Homeಮುಖಪುಟಹರಿಯಾಣ ಸ್ಥಳೀಯ ಸಂಸ್ಥೆ ಸೋಲಿಗೆ ಬಿಜೆಪಿ ಮುಖಂಡ ನೀಡಿದ ಕಾರಣವೇನು ಗೊತ್ತೆ?

ಹರಿಯಾಣ ಸ್ಥಳೀಯ ಸಂಸ್ಥೆ ಸೋಲಿಗೆ ಬಿಜೆಪಿ ಮುಖಂಡ ನೀಡಿದ ಕಾರಣವೇನು ಗೊತ್ತೆ?

- Advertisement -
- Advertisement -

ಹರಿಯಾಣದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳು ಸೋಲು ಕಂಡಿದ್ದವು. ಹರಿಯಾಣದ ಐದು ಮುನ್ಸಿಪಾಲ್ಟಿ ಚುನಾವಣೆಯಲ್ಲಿ ಮೂರರಲ್ಲಿ ಅನುಭವಿಸಿದ ಸೋಲಿಗೆ ಬಿಜೆಪಿ ವಿವರಣೆ ನೀಡಿದೆ. ಡಿಸೆಂಬರ್ 25, 26 ಮತ್ತು 27 ರಜಾದಿನಗಳಾಗಿದ್ದವು. ಆಗ ನಮ್ಮ ವೋಟ್‌ಬ್ಯಾಂಕ್‌ಗೆ ಸೇರಿದ ಮತದಾರರು ಲಾಂಗ್‌ಟ್ರಿಪ್ ಮೇಲೆ ಹೋಗಿದ್ದರಿಂದ ಮತದಾನದಲ್ಲಿ ಭಾಗವಹಿಸಿಲ್ಲ. ಹೀಗಾಗಿ ಹಿನ್ನಡೆಯಾಗಿದೆ ಎಂದು ಬಿಜೆಪಿ ವಿವರಣೆ ನೀಡಿದೆ!

ಹರಿಯಾಣ ಬಿಜೆಪಿ ವಕ್ತಾರ ಸಂಜಯ್ ಶರ್ಮಾ ವಿವರಣೆ ನೀಡಿದ್ದು “‘ಡಿಸೆಂಬರ್ 25, 26 ಮತ್ತು 27 ರಜಾದಿನಗಳಾಗಿದ್ದವು. ನಿಮಗೆ ಗೊತ್ತಲ್ಲ, ಅದು ವರ್ಷಾಂತ್ಯದ ಸಮಯ ಮತ್ತು ಈ ವೇಳೆ ಸಾಲು ರಜೆ ಬರುವುದರಿಂದ ಜನರು ದೂರದ ಸ್ಥಳಗಳಿಗೆ ಟ್ರಿಪ್ ಹೋಗುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ದುರದೃಷ್ಟವಶಾತ್, ಹೀಗೆ ರಜೆ ಕಳೆಯಲು ಹೋದವರಲ್ಲಿ ಅಧಿಕ ಜನರು ಬಿಜೆಪಿಯ ವೋಟ್‌ಬ್ಯಾಂಕ್‌ಗೆ ಸೇರಿದವರು. ಹೀಗಾಗಿ ಮತದಾನದಲ್ಲಿ ಅವರು ಭಾಗವಹಿಸದೇ ಇದ್ದುದೇ ನಮ್ಮ ಸೋಲಿಗೆ ಕಾರಣ” ಎಂದಿದ್ದಾರೆ.

ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಈಗಷ್ಟೇ ಒಂದು ವರ್ಷ ಮುಗಿಸಿದ ಸಂದರ್ಭದಲ್ಲಿ ಮತ್ತು ರೈತರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುವ ಸಮಯದಲ್ಲೇ ಹರಿಯಾಣ ಬಿಜೆಪಿ ಹಿನ್ನಡೆ ಅನುಭವಿಸಿ ಮುಖಭಂಗಕ್ಕೆ ಒಳಗಾಗಿದೆ.

