HomeಮುಖಪುಟBJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

BJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

ಈಶಾನ್ಯ ದೆಹಲಿಯಲ್ಲಿ ಕಪಿಲ್ ಮಿಶ್ರಾ ನಡೆಸುತ್ತಿದ್ದ ರ್‍ಯಾಲಿಯಲ್ಲಿ ಕೂಡಾ ‘ಗೋಲಿ ಮಾರೊ’ ಘೋಷಣೆಗಳು ಕೂಗಲಾಗಿತ್ತು, ನಂತರ ಅಲ್ಲಿ ಕೋಮು ಗಲಭೆಗಳು ಭುಗಿಲೆದ್ದವು

- Advertisement -
- Advertisement -

ಈ ವರ್ಷ ದೆಹಲಿಯಲ್ಲಿ ನಡೆದ ಕೋಮುಗಲಭೆಯ ಪ್ರಚೋದಕ ಎಂದು ಆರೋಪಿಸಲಾಗಿರುವ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರು ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ‘ಗೋಲಿ ಮಾರೋ’ (ಗುಂಡು ಹೊಡೆಯಿರಿ) ಎಂಬ ಘೋಷಣೆಗಳು ‘ಮತ್ತೇ’ ಮೊಳಗಿವೆ. ಪ್ರತಿ ಶುಕ್ರವಾರ ನಮಾಜ್ ನಡೆಯುತ್ತಿದ್ದ ಗುರ್ಗಾಂವ್‌ನ ಸೆಕ್ಟರ್ 12 ಎ ಪ್ರದೇಶದಲ್ಲಿ ಬಿಜೆಪಿ ಬೆಂಬಲಿತ ಕೋಮು ಆಧಾರಿತ ಸಂಘಟನೆ ಆಯೋಜಿಸಿದ್ದ ಗೋವರ್ಧನ ಪೂಜೆಯಲ್ಲಿ ಅವರು ಶುಕ್ರವಾರ ಪಾಲ್ಗೊಂಡಿದ್ದರು. ಈ ವೇಳೆ ಅಲ್ಲಿ ‘ಗೋಲಿ ಮಾರೋ’ ಘೋಷಣೆಗಳನ್ನು ಕೂಗಲಾಗಿದೆ.

ಕಳೆದು ವರ್ಷ ಸಿಎಎ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯನ್ನು ವಿರೋಧಿಸಿ ಈಶಾನ್ಯ ದೆಹಲಿಯಲ್ಲಿ ಕಪಿಲ್ ಮಿಶ್ರಾ ನಡೆಸುತ್ತಿದ್ದ ರ್‍ಯಾಲಿಯಲ್ಲಿ ಕೂಡಾ ‘ಗೋಲಿ ಮಾರೊ’ ಘೋಷಣೆಗಳು ಕೂಗಲಾಗಿತ್ತು. ಇದರ ನಂತರ ಅಲ್ಲಿ ಕೋಮುಗಲಭೆ ನಡೆದು ಐವತ್ತಕ್ಕೂ ಹೆಚ್ಚು ಜನರು ಸಾವನಪ್ಪಿದ್ದರು ಹಾಗೂ ಸಾವಿರಾರು ಜನರು ಗಾಯಗೊಂಡು ಕೋಟ್ಯಾಂತರ ರುಪಾಯಿಗಳ ಆಸ್ತಿಪಾಸ್ತಿ ನಷ್ಟವಾಗಿದ್ದವು.

