Homeಕರ್ನಾಟಕಕಾಂಗ್ರೆಸ್‍ಗೆ ಸೇರಿದ ಲಕ್ಷ್ಮೀನಾರಾಯಣ: ಸೋಮಣ್ಣರ ಸೀಕ್ರೆಟ್ ಡೀಲ್

ಕಾಂಗ್ರೆಸ್‍ಗೆ ಸೇರಿದ ಲಕ್ಷ್ಮೀನಾರಾಯಣ: ಸೋಮಣ್ಣರ ಸೀಕ್ರೆಟ್ ಡೀಲ್

- Advertisement -
- Advertisement -

ಇಂದು ಮಹತ್ವದ ಬೆಳವಣಿಗೆಯೊಂದು ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಡೆದಿದೆ. ಅದರ ಮಹತ್ವವನ್ನು ಬಿಂಬಿಸಲೋ ಎಂಬಂತೆ, ಅದರಲ್ಲಿ ಬೆಂ.ದ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್, ವಿಜಯನಗರದ ಶಾಸಕ ಎಂ.ಕೃಷ್ಣಪ್ಪ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಾಮಲಿಂಗಾರೆಡ್ಡಿ ಖುದ್ದು ಹಾಜರಿದ್ದರು. ಬೆಂಗಳೂರಿನ ಮಾಜಿ ಉಪಮೇಯರ್ ಎಂ.ಲಕ್ಷ್ಮೀನಾರಾಯಣ್ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಸೇರಿದ್ದೇ ಈ ವಿದ್ಯಮಾನ.

ಇದಕ್ಕೆ ಮಹತ್ವ ಬಂದಿರುವುದು ಸ್ವತಃ ಲಕ್ಷ್ಮೀನಾರಾಯಣ್‍ರ ಸಾಮಥ್ರ್ಯದಿಂದ ಅಷ್ಟೇ ಅಲ್ಲ. ಅವರ ಗುರು ವಿ.ಸೋಮಣ್ಣ ತಮ್ಮ ಅಸಮಾಧಾನದ ಕಾರಣಕ್ಕೆ, ಲಕ್ಷ್ಮೀನಾರಾಯಣರನ್ನು ಕಾಂಗ್ರೆಸ್ಸಿಗೆ ಕಳಿಸಿದ್ದಾರೆಂದು ಭಾವಿಸಲು ಹಲವು ಕಾರಣಗಳಿವೆ. ಹಳೇ ಬಿನ್ನಿಪೇಟೆ ಕ್ಷೇತ್ರದ ವಿ.ಸೋಮಣ್ಣರನ್ನು ವಿಜಯನಗರದ ವೀರಪುತ್ರ, ‘ಸೋಲಿಲ್ಲದ ಸರದಾರ’ (ಆ ನಂತರ ಸೋಮಣ್ಣ ಸೋತರು, ಆ ಮಾತು ಬೇರೆ) ಇತ್ಯಾದಿ ವಿಶೇಷಣಗಳಿಂದ ಕರೆಯಲಾಗುತ್ತಿದ್ದುದಕ್ಕೆ ಕಾರಣಗಳಿವೆ. ಜನತಾದಳದಿಂದ ಮತ್ತು ಕಾಂಗ್ರೆಸ್‍ನಿಂದ ಸತತ ಎರಡು ಬಾರಿ ಹಳೇ ಬಿನ್ನಿಪೇಟೆ ಕ್ಷೇತ್ರದಿಂದ ಗೆದ್ದ ಸೋಮಣ್ಣ, ನಂತರ ಯಾವ ಪಕ್ಷದ ಟಿಕೆಟ್ಟೂ ಬೇಡ ಎಂದು ಪಕ್ಷೇತರವಾಗಿಯೂ ನಿಂತು ಗೆದ್ದಿದ್ದರು!

