Homeಕರ್ನಾಟಕಕಾಂಗ್ರೆಸ್‍ಗೆ ಸೇರಿದ ಲಕ್ಷ್ಮೀನಾರಾಯಣ: ಸೋಮಣ್ಣರ ಸೀಕ್ರೆಟ್ ಡೀಲ್

ಕಾಂಗ್ರೆಸ್‍ಗೆ ಸೇರಿದ ಲಕ್ಷ್ಮೀನಾರಾಯಣ: ಸೋಮಣ್ಣರ ಸೀಕ್ರೆಟ್ ಡೀಲ್

- Advertisement -
- Advertisement -

ಇಂದು ಮಹತ್ವದ ಬೆಳವಣಿಗೆಯೊಂದು ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಡೆದಿದೆ. ಅದರ ಮಹತ್ವವನ್ನು ಬಿಂಬಿಸಲೋ ಎಂಬಂತೆ, ಅದರಲ್ಲಿ ಬೆಂ.ದ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್, ವಿಜಯನಗರದ ಶಾಸಕ ಎಂ.ಕೃಷ್ಣಪ್ಪ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಾಮಲಿಂಗಾರೆಡ್ಡಿ ಖುದ್ದು ಹಾಜರಿದ್ದರು. ಬೆಂಗಳೂರಿನ ಮಾಜಿ ಉಪಮೇಯರ್ ಎಂ.ಲಕ್ಷ್ಮೀನಾರಾಯಣ್ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಸೇರಿದ್ದೇ ಈ ವಿದ್ಯಮಾನ.

ಇದಕ್ಕೆ ಮಹತ್ವ ಬಂದಿರುವುದು ಸ್ವತಃ ಲಕ್ಷ್ಮೀನಾರಾಯಣ್‍ರ ಸಾಮಥ್ರ್ಯದಿಂದ ಅಷ್ಟೇ ಅಲ್ಲ. ಅವರ ಗುರು ವಿ.ಸೋಮಣ್ಣ ತಮ್ಮ ಅಸಮಾಧಾನದ ಕಾರಣಕ್ಕೆ, ಲಕ್ಷ್ಮೀನಾರಾಯಣರನ್ನು ಕಾಂಗ್ರೆಸ್ಸಿಗೆ ಕಳಿಸಿದ್ದಾರೆಂದು ಭಾವಿಸಲು ಹಲವು ಕಾರಣಗಳಿವೆ. ಹಳೇ ಬಿನ್ನಿಪೇಟೆ ಕ್ಷೇತ್ರದ ವಿ.ಸೋಮಣ್ಣರನ್ನು ವಿಜಯನಗರದ ವೀರಪುತ್ರ, ‘ಸೋಲಿಲ್ಲದ ಸರದಾರ’ (ಆ ನಂತರ ಸೋಮಣ್ಣ ಸೋತರು, ಆ ಮಾತು ಬೇರೆ) ಇತ್ಯಾದಿ ವಿಶೇಷಣಗಳಿಂದ ಕರೆಯಲಾಗುತ್ತಿದ್ದುದಕ್ಕೆ ಕಾರಣಗಳಿವೆ. ಜನತಾದಳದಿಂದ ಮತ್ತು ಕಾಂಗ್ರೆಸ್‍ನಿಂದ ಸತತ ಎರಡು ಬಾರಿ ಹಳೇ ಬಿನ್ನಿಪೇಟೆ ಕ್ಷೇತ್ರದಿಂದ ಗೆದ್ದ ಸೋಮಣ್ಣ, ನಂತರ ಯಾವ ಪಕ್ಷದ ಟಿಕೆಟ್ಟೂ ಬೇಡ ಎಂದು ಪಕ್ಷೇತರವಾಗಿಯೂ ನಿಂತು ಗೆದ್ದಿದ್ದರು!

