Homeಕರ್ನಾಟಕ'ಖರ್ಗೆ ಕುಟುಂಬವನ್ನು ಸಾಫ್ ಮಾಡ್ತೀನಿ' ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡಗೆ ಬಂಧನದ ಭೀತಿ

‘ಖರ್ಗೆ ಕುಟುಂಬವನ್ನು ಸಾಫ್ ಮಾಡ್ತೀನಿ’ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡಗೆ ಬಂಧನದ ಭೀತಿ

- Advertisement -
- Advertisement -

ಖರ್ಗೆ ಕುಟುಂಬವನ್ನು ಸಾಫ್ ಮಾಡ್ತೀನಿ ಎಂದು ಜೀವ ಬೆದರಿಕೆ ಹಾಕಿರುವ ಮಣಿಕಂಠ ರಾಠೋಡರದ್ದು ಎನ್ನಲಾದ ಆಡಿಯೋ ಕುರಿತ ವಿಚಾರಣೆಗೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರನ್ನು ಜುಲೈ 15ರಂದು ಬಂಧಿಸಿ, ವಿಚಾರಣೆ ನಡೆಸಲಾಯಿತು. ಬಳಿಕ ಅವನನ್ನು ಬಿಡುಗಡೆ ಮಾಡಲಾಗಿದೆ. ಪೊಲೀಸರು ಮತ್ತೆ ಬಂಧಿಸುವ ಭೀತಿ ರಾಠೋಡಗೆ ಎದುರಾಗಿದೆ.

ಮಣಿಕಂಠ ರಾಠೋಡ ವಿರುದ್ಧ ವಿವಿಧ ಪ್ರಕರಣಗಳು ಸೇರಿದಂತೆ ಖರ್ಗೆ ಕುಟುಂಬಕ್ಕೆ ಬೆದರಿಕೆ ಹಾಕಿರುವ ಪ್ರಕರಣವು ದಾಖಲಾಗಿದೆ. 2014ರಿಂದ ಇಲ್ಲಿಯವರೆಗೆ ಯಾದಗಿರಿ, ಕಲಬುರಗಿ, ಬೀದರ್, ವಿಜಯಪುರ, ಬೆಂಗಳೂರು ಹಾಗೂ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ತೆಲಂಗಾಣದಲ್ಲಿ ದಾಖಲಾದ ಒಟ್ಟು 46 ಪ್ರಕರಣಗಳನ್ನು ಉಲ್ಲೇಖಿಸಿ ಪಿಎಸ್‌ಐ ಚೇತನ್‌ ಅವರು ದಂಡಾಧಿಕಾರಿಗೆ ಸಲ್ಲಿಸಿದ್ದಾರೆ.

”46 ಪ್ರಕರಣಗಳು ದಾಖಲಾಗಿದ್ದರೂ ಮಣಿಕಂಠ ತನ್ನ ಪ್ರವೃತ್ತಿಯಲ್ಲಿ ಬದಲಾವಣೆ ತೋರದೆ ಪದೇ ಪದೆ ಸಮಾಜದ ಸ್ವಾಸ್ಥ್ಯ ಹಾಳು ಮಾಡಿ, ಶಾಂತಿ ಕದಡಲು ಯತ್ನಿಸುವ ಪ್ರವೃತ್ತಿಯವರಾಗಿದ್ದಾರೆ. ಮುಂದೆ ಚಿತ್ತಾಪುರದಲ್ಲಿ ಜಾತಿ- ಜಾತಿಗಳ ಮಧ್ಯ ವೈರತ್ವ ಬೆಳೆಸಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿ, ಸಮಾಜದ ಶಾಂತಿ ಕದಡುವ ಸಾಧ್ಯತೆ ಹೆಚ್ಚಾಗಿದೆ. ಅವರನ್ನು ಹಾಜರು ಪಡಿಸಿಕೊಂಡು ಸನ್ನಡತೆಗಾಗಿ ಅವರಿಂದ ಹೆಚ್ಚಿನ ಬಾಂಡ್ ಬರೆಸಿಕೊಳ್ಳಬೇಕು” ಎಂದು ಪಿಎಸ್‌ಐ ತಾಲ್ಲೂಕು ದಂಡಾಧಿಕಾರಿಗೆ ಮನವಿ ಮಾಡಿದ್ದಾರೆ.

ಜುಲೈ 15ರಂದು ಸಂಜೆ ರಾಠೋಡ ಅವರನ್ನು ಬಂಧಿಸಿದ್ದ ಚಿತ್ತಾಪುರ ಪೊಲೀಸರು ವಿಚಾರಣೆ ನಡೆಸಿ, ಧ್ವನಿ ಮಾದರಿ ಸಂಗ್ರಹಿಸಿಕೊಂಡು ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದರು. 16ರಂದು ಮತ್ತೆ ವಿಚಾರಣೆಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿ ಕಳುಹಿಸಿದ್ದರು. ಆದರೆ, ಮಣಿಕಂಠ ವಿಚಾರಣೆಗೆ ಠಾಣೆಗೆ ಹಾಜರಾಗದೆ ಜಾಮೀನು ನಿಯಮ ಉಲ್ಲಂಘಿಸಿದ್ದಾರೆ. ಹೀಗಾಗಿ ಅವರಿಗೆ ಮತ್ತೆ ನೋಟಿಸ್ ಜಾರಿ ಮಾಡಿ, ವಶಕ್ಕೆ ಪಡೆದು ತಾಲ್ಲೂಕು ದಂಡಾಧಿಕಾರಿ ಮುಂದೆ ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರಿಂದ ಸಂಚು: ಕಾಂಗ್ರೆಸ್ ಆರೋಪ