ಅದೇ ಕ್ಷೇತ್ರದ ಲೇಔಟ್ ಕೃಷ್ಣಪ್ಪರಂತಹ ಒಬ್ಬ ಭಾರೀ ಕುಳ ಕಾಂಗ್ರೆಸ್ಸಿನಲ್ಲೇ ಇದ್ದಾಗಲೂ ಬಿನ್ನಿಪೇಟೆ ಕ್ಷೇತ್ರದ ಟಿಕೆಟ್ ಪಡೆಯಲು ಸಾಧ್ಯವೇ ಇಲ್ಲದ ಕಾರಣಕ್ಕೆ ಎಂಎಲ್‍ಸಿಯಷ್ಟೇ ಆದರು. ನಂತರ ಕ್ಷೇತ್ರದ ಪುನರ್‍ವಿಂಗಡಣೆಯಲ್ಲಿ ಗೋವಿಂದರಾಜನಗರದಿಂದ ಸೋಮಣ್ಣ ಮತ್ತು ವಿಜಯನಗರದಿಂದ ಕೃಷ್ಣಪ್ಪ ಕಾಂಗ್ರೆಸ್ ಟಿಕೆಟ್ ಪಡೆದು ಗೆದ್ದಿದ್ದರು. ಯಡಿಯೂರಪ್ಪ ಸಿಎಂ ಆದಾಗ ಆಪರೇಷನ್ ಕಮಲಕ್ಕೆ ಒಳಗಾದವರಲ್ಲಿ ಸೋಮಣ್ಣ ಸಹಾ ಒಬ್ಬರು. ಆದರೆ, ಅವರ ವಿರುದ್ಧ ಕೃಷ್ಣಪ್ಪನವರ ಮಗ ಪ್ರಿಯಾಕೃಷ್ಣ ನಿಂತು, ಜೆಡಿಎಸ್‍ನ ಬೆಂಬಲದೊಂದಿಗೆ ಸೋಮಣ್ಣ ಸೋತಿದ್ದರು. ಇದು ಅವರನ್ನು ಹೈರಾಣಾಗಿಸಿ, ಬೇರೆ ಕ್ಷೇತ್ರದ ಹುಡುಕಾಟಕ್ಕೂ ಬಿದ್ದಿದ್ದರು. ಆದರೆ, ಈ ಸಾರಿ ಮತ್ತೆ ಪ್ರಿಯಾಕೃಷ್ಣರನ್ನು ಸೋಲಿಸುವ ಮುಂಚೆ ಸ್ವತಃ ಯಡಿಯೂರಪ್ಪನವರು ಸೋಮಣ್ಣರನ್ನು ಹುಡುಕಿಕೊಂಡು ಬಂದು ಸಮಾಧಾನ ಮಾಡಿ ಪಕ್ಷದಲ್ಲಿ ಉಳಿಸಿಕೊಂಡಿದ್ದರು. ಯಡ್ಡಿ ಸೋಮಣ್ಣರ ನಡುವಿನದ್ದು ಲವ್ & ಹೇಟ್ ಸಂಬಂಧವಾದರೆ, ಅನಂತಕುಮಾರ್‍ರ ಜೊತೆಗೂ ಸೋಮಣ್ಣ ಬಹಳ ಒಳ್ಳೆಯ ಸಂಬಂಧ ಹೊಂದಿದ್ದರು.

ಏಕೆಂದರೆ ಸೋಮಣ್ಣರಿಗಿರುವ ಪ್ರಭಾವ ಅಂಥದ್ದು. ಈ ಕ್ಷೇತ್ರದ ಸಾವಿರಾರು ಜನರನ್ನು ಹೆಸರಿನಿಂದ ಬಲ್ಲ ಸೋಮಣ್ಣ, ಯಾರು ಯಾವುದೇ ಸಮಸ್ಯೆ ತಂದರೂ ಬಗೆಹರಿಸುತ್ತಿದ್ದ ವ್ಯಕ್ತಿ. ಬೆಂಗಳೂರಿನ ಮೇಯರ್ ಸ್ಥಾನಕ್ಕೆ ನೇರ ಚುನಾವಣೆ ನಡೆಯಬೇಕು ಎಂಬ ಚರ್ಚೆಯಿದ್ದಾಗ ಅದಕ್ಕೆ ದೊಡ್ಡ ಮಟ್ಟದಲ್ಲಿ ಕೇಳಿಬಂದ ಹೆಸರು ಸೋಮಣ್ಣರದ್ದೇ.

