Homeಮುಖಪುಟಹೆದ್ದಾರಿಯ ಮಧ್ಯೆಯೆ ಲೈಂಗಿಕ ಕ್ರಿಯೆ ನಡೆಸಿದ ಬಿಜೆಪಿ ನಾಯಕ; ವಿಡಿಯೊ ವೈರಲ್!

ಹೆದ್ದಾರಿಯ ಮಧ್ಯೆಯೆ ಲೈಂಗಿಕ ಕ್ರಿಯೆ ನಡೆಸಿದ ಬಿಜೆಪಿ ನಾಯಕ; ವಿಡಿಯೊ ವೈರಲ್!

- Advertisement -
- Advertisement -

ಮಧ್ಯಪ್ರದೇಶದ ಬಿಜೆಪಿ ಮುಖಂಡರೊಬ್ಬರು ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ನಿಂತು ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಸಿಸಿಟಿವಿ ದೃಶ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಹೆದ್ದಾರಿಯ ಮಧ್ಯೆಯೆ

ಕಾಮಕೃತ್ಯದಲ್ಲಿ ತೊಡಗಿಸಿಕೊಂಡು ಸಿಕ್ಕಿಬಿದ್ದಿರುವ ಬಿಜೆಪಿ ಮುಖಂಡನನ್ನು ಮನೋಹರ್‌ಲಾಲ್ ಧಾಕಡ್‌ ಎಂದು ಗುರುತಿಸಲಾಗಿದೆ. ಈತ ಮಧ್ಯಪ್ರದೇಶದ ಮಂದ್ಸೌ‌ರ್‌ನ ಸಕ್ರಿಯ ಬಿಜೆಪಿ ನಾಯಕನಾಗಿದ್ದು, ಬಿಜೆಪಿಯ ರಾಷ್ಟ್ರೀಯ ಯುವಮೋರ್ಚಾ ಘಟಕದಲ್ಲೂ ಜವಾಬ್ದಾರಿ ಹೊಂದಿದ್ದರು ಎಂದು ತಿಳಿದುಬಂದಿದೆ.

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರನ್ನು ನಿಲ್ಲಿಸಿದ ಬಳಿಕ, ಕಾರಿನಿಂದ ಇಳಿಯುವ ನಗ್ನ ಮಹಿಳೆಯೊಂದಿಗೆ ರಸ್ತೆಯಲ್ಲೇ ನಿಂತು ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಘಟನೆಯು ಹೆದ್ದಾರಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿರುವುದಾಗಿ ವರದಿಯಾಗಿದೆ. ಕಾಮಕೃತ್ಯದ ವಿಡಿಯೋ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾದ ಕಾರಿನ ನಂಬರ್ ಪ್ಲೇಟ್ ಅನ್ನು ಆಧರಿಸಿ ಪರಿಶೀಲನೆ ನಡೆಸಿದಾಗ ಕಾರು ಮನೋಹರ್ ಲಾಲ್ ಧಾಕಡ್ ಅವರಿಗೆ ಸೇರಿದ್ದೆಂದು ತಿಳಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಭಾನ್ಪುರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 296, 285, 3 (5) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಘಟನೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಮಂದ್ಸೌ‌ರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಆನಂದ್‌, “ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋ ಗಮನಕ್ಕೆ ಬಂದಿದೆ. ತನಿಖೆಯ ವೇಳೆ ಆ ವಿಡಿಯೋ ದೆಹಲಿ ಮುಂಬೈ ಅಷ್ಟಪಥದ ಎಕ್ಸ್‌ಪ್ರೆಸ್‌ವೇಯ ಪ್ರದೇಶದ್ದು ಎಂದು ಕಂಡುಬಂದಿದೆ. ಈ ವೈರಲ್ ವಿಡಿಯೋಗೆ ಸಂಬಂಧಿಸಿದಂತೆ, ಭಾನ್ಪುರದಲ್ಲಿ ಸೆಕ್ಷನ್ 296, 285, 3 (5) ಬಿ.ಎನ್.ಎಸ್. ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಮನೋಹರ್ ಲಾಲ್ ಧಾಕಡ್ ಅವರಿಗೆ ಇತ್ತೀಚೆಗಷ್ಟೇ ಬಿಜೆಪಿಯ ರಾಷ್ಟ್ರೀಯ ಯುವಮೋರ್ಚಾದಲ್ಲೂ ಪ್ರಮುಖ ಜವಾಬ್ದಾರಿ ನೀಡಲಾಗಿತ್ತು ಎಂದು ವರದಿಯಾಗಿದೆ. ಈ ಘಟನೆಯು ಸುಮಾರು ನಾಲ್ಕು ದಿನಗಳ ಹಿಂದೆ ನಡೆದಿದ್ದೆಂದು ವರದಿಯಾಗಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರಾದರೂ, ಮನೋಹರ್‌ಲಾಲ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಮನೋಹರ್‌ಲಾಲ್ ಧಾಕಡ್‌ ಅವರು ವಿವಾಹಿತರಾಗಿದ್ದು, ಅವರ ಪತ್ನಿ ಜಿಲ್ಲಾ ಪಂಚಾಯತ್ ಸದಸ್ಯರು ಕೂಡ ಆಗಿದ್ದಾರೆ ಎಂದು ತಿಳಿದುಬಂದಿದೆ.

