Homeಕರ್ನಾಟಕಕಾಂಗ್ರೆಸ್‍ಗೆ ಸೇರಿದ ಲಕ್ಷ್ಮೀನಾರಾಯಣ: ಸೋಮಣ್ಣರ ಸೀಕ್ರೆಟ್ ಡೀಲ್

ಕಾಂಗ್ರೆಸ್‍ಗೆ ಸೇರಿದ ಲಕ್ಷ್ಮೀನಾರಾಯಣ: ಸೋಮಣ್ಣರ ಸೀಕ್ರೆಟ್ ಡೀಲ್

- Advertisement -
- Advertisement -

ಇಂದು ಮಹತ್ವದ ಬೆಳವಣಿಗೆಯೊಂದು ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಡೆದಿದೆ. ಅದರ ಮಹತ್ವವನ್ನು ಬಿಂಬಿಸಲೋ ಎಂಬಂತೆ, ಅದರಲ್ಲಿ ಬೆಂ.ದ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್, ವಿಜಯನಗರದ ಶಾಸಕ ಎಂ.ಕೃಷ್ಣಪ್ಪ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಾಮಲಿಂಗಾರೆಡ್ಡಿ ಖುದ್ದು ಹಾಜರಿದ್ದರು. ಬೆಂಗಳೂರಿನ ಮಾಜಿ ಉಪಮೇಯರ್ ಎಂ.ಲಕ್ಷ್ಮೀನಾರಾಯಣ್ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಸೇರಿದ್ದೇ ಈ ವಿದ್ಯಮಾನ.

ಇದಕ್ಕೆ ಮಹತ್ವ ಬಂದಿರುವುದು ಸ್ವತಃ ಲಕ್ಷ್ಮೀನಾರಾಯಣ್‍ರ ಸಾಮಥ್ರ್ಯದಿಂದ ಅಷ್ಟೇ ಅಲ್ಲ. ಅವರ ಗುರು ವಿ.ಸೋಮಣ್ಣ ತಮ್ಮ ಅಸಮಾಧಾನದ ಕಾರಣಕ್ಕೆ, ಲಕ್ಷ್ಮೀನಾರಾಯಣರನ್ನು ಕಾಂಗ್ರೆಸ್ಸಿಗೆ ಕಳಿಸಿದ್ದಾರೆಂದು ಭಾವಿಸಲು ಹಲವು ಕಾರಣಗಳಿವೆ. ಹಳೇ ಬಿನ್ನಿಪೇಟೆ ಕ್ಷೇತ್ರದ ವಿ.ಸೋಮಣ್ಣರನ್ನು ವಿಜಯನಗರದ ವೀರಪುತ್ರ, ‘ಸೋಲಿಲ್ಲದ ಸರದಾರ’ (ಆ ನಂತರ ಸೋಮಣ್ಣ ಸೋತರು, ಆ ಮಾತು ಬೇರೆ) ಇತ್ಯಾದಿ ವಿಶೇಷಣಗಳಿಂದ ಕರೆಯಲಾಗುತ್ತಿದ್ದುದಕ್ಕೆ ಕಾರಣಗಳಿವೆ. ಜನತಾದಳದಿಂದ ಮತ್ತು ಕಾಂಗ್ರೆಸ್‍ನಿಂದ ಸತತ ಎರಡು ಬಾರಿ ಹಳೇ ಬಿನ್ನಿಪೇಟೆ ಕ್ಷೇತ್ರದಿಂದ ಗೆದ್ದ ಸೋಮಣ್ಣ, ನಂತರ ಯಾವ ಪಕ್ಷದ ಟಿಕೆಟ್ಟೂ ಬೇಡ ಎಂದು ಪಕ್ಷೇತರವಾಗಿಯೂ ನಿಂತು ಗೆದ್ದಿದ್ದರು!

