Homeಕರ್ನಾಟಕಕಾಂಗ್ರೆಸ್‍ಗೆ ಸೇರಿದ ಲಕ್ಷ್ಮೀನಾರಾಯಣ: ಸೋಮಣ್ಣರ ಸೀಕ್ರೆಟ್ ಡೀಲ್

ಕಾಂಗ್ರೆಸ್‍ಗೆ ಸೇರಿದ ಲಕ್ಷ್ಮೀನಾರಾಯಣ: ಸೋಮಣ್ಣರ ಸೀಕ್ರೆಟ್ ಡೀಲ್

- Advertisement -
- Advertisement -

ಇಂದು ಮಹತ್ವದ ಬೆಳವಣಿಗೆಯೊಂದು ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಡೆದಿದೆ. ಅದರ ಮಹತ್ವವನ್ನು ಬಿಂಬಿಸಲೋ ಎಂಬಂತೆ, ಅದರಲ್ಲಿ ಬೆಂ.ದ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್, ವಿಜಯನಗರದ ಶಾಸಕ ಎಂ.ಕೃಷ್ಣಪ್ಪ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಾಮಲಿಂಗಾರೆಡ್ಡಿ ಖುದ್ದು ಹಾಜರಿದ್ದರು. ಬೆಂಗಳೂರಿನ ಮಾಜಿ ಉಪಮೇಯರ್ ಎಂ.ಲಕ್ಷ್ಮೀನಾರಾಯಣ್ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಸೇರಿದ್ದೇ ಈ ವಿದ್ಯಮಾನ.

ಇದಕ್ಕೆ ಮಹತ್ವ ಬಂದಿರುವುದು ಸ್ವತಃ ಲಕ್ಷ್ಮೀನಾರಾಯಣ್‍ರ ಸಾಮಥ್ರ್ಯದಿಂದ ಅಷ್ಟೇ ಅಲ್ಲ. ಅವರ ಗುರು ವಿ.ಸೋಮಣ್ಣ ತಮ್ಮ ಅಸಮಾಧಾನದ ಕಾರಣಕ್ಕೆ, ಲಕ್ಷ್ಮೀನಾರಾಯಣರನ್ನು ಕಾಂಗ್ರೆಸ್ಸಿಗೆ ಕಳಿಸಿದ್ದಾರೆಂದು ಭಾವಿಸಲು ಹಲವು ಕಾರಣಗಳಿವೆ. ಹಳೇ ಬಿನ್ನಿಪೇಟೆ ಕ್ಷೇತ್ರದ ವಿ.ಸೋಮಣ್ಣರನ್ನು ವಿಜಯನಗರದ ವೀರಪುತ್ರ, ‘ಸೋಲಿಲ್ಲದ ಸರದಾರ’ (ಆ ನಂತರ ಸೋಮಣ್ಣ ಸೋತರು, ಆ ಮಾತು ಬೇರೆ) ಇತ್ಯಾದಿ ವಿಶೇಷಣಗಳಿಂದ ಕರೆಯಲಾಗುತ್ತಿದ್ದುದಕ್ಕೆ ಕಾರಣಗಳಿವೆ. ಜನತಾದಳದಿಂದ ಮತ್ತು ಕಾಂಗ್ರೆಸ್‍ನಿಂದ ಸತತ ಎರಡು ಬಾರಿ ಹಳೇ ಬಿನ್ನಿಪೇಟೆ ಕ್ಷೇತ್ರದಿಂದ ಗೆದ್ದ ಸೋಮಣ್ಣ, ನಂತರ ಯಾವ ಪಕ್ಷದ ಟಿಕೆಟ್ಟೂ ಬೇಡ ಎಂದು ಪಕ್ಷೇತರವಾಗಿಯೂ ನಿಂತು ಗೆದ್ದಿದ್ದರು!

