Homeಕರ್ನಾಟಕಕಾರು ಅಪಘಾತವನ್ನು ಹಲ್ಲೆಯೆಂದು ಬಿಂಬಿಸಿದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್

ಕಾರು ಅಪಘಾತವನ್ನು ಹಲ್ಲೆಯೆಂದು ಬಿಂಬಿಸಿದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್

- Advertisement -
- Advertisement -

ಕಾರು ಅಪಘಾತದ ಘಟನೆಯನ್ನು ಹಲ್ಲೆ ಎಂದು ಬಿಂಬಿಸಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ರಾಜಕೀಯ ಲಾಭ ಪಡೆಯಲು ಯತ್ನಿಸಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ.

“ಚಿತ್ತಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾಲಗತ್ತಿ ರಾಷ್ಟ್ರೀಯ ಹೆದ್ದಾರಿ 150ರ ಬಳಿ ಇರುವ ನನ್ನ ಫಾರ್ಮ್‌ ಹೌಸ್‌ನಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಶಂಕರವಾಡಿ ಕ್ರಾಸ್ ಬಳಿ ಅಪರಿಚಿತ ದುಷ್ಕರ್ಮಿಗಳು ನನ್ನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ” ಎಂದು ಮಣಿಕಂಠ ರಾಠೋಡ್ ನವೆಂಬರ್ 19ರಂದು ಶಹದಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಆಧರಿಸಿ ಪೊಲೀಸರು ತನಿಖೆ ಕೈಗೊಂಡಾಗ ಅಪಘಾತವನ್ನು ಹಲ್ಲೆ ಎಂದು ಬಿಂಬಿಸಿರುವುದು ಬಯಲಾಗಿದೆ ಎಂದು ವರದಿಗಳು ಹೇಳಿವೆ.

“ಶಂಕರವಾಡಿ ಕ್ರಾಸ್ ಬಳಿ ತನ್ನ ಮೇಲೆ ಹಲ್ಲೆ ನಡೆದಿರುವುದಾಗಿ ಮಣಿಕಂಠ ರಾಠೋಡ್ ಶಹದಾಬಾದ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ನಡೆಸಿದಾಗ ಅಪಘಾತವನ್ನು ಹಲ್ಲೆ ಎಂದು ಬಿಂಬಿಸಿರುವುದು ಗೊತ್ತಾಗಿದೆ” ಎಂದು ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ತಿಳಿಸಿದ್ದಾರೆ.

ಮಣಿಕಂಠ ರಾಠೋಡ್ ಅವರ ಬಿಳಿ ಬಣ್ಣದ ಇನ್ನೋವಾ ಕ್ರಿಸ್ಟಾ ಕಾರು ಯಾದಗಿರಿ ಜಿಲ್ಲೆಯ ಚೆಪಟ್ಲಾದಲ್ಲಿ ಮರಕ್ಕೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಮಣಿಕಂಠ ರಾಠೋಡ್‌ಗೆ ಗಾಯಗಳಾಗಿತ್ತು. ಅಪಘಾತದ ಬಳಿಕ ತನ್ನ ಮತ್ತೊಂದು ಕಾರಿನಲ್ಲಿ ಕಲಬುರಗಿಗೆ ತೆರಳಿದ್ದ ರಾಠೋಡ್, ನಂತರ ಅಲ್ಲಿಂದ ಚಿತ್ತಾಪುರಕ್ಕೆ ಹೋಗಿದ್ದರು. ಈ ವೇಳೆ ಮಾರ್ಗ ಮಧ್ಯೆ ಹಲ್ಲೆ ನಡೆದಿರುವುದಾಗಿ ಕಥೆ ಕಟ್ಟಿದ್ದರು.

ಅಪಘಾತಗೊಂಡ ಇನ್ನೋವಾ ಕ್ರಿಸ್ಟಾ ಕಾರನ್ನು ರಾತ್ರೋರಾತ್ರಿ ಹೈದರಾಬಾದ್​ಗೆ ಟೋಯಿಂಗ್ ಮುಖಾಂತರ ಶಿಫ್ಟ್ ಮಾಡಲಾಗಿತ್ತು. ತನ್ನದೇ ಕಾರಿನ ಗಾಜು ಒಡೆದು ಹಾಕಿದ ರಾಠೋಡ್, ಏಳೆಂಟು ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ ಎಂದು ಕಥೆ ಕಟ್ಟಿದ್ದರು ಎಂದು ತಿಳಿದು ಬಂದಿದೆ.

ಆರೋಗ್ಯ ವಿಚಾರಿಸಿದ್ದರು ಅಶೋಕ್, ವಿಜಯೇಂದ್ರ

ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ಕಥೆ ಕಟ್ಟಿ ಆಸ್ಪತ್ರೆಗೆ ದಾಖಲಾಗಿದ್ದ ಮಣಿಕಂಠ ರಾಠೋಡ್‌ನ ಆರೋಗ್ಯ ವಿಚಾರಿಸಲು ಬಿಜೆಪಿ ಮುಖಂಡರಾದ ಆರ್.ಅಶೋಕ್ ಮತ್ತು ವಿಜಯೇಂದ್ರ ತೆರಳಿದ್ದರು. ಆರೋಗ್ಯ ವಿಚಾರಿಸಿದ ಬಳಿಕ ಇಬ್ಬರು ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಬಾಯ್ಬಿಟ್ಟ ಮಣಿಕಂಠ ರಾಠೋಡ್ ಬೆಂಬಲಿಗ

ಕಲಬುರಗಿಯಿಂದ ಚಿತ್ತಾಪುರಕ್ಕೆ ಮಣಿಕಂಠ ರಾಠೋಡ್ ಬಂದ ಕಾರಿನಲ್ಲಿ ಒಂದೇ ಒಂದು ಹನಿ ರಕ್ತದ ಕಲೆ ಇರಲಿಲ್ಲ. ಮಣಿಕಂಠ ರಾಠೋಡ್ ಕಾಲ್ ರೆಕಾರ್ಡ್ ಹಿಸ್ಟರಿ ಟೆಕ್ನಿಕಲ್ ಎವಿಡೆನ್ಸ್ ಬೆನ್ನತ್ತಿದಾಗ ಅಪಘಾತ ನಡೆದಿರುವುದು ಬೆಳಕಿಗೆ ಬಂದಿದೆ. ರಾಠೋಡ್ ಜೊತೆಗಿದ್ದವನನ್ನು ವಿಚಾರಣೆ ನಡೆಸಿದಾಗ ಆತ ನಿಜ ವಿಷಯ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ ಎಂದು ನ್ಯೂಸ್‌ 18 ಕನ್ನಡ ವರದಿ ಮಾಡಿದೆ.

ಮಣಿಕಂಠ ರಾಠೋಡ್ ಯಾರು?

ರೌಡಿ ಶೀಟರ್ ಆಗಿರುವ ಮಣಿಕಂಠ ರಾಠೋಡ್ ವಿರುದ್ಧ ಕರ್ನಾಟಕ, ತೆಲಂಗಾಣ ಸೇರಿದಂತೆ ವಿವಿದೆಡೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳಿವೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಲಬುರಗಿಯ ಚಿತ್ತಾಪುರ ಕ್ಷೇತ್ರದಿಂದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಠೋಡ್, ಸೋಲು ಅನುಭವಿಸಿದ್ದರು.

ಇದನ್ನೂ ಓದಿ : ಗಂಗಾವತಿ: ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಅಂಧ ವೃದ್ಧನಿಗೆ ಹಲ್ಲೆ ಪ್ರಕರಣ; ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...