ಸೋಮಣ್ಣ ತನ್ನ ಮಗನನ್ನು ರಾಜಕಾರಣಕ್ಕೆ ತರುವ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರಾದರೂ, ತನ್ನ ಆಪ್ತ ಶಿಷ್ಯರಾದ ಎಚ್.ರವೀಂದ್ರ ಮತ್ತು ಲಕ್ಷ್ಮೀನಾರಾಯಣ ಇಬ್ಬರಿಗೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನಲ್ಲೇ ಟಿಕೆಟ್ ಕೊಡಿಸಿದ್ದರು. ಆ ರೀತಿಯಲ್ಲಿ ‘ನಂಬಿದವರನ್ನು ಪೊರೆವ’ ವಿಚಾರದಲ್ಲಿ ಅವರ ಬಗ್ಗೆ ಅಂತಹ ಕೆಟ್ಟ ಹೆಸರಿಲ್ಲ.

ಇನ್ನು ಲಕ್ಷ್ಮೀನಾರಾಯಣರ ವಿಚಾರಕ್ಕೆ ಬರುವುದಾದರೆ, ಆವಲಹಳ್ಳಿ ಪಟೇಲರ ಕುಟುಂಬದ ಸಂಬಂಧಿಯಾದ ಅವರು ಭಾರೀ ದೊಡ್ಡ ಕುಳವೇನಾಗಿರಲಿಲ್ಲ. ನಗರದೊಳಗೇ ಇದ್ದರೂ, ಇನ್ನೂ ಹಳ್ಳಿಯ ರೀತಿ ರಿವಾಜುಗಳನ್ನು ಉಳಿಸಿಕೊಂಡಿರುವ ಆವಲಹಳ್ಳಿಯಲ್ಲಿ ಅಲ್ಲಿನ ದೊಡ್ಡ ಕುಳಗಳಿಗೆ ಸೆಡ್ಡು ಹೊಡೆದು ರಾಜಕೀಯ ಬಲ ರೂಪಿಸಿಕೊಂಡವರು ಲಕ್ಷ್ಮೀನಾರಾಯಣ್. ಸಹಜವಾಗಿ ಕಾರ್ಪೋರೇಟರ್ ಚುನಾವಣೆಗೆ ನಿಂತು ಗೆಲ್ಲಲು ಬಯಸಿದ ಅವರನ್ನು ಪೋಷಿಸಿದ್ದು ಸೋಮಣ್ಣರೇ. ನಂತರ ಉಪಮೇಯರ್ ಮಾಡಿದ್ದು, ಎಂಎಲ್‍ಎ ಟಿಕೆಟ್ ಕೊಡಿಸಿದ್ದು ಎಲ್ಲವೂ ಸೋಮಣ್ಣರೇ. ಚಾಮರಾಜಪೇಟೆ ಕ್ಷೇತ್ರದಲ್ಲಿ ಜಮೀರ್ ಅಹಮದ್ ವಿರುದ್ಧ ಸೋತರೂ ಲಕ್ಷ್ಮೀನಾರಾಯಣ್ ಪ್ರಭಾವಿಯೇ.

