HomeಮುಖಪುಟBJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

BJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

ಈಶಾನ್ಯ ದೆಹಲಿಯಲ್ಲಿ ಕಪಿಲ್ ಮಿಶ್ರಾ ನಡೆಸುತ್ತಿದ್ದ ರ್‍ಯಾಲಿಯಲ್ಲಿ ಕೂಡಾ ‘ಗೋಲಿ ಮಾರೊ’ ಘೋಷಣೆಗಳು ಕೂಗಲಾಗಿತ್ತು, ನಂತರ ಅಲ್ಲಿ ಕೋಮು ಗಲಭೆಗಳು ಭುಗಿಲೆದ್ದವು

- Advertisement -
- Advertisement -

ಈ ವರ್ಷ ದೆಹಲಿಯಲ್ಲಿ ನಡೆದ ಕೋಮುಗಲಭೆಯ ಪ್ರಚೋದಕ ಎಂದು ಆರೋಪಿಸಲಾಗಿರುವ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರು ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ‘ಗೋಲಿ ಮಾರೋ’ (ಗುಂಡು ಹೊಡೆಯಿರಿ) ಎಂಬ ಘೋಷಣೆಗಳು ‘ಮತ್ತೇ’ ಮೊಳಗಿವೆ. ಪ್ರತಿ ಶುಕ್ರವಾರ ನಮಾಜ್ ನಡೆಯುತ್ತಿದ್ದ ಗುರ್ಗಾಂವ್‌ನ ಸೆಕ್ಟರ್ 12 ಎ ಪ್ರದೇಶದಲ್ಲಿ ಬಿಜೆಪಿ ಬೆಂಬಲಿತ ಕೋಮು ಆಧಾರಿತ ಸಂಘಟನೆ ಆಯೋಜಿಸಿದ್ದ ಗೋವರ್ಧನ ಪೂಜೆಯಲ್ಲಿ ಅವರು ಶುಕ್ರವಾರ ಪಾಲ್ಗೊಂಡಿದ್ದರು. ಈ ವೇಳೆ ಅಲ್ಲಿ ‘ಗೋಲಿ ಮಾರೋ’ ಘೋಷಣೆಗಳನ್ನು ಕೂಗಲಾಗಿದೆ.

ಕಳೆದು ವರ್ಷ ಸಿಎಎ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯನ್ನು ವಿರೋಧಿಸಿ ಈಶಾನ್ಯ ದೆಹಲಿಯಲ್ಲಿ ಕಪಿಲ್ ಮಿಶ್ರಾ ನಡೆಸುತ್ತಿದ್ದ ರ್‍ಯಾಲಿಯಲ್ಲಿ ಕೂಡಾ ‘ಗೋಲಿ ಮಾರೊ’ ಘೋಷಣೆಗಳು ಕೂಗಲಾಗಿತ್ತು. ಇದರ ನಂತರ ಅಲ್ಲಿ ಕೋಮುಗಲಭೆ ನಡೆದು ಐವತ್ತಕ್ಕೂ ಹೆಚ್ಚು ಜನರು ಸಾವನಪ್ಪಿದ್ದರು ಹಾಗೂ ಸಾವಿರಾರು ಜನರು ಗಾಯಗೊಂಡು ಕೋಟ್ಯಾಂತರ ರುಪಾಯಿಗಳ ಆಸ್ತಿಪಾಸ್ತಿ ನಷ್ಟವಾಗಿದ್ದವು.

