Homeಕರ್ನಾಟಕರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜಕ್ಕೆ ಹೋಲಿಸಿದ ಬಿಜೆಪಿ ನಾಯಕ ಸಿ.ಟಿ ರವಿ!

ರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜಕ್ಕೆ ಹೋಲಿಸಿದ ಬಿಜೆಪಿ ನಾಯಕ ಸಿ.ಟಿ ರವಿ!

- Advertisement -
- Advertisement -

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಉಂಟಾಗಿರುವ ಧ್ವಜ ವಿವಾದದ ಕುರಿತು ಮಾತನಾಡುವಾಗ ಬಿಜೆಪಿ ನಾಯಕ ಸಿ.ಟಿ ರವಿ ‘ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಕೆ’ ಮಾಡಿದ್ದಾರೆ.

ಧ್ವಜ ವಿವಾದದ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಹಿಂದಿಯಲ್ಲಿ ಮಾತನಾಡಿದ ಸಿ.ಟಿ ರವಿ, “ಹನುಮ ಧ್ವಜವನ್ನು ಕೆಳಗಿಳಿಸಿ ತಾಲಿಬಾನ್‌ ಧ್ವಜವನ್ನು ಹಾರಿಸಿದ್ದಾರೆ” ಎಂದಿದ್ದಾರೆ. ಸಿ.ಟಿ ರವಿಯ ಈ ಹೇಳಿಕೆಯ ಸತ್ಯಾಸತ್ಯತೆ ಪರಿಶೀಲಿಸಿ ನೋಡಿದರೆ, ಅಧಿಕಾರಿಗಳು ಕೆರಗೋಡಿನಲ್ಲಿ ಹನುಮ ಧ್ವಜ ಇಳಿಸಿದ್ದು ನಿಜ, ಅದರ ಬದಲಾಗಿ ರಾಷ್ಟ್ರ ಧ್ವಜವನ್ನು ಹಾರಿಸಿದ್ದಾರೆ. ಸಿ.ಟಿ ರವಿ ಹೇಳಿದಂತೆ ತಾಲಿಬಾನ್ ಧ್ವಜ ಹಾರಿಸಿಲ್ಲ. ಹಾಗಾದರೆ, ಸಿ.ಟಿ ರವಿ ತಾಲಿಬಾನ್ ಧ್ವಜ ಎಂದು ಹೇಳಿದ್ದು ರಾಷ್ಟ್ರ ಧ್ವಜವನ್ನೇ ಎಂಬುವುದರಲ್ಲಿ ಅನುಮಾನವಿಲ್ಲ. ಈ ರೀತಿಯ ಹೇಳಿಕೆ ಕೊಡುವುದು ದೇಶದ್ರೋಹಕ್ಕೆ ಸಮವಲ್ಲವೇ? ಸಿ.ಟಿ ರವಿ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕಲ್ಲವೇ? ಎಂಬ ಪ್ರಶ್ನೆ ಮೂಡಿದೆ.

ರಾಜ್ಯ ಕಾಂಗ್ರೆಸ್‌ ಸಿ.ಟಿ ರವಿಯ ಹೇಳಿಕೆ ವಿರುದ್ದ ಕಿಡಿಕಾರಿದೆ. “ಪವಿತ್ರವಾದ ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಸಿದ ದೇಶದ್ರೋಹಿ ಬಿಜೆಪಿಯ ಸಿ.ಟಿ ರವಿ ಎನ್ನುವ ಕೋಮು ಕ್ರಿಮಿ ದೇಶದ ಘನತೆಯನ್ನು ಮಣ್ಣುಪಾಲು ಮಾಡುವ ಹೇಳಿಕೆ ನೀಡಿದ್ದಾರೆ. ತ್ರಿವರ್ಣ ಧ್ವಜ ಈಗ ಬಿಜೆಪಿ ಪ್ರಕಾರ ತಾಲಿಬಾನ್ ಧ್ವಜವಾಗಿದೆಯೇ?. ತ್ರಿವರ್ಣ ಧ್ವಜವನ್ನು ವಿರೋಧಿಸುವ ಆರ್‌.ಎಸ್‌.ಎಸ್‌ನ ಸಿದ್ಧಾಂತವನ್ನು ಬಿಜೆಪಿ ಚಾಚೂ ತಪ್ಪದೆ ಪಾಲಿಸುತ್ತಿದೆ” ಎಂದಿದೆ.