ಅದೇ ಕ್ಷೇತ್ರದ ಲೇಔಟ್ ಕೃಷ್ಣಪ್ಪರಂತಹ ಒಬ್ಬ ಭಾರೀ ಕುಳ ಕಾಂಗ್ರೆಸ್ಸಿನಲ್ಲೇ ಇದ್ದಾಗಲೂ ಬಿನ್ನಿಪೇಟೆ ಕ್ಷೇತ್ರದ ಟಿಕೆಟ್ ಪಡೆಯಲು ಸಾಧ್ಯವೇ ಇಲ್ಲದ ಕಾರಣಕ್ಕೆ ಎಂಎಲ್‍ಸಿಯಷ್ಟೇ ಆದರು. ನಂತರ ಕ್ಷೇತ್ರದ ಪುನರ್‍ವಿಂಗಡಣೆಯಲ್ಲಿ ಗೋವಿಂದರಾಜನಗರದಿಂದ ಸೋಮಣ್ಣ ಮತ್ತು ವಿಜಯನಗರದಿಂದ ಕೃಷ್ಣಪ್ಪ ಕಾಂಗ್ರೆಸ್ ಟಿಕೆಟ್ ಪಡೆದು ಗೆದ್ದಿದ್ದರು. ಯಡಿಯೂರಪ್ಪ ಸಿಎಂ ಆದಾಗ ಆಪರೇಷನ್ ಕಮಲಕ್ಕೆ ಒಳಗಾದವರಲ್ಲಿ ಸೋಮಣ್ಣ ಸಹಾ ಒಬ್ಬರು. ಆದರೆ, ಅವರ ವಿರುದ್ಧ ಕೃಷ್ಣಪ್ಪನವರ ಮಗ ಪ್ರಿಯಾಕೃಷ್ಣ ನಿಂತು, ಜೆಡಿಎಸ್‍ನ ಬೆಂಬಲದೊಂದಿಗೆ ಸೋಮಣ್ಣ ಸೋತಿದ್ದರು. ಇದು ಅವರನ್ನು ಹೈರಾಣಾಗಿಸಿ, ಬೇರೆ ಕ್ಷೇತ್ರದ ಹುಡುಕಾಟಕ್ಕೂ ಬಿದ್ದಿದ್ದರು. ಆದರೆ, ಈ ಸಾರಿ ಮತ್ತೆ ಪ್ರಿಯಾಕೃಷ್ಣರನ್ನು ಸೋಲಿಸುವ ಮುಂಚೆ ಸ್ವತಃ ಯಡಿಯೂರಪ್ಪನವರು ಸೋಮಣ್ಣರನ್ನು ಹುಡುಕಿಕೊಂಡು ಬಂದು ಸಮಾಧಾನ ಮಾಡಿ ಪಕ್ಷದಲ್ಲಿ ಉಳಿಸಿಕೊಂಡಿದ್ದರು. ಯಡ್ಡಿ ಸೋಮಣ್ಣರ ನಡುವಿನದ್ದು ಲವ್ & ಹೇಟ್ ಸಂಬಂಧವಾದರೆ, ಅನಂತಕುಮಾರ್‍ರ ಜೊತೆಗೂ ಸೋಮಣ್ಣ ಬಹಳ ಒಳ್ಳೆಯ ಸಂಬಂಧ ಹೊಂದಿದ್ದರು.

ಏಕೆಂದರೆ ಸೋಮಣ್ಣರಿಗಿರುವ ಪ್ರಭಾವ ಅಂಥದ್ದು. ಈ ಕ್ಷೇತ್ರದ ಸಾವಿರಾರು ಜನರನ್ನು ಹೆಸರಿನಿಂದ ಬಲ್ಲ ಸೋಮಣ್ಣ, ಯಾರು ಯಾವುದೇ ಸಮಸ್ಯೆ ತಂದರೂ ಬಗೆಹರಿಸುತ್ತಿದ್ದ ವ್ಯಕ್ತಿ. ಬೆಂಗಳೂರಿನ ಮೇಯರ್ ಸ್ಥಾನಕ್ಕೆ ನೇರ ಚುನಾವಣೆ ನಡೆಯಬೇಕು ಎಂಬ ಚರ್ಚೆಯಿದ್ದಾಗ ಅದಕ್ಕೆ ದೊಡ್ಡ ಮಟ್ಟದಲ್ಲಿ ಕೇಳಿಬಂದ ಹೆಸರು ಸೋಮಣ್ಣರದ್ದೇ.

