HomeಮುಖಪುಟBJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

BJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

ಈಶಾನ್ಯ ದೆಹಲಿಯಲ್ಲಿ ಕಪಿಲ್ ಮಿಶ್ರಾ ನಡೆಸುತ್ತಿದ್ದ ರ್‍ಯಾಲಿಯಲ್ಲಿ ಕೂಡಾ ‘ಗೋಲಿ ಮಾರೊ’ ಘೋಷಣೆಗಳು ಕೂಗಲಾಗಿತ್ತು, ನಂತರ ಅಲ್ಲಿ ಕೋಮು ಗಲಭೆಗಳು ಭುಗಿಲೆದ್ದವು

- Advertisement -
- Advertisement -

ಈ ವರ್ಷ ದೆಹಲಿಯಲ್ಲಿ ನಡೆದ ಕೋಮುಗಲಭೆಯ ಪ್ರಚೋದಕ ಎಂದು ಆರೋಪಿಸಲಾಗಿರುವ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರು ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ‘ಗೋಲಿ ಮಾರೋ’ (ಗುಂಡು ಹೊಡೆಯಿರಿ) ಎಂಬ ಘೋಷಣೆಗಳು ‘ಮತ್ತೇ’ ಮೊಳಗಿವೆ. ಪ್ರತಿ ಶುಕ್ರವಾರ ನಮಾಜ್ ನಡೆಯುತ್ತಿದ್ದ ಗುರ್ಗಾಂವ್‌ನ ಸೆಕ್ಟರ್ 12 ಎ ಪ್ರದೇಶದಲ್ಲಿ ಬಿಜೆಪಿ ಬೆಂಬಲಿತ ಕೋಮು ಆಧಾರಿತ ಸಂಘಟನೆ ಆಯೋಜಿಸಿದ್ದ ಗೋವರ್ಧನ ಪೂಜೆಯಲ್ಲಿ ಅವರು ಶುಕ್ರವಾರ ಪಾಲ್ಗೊಂಡಿದ್ದರು. ಈ ವೇಳೆ ಅಲ್ಲಿ ‘ಗೋಲಿ ಮಾರೋ’ ಘೋಷಣೆಗಳನ್ನು ಕೂಗಲಾಗಿದೆ.

ಕಳೆದು ವರ್ಷ ಸಿಎಎ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯನ್ನು ವಿರೋಧಿಸಿ ಈಶಾನ್ಯ ದೆಹಲಿಯಲ್ಲಿ ಕಪಿಲ್ ಮಿಶ್ರಾ ನಡೆಸುತ್ತಿದ್ದ ರ್‍ಯಾಲಿಯಲ್ಲಿ ಕೂಡಾ ‘ಗೋಲಿ ಮಾರೊ’ ಘೋಷಣೆಗಳು ಕೂಗಲಾಗಿತ್ತು. ಇದರ ನಂತರ ಅಲ್ಲಿ ಕೋಮುಗಲಭೆ ನಡೆದು ಐವತ್ತಕ್ಕೂ ಹೆಚ್ಚು ಜನರು ಸಾವನಪ್ಪಿದ್ದರು ಹಾಗೂ ಸಾವಿರಾರು ಜನರು ಗಾಯಗೊಂಡು ಕೋಟ್ಯಾಂತರ ರುಪಾಯಿಗಳ ಆಸ್ತಿಪಾಸ್ತಿ ನಷ್ಟವಾಗಿದ್ದವು.