ಅದೇ ಕ್ಷೇತ್ರದ ಲೇಔಟ್ ಕೃಷ್ಣಪ್ಪರಂತಹ ಒಬ್ಬ ಭಾರೀ ಕುಳ ಕಾಂಗ್ರೆಸ್ಸಿನಲ್ಲೇ ಇದ್ದಾಗಲೂ ಬಿನ್ನಿಪೇಟೆ ಕ್ಷೇತ್ರದ ಟಿಕೆಟ್ ಪಡೆಯಲು ಸಾಧ್ಯವೇ ಇಲ್ಲದ ಕಾರಣಕ್ಕೆ ಎಂಎಲ್‍ಸಿಯಷ್ಟೇ ಆದರು. ನಂತರ ಕ್ಷೇತ್ರದ ಪುನರ್‍ವಿಂಗಡಣೆಯಲ್ಲಿ ಗೋವಿಂದರಾಜನಗರದಿಂದ ಸೋಮಣ್ಣ ಮತ್ತು ವಿಜಯನಗರದಿಂದ ಕೃಷ್ಣಪ್ಪ ಕಾಂಗ್ರೆಸ್ ಟಿಕೆಟ್ ಪಡೆದು ಗೆದ್ದಿದ್ದರು. ಯಡಿಯೂರಪ್ಪ ಸಿಎಂ ಆದಾಗ ಆಪರೇಷನ್ ಕಮಲಕ್ಕೆ ಒಳಗಾದವರಲ್ಲಿ ಸೋಮಣ್ಣ ಸಹಾ ಒಬ್ಬರು. ಆದರೆ, ಅವರ ವಿರುದ್ಧ ಕೃಷ್ಣಪ್ಪನವರ ಮಗ ಪ್ರಿಯಾಕೃಷ್ಣ ನಿಂತು, ಜೆಡಿಎಸ್‍ನ ಬೆಂಬಲದೊಂದಿಗೆ ಸೋಮಣ್ಣ ಸೋತಿದ್ದರು. ಇದು ಅವರನ್ನು ಹೈರಾಣಾಗಿಸಿ, ಬೇರೆ ಕ್ಷೇತ್ರದ ಹುಡುಕಾಟಕ್ಕೂ ಬಿದ್ದಿದ್ದರು. ಆದರೆ, ಈ ಸಾರಿ ಮತ್ತೆ ಪ್ರಿಯಾಕೃಷ್ಣರನ್ನು ಸೋಲಿಸುವ ಮುಂಚೆ ಸ್ವತಃ ಯಡಿಯೂರಪ್ಪನವರು ಸೋಮಣ್ಣರನ್ನು ಹುಡುಕಿಕೊಂಡು ಬಂದು ಸಮಾಧಾನ ಮಾಡಿ ಪಕ್ಷದಲ್ಲಿ ಉಳಿಸಿಕೊಂಡಿದ್ದರು. ಯಡ್ಡಿ ಸೋಮಣ್ಣರ ನಡುವಿನದ್ದು ಲವ್ & ಹೇಟ್ ಸಂಬಂಧವಾದರೆ, ಅನಂತಕುಮಾರ್‍ರ ಜೊತೆಗೂ ಸೋಮಣ್ಣ ಬಹಳ ಒಳ್ಳೆಯ ಸಂಬಂಧ ಹೊಂದಿದ್ದರು.

ಏಕೆಂದರೆ ಸೋಮಣ್ಣರಿಗಿರುವ ಪ್ರಭಾವ ಅಂಥದ್ದು. ಈ ಕ್ಷೇತ್ರದ ಸಾವಿರಾರು ಜನರನ್ನು ಹೆಸರಿನಿಂದ ಬಲ್ಲ ಸೋಮಣ್ಣ, ಯಾರು ಯಾವುದೇ ಸಮಸ್ಯೆ ತಂದರೂ ಬಗೆಹರಿಸುತ್ತಿದ್ದ ವ್ಯಕ್ತಿ. ಬೆಂಗಳೂರಿನ ಮೇಯರ್ ಸ್ಥಾನಕ್ಕೆ ನೇರ ಚುನಾವಣೆ ನಡೆಯಬೇಕು ಎಂಬ ಚರ್ಚೆಯಿದ್ದಾಗ ಅದಕ್ಕೆ ದೊಡ್ಡ ಮಟ್ಟದಲ್ಲಿ ಕೇಳಿಬಂದ ಹೆಸರು ಸೋಮಣ್ಣರದ್ದೇ.

