Homeಕರ್ನಾಟಕಚಿನ್ಮಯಾನಂದ್‌ ವಿರುದ್ಧ ಆರೋಪ ಮಾಡಿದ ಯುವತಿಗೆ ಜಾಮೀನು ನಿರಾಕರಣೆ..

ಚಿನ್ಮಯಾನಂದ್‌ ವಿರುದ್ಧ ಆರೋಪ ಮಾಡಿದ ಯುವತಿಗೆ ಜಾಮೀನು ನಿರಾಕರಣೆ..

- Advertisement -
- Advertisement -

ಬಿಜೆಪಿ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಚಿನ್ಮಮಯಾನಂದ ವಿರುದ್ಧ ಅತ್ಯಾಚಾರ ಆರೋಪ ಮಾಡಿರುವ ಕಾನೂನು ವಿದ್ಯಾರ್ಥಿನಿಗೆ ಜಾಮೀನು ನೀಡಬಾರದು ಎಂದು ಆಕ್ಷೇಪಣೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆಕೆಯನ್ನು ಎರಡು ವಾರಗಳ ಕಾಲ ಎಸ್ಐಟಿ ವಶಕ್ಕೆ ನೀಡಲು ಅಲಹಾಬಾದ್ ಹೈಕೋರ್ಟ್ ಆದೇಶಿಸಿದೆ.

ಷಹಜಾನ್ ಪುರ ಮಹಿಳೆಯ ಪರ ವಕೀಲರು ವಾದ ಮಂಡಿಸಿ ನನ್ನ ಕಕ್ಷಿದಾರಳು ಅತ್ಯಾಚಾರ ಸಂತ್ರಸ್ಥೆ ಅವಳ ವಿರುದ್ಧ ಕಲ್ಪಿತ ಆರೋಪಗಳನ್ನು ಮಾಡಲಾಗಿದೆ. ಹೀಗಾಗಿ ಮಹಿಳೆಗೆ ಜಾಮೀನು ನೀಡುವಂತೆ ಮನವಿ ಮಾಡಿದರು.

ಇದಕ್ಕೆ ಚಿನ್ಮಯಾನಂದ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಮಹಿಳೆ ಸುಲಿಗೆ ಪ್ರಮುಖ ಆರೋಪಿಯಾಗಿದ್ದಾರೆ. ಸಾಕಷ್ಟು ಸಾಕ್ಷ್ಯಗಳಿಂದ  ಸಾಬೀತಾಗಿದೆ. ಆದ್ದರಿಂದ ಮಹಿಳೆಗೆ ಜಾಮೀನು ನೀಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕಾನೂನು ವಿದ್ಯಾರ್ಥಿನಿ ಮೇಲೆ ಚಿನ್ಮಯಾನಂದ ಅತ್ಯಾಚಾರ ನಡೆಸಿದ್ದಾರೆ. ಅದಕ್ಕೆ ಸಂಬಂಧಿಸಿದ ವಿಡಿಯೋಗಳು ನಮ್ಮ ಬಳಿ ಇವೆ ಎಂದು ಓರ್ವ ಮಹಿಳೆ ಮತ್ತು ಇತರೆ ಮೂವರು 5 ಲಕ್ಷ ನೀಡಬೇಕು. ಇಲ್ಲದಿದ್ದರೆ ವಿಡಿಯೋ ಬಿಡುಗಡೆ ಮಾಡುವ ಬೆದರಿಕೆ ಹಾಕಿದ್ದರು ಎಂದು ಚಿನ್ಮಯಾನಂದ ದೂರು ನೀಡಿದ್ದರು.

ಚಿನ್ಮಯಾನಂದ ವಿರುದ್ಧವೂ ಭಾರತೀಯ ದಂಡ ಸಂಹಿತೆ 376ಸಿ ಕಲಂ ಅಡಿ ಪ್ರಕರಣ ದಾಖಲಿಸಿಕೊಂಡಿರುವ  ಎಸ್ಐಟಿ ಚಿನ್ಮಯಾನಂದ ಪ್ರಕರಣ ಮತ್ತು ಮಹಿಳೆ ಮತ್ತು ಇತರೆ ಮೂವರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಸಮಾನಾಂತರವಾಗಿ ತನಿಖೆ ನಡೆಸುತ್ತಿದೆ.

ನ್ಯಾಯಮೂರ್ತಿ ಸಿದ್ಧಾರ್ಥ ಅವರು ಮಹಿಳೆಯನ್ನು ಎರಡು ವಾರ ಎಸ್ಐಟಿ ವಶಕ್ಕೆ ನೀಡ ವಿಚಾರಣೆಯನ್ನು ನವೆಂಬರ್ 6ಕ್ಕೆ ಮುಂದೂಡಿದರು ಮತ್ತು ಚಿನ್ಮಯಾನಂದ ಪರ ವಕೀಲರು ಅಂದು ಪ್ರತ್ಯುತ್ತರ ನೀಡಬೇಕು ಎಂದು ಆದೇಶಿಸಿದರು.

ಈ ಮಧ್ಯೆ ಎಸ್ಐಟಿ ಚಿನ್ಮಯಾನಂದ ಅವರಿಗೆ ಸಂಬಂಧಿಸಿದ ಪ್ರಕರಣ ಯಾವ ಹಂತದಲ್ಲಿದೆ ಎಂಬ ವರದಿಯನ್ನು ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಸಲ್ಲಿಸಿದೆ. ಹೀಗಾಗಿ ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿದೆ. ಎಸ್ಐಟಿ ಅಂದು ಮತ್ತೊಂದು ವರದಿಯನ್ನು ಸಲ್ಲಿಸಲಿದೆ.

ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರ ಮತ್ತು ಪಂಕಜ್ ಭಾಟಿಯಾ ಅವರು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯನ್ನು ಮುಂದಿನ ದಿನಾಂಕದೊಳಗೆ ಸಲ್ಲಿಸುವಂತೆ ಎಸ್ಐಟಿಗೆ ನಿರ್ದೇಶನ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...