ಇದನ್ನೂ ಓದಿ: ದೆಹಲಿ: ಸ್ಥಳೀಯರ ವಿರೋಧದಿಂದ ನಮಾಜ್‌ಗೆ ನಿಗದಿಪಡಿಸಿದ್ದ 8 ಸ್ಥಳಗಳ ಅನುಮತಿ ವಾಪಸ್

ಗುರುಗಾಂವ್‌ನ ಸೆಕ್ಟರ್ 12ಎ ಸೈಟ್‌ನಲ್ಲಿ ಪ್ರತಿ ಶುಕ್ರವಾರ ನಮಾಜ್‌ ಅನ್ನು ನಿರ್ವಹಿಸಲಾಗುತ್ತಿತ್ತು. ಆದರೆ ಇದಕ್ಕೆ ಬಿಜೆಪಿ ಬೆಂಬಲಿತ ಕೋಮು ಆಧಾರಿತ ಸಂಘಟನೆಗಳು ಕಳೆದ ಎರಡು ವಾರಗಳಿಂದ ವಿರೋಧ ವ್ಯಕ್ತಪಡಿಸಿ, ನಮಾಜ್‌ಗೆ ಅಡ್ಡಿಪಡಿಸಿವೆ. ಕಳೆದ ತಿಂಗಳ ಕೊನೆಯಲ್ಲಿ, 26 ಜನರ ಬಿಜೆಪಿ ಬೆಂಬಲಿತ ಗುಂಪು ನಮಾಜ್ ಮಾಡುವುದನ್ನು ಅಡ್ಡಿ ಪಡಿಸಿದ್ದಕ್ಕಾಗಿ ಬಂಧಿಸಲಾಗಿತ್ತು.

ಈ ನಡುವೆ ಗುರುಗ್ರಾಮ್ ಆಡಳಿತವು ಮುಸ್ಲಿಮರಿಗೆ ನಮಾಜ್ ಮಾಡಲು ಗೊತ್ತುಪಡಿಸಿದ 37 ಸ್ಥಳಗಳ ಪೈಕಿ ಎಂಟರಲ್ಲಿ ಸ್ಥಳೀಯರ ವಿರೋಧದಿಂದ ಮಂಗಳವಾರ ಅನುಮತಿ ವಾಪಸ್ ಪಡೆದಿದೆ. ಗುರುಗ್ರಾಮ್ ಜಿಲ್ಲಾಡಳಿತದ ಅಧಿಕೃತ ಹೇಳಿಕೆಯ ಪ್ರಕಾರ, ಸ್ಥಳೀಯ ಜನರು ಮತ್ತು ಆರ್‌ಡಬ್ಲ್ಯೂಎಯಿಂದ ಆಕ್ಷೇಪಣೆ ಬಂದಿರುವ ಕಾರಣ ಅನುಮತಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

ಶುಕ್ರವಾರ ಅದೇ ಸ್ಥಳದಲ್ಲಿ ಗೋವರ್ಧನ ಕಾರ್ಯಕ್ರಮದಲ್ಲಿ ಹಿಂದೂ ವಿರೋಧಿಗಳಿಗೆ ಗುಂಡು ಹೊಡೆಯಿರಿ ಎಂದು ಘೋಷಣೆಗಳನ್ನು ಕೂಗಲಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಕಪಿಲ್ ಮಿಶ್ರಾ ಪಟಾಕಿ ನಿಷೇಧದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Fact check: ಕಟ್ಟಡದ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವುದು ನಿಜವೇ??

“ನಿಮ್ಮ ರಾಜಕೀಯಕ್ಕಾಗಿ ರಸ್ತೆಗಳನ್ನು ಬಳಸಬೇಡಿ. ನಾವು ಶಾಹೀನ್ ಬಾಗ್‌ನಲ್ಲಿ ಇದನ್ನು ನೋಡಿದ್ದೆವು. ರಸ್ತೆಗಳನ್ನೆಲ್ಲ ಬಂದ್ ಮಾಡಿ ಮನೋರಂಜನೆ ತೋರಿಸಿದ್ರು. ಸಿಎಎ ಹಿಂಪಡೆಯಲಾಗಿದೆಯೇ? ಅಪಧಮನಿಗಳು ಮತ್ತು ನರಗಳನ್ನು ನಿರ್ಬಂಧಿಸಿದರೆ, ದೇಹದ ಚಲನೆಯನ್ನು ನಿಲ್ಲಿಸುತ್ತದೆ. ಹಾಗೆಯೆ ರಸ್ತೆಗಳನ್ನು ನಿರ್ಬಂಧಿಸಿದರೆ, ನಗರ ಮತ್ತು ದೇಶವು ನಿಲ್ಲುತ್ತದೆ” ಎಂದು ಹೇಳಿದ್ದಾರೆ.

