Homeಕರ್ನಾಟಕಚಿನ್ಮಯಾನಂದ್‌ ವಿರುದ್ಧ ಆರೋಪ ಮಾಡಿದ ಯುವತಿಗೆ ಜಾಮೀನು ನಿರಾಕರಣೆ..

ಚಿನ್ಮಯಾನಂದ್‌ ವಿರುದ್ಧ ಆರೋಪ ಮಾಡಿದ ಯುವತಿಗೆ ಜಾಮೀನು ನಿರಾಕರಣೆ..

- Advertisement -
- Advertisement -

ಬಿಜೆಪಿ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಚಿನ್ಮಮಯಾನಂದ ವಿರುದ್ಧ ಅತ್ಯಾಚಾರ ಆರೋಪ ಮಾಡಿರುವ ಕಾನೂನು ವಿದ್ಯಾರ್ಥಿನಿಗೆ ಜಾಮೀನು ನೀಡಬಾರದು ಎಂದು ಆಕ್ಷೇಪಣೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆಕೆಯನ್ನು ಎರಡು ವಾರಗಳ ಕಾಲ ಎಸ್ಐಟಿ ವಶಕ್ಕೆ ನೀಡಲು ಅಲಹಾಬಾದ್ ಹೈಕೋರ್ಟ್ ಆದೇಶಿಸಿದೆ.

ಷಹಜಾನ್ ಪುರ ಮಹಿಳೆಯ ಪರ ವಕೀಲರು ವಾದ ಮಂಡಿಸಿ ನನ್ನ ಕಕ್ಷಿದಾರಳು ಅತ್ಯಾಚಾರ ಸಂತ್ರಸ್ಥೆ ಅವಳ ವಿರುದ್ಧ ಕಲ್ಪಿತ ಆರೋಪಗಳನ್ನು ಮಾಡಲಾಗಿದೆ. ಹೀಗಾಗಿ ಮಹಿಳೆಗೆ ಜಾಮೀನು ನೀಡುವಂತೆ ಮನವಿ ಮಾಡಿದರು.

ಇದಕ್ಕೆ ಚಿನ್ಮಯಾನಂದ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಮಹಿಳೆ ಸುಲಿಗೆ ಪ್ರಮುಖ ಆರೋಪಿಯಾಗಿದ್ದಾರೆ. ಸಾಕಷ್ಟು ಸಾಕ್ಷ್ಯಗಳಿಂದ  ಸಾಬೀತಾಗಿದೆ. ಆದ್ದರಿಂದ ಮಹಿಳೆಗೆ ಜಾಮೀನು ನೀಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕಾನೂನು ವಿದ್ಯಾರ್ಥಿನಿ ಮೇಲೆ ಚಿನ್ಮಯಾನಂದ ಅತ್ಯಾಚಾರ ನಡೆಸಿದ್ದಾರೆ. ಅದಕ್ಕೆ ಸಂಬಂಧಿಸಿದ ವಿಡಿಯೋಗಳು ನಮ್ಮ ಬಳಿ ಇವೆ ಎಂದು ಓರ್ವ ಮಹಿಳೆ ಮತ್ತು ಇತರೆ ಮೂವರು 5 ಲಕ್ಷ ನೀಡಬೇಕು. ಇಲ್ಲದಿದ್ದರೆ ವಿಡಿಯೋ ಬಿಡುಗಡೆ ಮಾಡುವ ಬೆದರಿಕೆ ಹಾಕಿದ್ದರು ಎಂದು ಚಿನ್ಮಯಾನಂದ ದೂರು ನೀಡಿದ್ದರು.

ಚಿನ್ಮಯಾನಂದ ವಿರುದ್ಧವೂ ಭಾರತೀಯ ದಂಡ ಸಂಹಿತೆ 376ಸಿ ಕಲಂ ಅಡಿ ಪ್ರಕರಣ ದಾಖಲಿಸಿಕೊಂಡಿರುವ  ಎಸ್ಐಟಿ ಚಿನ್ಮಯಾನಂದ ಪ್ರಕರಣ ಮತ್ತು ಮಹಿಳೆ ಮತ್ತು ಇತರೆ ಮೂವರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಸಮಾನಾಂತರವಾಗಿ ತನಿಖೆ ನಡೆಸುತ್ತಿದೆ.

ನ್ಯಾಯಮೂರ್ತಿ ಸಿದ್ಧಾರ್ಥ ಅವರು ಮಹಿಳೆಯನ್ನು ಎರಡು ವಾರ ಎಸ್ಐಟಿ ವಶಕ್ಕೆ ನೀಡ ವಿಚಾರಣೆಯನ್ನು ನವೆಂಬರ್ 6ಕ್ಕೆ ಮುಂದೂಡಿದರು ಮತ್ತು ಚಿನ್ಮಯಾನಂದ ಪರ ವಕೀಲರು ಅಂದು ಪ್ರತ್ಯುತ್ತರ ನೀಡಬೇಕು ಎಂದು ಆದೇಶಿಸಿದರು.

ಈ ಮಧ್ಯೆ ಎಸ್ಐಟಿ ಚಿನ್ಮಯಾನಂದ ಅವರಿಗೆ ಸಂಬಂಧಿಸಿದ ಪ್ರಕರಣ ಯಾವ ಹಂತದಲ್ಲಿದೆ ಎಂಬ ವರದಿಯನ್ನು ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಸಲ್ಲಿಸಿದೆ. ಹೀಗಾಗಿ ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿದೆ. ಎಸ್ಐಟಿ ಅಂದು ಮತ್ತೊಂದು ವರದಿಯನ್ನು ಸಲ್ಲಿಸಲಿದೆ.

ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರ ಮತ್ತು ಪಂಕಜ್ ಭಾಟಿಯಾ ಅವರು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯನ್ನು ಮುಂದಿನ ದಿನಾಂಕದೊಳಗೆ ಸಲ್ಲಿಸುವಂತೆ ಎಸ್ಐಟಿಗೆ ನಿರ್ದೇಶನ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...