ಇದನ್ನೂ ಓದಿ: ದೆಹಲಿ: ಸ್ಥಳೀಯರ ವಿರೋಧದಿಂದ ನಮಾಜ್‌ಗೆ ನಿಗದಿಪಡಿಸಿದ್ದ 8 ಸ್ಥಳಗಳ ಅನುಮತಿ ವಾಪಸ್

ಗುರುಗಾಂವ್‌ನ ಸೆಕ್ಟರ್ 12ಎ ಸೈಟ್‌ನಲ್ಲಿ ಪ್ರತಿ ಶುಕ್ರವಾರ ನಮಾಜ್‌ ಅನ್ನು ನಿರ್ವಹಿಸಲಾಗುತ್ತಿತ್ತು. ಆದರೆ ಇದಕ್ಕೆ ಬಿಜೆಪಿ ಬೆಂಬಲಿತ ಕೋಮು ಆಧಾರಿತ ಸಂಘಟನೆಗಳು ಕಳೆದ ಎರಡು ವಾರಗಳಿಂದ ವಿರೋಧ ವ್ಯಕ್ತಪಡಿಸಿ, ನಮಾಜ್‌ಗೆ ಅಡ್ಡಿಪಡಿಸಿವೆ. ಕಳೆದ ತಿಂಗಳ ಕೊನೆಯಲ್ಲಿ, 26 ಜನರ ಬಿಜೆಪಿ ಬೆಂಬಲಿತ ಗುಂಪು ನಮಾಜ್ ಮಾಡುವುದನ್ನು ಅಡ್ಡಿ ಪಡಿಸಿದ್ದಕ್ಕಾಗಿ ಬಂಧಿಸಲಾಗಿತ್ತು.

ಈ ನಡುವೆ ಗುರುಗ್ರಾಮ್ ಆಡಳಿತವು ಮುಸ್ಲಿಮರಿಗೆ ನಮಾಜ್ ಮಾಡಲು ಗೊತ್ತುಪಡಿಸಿದ 37 ಸ್ಥಳಗಳ ಪೈಕಿ ಎಂಟರಲ್ಲಿ ಸ್ಥಳೀಯರ ವಿರೋಧದಿಂದ ಮಂಗಳವಾರ ಅನುಮತಿ ವಾಪಸ್ ಪಡೆದಿದೆ. ಗುರುಗ್ರಾಮ್ ಜಿಲ್ಲಾಡಳಿತದ ಅಧಿಕೃತ ಹೇಳಿಕೆಯ ಪ್ರಕಾರ, ಸ್ಥಳೀಯ ಜನರು ಮತ್ತು ಆರ್‌ಡಬ್ಲ್ಯೂಎಯಿಂದ ಆಕ್ಷೇಪಣೆ ಬಂದಿರುವ ಕಾರಣ ಅನುಮತಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

ಶುಕ್ರವಾರ ಅದೇ ಸ್ಥಳದಲ್ಲಿ ಗೋವರ್ಧನ ಕಾರ್ಯಕ್ರಮದಲ್ಲಿ ಹಿಂದೂ ವಿರೋಧಿಗಳಿಗೆ ಗುಂಡು ಹೊಡೆಯಿರಿ ಎಂದು ಘೋಷಣೆಗಳನ್ನು ಕೂಗಲಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಕಪಿಲ್ ಮಿಶ್ರಾ ಪಟಾಕಿ ನಿಷೇಧದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Fact check: ಕಟ್ಟಡದ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವುದು ನಿಜವೇ??

“ನಿಮ್ಮ ರಾಜಕೀಯಕ್ಕಾಗಿ ರಸ್ತೆಗಳನ್ನು ಬಳಸಬೇಡಿ. ನಾವು ಶಾಹೀನ್ ಬಾಗ್‌ನಲ್ಲಿ ಇದನ್ನು ನೋಡಿದ್ದೆವು. ರಸ್ತೆಗಳನ್ನೆಲ್ಲ ಬಂದ್ ಮಾಡಿ ಮನೋರಂಜನೆ ತೋರಿಸಿದ್ರು. ಸಿಎಎ ಹಿಂಪಡೆಯಲಾಗಿದೆಯೇ? ಅಪಧಮನಿಗಳು ಮತ್ತು ನರಗಳನ್ನು ನಿರ್ಬಂಧಿಸಿದರೆ, ದೇಹದ ಚಲನೆಯನ್ನು ನಿಲ್ಲಿಸುತ್ತದೆ. ಹಾಗೆಯೆ ರಸ್ತೆಗಳನ್ನು ನಿರ್ಬಂಧಿಸಿದರೆ, ನಗರ ಮತ್ತು ದೇಶವು ನಿಲ್ಲುತ್ತದೆ” ಎಂದು ಹೇಳಿದ್ದಾರೆ.

