HomeಮುಖಪುಟBJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

BJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

ಈಶಾನ್ಯ ದೆಹಲಿಯಲ್ಲಿ ಕಪಿಲ್ ಮಿಶ್ರಾ ನಡೆಸುತ್ತಿದ್ದ ರ್‍ಯಾಲಿಯಲ್ಲಿ ಕೂಡಾ ‘ಗೋಲಿ ಮಾರೊ’ ಘೋಷಣೆಗಳು ಕೂಗಲಾಗಿತ್ತು, ನಂತರ ಅಲ್ಲಿ ಕೋಮು ಗಲಭೆಗಳು ಭುಗಿಲೆದ್ದವು

- Advertisement -
- Advertisement -

ಈ ವರ್ಷ ದೆಹಲಿಯಲ್ಲಿ ನಡೆದ ಕೋಮುಗಲಭೆಯ ಪ್ರಚೋದಕ ಎಂದು ಆರೋಪಿಸಲಾಗಿರುವ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರು ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ‘ಗೋಲಿ ಮಾರೋ’ (ಗುಂಡು ಹೊಡೆಯಿರಿ) ಎಂಬ ಘೋಷಣೆಗಳು ‘ಮತ್ತೇ’ ಮೊಳಗಿವೆ. ಪ್ರತಿ ಶುಕ್ರವಾರ ನಮಾಜ್ ನಡೆಯುತ್ತಿದ್ದ ಗುರ್ಗಾಂವ್‌ನ ಸೆಕ್ಟರ್ 12 ಎ ಪ್ರದೇಶದಲ್ಲಿ ಬಿಜೆಪಿ ಬೆಂಬಲಿತ ಕೋಮು ಆಧಾರಿತ ಸಂಘಟನೆ ಆಯೋಜಿಸಿದ್ದ ಗೋವರ್ಧನ ಪೂಜೆಯಲ್ಲಿ ಅವರು ಶುಕ್ರವಾರ ಪಾಲ್ಗೊಂಡಿದ್ದರು. ಈ ವೇಳೆ ಅಲ್ಲಿ ‘ಗೋಲಿ ಮಾರೋ’ ಘೋಷಣೆಗಳನ್ನು ಕೂಗಲಾಗಿದೆ.

ಕಳೆದು ವರ್ಷ ಸಿಎಎ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯನ್ನು ವಿರೋಧಿಸಿ ಈಶಾನ್ಯ ದೆಹಲಿಯಲ್ಲಿ ಕಪಿಲ್ ಮಿಶ್ರಾ ನಡೆಸುತ್ತಿದ್ದ ರ್‍ಯಾಲಿಯಲ್ಲಿ ಕೂಡಾ ‘ಗೋಲಿ ಮಾರೊ’ ಘೋಷಣೆಗಳು ಕೂಗಲಾಗಿತ್ತು. ಇದರ ನಂತರ ಅಲ್ಲಿ ಕೋಮುಗಲಭೆ ನಡೆದು ಐವತ್ತಕ್ಕೂ ಹೆಚ್ಚು ಜನರು ಸಾವನಪ್ಪಿದ್ದರು ಹಾಗೂ ಸಾವಿರಾರು ಜನರು ಗಾಯಗೊಂಡು ಕೋಟ್ಯಾಂತರ ರುಪಾಯಿಗಳ ಆಸ್ತಿಪಾಸ್ತಿ ನಷ್ಟವಾಗಿದ್ದವು.

