Homeಮುಖಪುಟಹರಿಯಾಣ ಸ್ಥಳೀಯ ಸಂಸ್ಥೆ ಸೋಲಿಗೆ ಬಿಜೆಪಿ ಮುಖಂಡ ನೀಡಿದ ಕಾರಣವೇನು ಗೊತ್ತೆ?

ಹರಿಯಾಣ ಸ್ಥಳೀಯ ಸಂಸ್ಥೆ ಸೋಲಿಗೆ ಬಿಜೆಪಿ ಮುಖಂಡ ನೀಡಿದ ಕಾರಣವೇನು ಗೊತ್ತೆ?

- Advertisement -
- Advertisement -

ಹರಿಯಾಣದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳು ಸೋಲು ಕಂಡಿದ್ದವು. ಹರಿಯಾಣದ ಐದು ಮುನ್ಸಿಪಾಲ್ಟಿ ಚುನಾವಣೆಯಲ್ಲಿ ಮೂರರಲ್ಲಿ ಅನುಭವಿಸಿದ ಸೋಲಿಗೆ ಬಿಜೆಪಿ ವಿವರಣೆ ನೀಡಿದೆ. ಡಿಸೆಂಬರ್ 25, 26 ಮತ್ತು 27 ರಜಾದಿನಗಳಾಗಿದ್ದವು. ಆಗ ನಮ್ಮ ವೋಟ್‌ಬ್ಯಾಂಕ್‌ಗೆ ಸೇರಿದ ಮತದಾರರು ಲಾಂಗ್‌ಟ್ರಿಪ್ ಮೇಲೆ ಹೋಗಿದ್ದರಿಂದ ಮತದಾನದಲ್ಲಿ ಭಾಗವಹಿಸಿಲ್ಲ. ಹೀಗಾಗಿ ಹಿನ್ನಡೆಯಾಗಿದೆ ಎಂದು ಬಿಜೆಪಿ ವಿವರಣೆ ನೀಡಿದೆ!

ಹರಿಯಾಣ ಬಿಜೆಪಿ ವಕ್ತಾರ ಸಂಜಯ್ ಶರ್ಮಾ ವಿವರಣೆ ನೀಡಿದ್ದು “‘ಡಿಸೆಂಬರ್ 25, 26 ಮತ್ತು 27 ರಜಾದಿನಗಳಾಗಿದ್ದವು. ನಿಮಗೆ ಗೊತ್ತಲ್ಲ, ಅದು ವರ್ಷಾಂತ್ಯದ ಸಮಯ ಮತ್ತು ಈ ವೇಳೆ ಸಾಲು ರಜೆ ಬರುವುದರಿಂದ ಜನರು ದೂರದ ಸ್ಥಳಗಳಿಗೆ ಟ್ರಿಪ್ ಹೋಗುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ದುರದೃಷ್ಟವಶಾತ್, ಹೀಗೆ ರಜೆ ಕಳೆಯಲು ಹೋದವರಲ್ಲಿ ಅಧಿಕ ಜನರು ಬಿಜೆಪಿಯ ವೋಟ್‌ಬ್ಯಾಂಕ್‌ಗೆ ಸೇರಿದವರು. ಹೀಗಾಗಿ ಮತದಾನದಲ್ಲಿ ಅವರು ಭಾಗವಹಿಸದೇ ಇದ್ದುದೇ ನಮ್ಮ ಸೋಲಿಗೆ ಕಾರಣ” ಎಂದಿದ್ದಾರೆ.

ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಈಗಷ್ಟೇ ಒಂದು ವರ್ಷ ಮುಗಿಸಿದ ಸಂದರ್ಭದಲ್ಲಿ ಮತ್ತು ರೈತರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುವ ಸಮಯದಲ್ಲೇ ಹರಿಯಾಣ ಬಿಜೆಪಿ ಹಿನ್ನಡೆ ಅನುಭವಿಸಿ ಮುಖಭಂಗಕ್ಕೆ ಒಳಗಾಗಿದೆ.