ಅದೇ ಕ್ಷೇತ್ರದ ಲೇಔಟ್ ಕೃಷ್ಣಪ್ಪರಂತಹ ಒಬ್ಬ ಭಾರೀ ಕುಳ ಕಾಂಗ್ರೆಸ್ಸಿನಲ್ಲೇ ಇದ್ದಾಗಲೂ ಬಿನ್ನಿಪೇಟೆ ಕ್ಷೇತ್ರದ ಟಿಕೆಟ್ ಪಡೆಯಲು ಸಾಧ್ಯವೇ ಇಲ್ಲದ ಕಾರಣಕ್ಕೆ ಎಂಎಲ್‍ಸಿಯಷ್ಟೇ ಆದರು. ನಂತರ ಕ್ಷೇತ್ರದ ಪುನರ್‍ವಿಂಗಡಣೆಯಲ್ಲಿ ಗೋವಿಂದರಾಜನಗರದಿಂದ ಸೋಮಣ್ಣ ಮತ್ತು ವಿಜಯನಗರದಿಂದ ಕೃಷ್ಣಪ್ಪ ಕಾಂಗ್ರೆಸ್ ಟಿಕೆಟ್ ಪಡೆದು ಗೆದ್ದಿದ್ದರು. ಯಡಿಯೂರಪ್ಪ ಸಿಎಂ ಆದಾಗ ಆಪರೇಷನ್ ಕಮಲಕ್ಕೆ ಒಳಗಾದವರಲ್ಲಿ ಸೋಮಣ್ಣ ಸಹಾ ಒಬ್ಬರು. ಆದರೆ, ಅವರ ವಿರುದ್ಧ ಕೃಷ್ಣಪ್ಪನವರ ಮಗ ಪ್ರಿಯಾಕೃಷ್ಣ ನಿಂತು, ಜೆಡಿಎಸ್‍ನ ಬೆಂಬಲದೊಂದಿಗೆ ಸೋಮಣ್ಣ ಸೋತಿದ್ದರು. ಇದು ಅವರನ್ನು ಹೈರಾಣಾಗಿಸಿ, ಬೇರೆ ಕ್ಷೇತ್ರದ ಹುಡುಕಾಟಕ್ಕೂ ಬಿದ್ದಿದ್ದರು. ಆದರೆ, ಈ ಸಾರಿ ಮತ್ತೆ ಪ್ರಿಯಾಕೃಷ್ಣರನ್ನು ಸೋಲಿಸುವ ಮುಂಚೆ ಸ್ವತಃ ಯಡಿಯೂರಪ್ಪನವರು ಸೋಮಣ್ಣರನ್ನು ಹುಡುಕಿಕೊಂಡು ಬಂದು ಸಮಾಧಾನ ಮಾಡಿ ಪಕ್ಷದಲ್ಲಿ ಉಳಿಸಿಕೊಂಡಿದ್ದರು. ಯಡ್ಡಿ ಸೋಮಣ್ಣರ ನಡುವಿನದ್ದು ಲವ್ & ಹೇಟ್ ಸಂಬಂಧವಾದರೆ, ಅನಂತಕುಮಾರ್‍ರ ಜೊತೆಗೂ ಸೋಮಣ್ಣ ಬಹಳ ಒಳ್ಳೆಯ ಸಂಬಂಧ ಹೊಂದಿದ್ದರು.

ಏಕೆಂದರೆ ಸೋಮಣ್ಣರಿಗಿರುವ ಪ್ರಭಾವ ಅಂಥದ್ದು. ಈ ಕ್ಷೇತ್ರದ ಸಾವಿರಾರು ಜನರನ್ನು ಹೆಸರಿನಿಂದ ಬಲ್ಲ ಸೋಮಣ್ಣ, ಯಾರು ಯಾವುದೇ ಸಮಸ್ಯೆ ತಂದರೂ ಬಗೆಹರಿಸುತ್ತಿದ್ದ ವ್ಯಕ್ತಿ. ಬೆಂಗಳೂರಿನ ಮೇಯರ್ ಸ್ಥಾನಕ್ಕೆ ನೇರ ಚುನಾವಣೆ ನಡೆಯಬೇಕು ಎಂಬ ಚರ್ಚೆಯಿದ್ದಾಗ ಅದಕ್ಕೆ ದೊಡ್ಡ ಮಟ್ಟದಲ್ಲಿ ಕೇಳಿಬಂದ ಹೆಸರು ಸೋಮಣ್ಣರದ್ದೇ.

