Homeಮುಖಪುಟಹರಿಯಾಣ ಸ್ಥಳೀಯ ಸಂಸ್ಥೆ ಸೋಲಿಗೆ ಬಿಜೆಪಿ ಮುಖಂಡ ನೀಡಿದ ಕಾರಣವೇನು ಗೊತ್ತೆ?

ಹರಿಯಾಣ ಸ್ಥಳೀಯ ಸಂಸ್ಥೆ ಸೋಲಿಗೆ ಬಿಜೆಪಿ ಮುಖಂಡ ನೀಡಿದ ಕಾರಣವೇನು ಗೊತ್ತೆ?

- Advertisement -
- Advertisement -

ಹರಿಯಾಣದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳು ಸೋಲು ಕಂಡಿದ್ದವು. ಹರಿಯಾಣದ ಐದು ಮುನ್ಸಿಪಾಲ್ಟಿ ಚುನಾವಣೆಯಲ್ಲಿ ಮೂರರಲ್ಲಿ ಅನುಭವಿಸಿದ ಸೋಲಿಗೆ ಬಿಜೆಪಿ ವಿವರಣೆ ನೀಡಿದೆ. ಡಿಸೆಂಬರ್ 25, 26 ಮತ್ತು 27 ರಜಾದಿನಗಳಾಗಿದ್ದವು. ಆಗ ನಮ್ಮ ವೋಟ್‌ಬ್ಯಾಂಕ್‌ಗೆ ಸೇರಿದ ಮತದಾರರು ಲಾಂಗ್‌ಟ್ರಿಪ್ ಮೇಲೆ ಹೋಗಿದ್ದರಿಂದ ಮತದಾನದಲ್ಲಿ ಭಾಗವಹಿಸಿಲ್ಲ. ಹೀಗಾಗಿ ಹಿನ್ನಡೆಯಾಗಿದೆ ಎಂದು ಬಿಜೆಪಿ ವಿವರಣೆ ನೀಡಿದೆ!

ಹರಿಯಾಣ ಬಿಜೆಪಿ ವಕ್ತಾರ ಸಂಜಯ್ ಶರ್ಮಾ ವಿವರಣೆ ನೀಡಿದ್ದು “‘ಡಿಸೆಂಬರ್ 25, 26 ಮತ್ತು 27 ರಜಾದಿನಗಳಾಗಿದ್ದವು. ನಿಮಗೆ ಗೊತ್ತಲ್ಲ, ಅದು ವರ್ಷಾಂತ್ಯದ ಸಮಯ ಮತ್ತು ಈ ವೇಳೆ ಸಾಲು ರಜೆ ಬರುವುದರಿಂದ ಜನರು ದೂರದ ಸ್ಥಳಗಳಿಗೆ ಟ್ರಿಪ್ ಹೋಗುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ದುರದೃಷ್ಟವಶಾತ್, ಹೀಗೆ ರಜೆ ಕಳೆಯಲು ಹೋದವರಲ್ಲಿ ಅಧಿಕ ಜನರು ಬಿಜೆಪಿಯ ವೋಟ್‌ಬ್ಯಾಂಕ್‌ಗೆ ಸೇರಿದವರು. ಹೀಗಾಗಿ ಮತದಾನದಲ್ಲಿ ಅವರು ಭಾಗವಹಿಸದೇ ಇದ್ದುದೇ ನಮ್ಮ ಸೋಲಿಗೆ ಕಾರಣ” ಎಂದಿದ್ದಾರೆ.

ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಈಗಷ್ಟೇ ಒಂದು ವರ್ಷ ಮುಗಿಸಿದ ಸಂದರ್ಭದಲ್ಲಿ ಮತ್ತು ರೈತರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುವ ಸಮಯದಲ್ಲೇ ಹರಿಯಾಣ ಬಿಜೆಪಿ ಹಿನ್ನಡೆ ಅನುಭವಿಸಿ ಮುಖಭಂಗಕ್ಕೆ ಒಳಗಾಗಿದೆ.