ಈ ಸಾರಿ ಲೋಕಸಭಾ ಚುನಾವಣೆಯಲ್ಲಿ ತೇಜಸ್ವಿನಿ ಅನಂತಕುಮಾರ್‍ಗೆ ಟಿಕೆಟ್ ತಪ್ಪಿಸಿ, ತೇಜಸ್ವಿ ಸೂರ್ಯಗೆ ಕೊಟ್ಟ ನಂತರ ಬಹಿರಂಗವಾಗಿ ಕಿಡಿಕಾರಿದ್ದು ಸೋಮಣ್ಣ. ತನಗೆ ಕೆಲವು ವಿಚಾರಗಳಲ್ಲಿ ಸ್ಪಷ್ಟೀಕರಣ ಸಿಗುವವರೆಗೂ ಪ್ರಚಾರಕ್ಕೂ ಹೋಗುವುದಿಲ್ಲವೆಂದು ಪಟ್ಟು ಹಿಡಿದಿದ್ದರು. ಇಂದು ಕಾರ್ಯಕರ್ತರ ಸಭೆ ಕರೆದು ಪ್ರಚಾರ ಶುರು ಮಾಡಿದ್ದಾರಾದರೂ, ಇಂದೇ ಲಕ್ಷ್ಮೀನಾರಾಯಣ ಕಾಂಗ್ರೆಸ್ ಸೇರಿರುವುದು ಕೇವಲ ಅವರ ವ್ಯಕ್ತಿಗತ ತೀರ್ಮಾನ ಆಗಿರಲಾರದು.

ಸೋಮಣ್ಣರ ಪ್ರಭಾವವಿರುವ ಹಳೇ ಬಿನ್ನಿಪೇಟೆ ಕ್ಷೇತ್ರವ್ಯಾಪ್ತಿಯ ಎಲ್ಲೆಡೆ ಅವರ ಪ್ರತಿನಿಧಿಯಾಗಿಯೇ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್‍ರ ಪರವಾಗಿ ಲಕ್ಷ್ಮೀನಾರಾಯಣ್ ಕೆಲಸ ಮಾಡುತ್ತಾರೆನ್ನುವುದು ಒಳ ಒಪ್ಪಂದ ಇದ್ದಂತಿದೆ. ಚುನಾವಣಾ ಸಂದರ್ಭದಲ್ಲಿ ಯಾವ ಮೌಲ್ಯಗಳೂ ಉಳಿದುಕೊಂಡಿರದ ರಾಜಕಾರಣದಲ್ಲಿ ಸಿದ್ಧಾಂತಕ್ಕೆ ಬೆಲೆಯೇನೂ ಇರುವುದಿಲ್ಲ. ಹಾಗಾಗಿ ಇಂತಹ ಪಕ್ಷಾಂತರಗಳು, ಒಳಒಪ್ಪಂದಗಳು ಮಾಮೂಲು ಎನ್ನುವಂತಹ ದುರಂತದ ಸ್ಥಿತಿ ನಿರ್ಮಾಣವಾಗಿದೆ.

ಒಟ್ಟಿನಲ್ಲಿ ತೇಜಸ್ವಿ ಸೂರ್ಯ ಅಭ್ಯರ್ಥಿಯಾದ ಕ್ಷಣದಿಂದಲೂ ಎಡವಟ್ಟಿನ ಮೇಲೆ ಎಡವಟ್ಟಾಗುತ್ತಿದೆ. ಅದೇ ಸಂದರ್ಭದಲ್ಲಿ ಹಿಂದಿನಿಂದಲೂ ಬಿಜೆಪಿಯ ಅನಂತಕುಮಾರ್‍ರ ಪರವಾಗಿ ಕಾಂಗ್ರೆಸ್‍ನ ರಾಮಲಿಂಗಾರೆಡ್ಡಿಯವರು ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡುತ್ತಿದ್ದು, ಈ ಸಾರಿ ಅವರೂ ತೊಡೆತಟ್ಟಿ ನಿಂತಂತಿದೆ. ಇಂದಿನ ಲಕ್ಷ್ಮೀನಾರಾಯಣ್ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರೂ ಇದ್ದದ್ದು ಅದಕ್ಕೆ ಸಾಕ್ಷಿಯಂತಿದೆ. ಇವೆಲ್ಲಾ ಕಾರಣಗಳಿಂದ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಸ್ಪರ್ಧೆ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ತೇಜಸ್ವಿ ಸೋಲಿಸಲು ಸೂಲಿಬೆಲೆ ಸ್ಕೆಚ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...