ಇದನ್ನೂ ಓದಿ: ದೆಹಲಿ: ಸ್ಥಳೀಯರ ವಿರೋಧದಿಂದ ನಮಾಜ್‌ಗೆ ನಿಗದಿಪಡಿಸಿದ್ದ 8 ಸ್ಥಳಗಳ ಅನುಮತಿ ವಾಪಸ್

ಗುರುಗಾಂವ್‌ನ ಸೆಕ್ಟರ್ 12ಎ ಸೈಟ್‌ನಲ್ಲಿ ಪ್ರತಿ ಶುಕ್ರವಾರ ನಮಾಜ್‌ ಅನ್ನು ನಿರ್ವಹಿಸಲಾಗುತ್ತಿತ್ತು. ಆದರೆ ಇದಕ್ಕೆ ಬಿಜೆಪಿ ಬೆಂಬಲಿತ ಕೋಮು ಆಧಾರಿತ ಸಂಘಟನೆಗಳು ಕಳೆದ ಎರಡು ವಾರಗಳಿಂದ ವಿರೋಧ ವ್ಯಕ್ತಪಡಿಸಿ, ನಮಾಜ್‌ಗೆ ಅಡ್ಡಿಪಡಿಸಿವೆ. ಕಳೆದ ತಿಂಗಳ ಕೊನೆಯಲ್ಲಿ, 26 ಜನರ ಬಿಜೆಪಿ ಬೆಂಬಲಿತ ಗುಂಪು ನಮಾಜ್ ಮಾಡುವುದನ್ನು ಅಡ್ಡಿ ಪಡಿಸಿದ್ದಕ್ಕಾಗಿ ಬಂಧಿಸಲಾಗಿತ್ತು.

ಈ ನಡುವೆ ಗುರುಗ್ರಾಮ್ ಆಡಳಿತವು ಮುಸ್ಲಿಮರಿಗೆ ನಮಾಜ್ ಮಾಡಲು ಗೊತ್ತುಪಡಿಸಿದ 37 ಸ್ಥಳಗಳ ಪೈಕಿ ಎಂಟರಲ್ಲಿ ಸ್ಥಳೀಯರ ವಿರೋಧದಿಂದ ಮಂಗಳವಾರ ಅನುಮತಿ ವಾಪಸ್ ಪಡೆದಿದೆ. ಗುರುಗ್ರಾಮ್ ಜಿಲ್ಲಾಡಳಿತದ ಅಧಿಕೃತ ಹೇಳಿಕೆಯ ಪ್ರಕಾರ, ಸ್ಥಳೀಯ ಜನರು ಮತ್ತು ಆರ್‌ಡಬ್ಲ್ಯೂಎಯಿಂದ ಆಕ್ಷೇಪಣೆ ಬಂದಿರುವ ಕಾರಣ ಅನುಮತಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

ಶುಕ್ರವಾರ ಅದೇ ಸ್ಥಳದಲ್ಲಿ ಗೋವರ್ಧನ ಕಾರ್ಯಕ್ರಮದಲ್ಲಿ ಹಿಂದೂ ವಿರೋಧಿಗಳಿಗೆ ಗುಂಡು ಹೊಡೆಯಿರಿ ಎಂದು ಘೋಷಣೆಗಳನ್ನು ಕೂಗಲಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಕಪಿಲ್ ಮಿಶ್ರಾ ಪಟಾಕಿ ನಿಷೇಧದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Fact check: ಕಟ್ಟಡದ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವುದು ನಿಜವೇ??

“ನಿಮ್ಮ ರಾಜಕೀಯಕ್ಕಾಗಿ ರಸ್ತೆಗಳನ್ನು ಬಳಸಬೇಡಿ. ನಾವು ಶಾಹೀನ್ ಬಾಗ್‌ನಲ್ಲಿ ಇದನ್ನು ನೋಡಿದ್ದೆವು. ರಸ್ತೆಗಳನ್ನೆಲ್ಲ ಬಂದ್ ಮಾಡಿ ಮನೋರಂಜನೆ ತೋರಿಸಿದ್ರು. ಸಿಎಎ ಹಿಂಪಡೆಯಲಾಗಿದೆಯೇ? ಅಪಧಮನಿಗಳು ಮತ್ತು ನರಗಳನ್ನು ನಿರ್ಬಂಧಿಸಿದರೆ, ದೇಹದ ಚಲನೆಯನ್ನು ನಿಲ್ಲಿಸುತ್ತದೆ. ಹಾಗೆಯೆ ರಸ್ತೆಗಳನ್ನು ನಿರ್ಬಂಧಿಸಿದರೆ, ನಗರ ಮತ್ತು ದೇಶವು ನಿಲ್ಲುತ್ತದೆ” ಎಂದು ಹೇಳಿದ್ದಾರೆ.

