Homeಕರ್ನಾಟಕಕಾರು ಅಪಘಾತವನ್ನು ಹಲ್ಲೆಯೆಂದು ಬಿಂಬಿಸಿದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್

ಕಾರು ಅಪಘಾತವನ್ನು ಹಲ್ಲೆಯೆಂದು ಬಿಂಬಿಸಿದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್

- Advertisement -
- Advertisement -

ಕಾರು ಅಪಘಾತದ ಘಟನೆಯನ್ನು ಹಲ್ಲೆ ಎಂದು ಬಿಂಬಿಸಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ರಾಜಕೀಯ ಲಾಭ ಪಡೆಯಲು ಯತ್ನಿಸಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ.

“ಚಿತ್ತಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾಲಗತ್ತಿ ರಾಷ್ಟ್ರೀಯ ಹೆದ್ದಾರಿ 150ರ ಬಳಿ ಇರುವ ನನ್ನ ಫಾರ್ಮ್‌ ಹೌಸ್‌ನಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಶಂಕರವಾಡಿ ಕ್ರಾಸ್ ಬಳಿ ಅಪರಿಚಿತ ದುಷ್ಕರ್ಮಿಗಳು ನನ್ನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ” ಎಂದು ಮಣಿಕಂಠ ರಾಠೋಡ್ ನವೆಂಬರ್ 19ರಂದು ಶಹದಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಆಧರಿಸಿ ಪೊಲೀಸರು ತನಿಖೆ ಕೈಗೊಂಡಾಗ ಅಪಘಾತವನ್ನು ಹಲ್ಲೆ ಎಂದು ಬಿಂಬಿಸಿರುವುದು ಬಯಲಾಗಿದೆ ಎಂದು ವರದಿಗಳು ಹೇಳಿವೆ.

“ಶಂಕರವಾಡಿ ಕ್ರಾಸ್ ಬಳಿ ತನ್ನ ಮೇಲೆ ಹಲ್ಲೆ ನಡೆದಿರುವುದಾಗಿ ಮಣಿಕಂಠ ರಾಠೋಡ್ ಶಹದಾಬಾದ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ನಡೆಸಿದಾಗ ಅಪಘಾತವನ್ನು ಹಲ್ಲೆ ಎಂದು ಬಿಂಬಿಸಿರುವುದು ಗೊತ್ತಾಗಿದೆ” ಎಂದು ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ತಿಳಿಸಿದ್ದಾರೆ.

ಮಣಿಕಂಠ ರಾಠೋಡ್ ಅವರ ಬಿಳಿ ಬಣ್ಣದ ಇನ್ನೋವಾ ಕ್ರಿಸ್ಟಾ ಕಾರು ಯಾದಗಿರಿ ಜಿಲ್ಲೆಯ ಚೆಪಟ್ಲಾದಲ್ಲಿ ಮರಕ್ಕೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಮಣಿಕಂಠ ರಾಠೋಡ್‌ಗೆ ಗಾಯಗಳಾಗಿತ್ತು. ಅಪಘಾತದ ಬಳಿಕ ತನ್ನ ಮತ್ತೊಂದು ಕಾರಿನಲ್ಲಿ ಕಲಬುರಗಿಗೆ ತೆರಳಿದ್ದ ರಾಠೋಡ್, ನಂತರ ಅಲ್ಲಿಂದ ಚಿತ್ತಾಪುರಕ್ಕೆ ಹೋಗಿದ್ದರು. ಈ ವೇಳೆ ಮಾರ್ಗ ಮಧ್ಯೆ ಹಲ್ಲೆ ನಡೆದಿರುವುದಾಗಿ ಕಥೆ ಕಟ್ಟಿದ್ದರು.

ಅಪಘಾತಗೊಂಡ ಇನ್ನೋವಾ ಕ್ರಿಸ್ಟಾ ಕಾರನ್ನು ರಾತ್ರೋರಾತ್ರಿ ಹೈದರಾಬಾದ್​ಗೆ ಟೋಯಿಂಗ್ ಮುಖಾಂತರ ಶಿಫ್ಟ್ ಮಾಡಲಾಗಿತ್ತು. ತನ್ನದೇ ಕಾರಿನ ಗಾಜು ಒಡೆದು ಹಾಕಿದ ರಾಠೋಡ್, ಏಳೆಂಟು ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ ಎಂದು ಕಥೆ ಕಟ್ಟಿದ್ದರು ಎಂದು ತಿಳಿದು ಬಂದಿದೆ.

ಆರೋಗ್ಯ ವಿಚಾರಿಸಿದ್ದರು ಅಶೋಕ್, ವಿಜಯೇಂದ್ರ

ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ಕಥೆ ಕಟ್ಟಿ ಆಸ್ಪತ್ರೆಗೆ ದಾಖಲಾಗಿದ್ದ ಮಣಿಕಂಠ ರಾಠೋಡ್‌ನ ಆರೋಗ್ಯ ವಿಚಾರಿಸಲು ಬಿಜೆಪಿ ಮುಖಂಡರಾದ ಆರ್.ಅಶೋಕ್ ಮತ್ತು ವಿಜಯೇಂದ್ರ ತೆರಳಿದ್ದರು. ಆರೋಗ್ಯ ವಿಚಾರಿಸಿದ ಬಳಿಕ ಇಬ್ಬರು ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಬಾಯ್ಬಿಟ್ಟ ಮಣಿಕಂಠ ರಾಠೋಡ್ ಬೆಂಬಲಿಗ

ಕಲಬುರಗಿಯಿಂದ ಚಿತ್ತಾಪುರಕ್ಕೆ ಮಣಿಕಂಠ ರಾಠೋಡ್ ಬಂದ ಕಾರಿನಲ್ಲಿ ಒಂದೇ ಒಂದು ಹನಿ ರಕ್ತದ ಕಲೆ ಇರಲಿಲ್ಲ. ಮಣಿಕಂಠ ರಾಠೋಡ್ ಕಾಲ್ ರೆಕಾರ್ಡ್ ಹಿಸ್ಟರಿ ಟೆಕ್ನಿಕಲ್ ಎವಿಡೆನ್ಸ್ ಬೆನ್ನತ್ತಿದಾಗ ಅಪಘಾತ ನಡೆದಿರುವುದು ಬೆಳಕಿಗೆ ಬಂದಿದೆ. ರಾಠೋಡ್ ಜೊತೆಗಿದ್ದವನನ್ನು ವಿಚಾರಣೆ ನಡೆಸಿದಾಗ ಆತ ನಿಜ ವಿಷಯ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ ಎಂದು ನ್ಯೂಸ್‌ 18 ಕನ್ನಡ ವರದಿ ಮಾಡಿದೆ.

ಮಣಿಕಂಠ ರಾಠೋಡ್ ಯಾರು?

ರೌಡಿ ಶೀಟರ್ ಆಗಿರುವ ಮಣಿಕಂಠ ರಾಠೋಡ್ ವಿರುದ್ಧ ಕರ್ನಾಟಕ, ತೆಲಂಗಾಣ ಸೇರಿದಂತೆ ವಿವಿದೆಡೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳಿವೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಲಬುರಗಿಯ ಚಿತ್ತಾಪುರ ಕ್ಷೇತ್ರದಿಂದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಠೋಡ್, ಸೋಲು ಅನುಭವಿಸಿದ್ದರು.

ಇದನ್ನೂ ಓದಿ : ಗಂಗಾವತಿ: ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಅಂಧ ವೃದ್ಧನಿಗೆ ಹಲ್ಲೆ ಪ್ರಕರಣ; ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...