Homeಮುಖಪುಟಹರಿಯಾಣ ಸ್ಥಳೀಯ ಸಂಸ್ಥೆ ಸೋಲಿಗೆ ಬಿಜೆಪಿ ಮುಖಂಡ ನೀಡಿದ ಕಾರಣವೇನು ಗೊತ್ತೆ?

ಹರಿಯಾಣ ಸ್ಥಳೀಯ ಸಂಸ್ಥೆ ಸೋಲಿಗೆ ಬಿಜೆಪಿ ಮುಖಂಡ ನೀಡಿದ ಕಾರಣವೇನು ಗೊತ್ತೆ?

- Advertisement -
- Advertisement -

ಹರಿಯಾಣದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳು ಸೋಲು ಕಂಡಿದ್ದವು. ಹರಿಯಾಣದ ಐದು ಮುನ್ಸಿಪಾಲ್ಟಿ ಚುನಾವಣೆಯಲ್ಲಿ ಮೂರರಲ್ಲಿ ಅನುಭವಿಸಿದ ಸೋಲಿಗೆ ಬಿಜೆಪಿ ವಿವರಣೆ ನೀಡಿದೆ. ಡಿಸೆಂಬರ್ 25, 26 ಮತ್ತು 27 ರಜಾದಿನಗಳಾಗಿದ್ದವು. ಆಗ ನಮ್ಮ ವೋಟ್‌ಬ್ಯಾಂಕ್‌ಗೆ ಸೇರಿದ ಮತದಾರರು ಲಾಂಗ್‌ಟ್ರಿಪ್ ಮೇಲೆ ಹೋಗಿದ್ದರಿಂದ ಮತದಾನದಲ್ಲಿ ಭಾಗವಹಿಸಿಲ್ಲ. ಹೀಗಾಗಿ ಹಿನ್ನಡೆಯಾಗಿದೆ ಎಂದು ಬಿಜೆಪಿ ವಿವರಣೆ ನೀಡಿದೆ!

ಹರಿಯಾಣ ಬಿಜೆಪಿ ವಕ್ತಾರ ಸಂಜಯ್ ಶರ್ಮಾ ವಿವರಣೆ ನೀಡಿದ್ದು “‘ಡಿಸೆಂಬರ್ 25, 26 ಮತ್ತು 27 ರಜಾದಿನಗಳಾಗಿದ್ದವು. ನಿಮಗೆ ಗೊತ್ತಲ್ಲ, ಅದು ವರ್ಷಾಂತ್ಯದ ಸಮಯ ಮತ್ತು ಈ ವೇಳೆ ಸಾಲು ರಜೆ ಬರುವುದರಿಂದ ಜನರು ದೂರದ ಸ್ಥಳಗಳಿಗೆ ಟ್ರಿಪ್ ಹೋಗುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ದುರದೃಷ್ಟವಶಾತ್, ಹೀಗೆ ರಜೆ ಕಳೆಯಲು ಹೋದವರಲ್ಲಿ ಅಧಿಕ ಜನರು ಬಿಜೆಪಿಯ ವೋಟ್‌ಬ್ಯಾಂಕ್‌ಗೆ ಸೇರಿದವರು. ಹೀಗಾಗಿ ಮತದಾನದಲ್ಲಿ ಅವರು ಭಾಗವಹಿಸದೇ ಇದ್ದುದೇ ನಮ್ಮ ಸೋಲಿಗೆ ಕಾರಣ” ಎಂದಿದ್ದಾರೆ.

ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಈಗಷ್ಟೇ ಒಂದು ವರ್ಷ ಮುಗಿಸಿದ ಸಂದರ್ಭದಲ್ಲಿ ಮತ್ತು ರೈತರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುವ ಸಮಯದಲ್ಲೇ ಹರಿಯಾಣ ಬಿಜೆಪಿ ಹಿನ್ನಡೆ ಅನುಭವಿಸಿ ಮುಖಭಂಗಕ್ಕೆ ಒಳಗಾಗಿದೆ.