ಇದನ್ನೂ ಓದಿ: ದೆಹಲಿ: ಸ್ಥಳೀಯರ ವಿರೋಧದಿಂದ ನಮಾಜ್‌ಗೆ ನಿಗದಿಪಡಿಸಿದ್ದ 8 ಸ್ಥಳಗಳ ಅನುಮತಿ ವಾಪಸ್

ಗುರುಗಾಂವ್‌ನ ಸೆಕ್ಟರ್ 12ಎ ಸೈಟ್‌ನಲ್ಲಿ ಪ್ರತಿ ಶುಕ್ರವಾರ ನಮಾಜ್‌ ಅನ್ನು ನಿರ್ವಹಿಸಲಾಗುತ್ತಿತ್ತು. ಆದರೆ ಇದಕ್ಕೆ ಬಿಜೆಪಿ ಬೆಂಬಲಿತ ಕೋಮು ಆಧಾರಿತ ಸಂಘಟನೆಗಳು ಕಳೆದ ಎರಡು ವಾರಗಳಿಂದ ವಿರೋಧ ವ್ಯಕ್ತಪಡಿಸಿ, ನಮಾಜ್‌ಗೆ ಅಡ್ಡಿಪಡಿಸಿವೆ. ಕಳೆದ ತಿಂಗಳ ಕೊನೆಯಲ್ಲಿ, 26 ಜನರ ಬಿಜೆಪಿ ಬೆಂಬಲಿತ ಗುಂಪು ನಮಾಜ್ ಮಾಡುವುದನ್ನು ಅಡ್ಡಿ ಪಡಿಸಿದ್ದಕ್ಕಾಗಿ ಬಂಧಿಸಲಾಗಿತ್ತು.

ಈ ನಡುವೆ ಗುರುಗ್ರಾಮ್ ಆಡಳಿತವು ಮುಸ್ಲಿಮರಿಗೆ ನಮಾಜ್ ಮಾಡಲು ಗೊತ್ತುಪಡಿಸಿದ 37 ಸ್ಥಳಗಳ ಪೈಕಿ ಎಂಟರಲ್ಲಿ ಸ್ಥಳೀಯರ ವಿರೋಧದಿಂದ ಮಂಗಳವಾರ ಅನುಮತಿ ವಾಪಸ್ ಪಡೆದಿದೆ. ಗುರುಗ್ರಾಮ್ ಜಿಲ್ಲಾಡಳಿತದ ಅಧಿಕೃತ ಹೇಳಿಕೆಯ ಪ್ರಕಾರ, ಸ್ಥಳೀಯ ಜನರು ಮತ್ತು ಆರ್‌ಡಬ್ಲ್ಯೂಎಯಿಂದ ಆಕ್ಷೇಪಣೆ ಬಂದಿರುವ ಕಾರಣ ಅನುಮತಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

ಶುಕ್ರವಾರ ಅದೇ ಸ್ಥಳದಲ್ಲಿ ಗೋವರ್ಧನ ಕಾರ್ಯಕ್ರಮದಲ್ಲಿ ಹಿಂದೂ ವಿರೋಧಿಗಳಿಗೆ ಗುಂಡು ಹೊಡೆಯಿರಿ ಎಂದು ಘೋಷಣೆಗಳನ್ನು ಕೂಗಲಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಕಪಿಲ್ ಮಿಶ್ರಾ ಪಟಾಕಿ ನಿಷೇಧದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Fact check: ಕಟ್ಟಡದ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವುದು ನಿಜವೇ??

“ನಿಮ್ಮ ರಾಜಕೀಯಕ್ಕಾಗಿ ರಸ್ತೆಗಳನ್ನು ಬಳಸಬೇಡಿ. ನಾವು ಶಾಹೀನ್ ಬಾಗ್‌ನಲ್ಲಿ ಇದನ್ನು ನೋಡಿದ್ದೆವು. ರಸ್ತೆಗಳನ್ನೆಲ್ಲ ಬಂದ್ ಮಾಡಿ ಮನೋರಂಜನೆ ತೋರಿಸಿದ್ರು. ಸಿಎಎ ಹಿಂಪಡೆಯಲಾಗಿದೆಯೇ? ಅಪಧಮನಿಗಳು ಮತ್ತು ನರಗಳನ್ನು ನಿರ್ಬಂಧಿಸಿದರೆ, ದೇಹದ ಚಲನೆಯನ್ನು ನಿಲ್ಲಿಸುತ್ತದೆ. ಹಾಗೆಯೆ ರಸ್ತೆಗಳನ್ನು ನಿರ್ಬಂಧಿಸಿದರೆ, ನಗರ ಮತ್ತು ದೇಶವು ನಿಲ್ಲುತ್ತದೆ” ಎಂದು ಹೇಳಿದ್ದಾರೆ.