ಬಿಜೆಪಿಗೆ INDIA ಮೇಲೂ ದ್ವೇಷ, ಬಿಜೆಪಿಗೆ ಭಾರತದ ಸಂವಿಧಾನದ ಮೇಲೂ ದ್ವೇಷ, ಬಿಜೆಪಿಗೆ ಭಾರತದ ತ್ರಿವರ್ಣ ಧ್ವಜದ ಮೇಲೂ ದ್ವೇಷ. ಇಂತಹ ಬಿಜೆಪಿ ದೇಶದ್ರೋಹಿಯಲ್ಲದೆ ಇನ್ನೇನು? ಎಂದು ಪ್ರಶ್ನಿಸಿದೆ. ಸಂವಿಧಾನದ ವಿಧಿ 51ಎ(ಎ) ಪ್ರಕಾರ ಇದು ಮಹಾ ಅಪರಾಧ ಎಂದು ಹೇಳಿದೆ.

ಕೆರಗೋಡಿನಲ್ಲಿ ನಿಜವಾಗಿಯೂ ನಡೆದಿದ್ದೇನು?

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ರಂಗಮಂದಿರದ ಆವರಣದಲ್ಲಿ ನಿರ್ಮಿಸಿದ್ದ ಬೃಹತ್‌ ಧ್ವಜಸ್ಥಂಬದಲ್ಲಿ ರಾಷ್ಟ್ರಧ್ವಜ ಮತ್ತು ಕನ್ನಡ ಧ್ವಜ ಹಾರಿಸಲು ಅನುಮತಿ ಪಡೆದಿದ್ದ ಗ್ರಾಮದ ಶ್ರೀ ಗೌರಿ ಶಂಕರ ಸೇವಾ ಟ್ರಸ್ಟ್ ಪದಾಧಿಕಾರಿಗಳು ಹನುಮ ಧ್ವಜ (ಕೇಸರಿ ಧ್ವಜ) ಹಾರಿಸಿ ವಿವಾದ ಹುಟ್ಟು ಹಾಕಿದ್ದರು.

ಅನುಮತಿ ಮೀರಿ ಸಾರ್ವಜನಿಕ ಧ್ವಜಸ್ಥಂಬದಲ್ಲಿ ಹನುಮ ಧ್ವಜ ಹಾರಿಸಿದ್ದರಿಂದ ಸಹಜವಾಗಿ ಸ್ಥಳಿಯಾಡಳಿತ ಅಧಿಕಾರಿಗಳು ಅದನ್ನು ಕೆಳಗಿಳಿಸಿದ್ದರು. ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಮತ್ತು ಹಿಂದುತ್ವ ಸಂಘಟನೆಗಳ ಕಾರ್ಯಕರ್ತರು ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ.

ಜನವರಿ 28ರಂದು ಹಿಂದುತ್ವ ಸಂಘಟನೆ ನೇತೃತ್ವದಲ್ಲಿ ಧ್ವಜಸ್ಥಂಬದ ಬಳಿ ಜಮಾಯಿಸಿದ್ದ ಗ್ರಾಮದ ನೂರಾರು ಪುರುಷರು ಮತ್ತು ಮಹಿಳೆಯರು ಧ್ವಜಸ್ಥಂಬದಲ್ಲಿ ಹನುಮ ಧ್ವಜ ಮರುಸ್ಥಾಪನೆಗೆ ಪಟ್ಟು ಹಿಡಿದಿದ್ದರು. ಇದಕ್ಕೆ ಪೊಲೀಸರು ನಿರಾಕರಿಸಿದಾಗ, ಮಹಿಳೆಯರು ಏಣಿ ಇಟ್ಟು ಧ್ವಜಸ್ಥಂಬಕ್ಕೆ ಏರಿ ಕೇಸರಿ ಧ್ವಜ ಮತ್ತು ರಾಮನ ಫ್ಲೆಕ್ಸ್ ಕಟ್ಟಿದ್ದಾರೆ.

