Homeಕರ್ನಾಟಕರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜಕ್ಕೆ ಹೋಲಿಸಿದ ಬಿಜೆಪಿ ನಾಯಕ ಸಿ.ಟಿ ರವಿ!

ರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜಕ್ಕೆ ಹೋಲಿಸಿದ ಬಿಜೆಪಿ ನಾಯಕ ಸಿ.ಟಿ ರವಿ!

- Advertisement -
- Advertisement -

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಉಂಟಾಗಿರುವ ಧ್ವಜ ವಿವಾದದ ಕುರಿತು ಮಾತನಾಡುವಾಗ ಬಿಜೆಪಿ ನಾಯಕ ಸಿ.ಟಿ ರವಿ ‘ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಕೆ’ ಮಾಡಿದ್ದಾರೆ.

ಧ್ವಜ ವಿವಾದದ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಹಿಂದಿಯಲ್ಲಿ ಮಾತನಾಡಿದ ಸಿ.ಟಿ ರವಿ, “ಹನುಮ ಧ್ವಜವನ್ನು ಕೆಳಗಿಳಿಸಿ ತಾಲಿಬಾನ್‌ ಧ್ವಜವನ್ನು ಹಾರಿಸಿದ್ದಾರೆ” ಎಂದಿದ್ದಾರೆ. ಸಿ.ಟಿ ರವಿಯ ಈ ಹೇಳಿಕೆಯ ಸತ್ಯಾಸತ್ಯತೆ ಪರಿಶೀಲಿಸಿ ನೋಡಿದರೆ, ಅಧಿಕಾರಿಗಳು ಕೆರಗೋಡಿನಲ್ಲಿ ಹನುಮ ಧ್ವಜ ಇಳಿಸಿದ್ದು ನಿಜ, ಅದರ ಬದಲಾಗಿ ರಾಷ್ಟ್ರ ಧ್ವಜವನ್ನು ಹಾರಿಸಿದ್ದಾರೆ. ಸಿ.ಟಿ ರವಿ ಹೇಳಿದಂತೆ ತಾಲಿಬಾನ್ ಧ್ವಜ ಹಾರಿಸಿಲ್ಲ. ಹಾಗಾದರೆ, ಸಿ.ಟಿ ರವಿ ತಾಲಿಬಾನ್ ಧ್ವಜ ಎಂದು ಹೇಳಿದ್ದು ರಾಷ್ಟ್ರ ಧ್ವಜವನ್ನೇ ಎಂಬುವುದರಲ್ಲಿ ಅನುಮಾನವಿಲ್ಲ. ಈ ರೀತಿಯ ಹೇಳಿಕೆ ಕೊಡುವುದು ದೇಶದ್ರೋಹಕ್ಕೆ ಸಮವಲ್ಲವೇ? ಸಿ.ಟಿ ರವಿ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕಲ್ಲವೇ? ಎಂಬ ಪ್ರಶ್ನೆ ಮೂಡಿದೆ.

ರಾಜ್ಯ ಕಾಂಗ್ರೆಸ್‌ ಸಿ.ಟಿ ರವಿಯ ಹೇಳಿಕೆ ವಿರುದ್ದ ಕಿಡಿಕಾರಿದೆ. “ಪವಿತ್ರವಾದ ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಸಿದ ದೇಶದ್ರೋಹಿ ಬಿಜೆಪಿಯ ಸಿ.ಟಿ ರವಿ ಎನ್ನುವ ಕೋಮು ಕ್ರಿಮಿ ದೇಶದ ಘನತೆಯನ್ನು ಮಣ್ಣುಪಾಲು ಮಾಡುವ ಹೇಳಿಕೆ ನೀಡಿದ್ದಾರೆ. ತ್ರಿವರ್ಣ ಧ್ವಜ ಈಗ ಬಿಜೆಪಿ ಪ್ರಕಾರ ತಾಲಿಬಾನ್ ಧ್ವಜವಾಗಿದೆಯೇ?. ತ್ರಿವರ್ಣ ಧ್ವಜವನ್ನು ವಿರೋಧಿಸುವ ಆರ್‌.ಎಸ್‌.ಎಸ್‌ನ ಸಿದ್ಧಾಂತವನ್ನು ಬಿಜೆಪಿ ಚಾಚೂ ತಪ್ಪದೆ ಪಾಲಿಸುತ್ತಿದೆ” ಎಂದಿದೆ.

