Homeಕರ್ನಾಟಕಕಾರು ಅಪಘಾತವನ್ನು ಹಲ್ಲೆಯೆಂದು ಬಿಂಬಿಸಿದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್

ಕಾರು ಅಪಘಾತವನ್ನು ಹಲ್ಲೆಯೆಂದು ಬಿಂಬಿಸಿದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್

- Advertisement -
- Advertisement -

ಕಾರು ಅಪಘಾತದ ಘಟನೆಯನ್ನು ಹಲ್ಲೆ ಎಂದು ಬಿಂಬಿಸಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ರಾಜಕೀಯ ಲಾಭ ಪಡೆಯಲು ಯತ್ನಿಸಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ.

“ಚಿತ್ತಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾಲಗತ್ತಿ ರಾಷ್ಟ್ರೀಯ ಹೆದ್ದಾರಿ 150ರ ಬಳಿ ಇರುವ ನನ್ನ ಫಾರ್ಮ್‌ ಹೌಸ್‌ನಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಶಂಕರವಾಡಿ ಕ್ರಾಸ್ ಬಳಿ ಅಪರಿಚಿತ ದುಷ್ಕರ್ಮಿಗಳು ನನ್ನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ” ಎಂದು ಮಣಿಕಂಠ ರಾಠೋಡ್ ನವೆಂಬರ್ 19ರಂದು ಶಹದಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಆಧರಿಸಿ ಪೊಲೀಸರು ತನಿಖೆ ಕೈಗೊಂಡಾಗ ಅಪಘಾತವನ್ನು ಹಲ್ಲೆ ಎಂದು ಬಿಂಬಿಸಿರುವುದು ಬಯಲಾಗಿದೆ ಎಂದು ವರದಿಗಳು ಹೇಳಿವೆ.

“ಶಂಕರವಾಡಿ ಕ್ರಾಸ್ ಬಳಿ ತನ್ನ ಮೇಲೆ ಹಲ್ಲೆ ನಡೆದಿರುವುದಾಗಿ ಮಣಿಕಂಠ ರಾಠೋಡ್ ಶಹದಾಬಾದ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ನಡೆಸಿದಾಗ ಅಪಘಾತವನ್ನು ಹಲ್ಲೆ ಎಂದು ಬಿಂಬಿಸಿರುವುದು ಗೊತ್ತಾಗಿದೆ” ಎಂದು ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ತಿಳಿಸಿದ್ದಾರೆ.

ಮಣಿಕಂಠ ರಾಠೋಡ್ ಅವರ ಬಿಳಿ ಬಣ್ಣದ ಇನ್ನೋವಾ ಕ್ರಿಸ್ಟಾ ಕಾರು ಯಾದಗಿರಿ ಜಿಲ್ಲೆಯ ಚೆಪಟ್ಲಾದಲ್ಲಿ ಮರಕ್ಕೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಮಣಿಕಂಠ ರಾಠೋಡ್‌ಗೆ ಗಾಯಗಳಾಗಿತ್ತು. ಅಪಘಾತದ ಬಳಿಕ ತನ್ನ ಮತ್ತೊಂದು ಕಾರಿನಲ್ಲಿ ಕಲಬುರಗಿಗೆ ತೆರಳಿದ್ದ ರಾಠೋಡ್, ನಂತರ ಅಲ್ಲಿಂದ ಚಿತ್ತಾಪುರಕ್ಕೆ ಹೋಗಿದ್ದರು. ಈ ವೇಳೆ ಮಾರ್ಗ ಮಧ್ಯೆ ಹಲ್ಲೆ ನಡೆದಿರುವುದಾಗಿ ಕಥೆ ಕಟ್ಟಿದ್ದರು.

ಅಪಘಾತಗೊಂಡ ಇನ್ನೋವಾ ಕ್ರಿಸ್ಟಾ ಕಾರನ್ನು ರಾತ್ರೋರಾತ್ರಿ ಹೈದರಾಬಾದ್​ಗೆ ಟೋಯಿಂಗ್ ಮುಖಾಂತರ ಶಿಫ್ಟ್ ಮಾಡಲಾಗಿತ್ತು. ತನ್ನದೇ ಕಾರಿನ ಗಾಜು ಒಡೆದು ಹಾಕಿದ ರಾಠೋಡ್, ಏಳೆಂಟು ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ ಎಂದು ಕಥೆ ಕಟ್ಟಿದ್ದರು ಎಂದು ತಿಳಿದು ಬಂದಿದೆ.

ಆರೋಗ್ಯ ವಿಚಾರಿಸಿದ್ದರು ಅಶೋಕ್, ವಿಜಯೇಂದ್ರ

ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ಕಥೆ ಕಟ್ಟಿ ಆಸ್ಪತ್ರೆಗೆ ದಾಖಲಾಗಿದ್ದ ಮಣಿಕಂಠ ರಾಠೋಡ್‌ನ ಆರೋಗ್ಯ ವಿಚಾರಿಸಲು ಬಿಜೆಪಿ ಮುಖಂಡರಾದ ಆರ್.ಅಶೋಕ್ ಮತ್ತು ವಿಜಯೇಂದ್ರ ತೆರಳಿದ್ದರು. ಆರೋಗ್ಯ ವಿಚಾರಿಸಿದ ಬಳಿಕ ಇಬ್ಬರು ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಬಾಯ್ಬಿಟ್ಟ ಮಣಿಕಂಠ ರಾಠೋಡ್ ಬೆಂಬಲಿಗ

ಕಲಬುರಗಿಯಿಂದ ಚಿತ್ತಾಪುರಕ್ಕೆ ಮಣಿಕಂಠ ರಾಠೋಡ್ ಬಂದ ಕಾರಿನಲ್ಲಿ ಒಂದೇ ಒಂದು ಹನಿ ರಕ್ತದ ಕಲೆ ಇರಲಿಲ್ಲ. ಮಣಿಕಂಠ ರಾಠೋಡ್ ಕಾಲ್ ರೆಕಾರ್ಡ್ ಹಿಸ್ಟರಿ ಟೆಕ್ನಿಕಲ್ ಎವಿಡೆನ್ಸ್ ಬೆನ್ನತ್ತಿದಾಗ ಅಪಘಾತ ನಡೆದಿರುವುದು ಬೆಳಕಿಗೆ ಬಂದಿದೆ. ರಾಠೋಡ್ ಜೊತೆಗಿದ್ದವನನ್ನು ವಿಚಾರಣೆ ನಡೆಸಿದಾಗ ಆತ ನಿಜ ವಿಷಯ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ ಎಂದು ನ್ಯೂಸ್‌ 18 ಕನ್ನಡ ವರದಿ ಮಾಡಿದೆ.

ಮಣಿಕಂಠ ರಾಠೋಡ್ ಯಾರು?

ರೌಡಿ ಶೀಟರ್ ಆಗಿರುವ ಮಣಿಕಂಠ ರಾಠೋಡ್ ವಿರುದ್ಧ ಕರ್ನಾಟಕ, ತೆಲಂಗಾಣ ಸೇರಿದಂತೆ ವಿವಿದೆಡೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳಿವೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಲಬುರಗಿಯ ಚಿತ್ತಾಪುರ ಕ್ಷೇತ್ರದಿಂದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಠೋಡ್, ಸೋಲು ಅನುಭವಿಸಿದ್ದರು.

ಇದನ್ನೂ ಓದಿ : ಗಂಗಾವತಿ: ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಅಂಧ ವೃದ್ಧನಿಗೆ ಹಲ್ಲೆ ಪ್ರಕರಣ; ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...