ಸೋಮಣ್ಣ ತನ್ನ ಮಗನನ್ನು ರಾಜಕಾರಣಕ್ಕೆ ತರುವ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರಾದರೂ, ತನ್ನ ಆಪ್ತ ಶಿಷ್ಯರಾದ ಎಚ್.ರವೀಂದ್ರ ಮತ್ತು ಲಕ್ಷ್ಮೀನಾರಾಯಣ ಇಬ್ಬರಿಗೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನಲ್ಲೇ ಟಿಕೆಟ್ ಕೊಡಿಸಿದ್ದರು. ಆ ರೀತಿಯಲ್ಲಿ ‘ನಂಬಿದವರನ್ನು ಪೊರೆವ’ ವಿಚಾರದಲ್ಲಿ ಅವರ ಬಗ್ಗೆ ಅಂತಹ ಕೆಟ್ಟ ಹೆಸರಿಲ್ಲ.

ಇನ್ನು ಲಕ್ಷ್ಮೀನಾರಾಯಣರ ವಿಚಾರಕ್ಕೆ ಬರುವುದಾದರೆ, ಆವಲಹಳ್ಳಿ ಪಟೇಲರ ಕುಟುಂಬದ ಸಂಬಂಧಿಯಾದ ಅವರು ಭಾರೀ ದೊಡ್ಡ ಕುಳವೇನಾಗಿರಲಿಲ್ಲ. ನಗರದೊಳಗೇ ಇದ್ದರೂ, ಇನ್ನೂ ಹಳ್ಳಿಯ ರೀತಿ ರಿವಾಜುಗಳನ್ನು ಉಳಿಸಿಕೊಂಡಿರುವ ಆವಲಹಳ್ಳಿಯಲ್ಲಿ ಅಲ್ಲಿನ ದೊಡ್ಡ ಕುಳಗಳಿಗೆ ಸೆಡ್ಡು ಹೊಡೆದು ರಾಜಕೀಯ ಬಲ ರೂಪಿಸಿಕೊಂಡವರು ಲಕ್ಷ್ಮೀನಾರಾಯಣ್. ಸಹಜವಾಗಿ ಕಾರ್ಪೋರೇಟರ್ ಚುನಾವಣೆಗೆ ನಿಂತು ಗೆಲ್ಲಲು ಬಯಸಿದ ಅವರನ್ನು ಪೋಷಿಸಿದ್ದು ಸೋಮಣ್ಣರೇ. ನಂತರ ಉಪಮೇಯರ್ ಮಾಡಿದ್ದು, ಎಂಎಲ್‍ಎ ಟಿಕೆಟ್ ಕೊಡಿಸಿದ್ದು ಎಲ್ಲವೂ ಸೋಮಣ್ಣರೇ. ಚಾಮರಾಜಪೇಟೆ ಕ್ಷೇತ್ರದಲ್ಲಿ ಜಮೀರ್ ಅಹಮದ್ ವಿರುದ್ಧ ಸೋತರೂ ಲಕ್ಷ್ಮೀನಾರಾಯಣ್ ಪ್ರಭಾವಿಯೇ.

