Homeಮುಖಪುಟಬಿಹಾರದಲ್ಲಿ ಸಾವನಪ್ಪಿದ ಬಿಜೆಪಿ ಮುಖಂಡ ಲಾಠಿ ಚಾರ್ಜ್ ಸಮಯದಲ್ಲಿ ಪ್ರತಿಭಟನಾ ಸ್ಥಳದಲ್ಲಿರಲಿಲ್ಲ: ಪೊಲೀಸರ ಹೇಳಿಕೆ

ಬಿಹಾರದಲ್ಲಿ ಸಾವನಪ್ಪಿದ ಬಿಜೆಪಿ ಮುಖಂಡ ಲಾಠಿ ಚಾರ್ಜ್ ಸಮಯದಲ್ಲಿ ಪ್ರತಿಭಟನಾ ಸ್ಥಳದಲ್ಲಿರಲಿಲ್ಲ: ಪೊಲೀಸರ ಹೇಳಿಕೆ

- Advertisement -
- Advertisement -

ಬಿಹಾರ ಸರ್ಕಾರದ ಶಿಕ್ಷಕರ ನೇಮಕಾತಿ ನೀತಿ ವಿರೋಧಿಸಿ ಗುರುವಾರ ಬಿಜೆಪಿ ಪಕ್ಷವು ಪಾಟ್ನಾದಲ್ಲಿ ನಡೆಸಿದ ವಿಧಾನಸಭಾ ಮುತ್ತಿಗೆಯ ಬೃಹತ್ ಪ್ರತಿಭಟನೆ ನಿಯಂತ್ರಿಸಲು ಪೊಲೀಸರು ಮಾಡಿದ ಲಾಠೀ ಚಾರ್ಜ್‌ನಲ್ಲಿ ಬಿಜೆಪಿ ಮುಖಂಡ ವಿಜಯ್ ಕುಮಾರ್ ಸಿಂಗ್ ಸಾವನಪ್ಪಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆದರೆ ಈ ಆರೋಪವನ್ನು ತಳ್ಳಿ ಹಾಕಿರುವ ಬಿಹಾರ ಪೊಲೀಸರು ಬಿಜೆಪಿ ಮುಖಂಡ ಲಾಠಿ ಚಾರ್ಜ್ ಸಮಯದಲ್ಲಿ ಪ್ರತಿಭಟನಾ ಸ್ಥಳದಲ್ಲಿರಲಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಪೊಲೀಸ್ ಲಾಠಿ ಚಾರ್ಜ್‌ನಲ್ಲಿ ಬಿಜೆಪಿ ಪಕ್ಷದ ಜೆಹಾನಾಬಾದ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಸಿಂಗ್ ಅವರು ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ಆರೋಪಿಸಿದ ನಂತರ ಪೊಲೀಸರು ಹೇಳಿಕೆ ನೀಡಿದ್ದು, “ಪ್ರಾಥಮಿಕ ತನಿಖೆ ಮತ್ತು ವಿವಿಧ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆಯಿಂದ ಜೆಹಾನಾಬಾದ್ ಮೂಲದ ವಿಜಯ್ ಕುಮಾರ್ ಸಿಂಗ್ ಲಾಠಿ ಚಾರ್ಜ್ ನಡೆದ ಡಾಕ್ ಬಂಗಲೆ ವೃತ್ತವನ್ನು ತಲುಪಿರಲಿಲ್ಲ” ಎಂದು ಪಾಟ್ನಾದ ಹಿರಿಯ ಅಧೀಕ್ಷರಾದ ರಾಜೀವ್ ಮಿಶ್ರಾ ತಿಳಿಸಿದ್ದಾರೆ.

“ಒಂದು ಸಿಸಿಟಿವಿಯ ವಿಡಿಯೋ ತುಣುಕಿನಲ್ಲಿ ವಿಜಯ್ ಕುಮಾರ್ ಸಿಂಗ್ ಮತ್ತು ಅವರೊಂದಿಗೆ ಇಬ್ಬರು ವ್ಯಕ್ತಿಗಳು ಮಧ್ಯಾಹ್ನ 1 ಗಂಟೆ 22 ನಿಮಿಷದ ಸಂದರ್ಭದಲ್ಲಿ ಗಾಂಧಿ ಮೈದಾನ-ಚಜ್ಜು ಬಾಗ್ ರಸ್ತೆಯ ಮೂಲಕ ಚಜ್ಜು ಬಾಗ್ ಪ್ರದೇಶದಲ್ಲಿ ಚಲಿಸುತ್ತಿರುವುದನ್ನು ಕಾಣಬಹುದು. ಆ ಮೂವರೂ ಪರಸ್ಪರ ಮಾತನಾಡುತ್ತಿದ್ದರು ಮತ್ತು ಅವರು ಆರೋಗ್ಯವಾಗಿದ್ದರು. ಆನಂತರ 1 ಗಂಟೆ 27ನೇ ನಿಮಿಷದ ಸಂದರ್ಭದಲ್ಲಿ ಆಟೋ ರಿಕ್ಷಾದಲ್ಲಿ  ಆಸ್ಪತ್ರೆಗೆ ಕರೆದೊಯ್ದದ್ದು ಕೂಡ ಅದೇ ವಿಡಿಯೋದಲ್ಲಿ ದಾಖಲಾಗಿದೆ. ಸಿಸಿಟಿವಿ ಕ್ಯಾಮರಾದಿಂದ ಸುಮಾರು 50 ಮೀಟರ್ ದೂರದಲ್ಲಿ ಎಲೆಕ್ಟ್ರಿಕ್ ಟ್ರಾನ್ಸ್‌ಫಾರ್ಮರ್ ಬಳಿ ಸಿಂಗ್ ರಸ್ತೆಯಲ್ಲಿ ಬಿದ್ದಿರುವುದು ಕಂಡುಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ ಎಂದು ರಾಜೀವ್ ಮಿಶ್ರಾ ಹೇಳಿದ್ದಾರೆ.