ಬಿಜೆಪಿಗೆ INDIA ಮೇಲೂ ದ್ವೇಷ, ಬಿಜೆಪಿಗೆ ಭಾರತದ ಸಂವಿಧಾನದ ಮೇಲೂ ದ್ವೇಷ, ಬಿಜೆಪಿಗೆ ಭಾರತದ ತ್ರಿವರ್ಣ ಧ್ವಜದ ಮೇಲೂ ದ್ವೇಷ. ಇಂತಹ ಬಿಜೆಪಿ ದೇಶದ್ರೋಹಿಯಲ್ಲದೆ ಇನ್ನೇನು? ಎಂದು ಪ್ರಶ್ನಿಸಿದೆ. ಸಂವಿಧಾನದ ವಿಧಿ 51ಎ(ಎ) ಪ್ರಕಾರ ಇದು ಮಹಾ ಅಪರಾಧ ಎಂದು ಹೇಳಿದೆ.

ಕೆರಗೋಡಿನಲ್ಲಿ ನಿಜವಾಗಿಯೂ ನಡೆದಿದ್ದೇನು?

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ರಂಗಮಂದಿರದ ಆವರಣದಲ್ಲಿ ನಿರ್ಮಿಸಿದ್ದ ಬೃಹತ್‌ ಧ್ವಜಸ್ಥಂಬದಲ್ಲಿ ರಾಷ್ಟ್ರಧ್ವಜ ಮತ್ತು ಕನ್ನಡ ಧ್ವಜ ಹಾರಿಸಲು ಅನುಮತಿ ಪಡೆದಿದ್ದ ಗ್ರಾಮದ ಶ್ರೀ ಗೌರಿ ಶಂಕರ ಸೇವಾ ಟ್ರಸ್ಟ್ ಪದಾಧಿಕಾರಿಗಳು ಹನುಮ ಧ್ವಜ (ಕೇಸರಿ ಧ್ವಜ) ಹಾರಿಸಿ ವಿವಾದ ಹುಟ್ಟು ಹಾಕಿದ್ದರು.

ಅನುಮತಿ ಮೀರಿ ಸಾರ್ವಜನಿಕ ಧ್ವಜಸ್ಥಂಬದಲ್ಲಿ ಹನುಮ ಧ್ವಜ ಹಾರಿಸಿದ್ದರಿಂದ ಸಹಜವಾಗಿ ಸ್ಥಳಿಯಾಡಳಿತ ಅಧಿಕಾರಿಗಳು ಅದನ್ನು ಕೆಳಗಿಳಿಸಿದ್ದರು. ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಮತ್ತು ಹಿಂದುತ್ವ ಸಂಘಟನೆಗಳ ಕಾರ್ಯಕರ್ತರು ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ.

ಜನವರಿ 28ರಂದು ಹಿಂದುತ್ವ ಸಂಘಟನೆ ನೇತೃತ್ವದಲ್ಲಿ ಧ್ವಜಸ್ಥಂಬದ ಬಳಿ ಜಮಾಯಿಸಿದ್ದ ಗ್ರಾಮದ ನೂರಾರು ಪುರುಷರು ಮತ್ತು ಮಹಿಳೆಯರು ಧ್ವಜಸ್ಥಂಬದಲ್ಲಿ ಹನುಮ ಧ್ವಜ ಮರುಸ್ಥಾಪನೆಗೆ ಪಟ್ಟು ಹಿಡಿದಿದ್ದರು. ಇದಕ್ಕೆ ಪೊಲೀಸರು ನಿರಾಕರಿಸಿದಾಗ, ಮಹಿಳೆಯರು ಏಣಿ ಇಟ್ಟು ಧ್ವಜಸ್ಥಂಬಕ್ಕೆ ಏರಿ ಕೇಸರಿ ಧ್ವಜ ಮತ್ತು ರಾಮನ ಫ್ಲೆಕ್ಸ್ ಕಟ್ಟಿದ್ದಾರೆ.