ಖರ್ಗೆ ಕುಟುಂಬದ ವಿರುದ್ಧ ಜೀವಬೆದರಿಕೆ ಪ್ರಕರಣ

ಹಲವು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಚಿತ್ತಾಪುರದ ಬಿಜೆಪಿ ಮುಖಂಡ ಮಣಿಕಂಠ ರಾಥೋಡ್‌ ಅವರದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿತ್ತು. ಅದರಲ್ಲಿ ”ಖರ್ಗೆ ಮತ್ತು ಅವರ ಹೆಂಡ್ತಿನಾ, ಇಡೀ ಕುಟುಂಬವನ್ನು ಸಾಫ್ ಮಾಡ್ತೀನಿ” ಅನ್ನುವುದು ದಾಖಲಾಗಿದೆ.

ಈ ಬಗ್ಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲ ಮಾತನಾಡಿ, ”ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬ ಸದಸ್ಯರನ್ನು ಹತ್ಯೆ ಮಾಡಲು ಬಿಜೆಪಿ ನಾಯಕರು ಸಂಚು ರೂಪಿಸುತ್ತಿದ್ದಾರೆ. ಪ್ರಧಾನಿ ಮೋದಿ ಮತ್ತು ಸಿಎಂ ಬೊಮ್ಮಾಯಿ ಅವರ ನೀಲಿ ಕಣ್ಣಿನ ಹುಡುಗ ಚಿತ್ತಾಪುರದ ಬಿಜೆಪಿ ಅಭ್ಯರ್ಥಿಯ ರೆಕಾರ್ಡಿಂಗ್‌ನಿಂದ ಇದು ಈಗ ಸ್ಪಷ್ಟವಾಗಿದೆ” ಎಂದದು ಹೇಳಿದ್ದರು.

ರವಿ ಎಂಬ ಬಿಜೆಪಿ ಕಾರ್ಯಕರ್ತನೊಬ್ಬ ಮಣಿಕಂಠ ರಾಥೋಡ್‌ರವರಿಗೆ ಫೋನ್ ಮಾಡಿ ನಿಮ್ಮ ಮೇಲೆ 40  ಕೇಸುಗಳಿವೆ ಅನ್ನುತ್ತಾರೆ. ಈ ಕುರಿತು ಖರ್ಗೆಯವರನ್ನು ಪ್ರಶ್ನೆ ಮಾಡ್ತೀನಿ ಅವರ ನಂಬರ್ ಕೊಡಿ ಅಣ್ಣ ಎಂದು ಕೇಳುತ್ತಾನೆ. ಇದಕ್ಕೆ ಉತ್ತರಿಸುವ ಮಣಿಕಂಠ ರಾಥೋಡ್‌, ”ನನ್ನ ಬಳಿ ಅವರ ಫೋನ್ ನಂಬರ್ ಇದ್ರೆ ಅವರ ಹೆಂಡ್ರು ಮಕ್ಕಳು ಎಲ್ಲರನ್ನು ಸಾಫ್ ಮಾಡ್ತೀನಿ. ಅದಕ್ಕೆ ನನ್ನ ಬಳಿ ನಂಬರ್ ಇಲ್ಲ” ಎಂದು ಹೇಳಿರುವುದು ಆಡಿಯೋದಲ್ಲಿ ದಾಖಲಾಗಿದೆ.

”ಯಾರ ಹೆಂಡ್ರ ಮಕ್ಕಳನ್ನು ಸಾಫ್ ಮಾಡ್ತೀರಿ?” ಎಂದು ರವಿ ಪ್ರಶ್ನಿಸಿದಾಗ, ಈಗ ನೀನು ಯಾರ ಹೆಸ್ರು ತಗೊಂಡೆ ಎಂದು ಕೇಳಿ ಆನಂತರ ”ಖರ್ಗೆಯವರ ನಂಬರ್ ಇದ್ರೆ ಅವರಿಗೆ ಬಾಯಿಗೆ ಬಂದಾಂಗೆ ಬೈಯ್ಯುತ್ತಿದ್ದೆ” ಎಂದು ಸಮಜಾಯಿಸಿ ಕೊಡುವುದು ಸಹ ವೈರಲ್ ವಿಡಿಯೋದಲ್ಲಿ ದಾಖಲಾಗಿದೆ.

ಬಿಜೆಪಿ ಅಭ್ಯರ್ಥಿಯೊಬ್ಬ ಖರ್ಗೆ ಕುಟುಂಬವನ್ನು ಕೊಲ್ಲುವ ಬೆದರಿಕೆಯೊಡ್ಡಿದ್ದಾರೆ. ಆತ ಬಿಜೆಪಿ ಪಕ್ಷದ ನೀಲಿ ಕಣ್ಣಿನ ಹುಡುಗನಾಗಿದ್ದಾನೆ. ಈ ಕುರಿತು ಪ್ರಧಾನಿ ಮೋದಿಯವರು ಪ್ರತಿಕ್ರಿಯಿಸುವರೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...