ಸೋಮಣ್ಣ ತನ್ನ ಮಗನನ್ನು ರಾಜಕಾರಣಕ್ಕೆ ತರುವ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರಾದರೂ, ತನ್ನ ಆಪ್ತ ಶಿಷ್ಯರಾದ ಎಚ್.ರವೀಂದ್ರ ಮತ್ತು ಲಕ್ಷ್ಮೀನಾರಾಯಣ ಇಬ್ಬರಿಗೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನಲ್ಲೇ ಟಿಕೆಟ್ ಕೊಡಿಸಿದ್ದರು. ಆ ರೀತಿಯಲ್ಲಿ ‘ನಂಬಿದವರನ್ನು ಪೊರೆವ’ ವಿಚಾರದಲ್ಲಿ ಅವರ ಬಗ್ಗೆ ಅಂತಹ ಕೆಟ್ಟ ಹೆಸರಿಲ್ಲ.

ಇನ್ನು ಲಕ್ಷ್ಮೀನಾರಾಯಣರ ವಿಚಾರಕ್ಕೆ ಬರುವುದಾದರೆ, ಆವಲಹಳ್ಳಿ ಪಟೇಲರ ಕುಟುಂಬದ ಸಂಬಂಧಿಯಾದ ಅವರು ಭಾರೀ ದೊಡ್ಡ ಕುಳವೇನಾಗಿರಲಿಲ್ಲ. ನಗರದೊಳಗೇ ಇದ್ದರೂ, ಇನ್ನೂ ಹಳ್ಳಿಯ ರೀತಿ ರಿವಾಜುಗಳನ್ನು ಉಳಿಸಿಕೊಂಡಿರುವ ಆವಲಹಳ್ಳಿಯಲ್ಲಿ ಅಲ್ಲಿನ ದೊಡ್ಡ ಕುಳಗಳಿಗೆ ಸೆಡ್ಡು ಹೊಡೆದು ರಾಜಕೀಯ ಬಲ ರೂಪಿಸಿಕೊಂಡವರು ಲಕ್ಷ್ಮೀನಾರಾಯಣ್. ಸಹಜವಾಗಿ ಕಾರ್ಪೋರೇಟರ್ ಚುನಾವಣೆಗೆ ನಿಂತು ಗೆಲ್ಲಲು ಬಯಸಿದ ಅವರನ್ನು ಪೋಷಿಸಿದ್ದು ಸೋಮಣ್ಣರೇ. ನಂತರ ಉಪಮೇಯರ್ ಮಾಡಿದ್ದು, ಎಂಎಲ್‍ಎ ಟಿಕೆಟ್ ಕೊಡಿಸಿದ್ದು ಎಲ್ಲವೂ ಸೋಮಣ್ಣರೇ. ಚಾಮರಾಜಪೇಟೆ ಕ್ಷೇತ್ರದಲ್ಲಿ ಜಮೀರ್ ಅಹಮದ್ ವಿರುದ್ಧ ಸೋತರೂ ಲಕ್ಷ್ಮೀನಾರಾಯಣ್ ಪ್ರಭಾವಿಯೇ.