“ರಸ್ತೆಗಳನ್ನು ಮುಚ್ಚುವ ಹಕ್ಕು ಯಾರಿಗೂ ಇಲ್ಲ. ಇದು ಯಾವುದೇ ಧರ್ಮದ ಭಾಗವಲ್ಲ ಅಥವಾ ಆಗಲೂ ಸಾಧ್ಯವಿಲ್ಲ… ಗುರ್ಗಾಂವ್‌ನಲ್ಲಿ ಬೀದಿಗಳನ್ನು ನಿರ್ಬಂಧಿಸುತ್ತೀರಾ? ನೀವು ದೆಹಲಿಯಲ್ಲಿ ರಸ್ತೆಗಳನ್ನು ನಿರ್ಬಂಧಿಸುತ್ತೀರಾ? ರಸ್ತೆ ತಡೆ ಮಾಡುವುದು ಧರ್ಮದ ಭಾಗವಲ್ಲ, ಅದು ದೇಶ, ಸೌಲಭ್ಯಗಳು ಮತ್ತು ಆರ್ಥಿಕತೆಯನ್ನು ತಡೆಯುವುದಾಗಿದೆ” ಎಂದು ಅವರು ತಿಳಿಸಿದ್ದಾರೆ.

ಕಪಿಲ್‌ ಮಿಶ್ರಾ ಭಾಷಣದ ಸಮಯದಲ್ಲಿ, ನೆರೆದಿದ್ದವರು “ಸೆಕ್ಟರ್ 12 ಸರ್ಫ್ ಜಾಂಕಿ ಹೈ, ಪುರ ಗುರುಗ್ರಾಮ್ ಬಾಕಿ ಹೈ” ಎಂಬ ಘೋಷಣೆಯನ್ನು ಕೂಗಿದ್ದಾರೆ. ಜೊತೆಗೆ ಸದಾ ದ್ವೇಷ ಭಾಷಣಗಳಿಗೆ ಹೆಸರುವಾಸಿಯಾಗಿರುವ ಯತಿ ನರಸಿಂಹಾನಂದ ಸಂಗಡಿಗರು ಕೂಡಾ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಪಿಲ್‌ ಮಿಶ್ರಾ ಶಾಂತವಾಗಿ ಭಾಷಣ ಮಾಡಿದ್ದಾರಾದರೂ, ಸಭೆಯಲ್ಲಿ ಪ್ರಚೋಧನಕಾರಿ ಘೋಷಣೆಗಳನ್ನು ಮಾಡಲಾಗಿದೆ. ಅಮಿತ್ ಹಿಂದೂ ಎಂಬ ಕಾರ್ಯಕರ್ತನೊಬ್ಬ, “ಹಿಂದೂ ದ್ರೋಹಿಗಳನ್ನು ಶೂಟ್ ಮಾಡಿ” ಎಂಬ ಘೋಷಣೆಯನ್ನು ಕೂಗಿದ್ದಾನೆ. ಈತ ಯತಿ ನರಸಿಂಹಾನಂದ ಸರಸ್ವತಿ ಅವರ ಆಪ್ತ ಎಂದು ದಿ ವೈರ್‌ ವರದಿ ಮಾಡಿದೆ.

ಇದನ್ನೂ ಓದಿ: ಹಲಾಲ್ ಮಾಡದಿದ್ದಕ್ಕೆ ಮುಸ್ಲಿಮರಿಂದ ಹಲ್ಲೆ ಎಂಬ ಸುಳ್ಳು ಆರೋಪ: ರೆಸ್ಟೋರೆಂಟ್‌ ಮಾಲೀಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...