ಬಿಜೆಪಿಯ ಮಿತ್ರ ಪಕ್ಷ ಜನತಾ ಜನ್‌ನಾಯಕ್ ಪಾರ್ಟಿ (ಜೆಜೆಪಿ) ಸೋನಾಪತ್ ಮತ್ತು ಅಂಬಾಲಾದ ಮೇಯರ್ ಚುನಾವಣೆಯಲ್ಲಿ ಭಾರಿ ಸೋಲು ಕಂಡಿದೆ. ಮೂರರಲ್ಲಿ ಎರಡು ಸೋಲುಗಳು ಉಪ ಮುಖ್ಯಮಂತ್ರಿ ಮತ್ತು ಜೆಜೆಪಿ ನಾಯಕ ದುಷ್ಯಂತ್ ಸಿಂಗ್ ಪ್ರಾಬಲ್ಯವಿರುವ ಪ್ರದೇಶಗಳಾಗಿವೆ ಮತ್ತು ದುಷ್ಯಂತ್‌ಗೆ ಈ ಹಿಂದೆ ರೈತರು ದೊಡ್ಡ ಸಂಖ್ಯೆಯಲ್ಲಿ ಬೆಂಬಲಿಸಿದ್ದರು.

ಗೃಹ ಸಚಿವ ಅನಿಲ್ ವಿಜ್ ಜಿಲ್ಲೆಯಲ್ಲಿ ಬರುವ, ಬಿಜೆಪಿ ಶಾಸಕ ಮತ್ತು ಬಿಜೆಪಿ ಸಂಸದನ ವ್ಯಾಪ್ತಿಗೆ ಒಳಪಡುವ ಅಂಬಾಲಾದಲ್ಲಿ ಬಿಜೆಪಿ ಸೋತಿದ್ದಕ್ಕೆ ರೈತರು ಸಿಹಿ ಹಂಚಿ, ಹಾಡಿ, ಕುಣಿದು ಸಂಭ್ರಮಿಸಿದ್ದರು.
ಅಂಬಾಲಾದ ಬಿಜೆಪಿ ಶಾಸಕ ಅನಿಲ್ ಅಸೀಮ್, ‘ಇಲ್ಲಿ ಎಲ್ಲರೂ ಬಿಜೆಪಿ ವಿರುದ್ಧ ಒಂದಾಗಿದ್ದರು. ಸರ್ಕಾರ ಒಳ್ಳೆಯ ಕೆಲಸ ಮಾಡಿದಾಗ ಅದನ್ನು ತಡೆಯಲು ಎಲ್ಲರೂ ಕೈ ಜೋಡಿಸುತ್ತಾರೆ. ಹರಿಯಾಣದಲ್ಲಿ ಇದೇ ಸಂಭವಿಸುತ್ತಿದೆ. ಅವರ ಅಜೆಂಡಾ ಅರ್ಥರಹಿತವಾದದ್ದು ಮತ್ತು ಅವರಿಗೆ ಯಾವುದೇ ಗುರಿಯೂ ಇಲ್ಲ. ಬಿಜೆಪಿ ತಡೆಯುವುದೇ ಅವರ ಉದ್ದೇಶ. ಮೊದಲು ಬಿಜೆಪಿ ತಡೆಯೋಣ, ನಂತರ ನಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳೋಣ ಎಂಬ ನಿಲುವನ್ನು ಹೊಂದಿದ್ದಾರೆ’ ಎಂದು ಹೇಳಿದ್ದಾರೆ.

ಆದರೆ, ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಪಕ್ಷಕ್ಕೆ ಹಿನ್ನಡೆ ಮಾಡಿದೆ ಎಂದು ಅಸೀಂ ಒಪ್ಪಿಕೊಂಡಿದ್ದಾರೆ.


ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...