“ರಸ್ತೆಗಳನ್ನು ಮುಚ್ಚುವ ಹಕ್ಕು ಯಾರಿಗೂ ಇಲ್ಲ. ಇದು ಯಾವುದೇ ಧರ್ಮದ ಭಾಗವಲ್ಲ ಅಥವಾ ಆಗಲೂ ಸಾಧ್ಯವಿಲ್ಲ… ಗುರ್ಗಾಂವ್‌ನಲ್ಲಿ ಬೀದಿಗಳನ್ನು ನಿರ್ಬಂಧಿಸುತ್ತೀರಾ? ನೀವು ದೆಹಲಿಯಲ್ಲಿ ರಸ್ತೆಗಳನ್ನು ನಿರ್ಬಂಧಿಸುತ್ತೀರಾ? ರಸ್ತೆ ತಡೆ ಮಾಡುವುದು ಧರ್ಮದ ಭಾಗವಲ್ಲ, ಅದು ದೇಶ, ಸೌಲಭ್ಯಗಳು ಮತ್ತು ಆರ್ಥಿಕತೆಯನ್ನು ತಡೆಯುವುದಾಗಿದೆ” ಎಂದು ಅವರು ತಿಳಿಸಿದ್ದಾರೆ.

ಕಪಿಲ್‌ ಮಿಶ್ರಾ ಭಾಷಣದ ಸಮಯದಲ್ಲಿ, ನೆರೆದಿದ್ದವರು “ಸೆಕ್ಟರ್ 12 ಸರ್ಫ್ ಜಾಂಕಿ ಹೈ, ಪುರ ಗುರುಗ್ರಾಮ್ ಬಾಕಿ ಹೈ” ಎಂಬ ಘೋಷಣೆಯನ್ನು ಕೂಗಿದ್ದಾರೆ. ಜೊತೆಗೆ ಸದಾ ದ್ವೇಷ ಭಾಷಣಗಳಿಗೆ ಹೆಸರುವಾಸಿಯಾಗಿರುವ ಯತಿ ನರಸಿಂಹಾನಂದ ಸಂಗಡಿಗರು ಕೂಡಾ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಪಿಲ್‌ ಮಿಶ್ರಾ ಶಾಂತವಾಗಿ ಭಾಷಣ ಮಾಡಿದ್ದಾರಾದರೂ, ಸಭೆಯಲ್ಲಿ ಪ್ರಚೋಧನಕಾರಿ ಘೋಷಣೆಗಳನ್ನು ಮಾಡಲಾಗಿದೆ. ಅಮಿತ್ ಹಿಂದೂ ಎಂಬ ಕಾರ್ಯಕರ್ತನೊಬ್ಬ, “ಹಿಂದೂ ದ್ರೋಹಿಗಳನ್ನು ಶೂಟ್ ಮಾಡಿ” ಎಂಬ ಘೋಷಣೆಯನ್ನು ಕೂಗಿದ್ದಾನೆ. ಈತ ಯತಿ ನರಸಿಂಹಾನಂದ ಸರಸ್ವತಿ ಅವರ ಆಪ್ತ ಎಂದು ದಿ ವೈರ್‌ ವರದಿ ಮಾಡಿದೆ.

ಇದನ್ನೂ ಓದಿ: ಹಲಾಲ್ ಮಾಡದಿದ್ದಕ್ಕೆ ಮುಸ್ಲಿಮರಿಂದ ಹಲ್ಲೆ ಎಂಬ ಸುಳ್ಳು ಆರೋಪ: ರೆಸ್ಟೋರೆಂಟ್‌ ಮಾಲೀಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...