“ರಸ್ತೆಗಳನ್ನು ಮುಚ್ಚುವ ಹಕ್ಕು ಯಾರಿಗೂ ಇಲ್ಲ. ಇದು ಯಾವುದೇ ಧರ್ಮದ ಭಾಗವಲ್ಲ ಅಥವಾ ಆಗಲೂ ಸಾಧ್ಯವಿಲ್ಲ… ಗುರ್ಗಾಂವ್‌ನಲ್ಲಿ ಬೀದಿಗಳನ್ನು ನಿರ್ಬಂಧಿಸುತ್ತೀರಾ? ನೀವು ದೆಹಲಿಯಲ್ಲಿ ರಸ್ತೆಗಳನ್ನು ನಿರ್ಬಂಧಿಸುತ್ತೀರಾ? ರಸ್ತೆ ತಡೆ ಮಾಡುವುದು ಧರ್ಮದ ಭಾಗವಲ್ಲ, ಅದು ದೇಶ, ಸೌಲಭ್ಯಗಳು ಮತ್ತು ಆರ್ಥಿಕತೆಯನ್ನು ತಡೆಯುವುದಾಗಿದೆ” ಎಂದು ಅವರು ತಿಳಿಸಿದ್ದಾರೆ.

ಕಪಿಲ್‌ ಮಿಶ್ರಾ ಭಾಷಣದ ಸಮಯದಲ್ಲಿ, ನೆರೆದಿದ್ದವರು “ಸೆಕ್ಟರ್ 12 ಸರ್ಫ್ ಜಾಂಕಿ ಹೈ, ಪುರ ಗುರುಗ್ರಾಮ್ ಬಾಕಿ ಹೈ” ಎಂಬ ಘೋಷಣೆಯನ್ನು ಕೂಗಿದ್ದಾರೆ. ಜೊತೆಗೆ ಸದಾ ದ್ವೇಷ ಭಾಷಣಗಳಿಗೆ ಹೆಸರುವಾಸಿಯಾಗಿರುವ ಯತಿ ನರಸಿಂಹಾನಂದ ಸಂಗಡಿಗರು ಕೂಡಾ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಪಿಲ್‌ ಮಿಶ್ರಾ ಶಾಂತವಾಗಿ ಭಾಷಣ ಮಾಡಿದ್ದಾರಾದರೂ, ಸಭೆಯಲ್ಲಿ ಪ್ರಚೋಧನಕಾರಿ ಘೋಷಣೆಗಳನ್ನು ಮಾಡಲಾಗಿದೆ. ಅಮಿತ್ ಹಿಂದೂ ಎಂಬ ಕಾರ್ಯಕರ್ತನೊಬ್ಬ, “ಹಿಂದೂ ದ್ರೋಹಿಗಳನ್ನು ಶೂಟ್ ಮಾಡಿ” ಎಂಬ ಘೋಷಣೆಯನ್ನು ಕೂಗಿದ್ದಾನೆ. ಈತ ಯತಿ ನರಸಿಂಹಾನಂದ ಸರಸ್ವತಿ ಅವರ ಆಪ್ತ ಎಂದು ದಿ ವೈರ್‌ ವರದಿ ಮಾಡಿದೆ.

ಇದನ್ನೂ ಓದಿ: ಹಲಾಲ್ ಮಾಡದಿದ್ದಕ್ಕೆ ಮುಸ್ಲಿಮರಿಂದ ಹಲ್ಲೆ ಎಂಬ ಸುಳ್ಳು ಆರೋಪ: ರೆಸ್ಟೋರೆಂಟ್‌ ಮಾಲೀಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...