ಸೋಮಣ್ಣ ತನ್ನ ಮಗನನ್ನು ರಾಜಕಾರಣಕ್ಕೆ ತರುವ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರಾದರೂ, ತನ್ನ ಆಪ್ತ ಶಿಷ್ಯರಾದ ಎಚ್.ರವೀಂದ್ರ ಮತ್ತು ಲಕ್ಷ್ಮೀನಾರಾಯಣ ಇಬ್ಬರಿಗೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನಲ್ಲೇ ಟಿಕೆಟ್ ಕೊಡಿಸಿದ್ದರು. ಆ ರೀತಿಯಲ್ಲಿ ‘ನಂಬಿದವರನ್ನು ಪೊರೆವ’ ವಿಚಾರದಲ್ಲಿ ಅವರ ಬಗ್ಗೆ ಅಂತಹ ಕೆಟ್ಟ ಹೆಸರಿಲ್ಲ.

ಇನ್ನು ಲಕ್ಷ್ಮೀನಾರಾಯಣರ ವಿಚಾರಕ್ಕೆ ಬರುವುದಾದರೆ, ಆವಲಹಳ್ಳಿ ಪಟೇಲರ ಕುಟುಂಬದ ಸಂಬಂಧಿಯಾದ ಅವರು ಭಾರೀ ದೊಡ್ಡ ಕುಳವೇನಾಗಿರಲಿಲ್ಲ. ನಗರದೊಳಗೇ ಇದ್ದರೂ, ಇನ್ನೂ ಹಳ್ಳಿಯ ರೀತಿ ರಿವಾಜುಗಳನ್ನು ಉಳಿಸಿಕೊಂಡಿರುವ ಆವಲಹಳ್ಳಿಯಲ್ಲಿ ಅಲ್ಲಿನ ದೊಡ್ಡ ಕುಳಗಳಿಗೆ ಸೆಡ್ಡು ಹೊಡೆದು ರಾಜಕೀಯ ಬಲ ರೂಪಿಸಿಕೊಂಡವರು ಲಕ್ಷ್ಮೀನಾರಾಯಣ್. ಸಹಜವಾಗಿ ಕಾರ್ಪೋರೇಟರ್ ಚುನಾವಣೆಗೆ ನಿಂತು ಗೆಲ್ಲಲು ಬಯಸಿದ ಅವರನ್ನು ಪೋಷಿಸಿದ್ದು ಸೋಮಣ್ಣರೇ. ನಂತರ ಉಪಮೇಯರ್ ಮಾಡಿದ್ದು, ಎಂಎಲ್‍ಎ ಟಿಕೆಟ್ ಕೊಡಿಸಿದ್ದು ಎಲ್ಲವೂ ಸೋಮಣ್ಣರೇ. ಚಾಮರಾಜಪೇಟೆ ಕ್ಷೇತ್ರದಲ್ಲಿ ಜಮೀರ್ ಅಹಮದ್ ವಿರುದ್ಧ ಸೋತರೂ ಲಕ್ಷ್ಮೀನಾರಾಯಣ್ ಪ್ರಭಾವಿಯೇ.