ಮನೋಹರ್‌ಲಾಲ್ ಧಾಕಡ್‌ ಅವರ ಈ ಕಾಮಕೃತ್ಯದ ವಿಡಿಯೋ ವೈರಲಾಗುತ್ತಿದ್ದಂತೆಯೇ ಬಿಜೆಪಿ ವಿರುದ್ಧ ಮುಗಿಬಿದ್ದಿರುವ ಮಧ್ಯಪ್ರದೇಶದ ಕಾಂಗ್ರೆಸ್, “ಮಂದ್ಸೌ‌ರ್ ಬಿಜೆಪಿ ನಾಯಕ ಮತ್ತು ಜಿಲ್ಲಾ ಪಂಚಾಯತ್ ಸದಸ್ಯೆಯ ಪತಿಯಾಗಿರುವ ಮನೋಹರ್‌ಲಾಲ್ ಧಾಕಡ್‌ ಅವರು ಎಕ್ಸ್‌ಪ್ರೆಸ್‌ ವೇಯಲ್ಲಿ ಅಶ್ಲೀಲ ಕೃತ್ಯದ ಅತ್ಯಂತ ಆಕ್ಷೇಪಾರ್ಹ ವೀಡಿಯೊ ವೈರಲ್ ಆಗಿ ನಾಲ್ಕು ದಿನಗಳಾಗಿವೆ. ಆದರೂ ಬಿಜೆಪಿಯ ಅವರನ್ನು ಪಕ್ಷದಿಂದ ಉಚ್ಛಾಟಿಸಿಲ್ಲ” ಎಂದು ಹೇಳಿದೆ.

“ಬಿಜೆಪಿಯ ಜಿಲ್ಲಾಧ್ಯಕ್ಷರು ವಿಡಿಯೋದ ಸತ್ಯಾಸತ್ಯತೆಯವನ್ನು ಪರಿಶೀಲಿಸುವುದಾಗಿ ಹೇಳುತ್ತಿದ್ದಾರೆ. ಬಿಜೆಪಿ ನಾಯಕರ ಚಾರಿತ್ರ್ಯ ಪಾತಾಳಕ್ಕೆ ತಲುಪಿದೆ ಎಂಬುದು ಇಂತಹ ಕೃತ್ಯಗಳಿಂದ ತಿಳಿಯಬಹುದು. ಇದು ಇಡೀ ಸಮಾಜಕ್ಕೆ ಅವಮಾನಕರ ಘಟನೆ. ಅಧಿಕಾರದ ದುರಾಸೆಯಲ್ಲಿ ಪಕ್ಷವು ನೈತಿಕತೆಯನ್ನು ಚರಂಡಿಗೆ ಎಸೆದಿದೆ” ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಹೆದ್ದಾರಿಯ ಮಧ್ಯೆಯೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪ್ರಧಾನಿ ಮೋದಿಗೆ ಅವಮಾನ ಆರೋಪ: ದಲಿತ ರ‍್ಯಾಪರ್ ವೇಡನ್ ವಿರುದ್ಧ ಗೃಹ ಸಚಿವಾಲಯ, ಎನ್ಐಎಗೆ ದೂರು

ಪ್ರಧಾನಿ ಮೋದಿಗೆ ಅವಮಾನ ಆರೋಪ: ದಲಿತ ರ‍್ಯಾಪರ್ ವೇಡನ್ ವಿರುದ್ಧ ಗೃಹ ಸಚಿವಾಲಯ, ಎನ್ಐಎಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...