ಆ ಪ್ರದೇಶದಲ್ಲಿ ಯಾವುದೇ ಲಾಠಿ ಚಾರ್ಜ್ ನಡೆದಿಲ್ಲ, ಸಿಂಗ್ ಅವರ ದೇಹದ ಮೇಲೆ ಯಾವುದೇ ಬಾಹ್ಯ ಗಾಯದ ಗುರುತುಗಳು ಕಂಡುಬಂದಿಲ್ಲ ಎಂದು ಅವರು ಹೇಳಿದ್ದಾರೆ.

“ಮೃತ ಸಿಂಗ್ ಜೊತೆಗಿದ್ದ ಇಬ್ಬರು ವ್ಯಕ್ತಿಗಳು ತಾವು ಡಾಕ್ ಬಂಗಲೆ ವೃತ್ತಕ್ಕೆ ಹೋಗಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಆ ವೃತ್ತವನ್ನು ಬ್ಯಾರಿಕೇಡ್ ಹಾಕಿ ಮುಚ್ಚಿದ್ದರಿಂದ ಅವರು ಆ ಕಡೆ ಹೋಗದಿರಲು ನಿರ್ಧರಿಸಿದರು. ನಂತರ ಸಿಂಗ್ ಅವರ ಸ್ನೇಹಿತರು ಅವರನ್ನು ರಿಕ್ಷಾದ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ರಿಕ್ಷಾವು ಹತ್ತಿರದ ಆಸ್ಪತ್ರೆಯನ್ನು ತಲುಪಲು ಐದರಿಂದ ಆರು ನಿಮಿಷಗಳನ್ನು ತೆಗೆದುಕೊಂಡಿರಬಹುದು ಎಂದು ನಾವು ನಂಬುತ್ತೇವೆ. ಅವರು ಮೂರ್ಛೆ ಹೋದ ಘಟನೆ ಮಧ್ಯಾಹ್ನ 1.23 ರಿಂದ 1.27 ರ ನಡುವೆ ನಡೆದಿರಬಹುದು. ಸಿಂಗ್ ಸುತ್ತಲೂ ಅಥವಾ ರಿಕ್ಷಾದ ಸುತ್ತಲೂ ಯಾವುದೇ ಪೊಲೀಸರು ಕಂಡುಬಂದಿಲ್ಲ ಎಂದು ದೃಶ್ಯಗಳು ಬಹಿರಂಗಪಡಿಸಿವೆ”ಎಂದು ಅವರು ಹೇಳಿದ್ದಾರೆ.

“ಅಲ್ಲದೇ ಚಜ್ಜು ಬಾಗ್ ಪ್ರದೇಶದಲ್ಲಿನ ಸಿಸಿಟಿವಿಯ ದೃಶ್ಯಗಳಲ್ಲಿ ಯಾವುದೇ ರೀತಿಯ ಕಾಲ್ತುಳಿತದ ದೃಶ್ಯ ಕಂಡುಬಂದಿಲ್ಲ. ಆ ಪ್ರದೇಶದಲ್ಲಿ ಸಂಪೂರ್ಣ ಸಾಮಾನ್ಯ ಸಂಚಾರ ದಟ್ಟಣೆ ಕಂಡುಬಂದಿದೆ. ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಅವರ ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಬಹುದು” ಎಸ್‌ಎಸ್‌ಪಿ ಹೇಳಿದ್ದಾರೆ.

ಬಿಜೆಪಿಯ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಒಟ್ಟು 59 ಜನರನ್ನು ಬಂಧಿಸಲಾಯಿತು ಆದರೆ ಅವರೆಲ್ಲರನ್ನೂ ನಂತರ ಬಿಡುಗಡೆ ಮಾಡಲಾಯಿತು ಎಂದು ಅವರು ಹೇಳಿದರು.

“ಮೃತರ ಮರಣೋತ್ತರ ಪರೀಕ್ಷೆಯನ್ನು ನಡೆಸುವಾಗ ಜಿಲ್ಲಾಡಳಿತವು ಸಂಪೂರ್ಣ ಪಾರದರ್ಶಕತೆಯನ್ನು ಅನುಸರಿಸಿದೆ. ಮ್ಯಾಜಿಸ್ಟ್ರೇಟ್ ಮತ್ತು ಮರಣೋತ್ತರ ಪರೀಕ್ಷೆಯನ್ನು ವೈದ್ಯಕೀಯ ಮಂಡಳಿಯು ವೀಡಿಯೊಗ್ರಫಿ ಅಡಿಯಲ್ಲಿ ನಡೆಸಿತು” ಎಂದು ಎಸ್‌ಎಸ್‌ಪಿ ಹೇಳಿದ್ದಾರೆ.

ಇದನ್ನೂ ಓದಿ; ಬಿಜೆಪಿ ಸರ್ಕಾರ RSS ಅಂಗಸಂಸ್ಥೆಗೆ ಭೂಮಿ ನೀಡಿದ್ದ ಆದೇಶಕ್ಕೆ ತಡೆ: ಸಚಿವ ಕೃಷ್ಣಭೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...