Homeಮುಖಪುಟಚೀನಾ ವಸ್ತು ಬಳಸುವವರ ಮನೆಗಳನ್ನು ದರೋಡೆ ಮಾಡಿ: ಬಿಜೆಪಿ ನಾಯಕನ ವಿವಾದ

ಚೀನಾ ವಸ್ತು ಬಳಸುವವರ ಮನೆಗಳನ್ನು ದರೋಡೆ ಮಾಡಿ: ಬಿಜೆಪಿ ನಾಯಕನ ವಿವಾದ

- Advertisement -
- Advertisement -

ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಜಾಯ್ ಬ್ಯಾನರ್ಜಿ ಚೀನಾದ ಉತ್ಪನ್ನ ಬಳಸುವವರನ್ನು ಥಳಿಸಬೇಕು ಹಾಗೂ ಅವರ ಮನೆಗಳನ್ನು ದರೋಡೆ ಮಾಡಬೇಕು ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ.

ಜೂನ್ 15 ರಂದು ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗೆ ಹಿಂಸಾತ್ಮಕ ಮುಖಾಮುಖಿಯಾಗಿ 20 ಭಾರತೀಯ ಸೇನಾ ಸಿಬ್ಬಂದಿಗಳನ್ನು ಹತ್ಯೆಗೈದ ನಂತರ ಚೀನಾ ನಿರ್ಮಿತ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ದೇಶದಲ್ಲಿ ಕೂಗುಗಳೆದ್ದಿವೆ.

“ಚೀನಾಕ್ಕೆ ಪಾಠ ಕಲಿಸಬೇಕು, ಇದು ಚೀನೀ ಸರಕುಗಳನ್ನು ಬಹಿಷ್ಕರಿಸುವ ಮೂಲಕ ಪ್ರಾರಂಭವಾಗಬೇಕು. ನಾವೆಲ್ಲರೂ ಚೀನೀ ಭಾಷೆಯನ್ನು ಬಹಿಷ್ಕರಿಸಬೇಕು. ಅದನ್ನು ಬಳಸುವವರನ್ನು ತಡೆಯಬೇಕು. ಇಲ್ಲದಿದ್ದರೆ ಅವರ ಕಾಲುಗಳನ್ನು ಮುರಿಯಬೇಕು ಮತ್ತು ಮನೆಗಳನ್ನು ದರೋಡೆ ಮಾಡಬೇಕು” ಎಂದು ಬ್ಯಾನರ್ಜಿ ಹೇಳಿದ್ದಾರೆ.

ಜಾಯ್ ಬ್ಯಾನರ್ಜಿ ಅವರ ಹೇಳಿಕೆಯನ್ನು ತೃಣಮೂಲ ಹಾಗೂ ಕಾಂಗ್ರೆಸ್ ಮುಖಂಡರು ತೀವ್ರವಾಗಿ ವಿರೋಧಿಸಿದ್ದು, ಚೀನಾ ಬಗ್ಗೆ ಬಿಜೆಪಿಯ ನಿಲುವನ್ನು ಮೊದಲು ಸ್ಪಷ್ಟಪಡಿಸುವಂತೆ ತಾಕೀತು ಮಾಡಿದ್ದಾರೆ.

“ಬಿಕ್ಕಟ್ಟಿನ ಈ ಸಂಧರ್ಭದಲ್ಲಿ ನಾವೆಲ್ಲರೂ ಸರ್ಕಾರದೊಂದಿಗಿದ್ದೇವೆ. ಆದರೆ ಬಿಜೆಪಿ ಅಂತಹ ಧರ್ಮೋಪದೇಶಗಳನ್ನು ನೀಡುವ ಬದಲು ಚೀನಾ ನಮ್ಮ ಭೂಪ್ರದೇಶವನ್ನು ಹೇಗೆ ಪ್ರವೇಶಿಸಿತು ಎಂಬುದನ್ನು ಮೊದಲು ಉತ್ತರಿಸಬೇಕು. ಜನರು ಚೀನಾದ ಸರಕುಗಳನ್ನು ಬಹಿಷ್ಕರಿಸಬೇಕಾದರೆ ಅವರು ಸ್ವಯಂ ನಿರ್ಣಯ ಮಾಡುತ್ತಾರೆ. ಅಂತಹ ಧರ್ಮೋಪದೇಶಗಳನ್ನು ನೀಡುವ ಹಕ್ಕನ್ನು ಬಿಜೆಪಿಗೆ ಯಾರು ನೀಡಿದ್ದು?” ಎಂದು ಟಿಎಂಸಿಯ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.

ಗಾಲ್ವನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗಿನ ಭೀಕರ ಘರ್ಷಣೆಯಲ್ಲಿ ಸಾವನ್ನಪ್ಪಿದ 20 ಸೇನಾ ಸಿಬ್ಬಂದಿಗಳಲ್ಲಿ ಬಿರ್ಭಮ್ ಜಿಲ್ಲೆಯ ರಾಜೇಶ್ ಒರಾಂಗ್ ಮತ್ತು ಅಲಿಪುರ್ದಾರ್‌ನ ಬಿಪುಲ್ ರಾಯ್ ಸೇರಿದ್ದಾರೆ, ಇದು ಐದು ದಶಕಗಳಲ್ಲಿ ನಡೆದ ಅತಿದೊಡ್ಡ ಮಿಲಿಟರಿ ಘರ್ಷಣೆಯಾಗಿದೆ.


ಓದಿ: ಚೀನಾಗೆ ಶರಣಾದ ಮೋದಿ : ಕಾಂಗ್ರೆಸ್ ಟೀಕೆ, ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...