ಈ ಸಾರಿ ಲೋಕಸಭಾ ಚುನಾವಣೆಯಲ್ಲಿ ತೇಜಸ್ವಿನಿ ಅನಂತಕುಮಾರ್‍ಗೆ ಟಿಕೆಟ್ ತಪ್ಪಿಸಿ, ತೇಜಸ್ವಿ ಸೂರ್ಯಗೆ ಕೊಟ್ಟ ನಂತರ ಬಹಿರಂಗವಾಗಿ ಕಿಡಿಕಾರಿದ್ದು ಸೋಮಣ್ಣ. ತನಗೆ ಕೆಲವು ವಿಚಾರಗಳಲ್ಲಿ ಸ್ಪಷ್ಟೀಕರಣ ಸಿಗುವವರೆಗೂ ಪ್ರಚಾರಕ್ಕೂ ಹೋಗುವುದಿಲ್ಲವೆಂದು ಪಟ್ಟು ಹಿಡಿದಿದ್ದರು. ಇಂದು ಕಾರ್ಯಕರ್ತರ ಸಭೆ ಕರೆದು ಪ್ರಚಾರ ಶುರು ಮಾಡಿದ್ದಾರಾದರೂ, ಇಂದೇ ಲಕ್ಷ್ಮೀನಾರಾಯಣ ಕಾಂಗ್ರೆಸ್ ಸೇರಿರುವುದು ಕೇವಲ ಅವರ ವ್ಯಕ್ತಿಗತ ತೀರ್ಮಾನ ಆಗಿರಲಾರದು.

ಸೋಮಣ್ಣರ ಪ್ರಭಾವವಿರುವ ಹಳೇ ಬಿನ್ನಿಪೇಟೆ ಕ್ಷೇತ್ರವ್ಯಾಪ್ತಿಯ ಎಲ್ಲೆಡೆ ಅವರ ಪ್ರತಿನಿಧಿಯಾಗಿಯೇ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್‍ರ ಪರವಾಗಿ ಲಕ್ಷ್ಮೀನಾರಾಯಣ್ ಕೆಲಸ ಮಾಡುತ್ತಾರೆನ್ನುವುದು ಒಳ ಒಪ್ಪಂದ ಇದ್ದಂತಿದೆ. ಚುನಾವಣಾ ಸಂದರ್ಭದಲ್ಲಿ ಯಾವ ಮೌಲ್ಯಗಳೂ ಉಳಿದುಕೊಂಡಿರದ ರಾಜಕಾರಣದಲ್ಲಿ ಸಿದ್ಧಾಂತಕ್ಕೆ ಬೆಲೆಯೇನೂ ಇರುವುದಿಲ್ಲ. ಹಾಗಾಗಿ ಇಂತಹ ಪಕ್ಷಾಂತರಗಳು, ಒಳಒಪ್ಪಂದಗಳು ಮಾಮೂಲು ಎನ್ನುವಂತಹ ದುರಂತದ ಸ್ಥಿತಿ ನಿರ್ಮಾಣವಾಗಿದೆ.

ಒಟ್ಟಿನಲ್ಲಿ ತೇಜಸ್ವಿ ಸೂರ್ಯ ಅಭ್ಯರ್ಥಿಯಾದ ಕ್ಷಣದಿಂದಲೂ ಎಡವಟ್ಟಿನ ಮೇಲೆ ಎಡವಟ್ಟಾಗುತ್ತಿದೆ. ಅದೇ ಸಂದರ್ಭದಲ್ಲಿ ಹಿಂದಿನಿಂದಲೂ ಬಿಜೆಪಿಯ ಅನಂತಕುಮಾರ್‍ರ ಪರವಾಗಿ ಕಾಂಗ್ರೆಸ್‍ನ ರಾಮಲಿಂಗಾರೆಡ್ಡಿಯವರು ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡುತ್ತಿದ್ದು, ಈ ಸಾರಿ ಅವರೂ ತೊಡೆತಟ್ಟಿ ನಿಂತಂತಿದೆ. ಇಂದಿನ ಲಕ್ಷ್ಮೀನಾರಾಯಣ್ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರೂ ಇದ್ದದ್ದು ಅದಕ್ಕೆ ಸಾಕ್ಷಿಯಂತಿದೆ. ಇವೆಲ್ಲಾ ಕಾರಣಗಳಿಂದ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಸ್ಪರ್ಧೆ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ತೇಜಸ್ವಿ ಸೋಲಿಸಲು ಸೂಲಿಬೆಲೆ ಸ್ಕೆಚ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...