HomeಮುಖಪುಟBJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

BJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

ಈಶಾನ್ಯ ದೆಹಲಿಯಲ್ಲಿ ಕಪಿಲ್ ಮಿಶ್ರಾ ನಡೆಸುತ್ತಿದ್ದ ರ್‍ಯಾಲಿಯಲ್ಲಿ ಕೂಡಾ ‘ಗೋಲಿ ಮಾರೊ’ ಘೋಷಣೆಗಳು ಕೂಗಲಾಗಿತ್ತು, ನಂತರ ಅಲ್ಲಿ ಕೋಮು ಗಲಭೆಗಳು ಭುಗಿಲೆದ್ದವು

- Advertisement -
- Advertisement -

ಈ ವರ್ಷ ದೆಹಲಿಯಲ್ಲಿ ನಡೆದ ಕೋಮುಗಲಭೆಯ ಪ್ರಚೋದಕ ಎಂದು ಆರೋಪಿಸಲಾಗಿರುವ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರು ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ‘ಗೋಲಿ ಮಾರೋ’ (ಗುಂಡು ಹೊಡೆಯಿರಿ) ಎಂಬ ಘೋಷಣೆಗಳು ‘ಮತ್ತೇ’ ಮೊಳಗಿವೆ. ಪ್ರತಿ ಶುಕ್ರವಾರ ನಮಾಜ್ ನಡೆಯುತ್ತಿದ್ದ ಗುರ್ಗಾಂವ್‌ನ ಸೆಕ್ಟರ್ 12 ಎ ಪ್ರದೇಶದಲ್ಲಿ ಬಿಜೆಪಿ ಬೆಂಬಲಿತ ಕೋಮು ಆಧಾರಿತ ಸಂಘಟನೆ ಆಯೋಜಿಸಿದ್ದ ಗೋವರ್ಧನ ಪೂಜೆಯಲ್ಲಿ ಅವರು ಶುಕ್ರವಾರ ಪಾಲ್ಗೊಂಡಿದ್ದರು. ಈ ವೇಳೆ ಅಲ್ಲಿ ‘ಗೋಲಿ ಮಾರೋ’ ಘೋಷಣೆಗಳನ್ನು ಕೂಗಲಾಗಿದೆ.

ಕಳೆದು ವರ್ಷ ಸಿಎಎ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯನ್ನು ವಿರೋಧಿಸಿ ಈಶಾನ್ಯ ದೆಹಲಿಯಲ್ಲಿ ಕಪಿಲ್ ಮಿಶ್ರಾ ನಡೆಸುತ್ತಿದ್ದ ರ್‍ಯಾಲಿಯಲ್ಲಿ ಕೂಡಾ ‘ಗೋಲಿ ಮಾರೊ’ ಘೋಷಣೆಗಳು ಕೂಗಲಾಗಿತ್ತು. ಇದರ ನಂತರ ಅಲ್ಲಿ ಕೋಮುಗಲಭೆ ನಡೆದು ಐವತ್ತಕ್ಕೂ ಹೆಚ್ಚು ಜನರು ಸಾವನಪ್ಪಿದ್ದರು ಹಾಗೂ ಸಾವಿರಾರು ಜನರು ಗಾಯಗೊಂಡು ಕೋಟ್ಯಾಂತರ ರುಪಾಯಿಗಳ ಆಸ್ತಿಪಾಸ್ತಿ ನಷ್ಟವಾಗಿದ್ದವು.