“ರಸ್ತೆಗಳನ್ನು ಮುಚ್ಚುವ ಹಕ್ಕು ಯಾರಿಗೂ ಇಲ್ಲ. ಇದು ಯಾವುದೇ ಧರ್ಮದ ಭಾಗವಲ್ಲ ಅಥವಾ ಆಗಲೂ ಸಾಧ್ಯವಿಲ್ಲ… ಗುರ್ಗಾಂವ್‌ನಲ್ಲಿ ಬೀದಿಗಳನ್ನು ನಿರ್ಬಂಧಿಸುತ್ತೀರಾ? ನೀವು ದೆಹಲಿಯಲ್ಲಿ ರಸ್ತೆಗಳನ್ನು ನಿರ್ಬಂಧಿಸುತ್ತೀರಾ? ರಸ್ತೆ ತಡೆ ಮಾಡುವುದು ಧರ್ಮದ ಭಾಗವಲ್ಲ, ಅದು ದೇಶ, ಸೌಲಭ್ಯಗಳು ಮತ್ತು ಆರ್ಥಿಕತೆಯನ್ನು ತಡೆಯುವುದಾಗಿದೆ” ಎಂದು ಅವರು ತಿಳಿಸಿದ್ದಾರೆ.

ಕಪಿಲ್‌ ಮಿಶ್ರಾ ಭಾಷಣದ ಸಮಯದಲ್ಲಿ, ನೆರೆದಿದ್ದವರು “ಸೆಕ್ಟರ್ 12 ಸರ್ಫ್ ಜಾಂಕಿ ಹೈ, ಪುರ ಗುರುಗ್ರಾಮ್ ಬಾಕಿ ಹೈ” ಎಂಬ ಘೋಷಣೆಯನ್ನು ಕೂಗಿದ್ದಾರೆ. ಜೊತೆಗೆ ಸದಾ ದ್ವೇಷ ಭಾಷಣಗಳಿಗೆ ಹೆಸರುವಾಸಿಯಾಗಿರುವ ಯತಿ ನರಸಿಂಹಾನಂದ ಸಂಗಡಿಗರು ಕೂಡಾ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಪಿಲ್‌ ಮಿಶ್ರಾ ಶಾಂತವಾಗಿ ಭಾಷಣ ಮಾಡಿದ್ದಾರಾದರೂ, ಸಭೆಯಲ್ಲಿ ಪ್ರಚೋಧನಕಾರಿ ಘೋಷಣೆಗಳನ್ನು ಮಾಡಲಾಗಿದೆ. ಅಮಿತ್ ಹಿಂದೂ ಎಂಬ ಕಾರ್ಯಕರ್ತನೊಬ್ಬ, “ಹಿಂದೂ ದ್ರೋಹಿಗಳನ್ನು ಶೂಟ್ ಮಾಡಿ” ಎಂಬ ಘೋಷಣೆಯನ್ನು ಕೂಗಿದ್ದಾನೆ. ಈತ ಯತಿ ನರಸಿಂಹಾನಂದ ಸರಸ್ವತಿ ಅವರ ಆಪ್ತ ಎಂದು ದಿ ವೈರ್‌ ವರದಿ ಮಾಡಿದೆ.

ಇದನ್ನೂ ಓದಿ: ಹಲಾಲ್ ಮಾಡದಿದ್ದಕ್ಕೆ ಮುಸ್ಲಿಮರಿಂದ ಹಲ್ಲೆ ಎಂಬ ಸುಳ್ಳು ಆರೋಪ: ರೆಸ್ಟೋರೆಂಟ್‌ ಮಾಲೀಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...