Homeಕರ್ನಾಟಕಚಿನ್ಮಯಾನಂದ್‌ ವಿರುದ್ಧ ಆರೋಪ ಮಾಡಿದ ಯುವತಿಗೆ ಜಾಮೀನು ನಿರಾಕರಣೆ..

ಚಿನ್ಮಯಾನಂದ್‌ ವಿರುದ್ಧ ಆರೋಪ ಮಾಡಿದ ಯುವತಿಗೆ ಜಾಮೀನು ನಿರಾಕರಣೆ..

- Advertisement -
- Advertisement -

ಬಿಜೆಪಿ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಚಿನ್ಮಮಯಾನಂದ ವಿರುದ್ಧ ಅತ್ಯಾಚಾರ ಆರೋಪ ಮಾಡಿರುವ ಕಾನೂನು ವಿದ್ಯಾರ್ಥಿನಿಗೆ ಜಾಮೀನು ನೀಡಬಾರದು ಎಂದು ಆಕ್ಷೇಪಣೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆಕೆಯನ್ನು ಎರಡು ವಾರಗಳ ಕಾಲ ಎಸ್ಐಟಿ ವಶಕ್ಕೆ ನೀಡಲು ಅಲಹಾಬಾದ್ ಹೈಕೋರ್ಟ್ ಆದೇಶಿಸಿದೆ.

ಷಹಜಾನ್ ಪುರ ಮಹಿಳೆಯ ಪರ ವಕೀಲರು ವಾದ ಮಂಡಿಸಿ ನನ್ನ ಕಕ್ಷಿದಾರಳು ಅತ್ಯಾಚಾರ ಸಂತ್ರಸ್ಥೆ ಅವಳ ವಿರುದ್ಧ ಕಲ್ಪಿತ ಆರೋಪಗಳನ್ನು ಮಾಡಲಾಗಿದೆ. ಹೀಗಾಗಿ ಮಹಿಳೆಗೆ ಜಾಮೀನು ನೀಡುವಂತೆ ಮನವಿ ಮಾಡಿದರು.

ಇದಕ್ಕೆ ಚಿನ್ಮಯಾನಂದ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಮಹಿಳೆ ಸುಲಿಗೆ ಪ್ರಮುಖ ಆರೋಪಿಯಾಗಿದ್ದಾರೆ. ಸಾಕಷ್ಟು ಸಾಕ್ಷ್ಯಗಳಿಂದ  ಸಾಬೀತಾಗಿದೆ. ಆದ್ದರಿಂದ ಮಹಿಳೆಗೆ ಜಾಮೀನು ನೀಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕಾನೂನು ವಿದ್ಯಾರ್ಥಿನಿ ಮೇಲೆ ಚಿನ್ಮಯಾನಂದ ಅತ್ಯಾಚಾರ ನಡೆಸಿದ್ದಾರೆ. ಅದಕ್ಕೆ ಸಂಬಂಧಿಸಿದ ವಿಡಿಯೋಗಳು ನಮ್ಮ ಬಳಿ ಇವೆ ಎಂದು ಓರ್ವ ಮಹಿಳೆ ಮತ್ತು ಇತರೆ ಮೂವರು 5 ಲಕ್ಷ ನೀಡಬೇಕು. ಇಲ್ಲದಿದ್ದರೆ ವಿಡಿಯೋ ಬಿಡುಗಡೆ ಮಾಡುವ ಬೆದರಿಕೆ ಹಾಕಿದ್ದರು ಎಂದು ಚಿನ್ಮಯಾನಂದ ದೂರು ನೀಡಿದ್ದರು.

ಚಿನ್ಮಯಾನಂದ ವಿರುದ್ಧವೂ ಭಾರತೀಯ ದಂಡ ಸಂಹಿತೆ 376ಸಿ ಕಲಂ ಅಡಿ ಪ್ರಕರಣ ದಾಖಲಿಸಿಕೊಂಡಿರುವ  ಎಸ್ಐಟಿ ಚಿನ್ಮಯಾನಂದ ಪ್ರಕರಣ ಮತ್ತು ಮಹಿಳೆ ಮತ್ತು ಇತರೆ ಮೂವರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಸಮಾನಾಂತರವಾಗಿ ತನಿಖೆ ನಡೆಸುತ್ತಿದೆ.

ನ್ಯಾಯಮೂರ್ತಿ ಸಿದ್ಧಾರ್ಥ ಅವರು ಮಹಿಳೆಯನ್ನು ಎರಡು ವಾರ ಎಸ್ಐಟಿ ವಶಕ್ಕೆ ನೀಡ ವಿಚಾರಣೆಯನ್ನು ನವೆಂಬರ್ 6ಕ್ಕೆ ಮುಂದೂಡಿದರು ಮತ್ತು ಚಿನ್ಮಯಾನಂದ ಪರ ವಕೀಲರು ಅಂದು ಪ್ರತ್ಯುತ್ತರ ನೀಡಬೇಕು ಎಂದು ಆದೇಶಿಸಿದರು.

ಈ ಮಧ್ಯೆ ಎಸ್ಐಟಿ ಚಿನ್ಮಯಾನಂದ ಅವರಿಗೆ ಸಂಬಂಧಿಸಿದ ಪ್ರಕರಣ ಯಾವ ಹಂತದಲ್ಲಿದೆ ಎಂಬ ವರದಿಯನ್ನು ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಸಲ್ಲಿಸಿದೆ. ಹೀಗಾಗಿ ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿದೆ. ಎಸ್ಐಟಿ ಅಂದು ಮತ್ತೊಂದು ವರದಿಯನ್ನು ಸಲ್ಲಿಸಲಿದೆ.

ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರ ಮತ್ತು ಪಂಕಜ್ ಭಾಟಿಯಾ ಅವರು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯನ್ನು ಮುಂದಿನ ದಿನಾಂಕದೊಳಗೆ ಸಲ್ಲಿಸುವಂತೆ ಎಸ್ಐಟಿಗೆ ನಿರ್ದೇಶನ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...