ಇದನ್ನೂ ಓದಿ: ದೆಹಲಿ: ಸ್ಥಳೀಯರ ವಿರೋಧದಿಂದ ನಮಾಜ್‌ಗೆ ನಿಗದಿಪಡಿಸಿದ್ದ 8 ಸ್ಥಳಗಳ ಅನುಮತಿ ವಾಪಸ್

ಗುರುಗಾಂವ್‌ನ ಸೆಕ್ಟರ್ 12ಎ ಸೈಟ್‌ನಲ್ಲಿ ಪ್ರತಿ ಶುಕ್ರವಾರ ನಮಾಜ್‌ ಅನ್ನು ನಿರ್ವಹಿಸಲಾಗುತ್ತಿತ್ತು. ಆದರೆ ಇದಕ್ಕೆ ಬಿಜೆಪಿ ಬೆಂಬಲಿತ ಕೋಮು ಆಧಾರಿತ ಸಂಘಟನೆಗಳು ಕಳೆದ ಎರಡು ವಾರಗಳಿಂದ ವಿರೋಧ ವ್ಯಕ್ತಪಡಿಸಿ, ನಮಾಜ್‌ಗೆ ಅಡ್ಡಿಪಡಿಸಿವೆ. ಕಳೆದ ತಿಂಗಳ ಕೊನೆಯಲ್ಲಿ, 26 ಜನರ ಬಿಜೆಪಿ ಬೆಂಬಲಿತ ಗುಂಪು ನಮಾಜ್ ಮಾಡುವುದನ್ನು ಅಡ್ಡಿ ಪಡಿಸಿದ್ದಕ್ಕಾಗಿ ಬಂಧಿಸಲಾಗಿತ್ತು.

ಈ ನಡುವೆ ಗುರುಗ್ರಾಮ್ ಆಡಳಿತವು ಮುಸ್ಲಿಮರಿಗೆ ನಮಾಜ್ ಮಾಡಲು ಗೊತ್ತುಪಡಿಸಿದ 37 ಸ್ಥಳಗಳ ಪೈಕಿ ಎಂಟರಲ್ಲಿ ಸ್ಥಳೀಯರ ವಿರೋಧದಿಂದ ಮಂಗಳವಾರ ಅನುಮತಿ ವಾಪಸ್ ಪಡೆದಿದೆ. ಗುರುಗ್ರಾಮ್ ಜಿಲ್ಲಾಡಳಿತದ ಅಧಿಕೃತ ಹೇಳಿಕೆಯ ಪ್ರಕಾರ, ಸ್ಥಳೀಯ ಜನರು ಮತ್ತು ಆರ್‌ಡಬ್ಲ್ಯೂಎಯಿಂದ ಆಕ್ಷೇಪಣೆ ಬಂದಿರುವ ಕಾರಣ ಅನುಮತಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

ಶುಕ್ರವಾರ ಅದೇ ಸ್ಥಳದಲ್ಲಿ ಗೋವರ್ಧನ ಕಾರ್ಯಕ್ರಮದಲ್ಲಿ ಹಿಂದೂ ವಿರೋಧಿಗಳಿಗೆ ಗುಂಡು ಹೊಡೆಯಿರಿ ಎಂದು ಘೋಷಣೆಗಳನ್ನು ಕೂಗಲಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಕಪಿಲ್ ಮಿಶ್ರಾ ಪಟಾಕಿ ನಿಷೇಧದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Fact check: ಕಟ್ಟಡದ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವುದು ನಿಜವೇ??

“ನಿಮ್ಮ ರಾಜಕೀಯಕ್ಕಾಗಿ ರಸ್ತೆಗಳನ್ನು ಬಳಸಬೇಡಿ. ನಾವು ಶಾಹೀನ್ ಬಾಗ್‌ನಲ್ಲಿ ಇದನ್ನು ನೋಡಿದ್ದೆವು. ರಸ್ತೆಗಳನ್ನೆಲ್ಲ ಬಂದ್ ಮಾಡಿ ಮನೋರಂಜನೆ ತೋರಿಸಿದ್ರು. ಸಿಎಎ ಹಿಂಪಡೆಯಲಾಗಿದೆಯೇ? ಅಪಧಮನಿಗಳು ಮತ್ತು ನರಗಳನ್ನು ನಿರ್ಬಂಧಿಸಿದರೆ, ದೇಹದ ಚಲನೆಯನ್ನು ನಿಲ್ಲಿಸುತ್ತದೆ. ಹಾಗೆಯೆ ರಸ್ತೆಗಳನ್ನು ನಿರ್ಬಂಧಿಸಿದರೆ, ನಗರ ಮತ್ತು ದೇಶವು ನಿಲ್ಲುತ್ತದೆ” ಎಂದು ಹೇಳಿದ್ದಾರೆ.