ಈ ಸಾರಿ ಲೋಕಸಭಾ ಚುನಾವಣೆಯಲ್ಲಿ ತೇಜಸ್ವಿನಿ ಅನಂತಕುಮಾರ್‍ಗೆ ಟಿಕೆಟ್ ತಪ್ಪಿಸಿ, ತೇಜಸ್ವಿ ಸೂರ್ಯಗೆ ಕೊಟ್ಟ ನಂತರ ಬಹಿರಂಗವಾಗಿ ಕಿಡಿಕಾರಿದ್ದು ಸೋಮಣ್ಣ. ತನಗೆ ಕೆಲವು ವಿಚಾರಗಳಲ್ಲಿ ಸ್ಪಷ್ಟೀಕರಣ ಸಿಗುವವರೆಗೂ ಪ್ರಚಾರಕ್ಕೂ ಹೋಗುವುದಿಲ್ಲವೆಂದು ಪಟ್ಟು ಹಿಡಿದಿದ್ದರು. ಇಂದು ಕಾರ್ಯಕರ್ತರ ಸಭೆ ಕರೆದು ಪ್ರಚಾರ ಶುರು ಮಾಡಿದ್ದಾರಾದರೂ, ಇಂದೇ ಲಕ್ಷ್ಮೀನಾರಾಯಣ ಕಾಂಗ್ರೆಸ್ ಸೇರಿರುವುದು ಕೇವಲ ಅವರ ವ್ಯಕ್ತಿಗತ ತೀರ್ಮಾನ ಆಗಿರಲಾರದು.

ಸೋಮಣ್ಣರ ಪ್ರಭಾವವಿರುವ ಹಳೇ ಬಿನ್ನಿಪೇಟೆ ಕ್ಷೇತ್ರವ್ಯಾಪ್ತಿಯ ಎಲ್ಲೆಡೆ ಅವರ ಪ್ರತಿನಿಧಿಯಾಗಿಯೇ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್‍ರ ಪರವಾಗಿ ಲಕ್ಷ್ಮೀನಾರಾಯಣ್ ಕೆಲಸ ಮಾಡುತ್ತಾರೆನ್ನುವುದು ಒಳ ಒಪ್ಪಂದ ಇದ್ದಂತಿದೆ. ಚುನಾವಣಾ ಸಂದರ್ಭದಲ್ಲಿ ಯಾವ ಮೌಲ್ಯಗಳೂ ಉಳಿದುಕೊಂಡಿರದ ರಾಜಕಾರಣದಲ್ಲಿ ಸಿದ್ಧಾಂತಕ್ಕೆ ಬೆಲೆಯೇನೂ ಇರುವುದಿಲ್ಲ. ಹಾಗಾಗಿ ಇಂತಹ ಪಕ್ಷಾಂತರಗಳು, ಒಳಒಪ್ಪಂದಗಳು ಮಾಮೂಲು ಎನ್ನುವಂತಹ ದುರಂತದ ಸ್ಥಿತಿ ನಿರ್ಮಾಣವಾಗಿದೆ.

ಒಟ್ಟಿನಲ್ಲಿ ತೇಜಸ್ವಿ ಸೂರ್ಯ ಅಭ್ಯರ್ಥಿಯಾದ ಕ್ಷಣದಿಂದಲೂ ಎಡವಟ್ಟಿನ ಮೇಲೆ ಎಡವಟ್ಟಾಗುತ್ತಿದೆ. ಅದೇ ಸಂದರ್ಭದಲ್ಲಿ ಹಿಂದಿನಿಂದಲೂ ಬಿಜೆಪಿಯ ಅನಂತಕುಮಾರ್‍ರ ಪರವಾಗಿ ಕಾಂಗ್ರೆಸ್‍ನ ರಾಮಲಿಂಗಾರೆಡ್ಡಿಯವರು ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡುತ್ತಿದ್ದು, ಈ ಸಾರಿ ಅವರೂ ತೊಡೆತಟ್ಟಿ ನಿಂತಂತಿದೆ. ಇಂದಿನ ಲಕ್ಷ್ಮೀನಾರಾಯಣ್ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರೂ ಇದ್ದದ್ದು ಅದಕ್ಕೆ ಸಾಕ್ಷಿಯಂತಿದೆ. ಇವೆಲ್ಲಾ ಕಾರಣಗಳಿಂದ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಸ್ಪರ್ಧೆ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ತೇಜಸ್ವಿ ಸೋಲಿಸಲು ಸೂಲಿಬೆಲೆ ಸ್ಕೆಚ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...