ಬಿಜೆಪಿಯ ಮಿತ್ರ ಪಕ್ಷ ಜನತಾ ಜನ್‌ನಾಯಕ್ ಪಾರ್ಟಿ (ಜೆಜೆಪಿ) ಸೋನಾಪತ್ ಮತ್ತು ಅಂಬಾಲಾದ ಮೇಯರ್ ಚುನಾವಣೆಯಲ್ಲಿ ಭಾರಿ ಸೋಲು ಕಂಡಿದೆ. ಮೂರರಲ್ಲಿ ಎರಡು ಸೋಲುಗಳು ಉಪ ಮುಖ್ಯಮಂತ್ರಿ ಮತ್ತು ಜೆಜೆಪಿ ನಾಯಕ ದುಷ್ಯಂತ್ ಸಿಂಗ್ ಪ್ರಾಬಲ್ಯವಿರುವ ಪ್ರದೇಶಗಳಾಗಿವೆ ಮತ್ತು ದುಷ್ಯಂತ್‌ಗೆ ಈ ಹಿಂದೆ ರೈತರು ದೊಡ್ಡ ಸಂಖ್ಯೆಯಲ್ಲಿ ಬೆಂಬಲಿಸಿದ್ದರು.

ಗೃಹ ಸಚಿವ ಅನಿಲ್ ವಿಜ್ ಜಿಲ್ಲೆಯಲ್ಲಿ ಬರುವ, ಬಿಜೆಪಿ ಶಾಸಕ ಮತ್ತು ಬಿಜೆಪಿ ಸಂಸದನ ವ್ಯಾಪ್ತಿಗೆ ಒಳಪಡುವ ಅಂಬಾಲಾದಲ್ಲಿ ಬಿಜೆಪಿ ಸೋತಿದ್ದಕ್ಕೆ ರೈತರು ಸಿಹಿ ಹಂಚಿ, ಹಾಡಿ, ಕುಣಿದು ಸಂಭ್ರಮಿಸಿದ್ದರು.
ಅಂಬಾಲಾದ ಬಿಜೆಪಿ ಶಾಸಕ ಅನಿಲ್ ಅಸೀಮ್, ‘ಇಲ್ಲಿ ಎಲ್ಲರೂ ಬಿಜೆಪಿ ವಿರುದ್ಧ ಒಂದಾಗಿದ್ದರು. ಸರ್ಕಾರ ಒಳ್ಳೆಯ ಕೆಲಸ ಮಾಡಿದಾಗ ಅದನ್ನು ತಡೆಯಲು ಎಲ್ಲರೂ ಕೈ ಜೋಡಿಸುತ್ತಾರೆ. ಹರಿಯಾಣದಲ್ಲಿ ಇದೇ ಸಂಭವಿಸುತ್ತಿದೆ. ಅವರ ಅಜೆಂಡಾ ಅರ್ಥರಹಿತವಾದದ್ದು ಮತ್ತು ಅವರಿಗೆ ಯಾವುದೇ ಗುರಿಯೂ ಇಲ್ಲ. ಬಿಜೆಪಿ ತಡೆಯುವುದೇ ಅವರ ಉದ್ದೇಶ. ಮೊದಲು ಬಿಜೆಪಿ ತಡೆಯೋಣ, ನಂತರ ನಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳೋಣ ಎಂಬ ನಿಲುವನ್ನು ಹೊಂದಿದ್ದಾರೆ’ ಎಂದು ಹೇಳಿದ್ದಾರೆ.

ಆದರೆ, ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಪಕ್ಷಕ್ಕೆ ಹಿನ್ನಡೆ ಮಾಡಿದೆ ಎಂದು ಅಸೀಂ ಒಪ್ಪಿಕೊಂಡಿದ್ದಾರೆ.


ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...