ಬಿಜೆಪಿಯ ಮಿತ್ರ ಪಕ್ಷ ಜನತಾ ಜನ್‌ನಾಯಕ್ ಪಾರ್ಟಿ (ಜೆಜೆಪಿ) ಸೋನಾಪತ್ ಮತ್ತು ಅಂಬಾಲಾದ ಮೇಯರ್ ಚುನಾವಣೆಯಲ್ಲಿ ಭಾರಿ ಸೋಲು ಕಂಡಿದೆ. ಮೂರರಲ್ಲಿ ಎರಡು ಸೋಲುಗಳು ಉಪ ಮುಖ್ಯಮಂತ್ರಿ ಮತ್ತು ಜೆಜೆಪಿ ನಾಯಕ ದುಷ್ಯಂತ್ ಸಿಂಗ್ ಪ್ರಾಬಲ್ಯವಿರುವ ಪ್ರದೇಶಗಳಾಗಿವೆ ಮತ್ತು ದುಷ್ಯಂತ್‌ಗೆ ಈ ಹಿಂದೆ ರೈತರು ದೊಡ್ಡ ಸಂಖ್ಯೆಯಲ್ಲಿ ಬೆಂಬಲಿಸಿದ್ದರು.

ಗೃಹ ಸಚಿವ ಅನಿಲ್ ವಿಜ್ ಜಿಲ್ಲೆಯಲ್ಲಿ ಬರುವ, ಬಿಜೆಪಿ ಶಾಸಕ ಮತ್ತು ಬಿಜೆಪಿ ಸಂಸದನ ವ್ಯಾಪ್ತಿಗೆ ಒಳಪಡುವ ಅಂಬಾಲಾದಲ್ಲಿ ಬಿಜೆಪಿ ಸೋತಿದ್ದಕ್ಕೆ ರೈತರು ಸಿಹಿ ಹಂಚಿ, ಹಾಡಿ, ಕುಣಿದು ಸಂಭ್ರಮಿಸಿದ್ದರು.
ಅಂಬಾಲಾದ ಬಿಜೆಪಿ ಶಾಸಕ ಅನಿಲ್ ಅಸೀಮ್, ‘ಇಲ್ಲಿ ಎಲ್ಲರೂ ಬಿಜೆಪಿ ವಿರುದ್ಧ ಒಂದಾಗಿದ್ದರು. ಸರ್ಕಾರ ಒಳ್ಳೆಯ ಕೆಲಸ ಮಾಡಿದಾಗ ಅದನ್ನು ತಡೆಯಲು ಎಲ್ಲರೂ ಕೈ ಜೋಡಿಸುತ್ತಾರೆ. ಹರಿಯಾಣದಲ್ಲಿ ಇದೇ ಸಂಭವಿಸುತ್ತಿದೆ. ಅವರ ಅಜೆಂಡಾ ಅರ್ಥರಹಿತವಾದದ್ದು ಮತ್ತು ಅವರಿಗೆ ಯಾವುದೇ ಗುರಿಯೂ ಇಲ್ಲ. ಬಿಜೆಪಿ ತಡೆಯುವುದೇ ಅವರ ಉದ್ದೇಶ. ಮೊದಲು ಬಿಜೆಪಿ ತಡೆಯೋಣ, ನಂತರ ನಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳೋಣ ಎಂಬ ನಿಲುವನ್ನು ಹೊಂದಿದ್ದಾರೆ’ ಎಂದು ಹೇಳಿದ್ದಾರೆ.

ಆದರೆ, ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಪಕ್ಷಕ್ಕೆ ಹಿನ್ನಡೆ ಮಾಡಿದೆ ಎಂದು ಅಸೀಂ ಒಪ್ಪಿಕೊಂಡಿದ್ದಾರೆ.


ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...