ಈ ಸಾರಿ ಲೋಕಸಭಾ ಚುನಾವಣೆಯಲ್ಲಿ ತೇಜಸ್ವಿನಿ ಅನಂತಕುಮಾರ್‍ಗೆ ಟಿಕೆಟ್ ತಪ್ಪಿಸಿ, ತೇಜಸ್ವಿ ಸೂರ್ಯಗೆ ಕೊಟ್ಟ ನಂತರ ಬಹಿರಂಗವಾಗಿ ಕಿಡಿಕಾರಿದ್ದು ಸೋಮಣ್ಣ. ತನಗೆ ಕೆಲವು ವಿಚಾರಗಳಲ್ಲಿ ಸ್ಪಷ್ಟೀಕರಣ ಸಿಗುವವರೆಗೂ ಪ್ರಚಾರಕ್ಕೂ ಹೋಗುವುದಿಲ್ಲವೆಂದು ಪಟ್ಟು ಹಿಡಿದಿದ್ದರು. ಇಂದು ಕಾರ್ಯಕರ್ತರ ಸಭೆ ಕರೆದು ಪ್ರಚಾರ ಶುರು ಮಾಡಿದ್ದಾರಾದರೂ, ಇಂದೇ ಲಕ್ಷ್ಮೀನಾರಾಯಣ ಕಾಂಗ್ರೆಸ್ ಸೇರಿರುವುದು ಕೇವಲ ಅವರ ವ್ಯಕ್ತಿಗತ ತೀರ್ಮಾನ ಆಗಿರಲಾರದು.

ಸೋಮಣ್ಣರ ಪ್ರಭಾವವಿರುವ ಹಳೇ ಬಿನ್ನಿಪೇಟೆ ಕ್ಷೇತ್ರವ್ಯಾಪ್ತಿಯ ಎಲ್ಲೆಡೆ ಅವರ ಪ್ರತಿನಿಧಿಯಾಗಿಯೇ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್‍ರ ಪರವಾಗಿ ಲಕ್ಷ್ಮೀನಾರಾಯಣ್ ಕೆಲಸ ಮಾಡುತ್ತಾರೆನ್ನುವುದು ಒಳ ಒಪ್ಪಂದ ಇದ್ದಂತಿದೆ. ಚುನಾವಣಾ ಸಂದರ್ಭದಲ್ಲಿ ಯಾವ ಮೌಲ್ಯಗಳೂ ಉಳಿದುಕೊಂಡಿರದ ರಾಜಕಾರಣದಲ್ಲಿ ಸಿದ್ಧಾಂತಕ್ಕೆ ಬೆಲೆಯೇನೂ ಇರುವುದಿಲ್ಲ. ಹಾಗಾಗಿ ಇಂತಹ ಪಕ್ಷಾಂತರಗಳು, ಒಳಒಪ್ಪಂದಗಳು ಮಾಮೂಲು ಎನ್ನುವಂತಹ ದುರಂತದ ಸ್ಥಿತಿ ನಿರ್ಮಾಣವಾಗಿದೆ.

ಒಟ್ಟಿನಲ್ಲಿ ತೇಜಸ್ವಿ ಸೂರ್ಯ ಅಭ್ಯರ್ಥಿಯಾದ ಕ್ಷಣದಿಂದಲೂ ಎಡವಟ್ಟಿನ ಮೇಲೆ ಎಡವಟ್ಟಾಗುತ್ತಿದೆ. ಅದೇ ಸಂದರ್ಭದಲ್ಲಿ ಹಿಂದಿನಿಂದಲೂ ಬಿಜೆಪಿಯ ಅನಂತಕುಮಾರ್‍ರ ಪರವಾಗಿ ಕಾಂಗ್ರೆಸ್‍ನ ರಾಮಲಿಂಗಾರೆಡ್ಡಿಯವರು ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡುತ್ತಿದ್ದು, ಈ ಸಾರಿ ಅವರೂ ತೊಡೆತಟ್ಟಿ ನಿಂತಂತಿದೆ. ಇಂದಿನ ಲಕ್ಷ್ಮೀನಾರಾಯಣ್ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರೂ ಇದ್ದದ್ದು ಅದಕ್ಕೆ ಸಾಕ್ಷಿಯಂತಿದೆ. ಇವೆಲ್ಲಾ ಕಾರಣಗಳಿಂದ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಸ್ಪರ್ಧೆ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ತೇಜಸ್ವಿ ಸೋಲಿಸಲು ಸೂಲಿಬೆಲೆ ಸ್ಕೆಚ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...