“ರಸ್ತೆಗಳನ್ನು ಮುಚ್ಚುವ ಹಕ್ಕು ಯಾರಿಗೂ ಇಲ್ಲ. ಇದು ಯಾವುದೇ ಧರ್ಮದ ಭಾಗವಲ್ಲ ಅಥವಾ ಆಗಲೂ ಸಾಧ್ಯವಿಲ್ಲ… ಗುರ್ಗಾಂವ್‌ನಲ್ಲಿ ಬೀದಿಗಳನ್ನು ನಿರ್ಬಂಧಿಸುತ್ತೀರಾ? ನೀವು ದೆಹಲಿಯಲ್ಲಿ ರಸ್ತೆಗಳನ್ನು ನಿರ್ಬಂಧಿಸುತ್ತೀರಾ? ರಸ್ತೆ ತಡೆ ಮಾಡುವುದು ಧರ್ಮದ ಭಾಗವಲ್ಲ, ಅದು ದೇಶ, ಸೌಲಭ್ಯಗಳು ಮತ್ತು ಆರ್ಥಿಕತೆಯನ್ನು ತಡೆಯುವುದಾಗಿದೆ” ಎಂದು ಅವರು ತಿಳಿಸಿದ್ದಾರೆ.

ಕಪಿಲ್‌ ಮಿಶ್ರಾ ಭಾಷಣದ ಸಮಯದಲ್ಲಿ, ನೆರೆದಿದ್ದವರು “ಸೆಕ್ಟರ್ 12 ಸರ್ಫ್ ಜಾಂಕಿ ಹೈ, ಪುರ ಗುರುಗ್ರಾಮ್ ಬಾಕಿ ಹೈ” ಎಂಬ ಘೋಷಣೆಯನ್ನು ಕೂಗಿದ್ದಾರೆ. ಜೊತೆಗೆ ಸದಾ ದ್ವೇಷ ಭಾಷಣಗಳಿಗೆ ಹೆಸರುವಾಸಿಯಾಗಿರುವ ಯತಿ ನರಸಿಂಹಾನಂದ ಸಂಗಡಿಗರು ಕೂಡಾ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಪಿಲ್‌ ಮಿಶ್ರಾ ಶಾಂತವಾಗಿ ಭಾಷಣ ಮಾಡಿದ್ದಾರಾದರೂ, ಸಭೆಯಲ್ಲಿ ಪ್ರಚೋಧನಕಾರಿ ಘೋಷಣೆಗಳನ್ನು ಮಾಡಲಾಗಿದೆ. ಅಮಿತ್ ಹಿಂದೂ ಎಂಬ ಕಾರ್ಯಕರ್ತನೊಬ್ಬ, “ಹಿಂದೂ ದ್ರೋಹಿಗಳನ್ನು ಶೂಟ್ ಮಾಡಿ” ಎಂಬ ಘೋಷಣೆಯನ್ನು ಕೂಗಿದ್ದಾನೆ. ಈತ ಯತಿ ನರಸಿಂಹಾನಂದ ಸರಸ್ವತಿ ಅವರ ಆಪ್ತ ಎಂದು ದಿ ವೈರ್‌ ವರದಿ ಮಾಡಿದೆ.

ಇದನ್ನೂ ಓದಿ: ಹಲಾಲ್ ಮಾಡದಿದ್ದಕ್ಕೆ ಮುಸ್ಲಿಮರಿಂದ ಹಲ್ಲೆ ಎಂಬ ಸುಳ್ಳು ಆರೋಪ: ರೆಸ್ಟೋರೆಂಟ್‌ ಮಾಲೀಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...