಯಾಚಾರ ನಡೆಸಿದ್ದಾರೆ. ಅದಕ್ಕೆ ಸಂಬಂಧಿಸಿದ ವಿಡಿಯೋಗಳು ನಮ್ಮ ಬಳಿ ಇವೆ ಎಂದು ಓರ್ವ ಮಹಿಳೆ ಮತ್ತು ಇತರೆ ಮೂವರು 5 ಲಕ್ಷ ನೀಡಬೇಕು. ಇಲ್ಲದಿದ್ದರೆ ವಿಡಿಯೋ ಬಿಡುಗಡೆ ಮಾಡುವ ಬೆದರಿಕೆ ಹಾಕಿದ್ದರು ಎಂದು ಚಿನ್ಮಯಾನಂದ ದೂರು ನೀಡಿದ್ದರು.

ಚಿನ್ಮಯಾನಂದ ವಿರುದ್ಧವೂ ಭಾರತೀಯ ದಂಡ ಸಂಹಿತೆ 376ಸಿ ಕಲಂ ಅಡಿ ಪ್ರಕರಣ ದಾಖಲಿಸಿಕೊಂಡಿರುವ  ಎಸ್ಐಟಿ ಚಿನ್ಮಯಾನಂದ ಪ್ರಕರಣ ಮತ್ತು ಮಹಿಳೆ ಮತ್ತು ಇತರೆ ಮೂವರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಸಮಾನಾಂತರವಾಗಿ ತನಿಖೆ ನಡೆಸುತ್ತಿದೆ.

ನ್ಯಾಯಮೂರ್ತಿ ಸಿದ್ಧಾರ್ಥ ಅವರು ಮಹಿಳೆಯನ್ನು ಎರಡು ವಾರ ಎಸ್ಐಟಿ ವಶಕ್ಕೆ ನೀಡ ವಿಚಾರಣೆಯನ್ನು ನವೆಂಬರ್ 6ಕ್ಕೆ ಮುಂದೂಡಿದರು ಮತ್ತು ಚಿನ್ಮಯಾನಂದ ಪರ ವಕೀಲರು ಅಂದು ಪ್ರತ್ಯುತ್ತರ ನೀಡಬೇಕು ಎಂದು ಆದೇಶಿಸಿದರು.

ಈ ಮಧ್ಯೆ ಎಸ್ಐಟಿ ಚಿನ್ಮಯಾನಂದ ಅವರಿಗೆ ಸಂಬಂಧಿಸಿದ ಪ್ರಕರಣ ಯಾವ ಹಂತದಲ್ಲಿದೆ ಎಂಬ ವರದಿಯನ್ನು ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಸಲ್ಲಿಸಿದೆ. ಹೀಗಾಗಿ ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿದೆ. ಎಸ್ಐಟಿ ಅಂದು ಮತ್ತೊಂದು ವರದಿಯನ್ನು ಸಲ್ಲಿಸಲಿದೆ.

ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರ ಮತ್ತು ಪಂಕಜ್ ಭಾಟಿಯಾ ಅವರು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯನ್ನು ಮುಂದಿನ ದಿನಾಂಕದೊಳಗೆ ಸಲ್ಲಿಸುವಂತೆ ಎಸ್ಐಟಿಗೆ ನಿರ್ದೇಶನ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...