ಬಿಜೆಪಿಯ ಮಿತ್ರ ಪಕ್ಷ ಜನತಾ ಜನ್‌ನಾಯಕ್ ಪಾರ್ಟಿ (ಜೆಜೆಪಿ) ಸೋನಾಪತ್ ಮತ್ತು ಅಂಬಾಲಾದ ಮೇಯರ್ ಚುನಾವಣೆಯಲ್ಲಿ ಭಾರಿ ಸೋಲು ಕಂಡಿದೆ. ಮೂರರಲ್ಲಿ ಎರಡು ಸೋಲುಗಳು ಉಪ ಮುಖ್ಯಮಂತ್ರಿ ಮತ್ತು ಜೆಜೆಪಿ ನಾಯಕ ದುಷ್ಯಂತ್ ಸಿಂಗ್ ಪ್ರಾಬಲ್ಯವಿರುವ ಪ್ರದೇಶಗಳಾಗಿವೆ ಮತ್ತು ದುಷ್ಯಂತ್‌ಗೆ ಈ ಹಿಂದೆ ರೈತರು ದೊಡ್ಡ ಸಂಖ್ಯೆಯಲ್ಲಿ ಬೆಂಬಲಿಸಿದ್ದರು.

ಗೃಹ ಸಚಿವ ಅನಿಲ್ ವಿಜ್ ಜಿಲ್ಲೆಯಲ್ಲಿ ಬರುವ, ಬಿಜೆಪಿ ಶಾಸಕ ಮತ್ತು ಬಿಜೆಪಿ ಸಂಸದನ ವ್ಯಾಪ್ತಿಗೆ ಒಳಪಡುವ ಅಂಬಾಲಾದಲ್ಲಿ ಬಿಜೆಪಿ ಸೋತಿದ್ದಕ್ಕೆ ರೈತರು ಸಿಹಿ ಹಂಚಿ, ಹಾಡಿ, ಕುಣಿದು ಸಂಭ್ರಮಿಸಿದ್ದರು.
ಅಂಬಾಲಾದ ಬಿಜೆಪಿ ಶಾಸಕ ಅನಿಲ್ ಅಸೀಮ್, ‘ಇಲ್ಲಿ ಎಲ್ಲರೂ ಬಿಜೆಪಿ ವಿರುದ್ಧ ಒಂದಾಗಿದ್ದರು. ಸರ್ಕಾರ ಒಳ್ಳೆಯ ಕೆಲಸ ಮಾಡಿದಾಗ ಅದನ್ನು ತಡೆಯಲು ಎಲ್ಲರೂ ಕೈ ಜೋಡಿಸುತ್ತಾರೆ. ಹರಿಯಾಣದಲ್ಲಿ ಇದೇ ಸಂಭವಿಸುತ್ತಿದೆ. ಅವರ ಅಜೆಂಡಾ ಅರ್ಥರಹಿತವಾದದ್ದು ಮತ್ತು ಅವರಿಗೆ ಯಾವುದೇ ಗುರಿಯೂ ಇಲ್ಲ. ಬಿಜೆಪಿ ತಡೆಯುವುದೇ ಅವರ ಉದ್ದೇಶ. ಮೊದಲು ಬಿಜೆಪಿ ತಡೆಯೋಣ, ನಂತರ ನಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳೋಣ ಎಂಬ ನಿಲುವನ್ನು ಹೊಂದಿದ್ದಾರೆ’ ಎಂದು ಹೇಳಿದ್ದಾರೆ.

ಆದರೆ, ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಪಕ್ಷಕ್ಕೆ ಹಿನ್ನಡೆ ಮಾಡಿದೆ ಎಂದು ಅಸೀಂ ಒಪ್ಪಿಕೊಂಡಿದ್ದಾರೆ.


ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...