ಸ್ಪಷ್ಟನೆ ನೀಡಿದ ಸಿಎಂ:

ಕೆರಗೋಡು ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡ ಹಿನ್ನೆಲೆ ಜನವರಿ 28ರಂದು ಸಿಎಂ ಸಿದ್ದರಾಮಯ್ಯ ಈ ಕುರಿತು ಪ್ರತಿಕ್ರಿಯಿಸಿದ್ದರು. ಶ್ರೀ ಗೌರಿ ಶಂಕರ ಟ್ರಸ್ಟ್‌ನವರು ಕನ್ನಡ ಧ್ವಜ ಮತ್ತು ರಾಷ್ಟ್ರಧ್ವಜ ಹಾರಿಸಲು ಅನುಮತಿ ಪಡೆದು ಕೇಸರಿ ಧ್ವಜ ಹಾರಿಸಿದ್ದರು. ಅದನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು. ಕೆರಗೋಡು ಗ್ರಾಮ ಪಂಚಾಯತ್ ಕಾರ್ಯಾಲಯ ಯಾವ ಧ್ವಜ ಹಾರಿಸಲು ಗೌರಿ ಶಂಕರ ಟ್ರಸ್ಟ್‌ಗೆ ಅನುಮತಿ ನೀಡಿದೆ ಎಂಬ ಪತ್ರವನ್ನು ಸಿಎಂ ಹಂಚಿಕೊಂಡಿದ್ದರು.

ನಿನ್ನೆ( ಜ.30) ಧ್ವಜ ವಿವಾದ ರಾಜಕೀಯ ತಿರುವು ಪಡೆದುಕೊಂಡಿದೆ. ಬಿಜೆಪಿ ನಾಯಕ ಸಿ.ಟಿ ರವಿ, ಜೆಡಿಎಸ್ ನಾಯಕ ಕುಮಾರಸ್ವಾಮಿ ಸೇರಿದಂತೆ ಪ್ರಮುಖರು ಬೂದಿ ಮುಚ್ಚಿದ ಕೆಂಡದಂತಿದ್ದ ಗ್ರಾಮಕ್ಕೆ ತೆರಳಿ ಹಿಂದುತ್ವ ಕಾರ್ಯಕರ್ತರ ಜೊತೆ ಗ್ರಾಮದಿಂದ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ಮಾಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಜಾತ್ಯಾತೀತ ಜನತಾದಳದ ನಾಯಕ ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಂಡು ಅಖಾಡಕ್ಕೆ ಇಳಿದಿದ್ದು ಗಮನಾರ್ಹವಾಗಿತ್ತು.

ಅತ್ತ ಬಿಜೆಪಿ, ಜೆಡಿಎಸ್‌ ನಾಯಕರು ಮತ್ತು ಸಂಘಪರಿವಾರದ ಕಾರ್ಯಕರ್ತರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಪಾದಯಯಾತ್ರೆ ನಡೆಸುತ್ತಿದ್ದರೆ, ಇತ್ತ ಪೊಲೀಸರು ಮತ್ತು ಸ್ಥಳೀಯಾಡಳಿತದ ಅಧಿಕಾರಿಗಳು ವಿವಾದಿತ ಧ್ವಜಸ್ಥಂಬದಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಈ ಮೂಲಕ ವಿವಾದ ಶಮನಗೊಳಿಸುವ ಪ್ರಯತ್ನ ಮಾಡಿದ್ದಾರೆ. ಸದ್ಯಕ್ಕೆ ಗ್ರಾಮದಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದ್ದು, ಪರಿಸ್ಥಿತಿ ಪೊಲೀಸರ ನಿಯಂತ್ರಣದಲ್ಲಿದೆ.

ಇದನ್ನೂ ಓದಿ : ಹನುಮಧ್ವಜ ವಿವಾದ: ಪರಿಸ್ಥಿತಿ ಪ್ರಕ್ಷುಬ್ಧಗೊಳಿಸಿದ ಹಿಂದುತ್ವ ಕಾರ್ಯಕರ್ತರು; ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. He is not fit for public administrative so public not given vote to him last election he is such a foolish fellow he is just talking with out knowledge keep on dring and run looti Ravi manuvadi

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...