ಸ್ಪಷ್ಟನೆ ನೀಡಿದ ಸಿಎಂ:

ಕೆರಗೋಡು ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡ ಹಿನ್ನೆಲೆ ಜನವರಿ 28ರಂದು ಸಿಎಂ ಸಿದ್ದರಾಮಯ್ಯ ಈ ಕುರಿತು ಪ್ರತಿಕ್ರಿಯಿಸಿದ್ದರು. ಶ್ರೀ ಗೌರಿ ಶಂಕರ ಟ್ರಸ್ಟ್‌ನವರು ಕನ್ನಡ ಧ್ವಜ ಮತ್ತು ರಾಷ್ಟ್ರಧ್ವಜ ಹಾರಿಸಲು ಅನುಮತಿ ಪಡೆದು ಕೇಸರಿ ಧ್ವಜ ಹಾರಿಸಿದ್ದರು. ಅದನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು. ಕೆರಗೋಡು ಗ್ರಾಮ ಪಂಚಾಯತ್ ಕಾರ್ಯಾಲಯ ಯಾವ ಧ್ವಜ ಹಾರಿಸಲು ಗೌರಿ ಶಂಕರ ಟ್ರಸ್ಟ್‌ಗೆ ಅನುಮತಿ ನೀಡಿದೆ ಎಂಬ ಪತ್ರವನ್ನು ಸಿಎಂ ಹಂಚಿಕೊಂಡಿದ್ದರು.

ನಿನ್ನೆ( ಜ.30) ಧ್ವಜ ವಿವಾದ ರಾಜಕೀಯ ತಿರುವು ಪಡೆದುಕೊಂಡಿದೆ. ಬಿಜೆಪಿ ನಾಯಕ ಸಿ.ಟಿ ರವಿ, ಜೆಡಿಎಸ್ ನಾಯಕ ಕುಮಾರಸ್ವಾಮಿ ಸೇರಿದಂತೆ ಪ್ರಮುಖರು ಬೂದಿ ಮುಚ್ಚಿದ ಕೆಂಡದಂತಿದ್ದ ಗ್ರಾಮಕ್ಕೆ ತೆರಳಿ ಹಿಂದುತ್ವ ಕಾರ್ಯಕರ್ತರ ಜೊತೆ ಗ್ರಾಮದಿಂದ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ಮಾಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಜಾತ್ಯಾತೀತ ಜನತಾದಳದ ನಾಯಕ ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಂಡು ಅಖಾಡಕ್ಕೆ ಇಳಿದಿದ್ದು ಗಮನಾರ್ಹವಾಗಿತ್ತು.

ಅತ್ತ ಬಿಜೆಪಿ, ಜೆಡಿಎಸ್‌ ನಾಯಕರು ಮತ್ತು ಸಂಘಪರಿವಾರದ ಕಾರ್ಯಕರ್ತರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಪಾದಯಯಾತ್ರೆ ನಡೆಸುತ್ತಿದ್ದರೆ, ಇತ್ತ ಪೊಲೀಸರು ಮತ್ತು ಸ್ಥಳೀಯಾಡಳಿತದ ಅಧಿಕಾರಿಗಳು ವಿವಾದಿತ ಧ್ವಜಸ್ಥಂಬದಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಈ ಮೂಲಕ ವಿವಾದ ಶಮನಗೊಳಿಸುವ ಪ್ರಯತ್ನ ಮಾಡಿದ್ದಾರೆ. ಸದ್ಯಕ್ಕೆ ಗ್ರಾಮದಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದ್ದು, ಪರಿಸ್ಥಿತಿ ಪೊಲೀಸರ ನಿಯಂತ್ರಣದಲ್ಲಿದೆ.

ಇದನ್ನೂ ಓದಿ : ಹನುಮಧ್ವಜ ವಿವಾದ: ಪರಿಸ್ಥಿತಿ ಪ್ರಕ್ಷುಬ್ಧಗೊಳಿಸಿದ ಹಿಂದುತ್ವ ಕಾರ್ಯಕರ್ತರು; ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. He is not fit for public administrative so public not given vote to him last election he is such a foolish fellow he is just talking with out knowledge keep on dring and run looti Ravi manuvadi

LEAVE A REPLY

Please enter your comment!
Please enter your name here

- Advertisment -

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...